Saturday | March 7, 2026 |

ಸಾಮಾಜಿಕ ಜಾಲತಾಣ; 5 ಲಕ್ಷ ಮಿತಿ ದಾಟಿದ್ದರೂ ಇ-ಟೆಂಡರ್‌ ಕರೆಯದೇ 11 ತಿಂಗಳವರೆಗೆ ಏಜೆನ್ಸಿ ವಿಸ್ತರಣೆ

Support THE-FILE

spot_img

ಬೆಂಗಳೂರು; ಸಚಿವ ಬಿ ಸಿ ನಾಗೇಶ್‌ ಅವರ ಸಾಮಾಜಿಕ ಜಾಲತಾಣವನ್ನು ನಿರ್ವಹಿಸಲು ಪಿ-ಪೋಲ್‌ ಅನಾಲಿಟಿಕ್ಸ್‌ ಕಂಪನಿಗೇ 3 ತಿಂಗಳು ಅವಧಿಗೆ ಮುಂದುವರೆಸಬೇಕಾದಲ್ಲಿ 5 ಲಕ್ಷ ರು. ಮಿತಿ ದಾಟುವ ಕಾರಣ ಇ-ಟೆಂಡರ್‌ ಕರೆಯಬೇಕು ಎಂದು ಅಧಿಕಾರಿಗಳು ಹೇಳಿದ್ದನ್ನು ಬದಿಗಿರಿಸಿ ಸಚಿವರ ಅಧಿಕಾರವಾಧಿವರೆಗೆ (2023ರ ಮಾರ್ಚ್‌ವರೆಗೂ) ಯಾವುದೇ ಇ-ಟೆಂಡರ್‌ ಕರೆಯದೇ 4(ಜಿ) ವಿನಾಯಿತಿ ಆದೇಶ ಪಡೆದಿರುವುದು ಆರ್‌ಟಿಐ ದಾಖಲೆಗಳಿಂದ ಬಹಿರಂಗವಾಗಿದೆ.

 

ದರಪಟ್ಟಿ ಕರೆಯದೇ ಈಗಾಗಲೇ ಪಿ-ಪೋಲ್‌ ಅನಾಲಿಟಿಕ್ಸ್‌ ಕಂಪನಿಗೆ ಸಚಿವ ಬಿ ಸಿ ನಾಗೇಶ್‌ ಅವರ ಸಾಮಾಜಿಕ ಜಾಲತಾಣ ನಿರ್ವಹಿಸಲು ಆದೇಶ ಹೊರಡಿಸಿದ್ದರ ಬೆನ್ನಲ್ಲೇ   ಇ-ಟೆಂಡರ್‌  ಆಹ್ವಾನಿಸದೆಯೇ 4(ಜಿ) ವಿನಾಯಿತಿ ನೀಡಿರುವುದು ಮುನ್ನೆಲೆಗೆ ಬಂದಿದೆ. ಈ ಸಂಬಂಧ ‘ದಿ ಫೈಲ್‌’ ಆರ್‌ಟಿಐ ಅಡಿಯಲ್ಲಿ ಕಡತವನ್ನು ಪಡೆದುಕೊಂಡಿದೆ.

 

‘ಸಚಿವರ ಟ್ವಿಟರ್‌, ಫೇಸ್‌ಬುಕ್‌, ಯೂಟ್ಯೂಬ್‌ ಸೇರಿದಂತೆ ಇನ್ನಿತರೆ ಸಾಮಾಜಿಕ ಜಾಲತಾಣಗಳ ನಿರ್ವಹಣೆಗೆ ಸೇವೆಯನ್ನು ಕೆಟಿಪಿಪಿ ಕಾಯ್ದೆಯಡಿ 3 ತಿಂಗಳು ಮುಂದುವರೆಸಿದ್ದಲ್ಲಿ 5 ಲಕ್ಷ ರು. ಮಿತಿ ದಾಟಲಿದ್ದು, ನಿಯಮಾನುಸಾರ ಇ-ಟೆಂಡರ್‌ ಕರೆಯಬೇಕಾಗಿದೆ,’ ಎಂದು ಅಧಿಕಾರಿಗಳು ಟಿಪ್ಪಣಿ ಹಾಳೆಯಲ್ಲಿ ಉಲ್ಲೇಖಿಸಿದ್ದಾರೆ.

 

ಇ-ಟೆಂಡರ್‌ ಕರೆಯುವ ಕುರಿತು ಪ್ರಸ್ತಾಪಿಸಿರುವ ಟಿಪ್ಪಣಿ ಹಾಳೆಯ ಪ್ರತಿ

 

ಆದರೆ ಇದನ್ನು ಬದಿಗಿರಿಸಿರುವ ಪ್ರಾಥಮಿಕ, ಪ್ರೌಢಶಿಕ್ಷಣ ಇಲಾಖೆಯು ಪಿ-ಪೋಲ್‌ ಅನಾಲಿಟಿಕ್ಸ್‌ ಕಂಪನಿ ಸೇವೆಯನ್ನು ಪಡೆಯಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999ರ ಕಲಂ (ಜೆ) ವಿನಾಯಿತಿಯನ್ನು 2022ರ ಜೂನ್‌ 20ರಂದು ಆರ್ಥಿಕ ಇಲಾಖೆಯಿಂದ ಪಡೆದಿದೆ. ಈ ಸಂಬಂಧ 2022ರ ಜೂನ್‌ 21ರಂದು ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರಿಗೆ 2022ರ ಜೂನ್‌ 21ರಂದು ಪತ್ರ ಬರೆದಿರುವುದು ಆರ್‌ಟಿಐ ದಾಖಲೆಗಳಿಂದ ಗೊತ್ತಾಗಿದೆ.

 

‘ಸಚಿವರ ಸಾಮಾಜಿಕ ಜಾಲತಾಣಗಳ ನಿರ್ವಹಣೆ ಕಾರ್ಯಕ್ಕೆ  ಪ್ರತಿ ತಿಂಗಳು 94,400 ರು.ನಂತೆ 2022ರ ಏಪ್ರಿಲ್‌ನಿಂದ 2023ರ ಮಾರ್ಚ್‌ವರೆಗೆ ಒಂದು ವರ್ಷದ ಅವಧಿಗೆ ಒಟ್ಟು 11,32,800 ರು.ಗಳ ವೆಚ್ಚದಲ್ಲಿ ಪಿ-ಪೋಲ್‌ ಅನಾಲಿಟಿಕ್ಸ್‌ ಕಂಪನಿಯ ಸೇವೆ ಪಡೆಯಲು 4 (ಜಿ) ವಿನಾಯಿತಿ ನೀಡಲಾಗಿದೆ. ಆದ್ದರಿಂದ ಸಚಿವರ ಸಾಮಾಜಿಕ ಜಾಲತಾಣಗಳ ನಿರ್ವಹಣೆ ಕಾರ್ಯಕ್ಕೆ  ಈ ಸಂಸ್ಥೆಯಿಂದ  ಪಡೆಯಬೇಕು,’ ಎಂದು ಶಿಕ್ಷಣ ಇಲಾಖೆಯು 2022ರ ಜೂನ್‌ 21ರಂದು ಬರೆದಿರುವ ಪತ್ರದಲ್ಲಿ ನಿರ್ದೇಶಿಸಿದ್ದಾರೆ.

 

ಅಲ್ಲದೆ ಪಿ-ಪೋಲ್‌ ಅನಾಲಿಟಿಕ್ಸ್‌ ಕಂಪನಿಗೆ 2022ರಿಂದ ಏಪ್ರಿಲ್‌ 2022ರವರೆಗೆ 3 ತಿಂಗಳ ಅವಧಿಗೆ ವಿಸ್ತರಿಸಬೇಕು ಎಂದು ಸಚಿವರ ಆಪ್ತ ಕಾರ್ಯದರ್ಶಿ 2022ರ ಮಾರ್ಚ್‌ 15ರಂದು ಪತ್ರ ಬರೆದಿದ್ದರು.

 

‘ಪಿ-ಪೋಲ್‌ ಅನಾಲಿಟಿಕ್ಸ್‌ಗೆ ಪ್ರಾಥಮಿಕ, ಪ್ರೌಢಶಿಕ್ಷಣ, ಸಕಾಲ ಸಚಿವರ ಸಾಮಾಜಿಕ ಜಾಲತಾಣವಾದ ಟ್ವಿಟರ್‌, ಯೂಟ್ಯೂಬ್‌, ಫೇಸ್‌ಬುಕ್‌ ಹಾಗೂ ಇನ್ನಿತರೆ ಖಾತೆಗಳನ್ನು  3 ತಿಂಗಳ ಅವಧಿಗೆ 2021ರ ಅಕ್ಟೊಬರ್‌ 26ರಂದು ಕಾರ್ಯಾದೇಶ ನೀಡಿದ್ದು ಈ ಆದೇಶವು 2022ರ ಜನವರಿಗೆ ಮುಕ್ತಾಯಗೊಂಡಿದೆ. ಆದ್ದರಿಂದ ಸದರಿ ಆದೇಶವನ್ನು 2022ರ ಫೆಬ್ರುವರಿಯಿಂದ ಏಪ್ರಿಲ್‌ 2022ರವರೆಗೆ 3 ತಿಂಗಳ ಅವಧಿಗೆ ವಿಸ್ತರಿಸಬೇಕು,’ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗೆ ಪತ್ರದಲ್ಲಿ ನಿರ್ದೇಶಿಸಿದ್ದರು. ಆದರೆ ಮಂಡಳಿ ಮತ್ತು ಶಿಕ್ಷಣ ಇಲಾಖೆಯು ಸಚಿವ ಬಿ ಸಿ ನಾಗೇಶ್‌ ಅವರ ಅಧಿಕಾರಾವಧಿವರೆಗೆ 4 (ಜಿ) ವಿನಾಯಿತಿ ಪಡೆದು ಆದೇಶ ಹೊರಡಿಸಿದೆ.

 

ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯಲ್ಲಿ ಯಾವುದೇ ಅನುದಾನ ನಿಗದಿಪಡಿಸದಿದ್ದರೂ ಇದೇ ಮೊದಲ ಬಾರಿಗೆ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿದೆ. ಸಾಮಾಜಿಕ ಜಾಲತಾಣ ನಿರ್ವಹಣೆ ಸಂಬಂಧ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಯಾವುದೇ ದರ ಪಟ್ಟಿಯನ್ನು ಆಹ್ವಾನಿಸಿರಲಿಲ್ಲ ಎಂಬುದನ್ನು ಸ್ಮರಿಸಬಹುದು.

Hot this week

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

Topics

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

Related Articles

Popular Categories

spot_imgspot_img
error: Content is protected !!