Friday | March 27, 2026 |

ಸಾಮಾಜಿಕ ಜಾಲತಾಣ; 5 ಲಕ್ಷ ಮಿತಿ ದಾಟಿದ್ದರೂ ಇ-ಟೆಂಡರ್‌ ಕರೆಯದೇ 11 ತಿಂಗಳವರೆಗೆ ಏಜೆನ್ಸಿ ವಿಸ್ತರಣೆ

Support THE-FILE

spot_img

ಬೆಂಗಳೂರು; ಸಚಿವ ಬಿ ಸಿ ನಾಗೇಶ್‌ ಅವರ ಸಾಮಾಜಿಕ ಜಾಲತಾಣವನ್ನು ನಿರ್ವಹಿಸಲು ಪಿ-ಪೋಲ್‌ ಅನಾಲಿಟಿಕ್ಸ್‌ ಕಂಪನಿಗೇ 3 ತಿಂಗಳು ಅವಧಿಗೆ ಮುಂದುವರೆಸಬೇಕಾದಲ್ಲಿ 5 ಲಕ್ಷ ರು. ಮಿತಿ ದಾಟುವ ಕಾರಣ ಇ-ಟೆಂಡರ್‌ ಕರೆಯಬೇಕು ಎಂದು ಅಧಿಕಾರಿಗಳು ಹೇಳಿದ್ದನ್ನು ಬದಿಗಿರಿಸಿ ಸಚಿವರ ಅಧಿಕಾರವಾಧಿವರೆಗೆ (2023ರ ಮಾರ್ಚ್‌ವರೆಗೂ) ಯಾವುದೇ ಇ-ಟೆಂಡರ್‌ ಕರೆಯದೇ 4(ಜಿ) ವಿನಾಯಿತಿ ಆದೇಶ ಪಡೆದಿರುವುದು ಆರ್‌ಟಿಐ ದಾಖಲೆಗಳಿಂದ ಬಹಿರಂಗವಾಗಿದೆ.

 

ದರಪಟ್ಟಿ ಕರೆಯದೇ ಈಗಾಗಲೇ ಪಿ-ಪೋಲ್‌ ಅನಾಲಿಟಿಕ್ಸ್‌ ಕಂಪನಿಗೆ ಸಚಿವ ಬಿ ಸಿ ನಾಗೇಶ್‌ ಅವರ ಸಾಮಾಜಿಕ ಜಾಲತಾಣ ನಿರ್ವಹಿಸಲು ಆದೇಶ ಹೊರಡಿಸಿದ್ದರ ಬೆನ್ನಲ್ಲೇ   ಇ-ಟೆಂಡರ್‌  ಆಹ್ವಾನಿಸದೆಯೇ 4(ಜಿ) ವಿನಾಯಿತಿ ನೀಡಿರುವುದು ಮುನ್ನೆಲೆಗೆ ಬಂದಿದೆ. ಈ ಸಂಬಂಧ ‘ದಿ ಫೈಲ್‌’ ಆರ್‌ಟಿಐ ಅಡಿಯಲ್ಲಿ ಕಡತವನ್ನು ಪಡೆದುಕೊಂಡಿದೆ.

 

‘ಸಚಿವರ ಟ್ವಿಟರ್‌, ಫೇಸ್‌ಬುಕ್‌, ಯೂಟ್ಯೂಬ್‌ ಸೇರಿದಂತೆ ಇನ್ನಿತರೆ ಸಾಮಾಜಿಕ ಜಾಲತಾಣಗಳ ನಿರ್ವಹಣೆಗೆ ಸೇವೆಯನ್ನು ಕೆಟಿಪಿಪಿ ಕಾಯ್ದೆಯಡಿ 3 ತಿಂಗಳು ಮುಂದುವರೆಸಿದ್ದಲ್ಲಿ 5 ಲಕ್ಷ ರು. ಮಿತಿ ದಾಟಲಿದ್ದು, ನಿಯಮಾನುಸಾರ ಇ-ಟೆಂಡರ್‌ ಕರೆಯಬೇಕಾಗಿದೆ,’ ಎಂದು ಅಧಿಕಾರಿಗಳು ಟಿಪ್ಪಣಿ ಹಾಳೆಯಲ್ಲಿ ಉಲ್ಲೇಖಿಸಿದ್ದಾರೆ.

 

ಇ-ಟೆಂಡರ್‌ ಕರೆಯುವ ಕುರಿತು ಪ್ರಸ್ತಾಪಿಸಿರುವ ಟಿಪ್ಪಣಿ ಹಾಳೆಯ ಪ್ರತಿ

 

ಆದರೆ ಇದನ್ನು ಬದಿಗಿರಿಸಿರುವ ಪ್ರಾಥಮಿಕ, ಪ್ರೌಢಶಿಕ್ಷಣ ಇಲಾಖೆಯು ಪಿ-ಪೋಲ್‌ ಅನಾಲಿಟಿಕ್ಸ್‌ ಕಂಪನಿ ಸೇವೆಯನ್ನು ಪಡೆಯಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999ರ ಕಲಂ (ಜೆ) ವಿನಾಯಿತಿಯನ್ನು 2022ರ ಜೂನ್‌ 20ರಂದು ಆರ್ಥಿಕ ಇಲಾಖೆಯಿಂದ ಪಡೆದಿದೆ. ಈ ಸಂಬಂಧ 2022ರ ಜೂನ್‌ 21ರಂದು ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರಿಗೆ 2022ರ ಜೂನ್‌ 21ರಂದು ಪತ್ರ ಬರೆದಿರುವುದು ಆರ್‌ಟಿಐ ದಾಖಲೆಗಳಿಂದ ಗೊತ್ತಾಗಿದೆ.

 

‘ಸಚಿವರ ಸಾಮಾಜಿಕ ಜಾಲತಾಣಗಳ ನಿರ್ವಹಣೆ ಕಾರ್ಯಕ್ಕೆ  ಪ್ರತಿ ತಿಂಗಳು 94,400 ರು.ನಂತೆ 2022ರ ಏಪ್ರಿಲ್‌ನಿಂದ 2023ರ ಮಾರ್ಚ್‌ವರೆಗೆ ಒಂದು ವರ್ಷದ ಅವಧಿಗೆ ಒಟ್ಟು 11,32,800 ರು.ಗಳ ವೆಚ್ಚದಲ್ಲಿ ಪಿ-ಪೋಲ್‌ ಅನಾಲಿಟಿಕ್ಸ್‌ ಕಂಪನಿಯ ಸೇವೆ ಪಡೆಯಲು 4 (ಜಿ) ವಿನಾಯಿತಿ ನೀಡಲಾಗಿದೆ. ಆದ್ದರಿಂದ ಸಚಿವರ ಸಾಮಾಜಿಕ ಜಾಲತಾಣಗಳ ನಿರ್ವಹಣೆ ಕಾರ್ಯಕ್ಕೆ  ಈ ಸಂಸ್ಥೆಯಿಂದ  ಪಡೆಯಬೇಕು,’ ಎಂದು ಶಿಕ್ಷಣ ಇಲಾಖೆಯು 2022ರ ಜೂನ್‌ 21ರಂದು ಬರೆದಿರುವ ಪತ್ರದಲ್ಲಿ ನಿರ್ದೇಶಿಸಿದ್ದಾರೆ.

 

ಅಲ್ಲದೆ ಪಿ-ಪೋಲ್‌ ಅನಾಲಿಟಿಕ್ಸ್‌ ಕಂಪನಿಗೆ 2022ರಿಂದ ಏಪ್ರಿಲ್‌ 2022ರವರೆಗೆ 3 ತಿಂಗಳ ಅವಧಿಗೆ ವಿಸ್ತರಿಸಬೇಕು ಎಂದು ಸಚಿವರ ಆಪ್ತ ಕಾರ್ಯದರ್ಶಿ 2022ರ ಮಾರ್ಚ್‌ 15ರಂದು ಪತ್ರ ಬರೆದಿದ್ದರು.

 

‘ಪಿ-ಪೋಲ್‌ ಅನಾಲಿಟಿಕ್ಸ್‌ಗೆ ಪ್ರಾಥಮಿಕ, ಪ್ರೌಢಶಿಕ್ಷಣ, ಸಕಾಲ ಸಚಿವರ ಸಾಮಾಜಿಕ ಜಾಲತಾಣವಾದ ಟ್ವಿಟರ್‌, ಯೂಟ್ಯೂಬ್‌, ಫೇಸ್‌ಬುಕ್‌ ಹಾಗೂ ಇನ್ನಿತರೆ ಖಾತೆಗಳನ್ನು  3 ತಿಂಗಳ ಅವಧಿಗೆ 2021ರ ಅಕ್ಟೊಬರ್‌ 26ರಂದು ಕಾರ್ಯಾದೇಶ ನೀಡಿದ್ದು ಈ ಆದೇಶವು 2022ರ ಜನವರಿಗೆ ಮುಕ್ತಾಯಗೊಂಡಿದೆ. ಆದ್ದರಿಂದ ಸದರಿ ಆದೇಶವನ್ನು 2022ರ ಫೆಬ್ರುವರಿಯಿಂದ ಏಪ್ರಿಲ್‌ 2022ರವರೆಗೆ 3 ತಿಂಗಳ ಅವಧಿಗೆ ವಿಸ್ತರಿಸಬೇಕು,’ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗೆ ಪತ್ರದಲ್ಲಿ ನಿರ್ದೇಶಿಸಿದ್ದರು. ಆದರೆ ಮಂಡಳಿ ಮತ್ತು ಶಿಕ್ಷಣ ಇಲಾಖೆಯು ಸಚಿವ ಬಿ ಸಿ ನಾಗೇಶ್‌ ಅವರ ಅಧಿಕಾರಾವಧಿವರೆಗೆ 4 (ಜಿ) ವಿನಾಯಿತಿ ಪಡೆದು ಆದೇಶ ಹೊರಡಿಸಿದೆ.

 

ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯಲ್ಲಿ ಯಾವುದೇ ಅನುದಾನ ನಿಗದಿಪಡಿಸದಿದ್ದರೂ ಇದೇ ಮೊದಲ ಬಾರಿಗೆ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿದೆ. ಸಾಮಾಜಿಕ ಜಾಲತಾಣ ನಿರ್ವಹಣೆ ಸಂಬಂಧ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಯಾವುದೇ ದರ ಪಟ್ಟಿಯನ್ನು ಆಹ್ವಾನಿಸಿರಲಿಲ್ಲ ಎಂಬುದನ್ನು ಸ್ಮರಿಸಬಹುದು.

Hot this week

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

Topics

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

Related Articles

Popular Categories

error: Content is protected !!