Tuesday | March 10, 2026 |

ಸಾಮಾಜಿಕ ಜಾಲತಾಣ ನಿರ್ವಹಣೆ ಇನ್ನೊಂದು ಮುಖ; ತಾಂತ್ರಿಕ ಪ್ರಸ್ತಾವನೆಯನ್ನೇ ಷರತ್ತುಗಳಾಗಿ ಮಾರ್ಪಾಡು

Support THE-FILE

spot_img

ಬೆಂಗಳೂರು; ಸಚಿವ ಬಿ ಸಿ ನಾಗೇಶ್‌ ಅವರ ಸಾಮಾಜಿಕ ಜಾಲತಾಣ ನಿರ್ವಹಣೆಗೆ ಸಂಬಂಧಿಸಿದಂತೆ ಪಿ-ಪೋಲ್‌ ಅನಾಲಿಟಿಕ್ಸ್‌ ಕಂಪನಿಯು ತಾಂತ್ರಿಕ ಪ್ರಸ್ತಾವನೆಯಲ್ಲಿ ನಮೂದಿಸಿದ್ದ ಷರತ್ತುಗಳನ್ನೇ ಯಥಾವತ್ತಾಗಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಪಾಲಿಸಿ ಆದೇಶ ಹೊರಡಿಸಿರುವುದು ಆರ್‌ಟಿಐ ದಾಖಲೆಗಳು ಬಹಿರಂಗಪಡಿಸಿವೆ.

 

ಸಚಿವರ ಸಾಮಾಜಿಕ ಜಾಲತಾಣ ನಿರ್ವಹಣೆ ಸಂಬಂಧ ಪಿ ಪೋಲ್‌ ಅನಾಲಿಟಿಕ್ಸ್‌ ಕಂಪನಿಯು 2021ರ ಅಕ್ಟೊಬರ್‌ 18ರಂದು ಸಲ್ಲಿಸಿದ್ದ ತಾಂತ್ರಿಕ ಪ್ರಸ್ತಾವನೆಯಲ್ಲಿನ ಅಂಶಗಳನ್ನು ಎಳ್ಳಷ್ಟೂ ಬದಲಾಯಿಸದ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು 2021ರ ಅಕ್ಟೋಬರ್‌ 26ರಂದು ಕಾರ್ಯಾದೇಶ ಹೊರಡಿಸಿದೆ. ಈ ಸಂಬಂಧ ‘ದಿ ಫೈಲ್‌’ ಆರ್‌ಟಿಐ ಅಡಿಯಲ್ಲಿ ಸಮಗ್ರ ಕಡತವನ್ನು ಪಡೆದುಕೊಂಡಿದೆ.

 

ಪಿ-ಪೋಲ್‌ ಅನಾಲಿಟಿಕ್ಸ್‌ ಕಂಪನಿಯ ತಾಂತ್ರಿಕ ಪ್ರಸ್ತಾವನೆಯಲ್ಲಿನ ಅಂಶಗಳನ್ನೇ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಕಾರ್ಯಾದೇಶದಲ್ಲಿ ಷರತ್ತುಗಳನ್ನಾಗಿಸಿದೆ. ಹೀಗಾಗಿ ಸಚಿವರ ಸಾಮಾಜಿಕ ಜಾಲತಾಣ ನಿರ್ವಹಣೆ ವಿಚಾರದಲ್ಲಿ ಮೊದಲೇ ಪೂರ್ವನಿರ್ಧರಿತ ಕಂಪನಿಗೆ ನೀಡಲಾಗಿದೆ ಎಂಬ ಆರೋಪಗಳಿಗೆ ಇನ್ನಷ್ಟು ಬಲ ಬಂದಂತಾಗಿದೆ.

 

ತಾಂತ್ರಿಕ ಪ್ರಸ್ತಾವನೆಯಲ್ಲೇನಿತ್ತು?

 

ಸ್ಥಳೀಯ ವಿಚಾರಗಳ ಕುರಿತು ಪ್ರತಿ ದಿನವೂ ಫೇಸ್‌ಬುಕ್‌, ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಲಾಗುವುದು. ಸಚಿವರ ವರ್ಚಸ್ಸು ವೃದ್ಧಿಸುವುದು, ವಾರಕ್ಕೊಮ್ಮೆ ಸೃಜನಾತ್ಮಕ ವಿಡಿಯೋ ಸೃಷ್ಟಿ, ಸೃಜನಾತ್ಮಕ ವಿಷಯ, ಸರ್ಕಾರದ ಯೋಜನೆಗಳ ಕುರಿತಾದ ಮಾಹಿತಿ, ವಾರದ ಬೆಳವಣಿಗೆ, ಚಟುವಟಿಕೆಗಳ ಕುರಿತಾದ ಕಿರು ನೋಟ, ಫೇಸ್‌ಬುಕ್‌, ಟ್ವಿಟರ್‌, ಇನ್ಸ್‌ಟ್ರಾಗ್ರಾಂಗಳ ವೆರಿಫಿಕೇಷನ್‌ ಮತ್ತು ಬ್ಲೂ ಟಿಕ್‌ ಕೊಡಿಸುವುದು, ಚಾಲ್ತಿಯಲ್ಲಿರುವ ವಿಷಯಗಳನ್ನಷ್ಟೇ ಟ್ವಿಟರ್‌ನಲ್ಲಿ ಪ್ರಕಟಿಸುವುದು, ವೈಯಕ್ತಿಕ ಸಂದೇಶಗಳು, ಸಾಮಾಜಿಕ ಖಾತೆಯನ್ನು ಖುದ್ದು ನಿರ್ವಹಣೆ, ಅವಮಾನಕರ, ವೈಯಕ್ತಿಕ ನಿಂದನೆ ಟೀಕೆಗಳು, ಸಮಾಜಘಾತುಕ ಟೀಕಾತ್ಮಕಾ ಅಂಶಗಳನ್ನು ತೆಗೆದುಹಾಕುವುದು, ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಕರು ತೊಡಗಿಸಿಕೊಳ್ಳುವಂತೆ ಮಾಡಲಾಗುವುದು ಎಂದು ತಾಂತ್ರಿಕ ಪ್ರಸ್ತಾವನೆಯಲ್ಲಿ ವಿವರಿಸಿದೆ.

 

ಪಿ-ಪೋಲ್‌ ಅನಾಲಿಟಿಕ್ಸ್‌ ಕಂಪನಿಯು ನೀಡಿರುವ ತಾಂತ್ರಿಕ ಪ್ರಸ್ತಾವನೆ ಪ್ರತಿ

 

ಈ ಪ್ರಸ್ತಾವನೆಯನ್ನೇ ಅನಾಮತ್ತಾಗಿ ತೆಗೆದುಕೊಂಡಿರುವ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಇದರಲ್ಲಿನ ಅಂಶಗಳನ್ನು ಕಾರ್ಯಾದೇಶದಲ್ಲಿ ಷರತ್ತುಗಳನ್ನಾಗಿ ಪರಿವರ್ತಿಸಿದೆ.

 

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ವಿಧಿಸಿರುವ ಷರತ್ತುಗಳ ಪ್ರತಿ

 

ಸಾಮಾಜಿಕ ಜಾಲತಾಣ ನಿರ್ವಹಣೆಯ ಭಾಗವಾಗಿರುವ ಕ್ರಿಯೇಟಿವ್‌ ಡಿಸೈನ್‌, ವಿಡಿಯೋ ಪೋಸ್ಟ್‌, ಕ್ಯಾಂಪೇನ್‌ ಪ್ಲಾನಿಂಗ್‌, ಕಂಟೆಂಟ್‌ ಕ್ರಿಯೇಟ್‌ ಗೆ ಒಟ್ಟು 80,000, , ಸಿಜಿಎಸ್‌ಟಿ 7,200, ಎಸ್‌ಜಿಎಸ್‌ಟಿ 7,200 ಸೇರಿ ಒಟ್ಟು 94,400 ರು. ವೆಚ್ಚವಾಗಲಿದೆ ಎಂದು ಆರ್ಥಿಕ ಪ್ರಸ್ತಾವನೆಯನ್ನೂ ಪಿ-ಪೋಲ್‌ ಅನಾಲಿಟಿಕ್ಸ್‌ ಕಂಪನಿಯು ಸಲ್ಲಿಸಿದೆ.

 

ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯಲ್ಲಿ ಯಾವುದೇ ಅನುದಾನ ನಿಗದಿಪಡಿಸದಿದ್ದರೂ ಇದೇ ಮೊದಲ ಬಾರಿಗೆ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿದೆ. ಸಾಮಾಜಿಕ ಜಾಲತಾಣ ನಿರ್ವಹಣೆ ಸಂಬಂಧ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಯಾವುದೇ ದರ ಪಟ್ಟಿಯನ್ನು ಆಹ್ವಾನಿಸಿರಲಿಲ್ಲ. ಅಲ್ಲದೆ 5 ಲಕ್ಷ ರು ಮಿತಿ ದಾಟುತ್ತಿದ್ದರೂ ಇ-ಟೆಂಡರ್‌ ಆಹ್ವಾನಿಸದೆಯೇ ನಿರ್ದಿಷ್ಟ ಕಂಪನಿಗೇ 4 (ಜಿ) ವಿನಾಯಿತಿ ಪಡೆದು 11 ತಿಂಗಳವರೆಗೆ ಮಂಡಳಿಯು ಏಜೆನ್ಸಿ ನೀಡಿರುವುದನ್ನು ಸ್ಮರಿಸಬಹುದು.

Hot this week

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

Topics

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

Related Articles

Popular Categories

spot_imgspot_img
error: Content is protected !!