Tuesday | August 25, 2026 |

ಕೇಂದ್ರದಿಂದ ಬಾರದ ಅನುದಾನ; ಕಿಸಾನ್‌ ಸಮ್ಮಾನ್‌, ಕೃಷಿ ವಿಕಾಸ, ಬಿಸಿಯೂಟ, ಮಾತೃ ವಂದನಾ ಯೋಜನೆ ಕುಂಠಿತ

ಬೆಂಗಳೂರು; ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ, ಕೃಷಿ ಯಾಂತ್ರಿಕತೆ ಅಭಿಯಾನ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಪ್ರಧಾನಮಂತ್ರಿ ಕೃಷಿ ಸಿಂಚಾಯ್‌ ಯೋಜನೆ, ಮಧ್ಯಾಹ್ನದ ಬಿಸಿಯೂಟ ಯೋಜನೆ, ಪೋಷಣ ಅಭಿಯಾನ, ಮಾತೃ ವಂದನಾ ಸೇರಿದಂತೆ ಹಲವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಹೆಚ್ಚು ಅನುದಾನ ಬಿಡುಗಡೆಯಾಗದ ಕಾರಣ ಅತ್ಯಂತ ಕಡಿಮೆ ಪ್ರಗತಿಯಾಗಿರುವುದು ಇದೀಗ ಬಹಿರಂಗವಾಗಿದೆ.

 

ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರ ಅಧ್ಯಕ್ಷತೆಯಲ್ಲಿ 2022ರ ಜುಲೈ  16ರಂದು ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳಡಿಯಲ್ಲಿ ಸಾಧಿಸಿರುವ ಪ್ರಗತಿ ಪರಿಶೀಲನಾ ಸಭೆಯಲ್ಲಿ 2022-23ನೇ ಸಾಲಿನ ಮೊದಲನೇ ತ್ರೈಮಾಸಿಕದ ಉತ್ಪಾದನಾ ಅನುದಾನದ ವೆಚ್ಚದ ಕುರಿತು ಚರ್ಚೆಯಾಗಿದೆ. ಬಜೆಟ್‌ನಲ್ಲಿ ಘೋಷಿತವಾದ ಹಲವು ಯೋಜನೆಗಳಿಗೆ ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಮ್ಮೆಯಿಂದ ಬೀಗಿದ್ದರ ಬೆನ್ನಲ್ಲೇ ಮೊದಲನೇ ತ್ರೈಮಾಸಿಕದ ಉತ್ಪಾದನಾ ಅನುದಾನದ ವೆಚ್ಚದ ಕುರಿತಾದ ಮಾಹಿತಿಗಳು ಮುನ್ನೆಲೆಗೆ ಬಂದಿವೆ.  ಸಭೆ ನಡವಳಿಗಳ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಕೆಡಿಪಿ ಸಭೆಯ ನಡವಳಿಯ ಪ್ರತಿ

 

ಮೊದಲನೇ ತ್ರೈಮಾಸಿಕದಲ್ಲಿ ಉತ್ಪಾದನಾ ಅನುದಾನದಲ್ಲಿ ಶೇ.10ಕ್ಕಿಂತ ಕಡಿಮೆ ಪ್ರಗತಿ ಸಾಧಿಸಿರುವ ಕೃ‍ಷಿ ಇಲಾಖೆಯೂ ಸೇರಿದಂತೆ ಹಲವು ಇಲಾಖೆಗಳ ಪಟ್ಟಿಯೂ ಬಿಡುಗಡೆಯಾಗಿದೆ.

 

‘2022-23ನೇ ಸಾಲಿನಲ್ಲಿ ಮೊದಲನೇ ತ್ರೈಮಾಸಿಕದಲ್ಲಿ ಉತ್ಪಾದನಾ ಅನುದಾನದಲ್ಲಿ ಶೇ. 10ಕ್ಕಿಂತ ಕಡಿಮೆ ಪ್ರಗತಿ ಸಾಧಿಸಿರುವ ಇಲಾಖೆಗಳ ಪೈಕಿ ಕೃಷಿ ಇಲಾಖೆಯಿಂದ ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಹೆಚ್ಚು ಅನುದಾನ ಬಿಡುಗಡೆಯಾಗಿಲ್ಲ. ಹೀಗಾಗಿ ಕಡಿಮೆ ಪ್ರಗತಿಯಾಗಿದೆ. ಮಾತೃವಂದನಾ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ,’ ಎಂದು ಇಲಾಖಾಧಿಕಾರಿಗಳು ವಿವರಿಸಿರುವುದು ನಡವಳಿಯಿಂದ ಗೊತ್ತಾಗಿದೆ.

 

ರಾಷ್ಟ್ರೀಯ ಆಹಾರ ಸುರಕ್ಷತೆ ಮಿಷನ್‌, ಇತರೆ ಬೆಳೆಗಳು ಮತ್ತು ಎಣ್ಣೆಕಾಳುಗಳ ಯೋಜನೆಗೆ 2022-23ರಲ್ಲಿ 167.00 ಕೋಟಿ ರು. ಅನುದಾನ ನಿಗದಿಯಾಗಿದ್ದರೂ ಮೊದಲನೇ ತ್ರೈಮಾಸಿಕದಲ್ಲಿ ನಯಾಪೈಸೆಯನ್ನೂ ಬಿಡುಗಡೆ ಮಾಡಿಲ್ಲ. ಅದೇ ರೀತಿ ಪ್ರಧಾನಮಂತ್ರಿ ಕೃಷಿ ಸಿಂಚಾಯ್‌ ಯೋಜನೆಗೆ 311.38 ಕೋಟಿ ರು, ಕೃಷಿ ಯಾಂತ್ರಿಕತೆ, ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಗೆ 2,000 ಕೋಟಿ ರು., ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಗೆ 33.33 ಕೋಟಿ ರು. ಅನುದಾನದ ಪೈಕಿ ಮೊದಲನೇ ತ್ರೈಮಾಸಿಕದಲ್ಲಿ ಬಿಡಿಗಾಸೂ ಬಂದಿಲ್ಲ ಎಂದು ಕೃಷಿ ಇಲಾಖೆಯು ಮಾಹಿತಿ ಒದಗಿಸಿರುವುದು ನಡವಳಿಯಿಂದ ತಿಳಿದು ಬಂದಿದೆ.

 

ಪ್ರಾಥಮಿಕ, ಪ್ರೌಢಶಿಕ್ಷಣ ಇಲಾಖೆಯಲ್ಲಿ ಅನುಷ್ಠಾನಗೊಳಿಸಿರುವ ಬಿಸಿಯೂಟ, ಸಮಗ್ರ ಶಿಕ್ಷಣದಡಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಯೋಜನೆಗಳಲ್ಲಿಯೂ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧಿಸಿಲ್ಲ. ಮಧ್ಯಾಹ್ನದ ಬಿಸಿಯೂಟ ಯೋಜನೆಗೆ 959.58 ಕೋಟಿ ರು. ಕೇಂದ್ರದ ಪಾಲಿನಲ್ಲಿ ಮೊದಲನೇ ತ್ರೈಮಾಸಿಕದಲ್ಲಿ ಬಿಡಿಗಾಸೂ ಬಂದಿಲ್ಲ.

 

ಅದೇ ರೀತಿ ಪ್ರಾಥಮಿಕ ಶಾಲೆಗಳ ಮೂಲಭೂತ ಸೌಕರ್ಯಗಳಿಗೆ 331.50 ಕೋಟಿ ರು. ಅನುದಾನದಲ್ಲಿಯೂ ನಯಾಪೈಸೆಯೂ ಬಿಡುಗಡೆಯಾಗಿಲ್ಲ. ಕರ್ನಾಟಕ ಪಬ್ಲಿಕ್‌ ಶಾಲೆಗಳ ಮೂಲಭೂತ ಸೌಕರ್ಯಗಳಿಗಾಗಿ 135.00 ಕೋಟಿ ರು. ಪೈಕಿ 33.75 ಕೋಟಿ ರು. ಬಿಡುಗಡೆಯಾಗಿದೆಯಾದರೂ ಮೊದಲನೇ ತ್ರೈಮಾಸಿದಲ್ಲಿ ಶೂನ್ಯ ವೆಚ್ಚವಾಗಿದೆ ಎಂಬುದು ನಡವಳಿಯಿಂದ ಗೊತ್ತಾಗಿದೆ.

 

ಮಾತೃ ವಂದನಾ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ. ಪೋಷಣ ಅಭಿಯಾನ (ರಾಷ್ಟ್ರೀಯ ಪೌಷ್ಠಿಕಾಂಶ ಅಭಿಯಾನ)ಕ್ಕೆ 2022-23ರ ಆಯವ್ಯಯದಲ್ಲಿ 51.00 ಕೋಟಿ ರು., ದೇವದಾಸಿಯರಿಗೆ ಮಾಸಾಶನಕ್ಕೆ 54.36 ಕೋಟಿ , ಅಂಗನವಾಡಿಗಳ ಕಟ್ಟಡಕ್ಕೆ 70.00 ಕೋಟಿ ರು. ಅನುದಾನ ಒದಗಿಸಿದ್ದರೂ ಮೊದಲನೇ ತ್ರೈಮಾಸಿಕದಲ್ಲಿ ಈ ಮೂರೂ ಕಾರ್ಯಕ್ರಮಗಳಿಗೆ ಬಿಡಿಗಾಸೂ ಬಂದಿಲ್ಲ ಎಂಬುದು ನಡವಳಿಯಲ್ಲಿ ಉಲ್ಲೇಖಿಸಲಾಗಿದೆ.

 

ಮಹಿಳಾ ಉದ್ಧೇಶಿತ ಕಾರ್ಯಕ್ರಮಗಳಡಿ (ಪ್ರವರ್ಗ-ಎ) ಉನ್ನತ ಶಿಕ್ಷಣ ಇಲಾಖೆಯಲ್ಲಿನ ವಿದ್ಯಾರ್ಥಿನಿಯರಿಗೆ ಪೂರ್ಣ ಶುಲ್ಕ ವಿನಾಯಿತಿ ಕಾರ್ಯಕ್ರಮಕ್ಕೆ ಒದಗಿಸಿರುವ 25.00 ಕೋಟಿ ರು., ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಮೂಲಕ ಮಹಿಳೆಯರಿಗೆ ಬಡ್ಡಿ ಸಹಾಯಧನಕ್ಕೆ ಒದಗಿಸಿರುವ 50.00 ಕೋಟಿ., ಭಾಗ್ಯಲಕ್ಷ್ಮಿ ಯೋಜನೆಗೆ ಒದಗಿಸಿರುವ 137.04 ಕೋಟಿ, ಸ್ಫೂರ್ತಿ ಯೋಜನೆಗೆ ಒದಗಿಸಿರುವ 12.50 ಕೋಟಿ, ಮಹಿಳಾ ಆಯೋಗ ಮತ್ತು ಮಹಿಳಾ ಕಲ್ಯಾಣ ಕಾರ್ಯಕ್ರಮಕ್ಕೆ ಒದಗಿಸಿರುವ 39.45 ಕೋಟಿ ರುಗ.ಳಿಗೆ ಪ್ರಗತಿ ಶೂನ್ಯವಾಗಿದೆ ಎಂದು ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ಒದಗಿಸಿದ್ದಾರೆ.

 

ನಬಾರ್ಡ್‌ ಯೋಜನೆಯಡಿ ಕಳೆದ ಐದಾರು ವರ್ಷಗಳಿಂದ ಕಿರು ಮತ್ತು ಸಣ್ಣ ಯೋಜನೆಗಳು ಪೂರ್ಣಗೊಂಡಿಲ್ಲ. ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕಡ್ಡಾಯವಾಗಿ ಪರಿಶೀಲನೆ ನಡೆಸಬೇಕು. ಪ್ರಸಕ್ತ ಸಾಲಿನಲ್ಲಿ ಪ್ರತಿ ಶಾಸಕರಿಗೆ ನೀಡಿರುವ 2.00 ಕೋಟಿ ಅನುದಾನಕ್ಕೆ ಸಂಪೂರ್ಣವಾಗಿ ಕ್ರಿಯಾಯೋಜನೆ ನೀಡಿ ಅನುಮೋದನೆ ಪಡೆಯಬೇಕು ಎಂದೂ ಮುಖ್ಯ ಕಾರ್ಯದರ್ಶಿ ಸೂಚಿಸಿರುವುದು ಗೊತ್ತಾಗಿದೆ.

Hot this week

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...
Please Scan to make Your Contribution

Topics

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

Related Articles

Popular Categories

error: Content is protected !!