Tuesday | May 12, 2026 |

ಪಲಿಮಾರು, ಮುರುಘಾ, ಶೃಂಗೇರಿ, ಆದಿಚುಂಚನಗಿರಿ ಸೇರಿ 178 ಮಠಗಳಿಗೆ 108.24 ಕೋಟಿ ರು ಅನುದಾನ

ಬೆಂಗಳೂರು; ಅಕ್ಷರ ದಾಸೋಹದ ಬಿಸಿಯೂಟ ಕಾರ್ಯಕರ್ತೆಯರಿಗೆ ಯಾವುದೇ ಪರಿಹಾರ ನೀಡದೇ ಅವರನ್ನು ಬೀದಿಗೆ ತಳ್ಳಿರುವ ರಾಜ್ಯ ಬಿಜೆಪಿ ಸರ್ಕಾರವು ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡು ರಾಜ್ಯದ ವಿವಿಧ ಸಮಾಜಗಳ ಮಠ, ದೇವಸ್ಥಾನ, ಸಂಘ ಸಂಸ್ಥೆಗಳು, ಟ್ರಸ್ಟ್‌ಗಳಿಗೆ 142.59 ಕೋಟಿ ರು. ಅನುದಾನಕ್ಕೆ ಆಡಳಿತಾತ್ಮಕ ಮಂಜೂರಾತಿ ನೀಡಿ ಆದೇಶ ಹೊರಡಿಸಿದೆ.

 

ಈ ಪೈಕಿ 178 ಮಠಗಳಿಗೆ ಒಟ್ಟು 108.24 ಕೋಟಿ ರು., 59 ದೇವಸ್ಥಾನಗಳಿಗೆ 21.35 ಕೋಟಿ, ಸಂಘ ಸಂಸ್ಥೆ, ಟ್ರಸ್ಟ್‌ಗಳಿಗೆ 13.00 ಕೋಟಿ ರು. ಅನುದಾನಕ್ಕೆ ಆಡಳಿತಾತ್ಮಕ ಮಂಜೂರಾತಿ ನೀಡಿ 2022ರ ಆಗಸ್ಟ್‌ 11ರಂದು ಆದೇಶ ಹೊರಡಿಸಿದೆ. ಆದೇಶದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಫಲಿಮಾರು ಮಠ, ಆದಿಚುಂಚನಗಿರಿ ಶಾಖಾ ಮಠ, ವಿರಕ್ತ ಮಠಗಳು, ಜಂಗಮ ಮಠಗಳು, ರಂಭಾಪುರಿ, ವ್ಯಾಸರಾಜ, ಶೃಂಗೇರಿ ಶಂಕರಮಠ, ಮುರುಘರಾಜೇಂದ್ರ ಶಿವಯೋಗಾಶ್ರಮ ಟ್ರಸ್ಟ್‌, ಸಿದ್ಧಾರೂಢ ಮಠ, ರಾಘವೇಂದ್ರಸ್ವಾಮಿ ಮಠ, ಬೆಕ್ಕಿನ ಕಲ್ಮಠ, ಮುರುಘರಾಜೇಂದ್ರ ಮಠ ಸೇರಿದಂತೆ ಒಟ್ಟು 178 ಮಠಗಳಿಗೆ ಅನುದಾನ ನೀಡಲು ಆದೇಶ ಹೊರಡಿಸಿದೆ.

 

ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿರುವ ಆದೇಶದ ಪ್ರತಿ

 

ಬಿಜೆಪಿ ರಾಷ್ಟ್ರೀಯ ಘಟಕದ ಧುರೀಣರು ಮುರುಘಾ ಮಠಕ್ಕೆ ಇತ್ತೀಚೆಗಷ್ಟೇ ಭೇಟಿ ನೀಡಿದ್ದರ ಬೆನ್ನಲ್ಲೇ ಶ್ರೀ ಜಗದ್ಗುರು ಮುರುಘರಾಜೇಂದ್ರ ಶಿವಯೋಗಾಶ್ರಮ ಟ್ರಸ್ಟ್‌ಗೆ 5.00 ಕೋಟಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಉಳವಿಯ ಚನ್ನಬಸವೇಶ್ವರ ಮಹಾಮಠಕ್ಕೆ 5 ಕೋಟಿ ರು. ನೀಡಿದೆ. ಉಳಿದ ಮಠಗಳಿಗಿಂತಲೂ ಅತಿ ಹೆಚ್ಚು ಅನುದಾನವನ್ನು ಈ ಎರಡೆಊ ಮಠಗಳಿಗೆ ಒದಗಿಸಿರುವುದು ಆದೇಶದಿಂದ ತಿಳಿದು ಬಂದಿದೆ.

 

ಉಡುಪಿಯ ಕುಂಜಾರುಗಿರಿಯ ದುರ್ಗಾ ಬೆಟ್ಟದ ಪರಿಸರದಲ್ಲಿ ಮಧ್ವವನ ಅಭಿವೃದ್ಧಿಗಾಗಿ ಫಲಿಮಾರು ಮಠದ ಶ್ರೀ ರಾಮಾಂಜನೇಯ ಪ್ರತಿಷ್ಠಾನ, ಚಿಕ್ಕಮಗಳೂರಿನ ದೊಡ್ಡಕುರುಬರಹಳ್ಳಿಯ ಶ್ರೀ ಬಸವ ತತ್ವ ಪೀಠಕ್ಕೆ ತಲಾ 3.00 ಕೋಟಿ ರು. ಒದಗಿಸಿದೆ.

 

 

ಒಂದು ಕೋಟಿ ಅನುದಾನ ಪಡೆದ ಮಠಗಳ ಪಟ್ಟಿ

 

ಕೊಪ್ಪಳದ ರಾಘವೇಂದ್ರ ಸ್ವಾಮಿಗಳ ಮಠ, ನರಗುಂದ ತಾಲೂಕಿನ ದೊರೆಸ್ವಾಮಿ ಮಠ, ಪುಣ್ಯಾರಣ್ಯ, ಪತ್ರಿವನಮಠ, ತಿಪಟೂರಿನ ದಸರಿಘಟ್ಟದ ಆದಿಚುಂಚನಗಿರಿ ಶಾಖಾ ಮಠ, ಶ್ರೀ ಶೃಂಗೇರಿ ಶಿವಗಂಗಾ ಶಾರದಾ ಪೀಠ, ಚಿಕ್ಕನಾಯಕನಹಳ್ಳಿಯ ತಮ್ಮಡಿಹಳ್ಳಿ ಮಠ, ಉಡುಪಿಯ ಸಂಪುಟ ನರಸಿಂಹಸ್ವಾಮಿ ಸುಬ್ರಹ್ಮಣ್ಯ ಮಠ, ದಾವಣಗೆರೆಯ ಹಳೇ ಕುಂದುವಾಡದ ಶ್ರೀ ಸದ್ಗುರು ಕರಿಬಸವೇಶ್ವರ ಸ್ವಾಮಿ ಮಠ, ಧಾರವಾಡದ ಶ್ರೀ ಜಗದ್ಗುರು ಮುರುಘಾರಾಜೇಂದ್ರ ಉಚಿತ ಪ್ರಸಾದ ನಿಲಯ ಟ್ರಸ್ಟ್‌, ಧಾರವಾಡ ಜಿಲ್ಲೆಯ ಸಿದ್ದರೂಢ ಮಠ, ಬೆಂಗಳೂರು ಹನುಮಂತ ನಗರದ ಕುಂದಾಪುರ ವ್ಯಾಸರಾಜ ಮಠ, ಬೆಂಗಳೂರು ಗಿರಿ ನಗರದ ಭಂಡಾರಕೆರೆ ಮಠ, ಬೆಳಗಾವಿಯ ಸವದತ್ತಿ ತಾಲೂಕಿನ ಸಂಬಯ್ಯನಮಠ, ಬೆಳಗಾವಿಯ ಶ್ರೀ ಶೂನ್ಯಸಂಪಾದನ ಮಠ, ಹೊಳೆನರಸೀಪುರದ ಎಡತೊರೆ ಶ್ರೀ ಯೋಗನಂದೇಶ್ವರ ಸರಸ್ವತಿ ಮಠ, ಮೈಸೂರು ಟಿ ನರಸೀಪುರದ ಶ್ರೀ ವ್ಯಾಸರಾಜ ಮಠ ಸೋಸಲೆ, ಮೈಸೂರಿನ ಮಹಾಲಿಂಗೇಶ್ವರ ಮಠ, ಮಾಗಡಿಯ ಶ್ರೀ ಜಂಗಮ ಮಠ, ಹಾವೇರಿ ಸವಣೂರಿನ ರೇವಣಸಿದ್ದೇಶ್ವರ ಮಠ, ಶಿಗ್ಗಾಂವಿಯ ವಿರಕ್ತ ಮಠ, ಬಂಕಾಪುರದ ಅರಳಳ್ಳೇ ಮಠ, ಸವಣೂರಿನ ಕಲ್ಮಠ, ಹಾವೇರಿಯ ಹುಕ್ಕೇರಿ ಮಠ, ಹಾನಗಲ್‌ನ ಶ್ರೀ ಗುರುನಂಜೇಶ್ವರ ಮಠ, ದೊಡ್ಡಹುಣಸೆ ಕಲ್ಮಠ, ವಿರಕ್ತಮಠ, ಸಿದ್ದಲಿಂಗೇಶ್ವರ ಕಲ್ಮಠ, ಶ್ರೀ ಹೊಸಮಠಕ್ಕೆ ತಲಾ 1 ಕೋಟಿ ರು., ಅನುದಾನ ನೀಡಿ ಆದೇಶ ಹೊರಡಿಸಿದೆ.

 

 

ತುಮಕೂರು ಜಿಲ್ಲೆಯ ತಿಪಟೂರಿನ ಷಡಕ್ಷರ ಮಠ, ಬೆಂಗಳೂರಿನ ತಿಪ್ಪಶೆಟ್ಟಿ ಮಠ, ಹುಕ್ಕೇರಿ ತಾಲೂಕಿನ ಶ್ರೀ ಹಾವೇರಿ ಮಠ, ಬೆಳಗಾವಿ ಅಥಣಿಯ ಶ್ರೀ ಶಿವಯೋಗಿ ಮುರಘೇಂದ್ರ ಮಠ (ಗಚ್ಚನಮಠ), ಶಿವಮೊಗ್ಗದ ಬೆಕ್ಕಿನಕಲ್ಮಠಕ್ಕೆ ತಲಾ 2 ಕೋಟಿ ರು. ಅನುದಾನ ಒದಗಿಸಿದೆ.

 

ಶ್ರೀ ಗುರುಸಿದ್ದರಾಮೇಶ್ವರ ರಾಜಯೋಗ ಸುಕ್ಷೇತ್ರ ಶ್ರೀಮದ್‌ ಯಳನಾಡು 1 ಕೋಟಿ ರು., ಶಿರಸಿ ತಾಲೂಕಿನ ಬನವಾಸಿಯ ಮಧುಕೇಶ್ವರ ದೇವಸ್ಥಾನ (ರಥ ನಿರ್ಮಾಣ) 3 ಕೋಟಿ ರು., ವಿಜಯಪುರದ ಶ್ರೀ ವ್ಯಾಸಮಧ್ವ ಸಂಸ್ಕೃತ ವಿದ್ಯಾಲಯಕ್ಕೆ 25 ಲಕ್ಷ ರು.ಅನುದಾನ ಒದಗಿಸಿದೆ.

 

ಹಾಗೆಯೇ ಉಡುಪಿಯ ಶ್ರೀವಾದಿರಾಜ ಸಂಶೋಧನ ಪ್ರತಿಷ್ಠಾನ ಗೀತ ಮಂದಿರಕ್ಕೆ 60 ಲಕ್ಷ ರು., ಎಸ್‌ಜಿಎಸ್‌ಬಿವಿ ವಿರಕ್ತ ಮಠ ಮಹಾಗಾಂವಕ್ಕೆ 50 ಲಕ್ಷ ರು., ಪಂಡಿತ್‌ ಬಸವರಾಜ ರಾಜಗುರು ಸಭಾಭವನಕ್ಕೆ 1 ಕೋಟಿ ರು., ಬೆಂಗಳೂರಿನ ಬಸವನಗುಡಿಯಲ್ಲಿರುವ ದ್ವೈತ ವೇದಾಂತ ಅಧ್ಯಯನ ಮತ್ತು ಸಂಶೋಧನ ಪ್ರತಿಷ್ಠಾನ, ಶಂಕರಪುರಂನ ಶ್ರೀ ಜಯಸತ್ಯಪ್ರಮೋದ ನಿಧಿ, ಬೆಂಗಳೂರಿನ ಶ್ರೀ ವಿಶ್ವೇಶ್ವರ ತೀರ್ಥ ಸಂಶೋಧನಾ ಕೇಂದ್ರ, ಮೈಸೂರಿನ ಉತ್ತನಹಳ್ಳಿಯ ಭಾರತೀಯ ಯೋಗಧಾಮಕ್ಕೆ ತಲಾ 1 ಕೋಟಿ ರು. ಅನುದಾನ ನೀಡಿ ಆದೇಶ ಹೊರಡಿಸಿದೆ.

 

ವಿವಿಧ ದೇವಾಲಯಗಳ ಕಾಮಗಾರಿಗಳಿಗೆ ಅನುದಾನ ಮಂಜೂರು ಮಾಡಲು ಯಾವುದೇ ತಕರಾರು ಇಲ್ಲದೇ ಸಹಮತಿ ವ್ಯಕ್ತಪಡಿಸಿದ್ದ ಆರ್ಥಿಕ ಇಲಾಖೆಯು ವಿಶೇಷ ಅನುದಾನದಡಿಯಲ್ಲಿ 116 ಕೋಟಿ ರು. ಬಿಡುಗಡೆ ಮಾಡಿ 2022ರ ಜುಲೈ 21ರಂದು ಆದೇಶ ಹೊರಡಿಸಿದ್ದನ್ನು ಸ್ಮರಿಸಬಹುದು.

Hot this week

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...
Please Scan to make Your Contribution

Topics

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...

Related Articles

Popular Categories

error: Content is protected !!