Wednesday | September 9, 2026 |

ಐಎಎಸ್‌, ಕೆಎಎಸ್‌ ಅಧಿಕಾರಿಗಳಿಗೆ ಹೊಸ ವಾಹನ ಖರೀದಿಯ ಆರ್ಥಿಕ ಮಿತಿ ಹೆಚ್ಚಳ; ಬೊಕ್ಕಸಕ್ಕೆ ಹೊರೆ?

ಬೆಂಗಳೂರು; ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ, ಸಾಮಾಜಿಕ ಭದ್ರತೆ ಯೋಜನೆಗಳು, ನೆರೆ ಪರಿಹಾರ, ಶಾಲಾ ಮಕ್ಕಳಿಗೆ ಗರಿಷ್ಠ ದಿನಗಳವರೆಗೆ ಮೊಟ್ಟೆ ವಿತರಣೆ, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ, ವೈದ್ಯಕೀಯ ಪರಿಹಾರ ಭತ್ಯೆ ವಿಸ್ತರಣೆ ಸೇರಿದಂತೆ ಇನ್ನಿತರೆ ಯೋಜನೆಗಳಿಗೆ ಆರ್ಥಿಕ ನೆರವು ನೀಡಲು ಆರ್ಥಿಕ ಮಿತವ್ಯಯ, ಆರ್ಥಿಕ ಹೊರೆ ನೆಪವೊಡ್ಡಿ ಕೊಕ್ಕೆ ಹಾಕುವ ಐಎಎಸ್‌ ಅಧಿಕಾರಿಗಳು ಇದೀಗ ಹೊಸ ವಾಹನ ಖರೀದಿಗಿದ್ದ ಆರ್ಥಿಕ ಮಿತಿಯನ್ನು ಹೆಚ್ಚಿಸಿಕೊಂಡಿದ್ದಾರೆ.

 

ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು,ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರುಗಳಿಗೆ ಹೊಸ ವಾಹನ ಖರೀದಿಸಲು ಈ ಇಂದೆ ನಿಗದಿಪಡಿಸಿದ್ದ ಆರ್ಥಿಕ ಮಿತಿಯನ್ನು ಸಡಿಲಗೊಳಿಸಿದೆ. ಈ ಸಂಬಂಧ 2022ರ ಆಗಸ್ಟ್‌ 18ರಂದು ಆದೇಶ ಹೊರಡಿಸಲಾಗಿದೆ. ವಿತ್ತ ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರ್ಥಿಕ ಇಲಾಖೆಯ ಅಭಿಪ್ರಾಯವನ್ನು ಅನುಮೋದಿಸಿದ್ದಾರೆ.  ಆದೇಶದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರುಗಳು (ಕಾರ್ಯದರ್ಶಿ ಶ್ರೇಣಿಯ ಅಧಿಕಾರಿಗಳಾಗಿದ್ದಲ್ಲಿ) ವಾಹನ ಖರೀದಿಸಲು ಈ ಹಿಂದೆ ನಿಗದಿಪಡಿಸಿದ್ದ ಆರ್ಥಿಕ ಮಿತಿಯನ್ನು 14.00 ಲಕ್ಷ ರು.ಗಳಿಂದ 20 ಲಕ್ಷ ರು.ಗಳಿಗೆ ಹೆಚ್ಚಿಸಿರುವುದು ಆದೇಶದಿಂದ ತಿಳಿದು ಬಂದಿದೆ.

 

ಅದೇ ರೀತಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರುಗಳಿಗೆ 9.00 ಲಕ್ಷ ರು.ಗಳಿಂದ 18.00 ಲಕ್ಷ ರು.ಗಳಿಗೆ ಹೆಚ್ಚಿಸಲಾಗಿದೆ. ಹಾಗೆಯೇ ಜಿಲ್ಲಾ ಹಂತದ ಇತರ ಅಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ಡಿವೈಎಸ್ಪಿಗಳಿಗೆ 6.50 ಲಕ್ಷ ರು ಗಳಿಂದ 12.50 ಲಕ್ಷ ರುಗ.ಳಿಗೆ ಹೆಚ್ಚಿಸಲಾಗಿದೆ. ತಹಶೀಲ್ದಾರ್‌ ಮತ್ತು ತಾಲೂಕು ಮಟ್ಟದ ಇತರ ಅಧಿಕಾರಿಗಳೀಗೆ 9.00 ಲಕ್ಷ ರು.ಗಳ ಮಿತಿಯಲ್ಲಿಯೇ ಹೊಸ ವಾಹನ ಖರೀದಿಸಲು ಆರ್ಥಿಕ ಮಿತಿ ನಿಗದಿಪಡಿಸಿದೆ.

 

 

ಹೊಸ ವಾಹನ ಖರೀದಿಸುವ ಸಂಬಂಧ 2019ರಲ್ಲಿಯೂ ಅರ್ಥಿಕ ಮಿತಿ ನಿಗದಿಗೊಳಿಸಿತ್ತು. ಇದರ ಪ್ರಕಾರ ಇಲಾಖಾ ಮುಖ್ಯಸ್ಥರುಗಳಿಗೆ ವಾಹ ಖರೀದಿಸಲು 6.50 ಲಕ್ಷ ರು ಗಳಿಂದ 9.00 ಲಕ್ಷ ರು.ಗಳಿಗೆ ಹೆಚ್ಚಿಸಲಾಗಿತ್ತು. ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು (ಕಾರ್ಯದರ್ಶಿ ಶ್ರೇಣಿ)ಗಳಿಗೆ 9.00 ಲಕ್ಷ ರು.ಗಳಿಂದ 14.00 ಲಕ್ಷ ರು.ಗಳಿಗೆ ಹೆಚ್ಚಿಸಲಾಗಿತ್ತು.

Hot this week

ತನಿಖೆಯಿಂದ ಪತ್ತೆ ಹಚ್ಚಬಹುದಾದನ್ನು ದೂರುದಾರ ಸಾಬೀತುಪಡಿಸಬೇಕೇ?; ಸಿದ್ದಾರ್ಥ ವಿಹಾರ ಟ್ರಸ್ಟ್‌ ಪ್ರಕರಣದಲ್ಲಿ ನ್ಯಾಯಪೀಠದ ಅವಲೋಕನ

ಬೆಂಗಳೂರು; 'ದೂರುದಾರರ ವಿಚಾರಣೆಯ ಮೂಲಕವೇ  ಸಂಪೂರ್ಣ ಸರಪಳಿಯನ್ನು ಬಿಚ್ಚಿಡುವಂತೆ ಖಾಸಗಿ ದೂರುದಾರರಿಂದ...

ಸಿದ್ದಾರ್ಥ ವಿಹಾರ ಟ್ರಸ್ಟ್‌ ಪ್ರಕರಣ; ಖಾಸಗಿ ದೂರು ಮುಂದುವರೆಸಲು ಹೈಕೋರ್ಟ್‌ ಅನುಮತಿ, ಖರ್ಗೆ ಕುಟುಂಬಕ್ಕೆ ಸಂಕಷ್ಟ!

ಬೆಂಗಳೂರು; ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಸಚಿವ...

ಲೀಡ್‌ ಮೆಂಬರ್‍‌ನದ್ದು ಶೂನ್ಯ ವಹಿವಾಟು; ಆದರೂ ಟೆಂಡರ್ ಪ್ಯಾಕೇಜ್‌ನ 7 ಮತ್ತು 9ರಲ್ಲಿ ಎಲ್ 1 ಆಗಿದ್ಹೇಗೆ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ, ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಾಗಾಣಿಕೆಗೆ ಸಂಬಂಧಿಸಿದಂತೆ...
Please Scan to make Your Contribution

Topics

ತನಿಖೆಯಿಂದ ಪತ್ತೆ ಹಚ್ಚಬಹುದಾದನ್ನು ದೂರುದಾರ ಸಾಬೀತುಪಡಿಸಬೇಕೇ?; ಸಿದ್ದಾರ್ಥ ವಿಹಾರ ಟ್ರಸ್ಟ್‌ ಪ್ರಕರಣದಲ್ಲಿ ನ್ಯಾಯಪೀಠದ ಅವಲೋಕನ

ಬೆಂಗಳೂರು; 'ದೂರುದಾರರ ವಿಚಾರಣೆಯ ಮೂಲಕವೇ  ಸಂಪೂರ್ಣ ಸರಪಳಿಯನ್ನು ಬಿಚ್ಚಿಡುವಂತೆ ಖಾಸಗಿ ದೂರುದಾರರಿಂದ...

ಸಿದ್ದಾರ್ಥ ವಿಹಾರ ಟ್ರಸ್ಟ್‌ ಪ್ರಕರಣ; ಖಾಸಗಿ ದೂರು ಮುಂದುವರೆಸಲು ಹೈಕೋರ್ಟ್‌ ಅನುಮತಿ, ಖರ್ಗೆ ಕುಟುಂಬಕ್ಕೆ ಸಂಕಷ್ಟ!

ಬೆಂಗಳೂರು; ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಸಚಿವ...

ಲೀಡ್‌ ಮೆಂಬರ್‍‌ನದ್ದು ಶೂನ್ಯ ವಹಿವಾಟು; ಆದರೂ ಟೆಂಡರ್ ಪ್ಯಾಕೇಜ್‌ನ 7 ಮತ್ತು 9ರಲ್ಲಿ ಎಲ್ 1 ಆಗಿದ್ಹೇಗೆ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ, ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಾಗಾಣಿಕೆಗೆ ಸಂಬಂಧಿಸಿದಂತೆ...

2,500 ಕೋಟಿ ರು ಮೂಲ ಬೆಲೆಯ ಮೇಲೆ 350 ಕೋಟಿ ಪ್ರೀಮಿಯಂ; ನಾಗರೀಕರ ಮೇಲೆ ಹೊರೆ ಸೃಷ್ಟಿಸಿತೇ ಬಿಎಸ್‌ಡಬ್ಲ್ಯೂಎಂಎಲ್?

ಬೆಂಗಳೂರು;  ಪ್ರಾಥಮಿಕ ಹಂತದ ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯುಎಂಎಲ್‌...

Related Articles

Popular Categories

error: Content is protected !!