Tuesday | March 24, 2026 |

ಉಲ್ಲಂಘನೆ; ಗೋಶಾಲೆ ತೆರೆಯುವ ಪ್ರಸ್ತಾವನೆ ತಿರಸ್ಕರಿಸಿದ್ದ ಸರ್ಕಾರ, ಜನಸೇವಾ ಟ್ರಸ್ಟ್‌ಗೆ 35 ಎಕರೆ ಮಂಜೂರು

Support THE-FILE

spot_img

ಬೆಂಗಳೂರು; ತಾವರೆಕೆರೆ ಹೋಬಳಿಯ ಕುರುಬರಹಳ್ಳಿಯಲ್ಲಿರುವ ಗೋಮಾಳ ಜಮೀನಿನಲ್ಲಿ ಗೋ ಶಾಲೆ ತೆರೆಯಲು ಹಲವು ಸಂಘ ಸಂಸ್ಥೆಗಳು ಸಲ್ಲಿಸಿದ್ದ ಪ್ರಸ್ತಾವನೆಗಳನ್ನು ತಿರಸ್ಕರಿಸಿದ್ದ ಸ್ಥಳೀಯ ತಹಶೀಲ್ದಾರ್‌, ರಾಜಸ್ವ ನಿರೀಕ್ಷಕರು ಸಂಘ ಪರಿವಾರ ಹಿನ್ನೆಲೆಯ ಜನಸೇವಾ ಟ್ರಸ್ಟ್‌ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ್ದರು ಎಂಬುದು ಇದೀಗ ಬಹಿರಂಗವಾಗಿದೆ.

 

ಕುರುಬರಹಳ್ಳಿಯಲ್ಲಿ ರೈತರು ಜಾನುವಾರುಗಳನ್ನು ಮನೆಯಲ್ಲಿಯೇ ಕಟ್ಟಿ ಹಾಕಿ ಮೇವು ನೀಡುತ್ತಿದ್ದಾರೆ. ಹೀಗಾಗಿ ಮೇವಿಗಾಗಿ ಜಾಗದ ಅವಶ್ಯಕತೆ ಇರುವ ಕಾರಣ ಗೋಮಾಳ ಜಮೀನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ವರದಿ ನೀಡಿ ಸಂಘ ಸಂಸ್ಥೆಗಳ ಪ್ರಸ್ತಾವನೆಗಳನ್ನು ತಿರಸ್ಕರಿಸಿದ್ದ ಅಧಿಕಾರಿಗಳೇ ಇದೀಗ ಜನಸೇವಾ ಟ್ರಸ್ಟ್‌ಗೆ ಮಾತ್ರ ಗೋಮಾಳ ಜಮೀನನ್ನು ಹಂಚಿಕೆ ಮಾಡಲು ಪರೋಕ್ಷವಾಗಿ ಸಹಕರಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಸಂಬಂಧ ಕೆಲ ದಾಖಲೆಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ಗೋಮಾಳ ಜಮೀನು ಖಾಯಂ ಮಂಜೂರಾತಿಗಾಗಿ ಜನಸೇವಾ ಟ್ರಸ್ಟ್‌ ಪ್ರಸ್ತಾವನೆ ಸಲ್ಲಿಸಿದ ಕೆಲವೇ ದಿನಗಳಲ್ಲಿ ಪ್ರಕ್ರಿಯೆಗಳನ್ನು ಪಾಲಿಸದೆಯೇ ತಾಲೂಕು ಮೋಜಣಿದಾರರು ಪೂರಕವಾದ ವರದಿ ಸಲ್ಲಿಸಿದ್ದರು. ಅಷ್ಟೇ ಕ್ಷಿಪ್ರಗತಿಯಲ್ಲಿ ಬೆಂಗಳೂರು ದಕ್ಷಿಣ ತಾಲೂಕಿನ ತಹಶೀಲ್ದಾರ್‌ ಕೂಡ ಸ್ಕೆಚ್‌ ವರದಿಯನ್ನು 2021ರ ಜುಲೈ 9ರಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದಾರೆ. ಜನಸೇವಾ ಟ್ರಸ್ಟ್‌ಗೆ ಗೋಮಾಳ ಜಮೀನು ಮಂಜೂರು ಮಾಡುವ ಉದ್ದೇಶದಿಂದಲೇ 2021ರ ಜುಲೈ 15ರಂದು ಚೆಕ್‌ ಲಿಸ್ಟ್‌ಗೆ ಸಹಿ ಮಾಡಿದ್ದಾರೆ. ಕೇವಲ ಒಂಬತ್ತು ದಿನದೊಳಗೆ ಎಲ್ಲಾ ಪ್ರಕ್ರಿಯೆಗಳನ್ನು ಪೂರೈಸಿರುವುದು ಲಭ್ಯವಿರುವ ದಾಖಲೆಗಳಿಂದ ತಿಳಿದು ಬಂದಿದೆ.

 

ನಾಡಕಚೇರಿ, ತಹಶೀಲ್ದಾರ್‌ ಸೇರಿದಂತೆ ಕಂದಾಯ ಇಲಾಖೆಯು ಜನಸೇವಾ ಟ್ರಸ್ಟ್‌ಗೆ ಜಮೀನು ಮಂಜೂರು ಮಾಡಲು ತೋರಿಸಿದ್ದ ಅತ್ಯುತ್ಸಾಹವನ್ನು ಮಾತೃ ಫೌಂಡೇಷನ್‌ ದಾಖಲೆ ಸಮೇತ ಸರ್ಕಾರದ ಗಮನಕ್ಕೆ ತಂದಿದ್ದರು. ‘ಕುರುಬರಹಳ್ಳಿಯಲ್ಲಿ ರೈತರು ಮನೆಯಲ್ಲಿಯೇ ಜಾನುವಾರುಗಳನ್ನು ಕಟ್ಟಿಹಾಕಿ ಮೇವು ನೀಡುತ್ತಿದ್ದಾರೆ. ಹೀಗಾಗಿ ಗೋಮಾಳ ಜಮೀನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ಮಾತೃ ಫೌಂಡೇಷನ್‌ಗೆ ಹಿಂಬರಹ ನೀಡಿದ್ದಾರೆ. ಆದರೆ ಈ ನಿಯಮ ಜನಸೇವಾ ಟ್ರಸ್ಟ್‌ಗೆ ಅನ್ವಯವಾಗುವುದಿಲ್ಲವೇ,? ಎಂದು ಫೌಂಡೇಷನ್‌ ಸರ್ಕಾರಕ್ಕೆ ಪತ್ರವನ್ನೂ ಬರೆದಿತ್ತು. ಇದು ಕಂದಾಯ ಸಚಿವ ಆರ್‌ ಅಶೋಕ್‌ ಅವರ ಗಮನದಲ್ಲೂ ಇತ್ತು ಎಂದು ಗೊತ್ತಾಗಿದೆ.

 

ಅಷ್ಟೇ ಅಲ್ಲ, ಮಾತೃ ಫೌಂಡೇಷನ್‌ ಹೆಸರಿನಲ್ಲಿ ಸರ್ವೆಯಾಗಿದ್ದ ಜಾಗವನ್ನು ಸೇರಿಸಿ ಸರ್ವೆ ಸ್ಕೆಚ್‌ ಮಾಡಿ ರಾಜಸ್ವ ನಿರೀಕ್ಷರು ವರದಿ ಸಲ್ಲಿಸಿದ್ದರು. ಜನಸೇವಾ ಟ್ರಸ್ಟ್‌ ಅರ್ಜಿ ಸಲ್ಲಿಸುವ ಮುನ್ನವೇ ಸರ್ವೆ ಸ್ಕೆಚ್‌ ಮಾಡಿದ್ದ ರಾಜಸ್ವ ನಿರೀಕ್ಷಕರು ತಹಶೀಲ್ದಾರ್‌ಗೆ ಖುದ್ದು ವರದಿ ಸಲ್ಲಿಸಿದ್ದಾರೆ. ಈ ಪ್ರಕ್ರಿಯೆಯನ್ನು ನೋಡಿದರೆ ಜನಸೇವಾ ಟ್ರಸ್ಟ್‌ಗೆ ಗೋಮಾಳ ಜಮೀನನ್ನು ಮಂಜೂರು ಮಾಡಲು ಸರ್ಕಾರವು ಎಷ್ಟೊಂದು ತರಾತುರಿ ವಹಿಸಿದೆ ಎಂಬುದು ಗೋಚರವಾಗುತ್ತದೆ ಎಂದೂ ಮಾತೃ ಫೌಂಡೇಷನ್‌ ತನ್ನ ದೂರಿನಲ್ಲಿ ಪ್ರಸ್ತಾಪಿಸಿದೆ.

 

‘ಮಾತೃ ಫೌಂಡೇಷನ್‌ಗೆ ಗೋಮಾಳ ಜಮೀನು ಮಂಜೂರು ಮಾಡದ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಮತ್ತು ಭ್ರಷ್ಟಾಚಾರ ನಿಗ್ರಹ ದಳದಲ್ಲಿ ದೂರು ಮತ್ತು ಉಚ್ಛ ನ್ಯಾಯಾಲಯದಲ್ಲಿ ದಾವೆ ಹೂಡುತ್ತೇವೆ. ಹೀಗಾಗಿ ಜನಸೇವಾ ಟ್ರಸ್ಟ್‌ವೊಂದಕ್ಕೇ 24 ಎಕರೆ ಜಮೀನು ಮಂಜೂರು ಮಾಡಬಾರದು. ಇದೊಂದೇ ಟ್ರಸ್ಟ್‌ಗೆ ಇಷ್ಟೊಂದು ಜಾಗ ನೀಡಬಾರದು,’ ಎಂದು ಮಾತೃ ಫೌಂಡೇಷನ್‌ ರಾಜ್ಯದ ಅಡ್ವೋಕೇಟ್‌ ಜನರಲ್‌ಗೆ ಬರೆದಿದ್ದ ಪತ್ರದಲ್ಲಿ ಉಲ್ಲೇಖಿಸಿತ್ತು.

Hot this week

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

Topics

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

Related Articles

Popular Categories

error: Content is protected !!