Saturday | June 20, 2026 |

ಉಲ್ಲಂಘನೆ; ಗೋಶಾಲೆ ತೆರೆಯುವ ಪ್ರಸ್ತಾವನೆ ತಿರಸ್ಕರಿಸಿದ್ದ ಸರ್ಕಾರ, ಜನಸೇವಾ ಟ್ರಸ್ಟ್‌ಗೆ 35 ಎಕರೆ ಮಂಜೂರು

ಬೆಂಗಳೂರು; ತಾವರೆಕೆರೆ ಹೋಬಳಿಯ ಕುರುಬರಹಳ್ಳಿಯಲ್ಲಿರುವ ಗೋಮಾಳ ಜಮೀನಿನಲ್ಲಿ ಗೋ ಶಾಲೆ ತೆರೆಯಲು ಹಲವು ಸಂಘ ಸಂಸ್ಥೆಗಳು ಸಲ್ಲಿಸಿದ್ದ ಪ್ರಸ್ತಾವನೆಗಳನ್ನು ತಿರಸ್ಕರಿಸಿದ್ದ ಸ್ಥಳೀಯ ತಹಶೀಲ್ದಾರ್‌, ರಾಜಸ್ವ ನಿರೀಕ್ಷಕರು ಸಂಘ ಪರಿವಾರ ಹಿನ್ನೆಲೆಯ ಜನಸೇವಾ ಟ್ರಸ್ಟ್‌ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ್ದರು ಎಂಬುದು ಇದೀಗ ಬಹಿರಂಗವಾಗಿದೆ.

 

ಕುರುಬರಹಳ್ಳಿಯಲ್ಲಿ ರೈತರು ಜಾನುವಾರುಗಳನ್ನು ಮನೆಯಲ್ಲಿಯೇ ಕಟ್ಟಿ ಹಾಕಿ ಮೇವು ನೀಡುತ್ತಿದ್ದಾರೆ. ಹೀಗಾಗಿ ಮೇವಿಗಾಗಿ ಜಾಗದ ಅವಶ್ಯಕತೆ ಇರುವ ಕಾರಣ ಗೋಮಾಳ ಜಮೀನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ವರದಿ ನೀಡಿ ಸಂಘ ಸಂಸ್ಥೆಗಳ ಪ್ರಸ್ತಾವನೆಗಳನ್ನು ತಿರಸ್ಕರಿಸಿದ್ದ ಅಧಿಕಾರಿಗಳೇ ಇದೀಗ ಜನಸೇವಾ ಟ್ರಸ್ಟ್‌ಗೆ ಮಾತ್ರ ಗೋಮಾಳ ಜಮೀನನ್ನು ಹಂಚಿಕೆ ಮಾಡಲು ಪರೋಕ್ಷವಾಗಿ ಸಹಕರಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಸಂಬಂಧ ಕೆಲ ದಾಖಲೆಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ಗೋಮಾಳ ಜಮೀನು ಖಾಯಂ ಮಂಜೂರಾತಿಗಾಗಿ ಜನಸೇವಾ ಟ್ರಸ್ಟ್‌ ಪ್ರಸ್ತಾವನೆ ಸಲ್ಲಿಸಿದ ಕೆಲವೇ ದಿನಗಳಲ್ಲಿ ಪ್ರಕ್ರಿಯೆಗಳನ್ನು ಪಾಲಿಸದೆಯೇ ತಾಲೂಕು ಮೋಜಣಿದಾರರು ಪೂರಕವಾದ ವರದಿ ಸಲ್ಲಿಸಿದ್ದರು. ಅಷ್ಟೇ ಕ್ಷಿಪ್ರಗತಿಯಲ್ಲಿ ಬೆಂಗಳೂರು ದಕ್ಷಿಣ ತಾಲೂಕಿನ ತಹಶೀಲ್ದಾರ್‌ ಕೂಡ ಸ್ಕೆಚ್‌ ವರದಿಯನ್ನು 2021ರ ಜುಲೈ 9ರಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದಾರೆ. ಜನಸೇವಾ ಟ್ರಸ್ಟ್‌ಗೆ ಗೋಮಾಳ ಜಮೀನು ಮಂಜೂರು ಮಾಡುವ ಉದ್ದೇಶದಿಂದಲೇ 2021ರ ಜುಲೈ 15ರಂದು ಚೆಕ್‌ ಲಿಸ್ಟ್‌ಗೆ ಸಹಿ ಮಾಡಿದ್ದಾರೆ. ಕೇವಲ ಒಂಬತ್ತು ದಿನದೊಳಗೆ ಎಲ್ಲಾ ಪ್ರಕ್ರಿಯೆಗಳನ್ನು ಪೂರೈಸಿರುವುದು ಲಭ್ಯವಿರುವ ದಾಖಲೆಗಳಿಂದ ತಿಳಿದು ಬಂದಿದೆ.

 

ನಾಡಕಚೇರಿ, ತಹಶೀಲ್ದಾರ್‌ ಸೇರಿದಂತೆ ಕಂದಾಯ ಇಲಾಖೆಯು ಜನಸೇವಾ ಟ್ರಸ್ಟ್‌ಗೆ ಜಮೀನು ಮಂಜೂರು ಮಾಡಲು ತೋರಿಸಿದ್ದ ಅತ್ಯುತ್ಸಾಹವನ್ನು ಮಾತೃ ಫೌಂಡೇಷನ್‌ ದಾಖಲೆ ಸಮೇತ ಸರ್ಕಾರದ ಗಮನಕ್ಕೆ ತಂದಿದ್ದರು. ‘ಕುರುಬರಹಳ್ಳಿಯಲ್ಲಿ ರೈತರು ಮನೆಯಲ್ಲಿಯೇ ಜಾನುವಾರುಗಳನ್ನು ಕಟ್ಟಿಹಾಕಿ ಮೇವು ನೀಡುತ್ತಿದ್ದಾರೆ. ಹೀಗಾಗಿ ಗೋಮಾಳ ಜಮೀನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ಮಾತೃ ಫೌಂಡೇಷನ್‌ಗೆ ಹಿಂಬರಹ ನೀಡಿದ್ದಾರೆ. ಆದರೆ ಈ ನಿಯಮ ಜನಸೇವಾ ಟ್ರಸ್ಟ್‌ಗೆ ಅನ್ವಯವಾಗುವುದಿಲ್ಲವೇ,? ಎಂದು ಫೌಂಡೇಷನ್‌ ಸರ್ಕಾರಕ್ಕೆ ಪತ್ರವನ್ನೂ ಬರೆದಿತ್ತು. ಇದು ಕಂದಾಯ ಸಚಿವ ಆರ್‌ ಅಶೋಕ್‌ ಅವರ ಗಮನದಲ್ಲೂ ಇತ್ತು ಎಂದು ಗೊತ್ತಾಗಿದೆ.

 

ಅಷ್ಟೇ ಅಲ್ಲ, ಮಾತೃ ಫೌಂಡೇಷನ್‌ ಹೆಸರಿನಲ್ಲಿ ಸರ್ವೆಯಾಗಿದ್ದ ಜಾಗವನ್ನು ಸೇರಿಸಿ ಸರ್ವೆ ಸ್ಕೆಚ್‌ ಮಾಡಿ ರಾಜಸ್ವ ನಿರೀಕ್ಷರು ವರದಿ ಸಲ್ಲಿಸಿದ್ದರು. ಜನಸೇವಾ ಟ್ರಸ್ಟ್‌ ಅರ್ಜಿ ಸಲ್ಲಿಸುವ ಮುನ್ನವೇ ಸರ್ವೆ ಸ್ಕೆಚ್‌ ಮಾಡಿದ್ದ ರಾಜಸ್ವ ನಿರೀಕ್ಷಕರು ತಹಶೀಲ್ದಾರ್‌ಗೆ ಖುದ್ದು ವರದಿ ಸಲ್ಲಿಸಿದ್ದಾರೆ. ಈ ಪ್ರಕ್ರಿಯೆಯನ್ನು ನೋಡಿದರೆ ಜನಸೇವಾ ಟ್ರಸ್ಟ್‌ಗೆ ಗೋಮಾಳ ಜಮೀನನ್ನು ಮಂಜೂರು ಮಾಡಲು ಸರ್ಕಾರವು ಎಷ್ಟೊಂದು ತರಾತುರಿ ವಹಿಸಿದೆ ಎಂಬುದು ಗೋಚರವಾಗುತ್ತದೆ ಎಂದೂ ಮಾತೃ ಫೌಂಡೇಷನ್‌ ತನ್ನ ದೂರಿನಲ್ಲಿ ಪ್ರಸ್ತಾಪಿಸಿದೆ.

 

‘ಮಾತೃ ಫೌಂಡೇಷನ್‌ಗೆ ಗೋಮಾಳ ಜಮೀನು ಮಂಜೂರು ಮಾಡದ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಮತ್ತು ಭ್ರಷ್ಟಾಚಾರ ನಿಗ್ರಹ ದಳದಲ್ಲಿ ದೂರು ಮತ್ತು ಉಚ್ಛ ನ್ಯಾಯಾಲಯದಲ್ಲಿ ದಾವೆ ಹೂಡುತ್ತೇವೆ. ಹೀಗಾಗಿ ಜನಸೇವಾ ಟ್ರಸ್ಟ್‌ವೊಂದಕ್ಕೇ 24 ಎಕರೆ ಜಮೀನು ಮಂಜೂರು ಮಾಡಬಾರದು. ಇದೊಂದೇ ಟ್ರಸ್ಟ್‌ಗೆ ಇಷ್ಟೊಂದು ಜಾಗ ನೀಡಬಾರದು,’ ಎಂದು ಮಾತೃ ಫೌಂಡೇಷನ್‌ ರಾಜ್ಯದ ಅಡ್ವೋಕೇಟ್‌ ಜನರಲ್‌ಗೆ ಬರೆದಿದ್ದ ಪತ್ರದಲ್ಲಿ ಉಲ್ಲೇಖಿಸಿತ್ತು.

Hot this week

ಕೆಎಸ್‌ಒಯು ಬ್ಯಾಂಕ್‌ ಖಾತೆ ಸ್ಥಗಿತ; ಬ್ಯಾಂಕ್‌ ಕಾರ್ಯಾಚರಣೆ ನಿರ್ಬಂಧಿಸಲು ರಾಜ್ಯ ಸರ್ಕಾರಕ್ಕೆ ಯಾವ ಕಾನೂನುಬದ್ಧ ಅಧಿಕಾರವಿದೆ?

ಬೆಂಗಳೂರು; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬ್ಯಾಂಕ್‌ ಖಾತೆಗಳ ಸ್ಥಗಿತಗೊಳಿಸಿರುವುದಕ್ಕೆ ಸಂಬಂಧಿಸಿದಂತೆ...

ಡಿಸಿಎಂ ಕಚೇರಿಯಲ್ಲಿಯೇ ಧೂಳಿಡಿದಿದ್ದ ಕಡತಗಳು; ಸಚಿವ ಸಂಪುಟ ವಿಸರ್ಜನೆ ಬೆನ್ನಲ್ಲೇ 80 ಕಡತಗಳು ಇಲಾಖೆಗೆ ವಾಪಸ್‌

ಬೆಂಗಳೂರು; ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಕೋರಿದ್ದ ಮಾಹಿತಿಯ ಕಡತ,...

ಈಶಾ ಫೌಂಡೇಷನ್, ಯೋಗ ಕೇಂದ್ರಕ್ಕೆ ಜಮೀನು ಭೂ ಪರಿವರ್ತನೆಯಲ್ಲಿ ನಿಯಮ ಉಲ್ಲಂಘನೆ ಆರೋಪ; ತಹಶೀಲ್ದಾರ್‍‌ಗಳಿಂದಲೇ ಅಕ್ರಮ ಲಾಭ, ಸರ್ಕಾರಕ್ಕೆ ವಂಚನೆಯಾಗಿದೆಯೇ?

ಬೆಂಗಳೂರು; ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದಲ್ಲಿನ ವಿವಿಧ ಸರ್ವೇ ನಂಬರ್‍‌ಗಳಲ್ಲಿ ಒಟ್ಟಾರೆ...
Please Scan to make Your Contribution

Topics

ಕೆಎಸ್‌ಒಯು ಬ್ಯಾಂಕ್‌ ಖಾತೆ ಸ್ಥಗಿತ; ಬ್ಯಾಂಕ್‌ ಕಾರ್ಯಾಚರಣೆ ನಿರ್ಬಂಧಿಸಲು ರಾಜ್ಯ ಸರ್ಕಾರಕ್ಕೆ ಯಾವ ಕಾನೂನುಬದ್ಧ ಅಧಿಕಾರವಿದೆ?

ಬೆಂಗಳೂರು; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬ್ಯಾಂಕ್‌ ಖಾತೆಗಳ ಸ್ಥಗಿತಗೊಳಿಸಿರುವುದಕ್ಕೆ ಸಂಬಂಧಿಸಿದಂತೆ...

ಈಶಾ ಫೌಂಡೇಷನ್, ಯೋಗ ಕೇಂದ್ರಕ್ಕೆ ಜಮೀನು ಭೂ ಪರಿವರ್ತನೆಯಲ್ಲಿ ನಿಯಮ ಉಲ್ಲಂಘನೆ ಆರೋಪ; ತಹಶೀಲ್ದಾರ್‍‌ಗಳಿಂದಲೇ ಅಕ್ರಮ ಲಾಭ, ಸರ್ಕಾರಕ್ಕೆ ವಂಚನೆಯಾಗಿದೆಯೇ?

ಬೆಂಗಳೂರು; ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದಲ್ಲಿನ ವಿವಿಧ ಸರ್ವೇ ನಂಬರ್‍‌ಗಳಲ್ಲಿ ಒಟ್ಟಾರೆ...

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹೊಸ ಹಾಸ್ಟೆಲ್‌ಗಳ ಮಂಜೂರಾತಿಗೆ ನಕಾರ; ವಿದ್ಯಾರ್ಥಿ ನಿಲಯಗಳ ವಿಲೀನಕ್ಕೆ ಮುಂದಾಯಿತೇ ಸರ್ಕಾರ?

ಬೆಂಗಳೂರು; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಹೊಸದಾಗಿ ಮೆಟ್ರಿಕ್‌ ಪೂರ್ವ...

Related Articles

Popular Categories

error: Content is protected !!