Monday | August 24, 2026 |

ಉಲ್ಲಂಘನೆ; ಗೋಶಾಲೆ ತೆರೆಯುವ ಪ್ರಸ್ತಾವನೆ ತಿರಸ್ಕರಿಸಿದ್ದ ಸರ್ಕಾರ, ಜನಸೇವಾ ಟ್ರಸ್ಟ್‌ಗೆ 35 ಎಕರೆ ಮಂಜೂರು

ಬೆಂಗಳೂರು; ತಾವರೆಕೆರೆ ಹೋಬಳಿಯ ಕುರುಬರಹಳ್ಳಿಯಲ್ಲಿರುವ ಗೋಮಾಳ ಜಮೀನಿನಲ್ಲಿ ಗೋ ಶಾಲೆ ತೆರೆಯಲು ಹಲವು ಸಂಘ ಸಂಸ್ಥೆಗಳು ಸಲ್ಲಿಸಿದ್ದ ಪ್ರಸ್ತಾವನೆಗಳನ್ನು ತಿರಸ್ಕರಿಸಿದ್ದ ಸ್ಥಳೀಯ ತಹಶೀಲ್ದಾರ್‌, ರಾಜಸ್ವ ನಿರೀಕ್ಷಕರು ಸಂಘ ಪರಿವಾರ ಹಿನ್ನೆಲೆಯ ಜನಸೇವಾ ಟ್ರಸ್ಟ್‌ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ್ದರು ಎಂಬುದು ಇದೀಗ ಬಹಿರಂಗವಾಗಿದೆ.

 

ಕುರುಬರಹಳ್ಳಿಯಲ್ಲಿ ರೈತರು ಜಾನುವಾರುಗಳನ್ನು ಮನೆಯಲ್ಲಿಯೇ ಕಟ್ಟಿ ಹಾಕಿ ಮೇವು ನೀಡುತ್ತಿದ್ದಾರೆ. ಹೀಗಾಗಿ ಮೇವಿಗಾಗಿ ಜಾಗದ ಅವಶ್ಯಕತೆ ಇರುವ ಕಾರಣ ಗೋಮಾಳ ಜಮೀನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ವರದಿ ನೀಡಿ ಸಂಘ ಸಂಸ್ಥೆಗಳ ಪ್ರಸ್ತಾವನೆಗಳನ್ನು ತಿರಸ್ಕರಿಸಿದ್ದ ಅಧಿಕಾರಿಗಳೇ ಇದೀಗ ಜನಸೇವಾ ಟ್ರಸ್ಟ್‌ಗೆ ಮಾತ್ರ ಗೋಮಾಳ ಜಮೀನನ್ನು ಹಂಚಿಕೆ ಮಾಡಲು ಪರೋಕ್ಷವಾಗಿ ಸಹಕರಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಸಂಬಂಧ ಕೆಲ ದಾಖಲೆಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ಗೋಮಾಳ ಜಮೀನು ಖಾಯಂ ಮಂಜೂರಾತಿಗಾಗಿ ಜನಸೇವಾ ಟ್ರಸ್ಟ್‌ ಪ್ರಸ್ತಾವನೆ ಸಲ್ಲಿಸಿದ ಕೆಲವೇ ದಿನಗಳಲ್ಲಿ ಪ್ರಕ್ರಿಯೆಗಳನ್ನು ಪಾಲಿಸದೆಯೇ ತಾಲೂಕು ಮೋಜಣಿದಾರರು ಪೂರಕವಾದ ವರದಿ ಸಲ್ಲಿಸಿದ್ದರು. ಅಷ್ಟೇ ಕ್ಷಿಪ್ರಗತಿಯಲ್ಲಿ ಬೆಂಗಳೂರು ದಕ್ಷಿಣ ತಾಲೂಕಿನ ತಹಶೀಲ್ದಾರ್‌ ಕೂಡ ಸ್ಕೆಚ್‌ ವರದಿಯನ್ನು 2021ರ ಜುಲೈ 9ರಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದಾರೆ. ಜನಸೇವಾ ಟ್ರಸ್ಟ್‌ಗೆ ಗೋಮಾಳ ಜಮೀನು ಮಂಜೂರು ಮಾಡುವ ಉದ್ದೇಶದಿಂದಲೇ 2021ರ ಜುಲೈ 15ರಂದು ಚೆಕ್‌ ಲಿಸ್ಟ್‌ಗೆ ಸಹಿ ಮಾಡಿದ್ದಾರೆ. ಕೇವಲ ಒಂಬತ್ತು ದಿನದೊಳಗೆ ಎಲ್ಲಾ ಪ್ರಕ್ರಿಯೆಗಳನ್ನು ಪೂರೈಸಿರುವುದು ಲಭ್ಯವಿರುವ ದಾಖಲೆಗಳಿಂದ ತಿಳಿದು ಬಂದಿದೆ.

 

ನಾಡಕಚೇರಿ, ತಹಶೀಲ್ದಾರ್‌ ಸೇರಿದಂತೆ ಕಂದಾಯ ಇಲಾಖೆಯು ಜನಸೇವಾ ಟ್ರಸ್ಟ್‌ಗೆ ಜಮೀನು ಮಂಜೂರು ಮಾಡಲು ತೋರಿಸಿದ್ದ ಅತ್ಯುತ್ಸಾಹವನ್ನು ಮಾತೃ ಫೌಂಡೇಷನ್‌ ದಾಖಲೆ ಸಮೇತ ಸರ್ಕಾರದ ಗಮನಕ್ಕೆ ತಂದಿದ್ದರು. ‘ಕುರುಬರಹಳ್ಳಿಯಲ್ಲಿ ರೈತರು ಮನೆಯಲ್ಲಿಯೇ ಜಾನುವಾರುಗಳನ್ನು ಕಟ್ಟಿಹಾಕಿ ಮೇವು ನೀಡುತ್ತಿದ್ದಾರೆ. ಹೀಗಾಗಿ ಗೋಮಾಳ ಜಮೀನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ಮಾತೃ ಫೌಂಡೇಷನ್‌ಗೆ ಹಿಂಬರಹ ನೀಡಿದ್ದಾರೆ. ಆದರೆ ಈ ನಿಯಮ ಜನಸೇವಾ ಟ್ರಸ್ಟ್‌ಗೆ ಅನ್ವಯವಾಗುವುದಿಲ್ಲವೇ,? ಎಂದು ಫೌಂಡೇಷನ್‌ ಸರ್ಕಾರಕ್ಕೆ ಪತ್ರವನ್ನೂ ಬರೆದಿತ್ತು. ಇದು ಕಂದಾಯ ಸಚಿವ ಆರ್‌ ಅಶೋಕ್‌ ಅವರ ಗಮನದಲ್ಲೂ ಇತ್ತು ಎಂದು ಗೊತ್ತಾಗಿದೆ.

 

ಅಷ್ಟೇ ಅಲ್ಲ, ಮಾತೃ ಫೌಂಡೇಷನ್‌ ಹೆಸರಿನಲ್ಲಿ ಸರ್ವೆಯಾಗಿದ್ದ ಜಾಗವನ್ನು ಸೇರಿಸಿ ಸರ್ವೆ ಸ್ಕೆಚ್‌ ಮಾಡಿ ರಾಜಸ್ವ ನಿರೀಕ್ಷರು ವರದಿ ಸಲ್ಲಿಸಿದ್ದರು. ಜನಸೇವಾ ಟ್ರಸ್ಟ್‌ ಅರ್ಜಿ ಸಲ್ಲಿಸುವ ಮುನ್ನವೇ ಸರ್ವೆ ಸ್ಕೆಚ್‌ ಮಾಡಿದ್ದ ರಾಜಸ್ವ ನಿರೀಕ್ಷಕರು ತಹಶೀಲ್ದಾರ್‌ಗೆ ಖುದ್ದು ವರದಿ ಸಲ್ಲಿಸಿದ್ದಾರೆ. ಈ ಪ್ರಕ್ರಿಯೆಯನ್ನು ನೋಡಿದರೆ ಜನಸೇವಾ ಟ್ರಸ್ಟ್‌ಗೆ ಗೋಮಾಳ ಜಮೀನನ್ನು ಮಂಜೂರು ಮಾಡಲು ಸರ್ಕಾರವು ಎಷ್ಟೊಂದು ತರಾತುರಿ ವಹಿಸಿದೆ ಎಂಬುದು ಗೋಚರವಾಗುತ್ತದೆ ಎಂದೂ ಮಾತೃ ಫೌಂಡೇಷನ್‌ ತನ್ನ ದೂರಿನಲ್ಲಿ ಪ್ರಸ್ತಾಪಿಸಿದೆ.

 

‘ಮಾತೃ ಫೌಂಡೇಷನ್‌ಗೆ ಗೋಮಾಳ ಜಮೀನು ಮಂಜೂರು ಮಾಡದ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಮತ್ತು ಭ್ರಷ್ಟಾಚಾರ ನಿಗ್ರಹ ದಳದಲ್ಲಿ ದೂರು ಮತ್ತು ಉಚ್ಛ ನ್ಯಾಯಾಲಯದಲ್ಲಿ ದಾವೆ ಹೂಡುತ್ತೇವೆ. ಹೀಗಾಗಿ ಜನಸೇವಾ ಟ್ರಸ್ಟ್‌ವೊಂದಕ್ಕೇ 24 ಎಕರೆ ಜಮೀನು ಮಂಜೂರು ಮಾಡಬಾರದು. ಇದೊಂದೇ ಟ್ರಸ್ಟ್‌ಗೆ ಇಷ್ಟೊಂದು ಜಾಗ ನೀಡಬಾರದು,’ ಎಂದು ಮಾತೃ ಫೌಂಡೇಷನ್‌ ರಾಜ್ಯದ ಅಡ್ವೋಕೇಟ್‌ ಜನರಲ್‌ಗೆ ಬರೆದಿದ್ದ ಪತ್ರದಲ್ಲಿ ಉಲ್ಲೇಖಿಸಿತ್ತು.

Hot this week

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...
Please Scan to make Your Contribution

Topics

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

Related Articles

Popular Categories

error: Content is protected !!