Thursday | May 14, 2026 |

ಗೋಮಾಳ;24 ಎಕರೆ ಮಂಜೂರಿಗೆ ಕೋರಿ, ಐದೇ ತಿಂಗಳಲ್ಲಿ 11.33 ಎಕರೆ ಹೆಚ್ಚಳಗೊಳಿಸಿದ್ದ ಜನಸೇವಾ ಟ್ರಸ್ಟ್‌

ಬೆಂಗಳೂರು; ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯ ಕುರುಬರಹಳ್ಳಿ ಗ್ರಾಮದ ಸರ್ವೆ ನಂಬರ್‌ 89ರಲ್ಲಿನ ಒಟ್ಟು ಗೋಮಾಳ ಜಮೀನಿನಲ್ಲಿ 24 ಎಕರೆ ಮಂಜೂರಿಗೆ ಅರ್ಜಿ ಸಲ್ಲಿಸಿದ್ದ ಜನಸೇವಾ ಟ್ರಸ್ಟ್‌ನ ನಿರ್ಮಲ್‌ಕುಮಾರ್‌ ಅವರು ಇದೇ ಟ್ರಸ್ಟ್‌ನ ಮತ್ತೊಂದು ಅಂಗ ಸಂಸ್ಥೆಯಾಗಿರುವ ಜನಸೇವಾ ವಿಶ್ವಸ್ಥ ಮಂಡಳಿಯ ಪರವಾಗಿಯೂ 35.33 ಎಕರೆ ಜಮೀನು ಮಂಜೂರಾತಿಗಾಗಿ ಮರು ಮನವಿ ಸಲ್ಲಿಸಿದ್ದರು ಎಂಬ ಸಂಗತಿಯು ಇದೀಗ ಬಹಿರಂಗವಾಗಿದೆ.

 

ಆರಂಭದಲ್ಲಿ ಅಂದರೆ 2021ರ ಜುಲೈ 15ರಂದು 24.00 ಎಕರೆ ಜಮೀನು ಮಂಜೂರಿಗೆ ಅರ್ಜಿ ಸಲ್ಲಿಸಿ ಆ ನಂತರ 11.33 ಎಕರೆ ಹೆಚ್ಚುವರಿಯಾಗಿ ಸೇರಿಸಿ 2021ರ ಡಿಸೆಂಬರ್‌ 3ರಂದು ಸಲ್ಲಿಸಿದ್ದ ಮನವಿಯನ್ನು ರಾಜ್ಯ ಬಿಜೆಪಿ ಸರ್ಕಾರವು ಪುರಸ್ಕರಿಸಿರುವುದು ಲಭ್ಯವಿರುವ ದಾಖಲೆಗಳಿಂದ ತಿಳಿದು ಬಂದಿದೆ. ಈ ಸಂಬಂಧ ಕೆಲ ದಾಖಲೆಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

‘ಈ ಪೂರ್ವದಲ್ಲಿ ಪ್ರಶ್ನಿತ ಸಂಸ್ಥೆಗೆ 24.00 ಎಕರೆಯನ್ನು ಮಂಜೂರು ಮಾಡಲು ಪ್ರಸ್ತಾಪಿಸಲಾಗಿತ್ತು. ಮುಂದುವರೆದು ಸದರಿ ಜನಸೇವಾ ವಿಶ್ವಸ್ಥ ಮಂಡಳಿಯವರು ಮರು ಮನವಿ ಸಲ್ಲಿಸಿ 35.33 ಎಕರೆ ಜಮೀನನ್ನು ಮಂಜೂರು ಮಾಡಲು ಕೋರಿರುತ್ತಾರೆ,’ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಯವರು 2022ರ ಜನವರಿ 29ರಂದು ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದರು.

 

ತಾವರೆಕೆರೆ ಹೋಬಳಿಯ ಕುರುಬರಹಳ್ಳಿ ಗ್ರಾಮದ ಶೈಕ್ಷಣಿಕ ಉದ್ದೇಶ ಮತ್ತು ಭಾರತೀಯ ಪ್ರಾಚೀನ ಆಯುರ್ವೇದ, ಯೋಗ, ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವನ್ನು ಆರಂಭಿಸಲು ಸರ್ವೆ ನಂಬರ್‌ 89ರಲ್ಲಿ 35.33 ಎಕರೆ ಜಮೀನು ಮಂಜೂರು ಮಾಡಬೇಕು ಎಂದು ಟ್ರಸ್ಟ್‌ನ ನಿರ್ಮಲ್‌ಕುಮಾರ್‌ ಅವರು ಕೋರಿಕೆ ಸಲ್ಲಿಸಿದ್ದರು ಎಂಬುದು ದಾಖಲೆಗಳಿಂದ ಗೊತ್ತಾಗಿದೆ. ಎರಡನೇ ಮನವಿಯನ್ನು ಪುರಸ್ಕರಿಸಲು ಸಚಿವ ಆರ್‌ ಅಶೋಕ್‌ ಅವರು ಅಧಿಕಾರಿಗಳಿಗೆ ಸೂಚಿಸಿದ್ದರು ಎಂದು ತಿಳಿದು ಬಂದಿದೆ.

 

ಇದೇ ಜಮೀನಿನ ಪೈಕಿ (ಕಚೇರಿ ಆದೇಶ ಸಂಖ್ಯೆ;ಎಲ್‌ಎನ್‌ಡಿ(ಎಸ್‌)ಸಿಆರ್‌/576/08-09 ದಿನಾಂಕ 14-11-2019) 9.00 ಎಕರೆ ಮತ್ತು (ದಿನಾಂಕ 16-12-2019) 6.00 ಎಕರೆ ಸೇರಿ ಒಟ್ಟು 15.00 ಎಕರೆ ಜಮೀನನ್ನು ಬೆಂಗಳೂರು ನಗರದ ವಿವಿಧ ಪ್ರದೇಶದಲ್ಲಿ ವಾಸಯೋಗ್ಯವಲ್ಲದ ಪ್ರದೇಶಗಳಲ್ಲಿ (ಕೆರೆ ಅಂಗಳ) ಅರಣ್ಯ, ರೈಲ್ವೇ ಹಾಗೂ ಇನ್ನಿತರೆ ನ್ಯಾಯಾಲಯ ಪ್ರಕರಣಗಳು, ಕೊಳಚೆ ಪ್ರದೇಶಗಳ ಶಾಶ್ವತ ಪುನರ್‌ ವಸತಿಗಾಗಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಕಾಯ್ದಿರಿಸಿ ಆದೇಶ ಹೊರಡಿಸಿದೆ. ಆದರೆ ಈ ಜಮೀನಿನಲ್ಲಿ ಮಂಜೂರು ಮಾಡಿಸಿಕೊಂಡ ಸಂಸ್ಥೆಗಳು ಮಂಜೂರು ಮಾಡಿಸಿಕೊಂಡ ಉದ್ದೇಶಕ್ಕಾಗಿ ಉಪಯೋಗಿಸಿಕೊಂಡಿಲ್ಲ. ಹೀಗಾಗಿ ಹಾಲಿ ಜಮೀನು ಖಾಲಿ ಇದೆಯೇ ಹೊರತು ಅಭಿವೃದ್ದಿಗೊಂಡಿಲ್ಲ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಬರೆದಿದ್ದ ಪತ್ರದಲ್ಲಿ ವಿವರಿಸಿರುವುದು ತಿಳಿದು ಬಂದಿದೆ.

 

ಎಪ್ಪತ್ತು ಕೋಟಿ ರು. ಬೆಲೆಬಾಳುವ 35.33 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಸಂಘ ಪರಿವಾರದ ಅಂಗ ಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ಗೆ ಮಂಜೂರು ಮಾಡುವ ಪ್ರಸ್ತಾವನೆಯೇ ತಿರಸ್ಕೃತಗೊಂಡಿತ್ತು. ಗ್ರಾಮಸ್ಥರ ವಿರೋಧದ ನಡುವೆಯೂ ಟ್ರಸ್ಟ್‌ಗೆ ಜಮೀನು ಮಂಜೂರು ಮಾಡಿರುವುದನ್ನು ಸ್ಮರಿಸಬಹುದು.

Hot this week

ದ ಪಾಲಿಸಿ ಫ್ರಂಟ್ ಪಾಲುದಾರನ ಬಂಡವಾಳ ಬಯಲು ಮಾಡಿದ ಕೆಎಸ್‌ಎಂಸಿಎ; ಹಕ್ಕುಬಾಧ್ಯತಾ ಸಮಿತಿ ನಡವಳಿ ಬಹಿರಂಗ

ಬೆಂಗಳೂರು; ರಾಜ್ಯ ಕಾಂಗ್ರೆಸ್‌ ಸರ್ಕಾರದ ಸಾಧನೆ ಮತ್ತು ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣದಲ್ಲಿ ...

ಕೆ ಕೆ ಗೆಸ್ಟ್‌ ಹೌಸ್‌ನಲ್ಲಿರುವ ಡಿಸಿಎಂ ವಸತಿ ಗೃಹಕ್ಕೆ ಪೀಠೋಪಕರಣ, ನವೀಕರಣ, ದುರಸ್ತಿ; 33 ಲಕ್ಷ ವೆಚ್ಚಕ್ಕೆ 4 ಜಿ ವಿನಾಯಿತಿ, ದುಂದುವೆಚ್ಚ?

ಬೆಂಗಳೂರು;  ಕಾಂಗ್ರೆಸ್‌ ಸರ್ಕಾರವು ಸಹ ಆರ್ಥಿಕ ಸಂಕಷ್ಟದಲ್ಲಿ  ಮುಳುಗೇಳುತ್ತಿದ್ದರೂ ಮುಖ್ಯಮಂತ್ರಿ, ಉಪ...

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...
Please Scan to make Your Contribution

Topics

ದ ಪಾಲಿಸಿ ಫ್ರಂಟ್ ಪಾಲುದಾರನ ಬಂಡವಾಳ ಬಯಲು ಮಾಡಿದ ಕೆಎಸ್‌ಎಂಸಿಎ; ಹಕ್ಕುಬಾಧ್ಯತಾ ಸಮಿತಿ ನಡವಳಿ ಬಹಿರಂಗ

ಬೆಂಗಳೂರು; ರಾಜ್ಯ ಕಾಂಗ್ರೆಸ್‌ ಸರ್ಕಾರದ ಸಾಧನೆ ಮತ್ತು ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣದಲ್ಲಿ ...

ಕೆ ಕೆ ಗೆಸ್ಟ್‌ ಹೌಸ್‌ನಲ್ಲಿರುವ ಡಿಸಿಎಂ ವಸತಿ ಗೃಹಕ್ಕೆ ಪೀಠೋಪಕರಣ, ನವೀಕರಣ, ದುರಸ್ತಿ; 33 ಲಕ್ಷ ವೆಚ್ಚಕ್ಕೆ 4 ಜಿ ವಿನಾಯಿತಿ, ದುಂದುವೆಚ್ಚ?

ಬೆಂಗಳೂರು;  ಕಾಂಗ್ರೆಸ್‌ ಸರ್ಕಾರವು ಸಹ ಆರ್ಥಿಕ ಸಂಕಷ್ಟದಲ್ಲಿ  ಮುಳುಗೇಳುತ್ತಿದ್ದರೂ ಮುಖ್ಯಮಂತ್ರಿ, ಉಪ...

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

Related Articles

Popular Categories

error: Content is protected !!