Wednesday | August 19, 2026 |

ಡಿಸಿಸಿ ಬ್ಯಾಂಕ್‌ಗಳಲ್ಲಿ ಅಕ್ರಮ; ಆಡಳಿತ ಮಂಡಳಿಯಿಂದ 9 ಕೋಟಿ ಅವ್ಯವಹಾರ ಆರೋಪ

ಬೆಂಗಳೂರು; ಕಿರಿಯ ಸಹಾಯಕರ ಹುದ್ದೆಗಳು ಸೇರಿದಂತೆ ಇನ್ನಿತರೆ ಹುದ್ದೆಗಳಿಗಾಗಿ ನಡೆಯುತ್ತಿರುವ ನೇಮಕಾತಿ ಪ್ರಕ್ರಿಯೆಯಲ್ಲಿಯೇ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳ (ಡಿಸಿಸಿ) ಆಡಳಿತ ಮಂಡಳಿಗಳು ಅಭ್ಯರ್ಥಿಗಳಿಂದ ಲಕ್ಷಾಂತರ ರುಪಾಯಿ ವಸೂಲಿ ಮಾಡಿವೆ. ಸಹಕಾರ ಪರೀಕ್ಷೆ ಪ್ರಾಧಿಕಾರ ರಚನೆಯಾಗಿದ್ದರೂ ಅದನ್ನು ಬದಿಗಿರಿಸಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳ ಆಡಳಿತ ಮಂಡಳಿಗಳೇ ನೇರವಾಗಿ ಪರೀಕ್ಷೆ ನಡೆಸುವ ಮೂಲಕ ಕೋಟ್ಯಂತರ ರುಪಾಯಿ ಅವ್ಯವಹಾರಕ್ಕೆ ದಾರಿಮಾಡಿಕೊಡುತ್ತಿರುವುದು ಇದೀಗ ಬಹಿರಂಗವಾಗಿದೆ.

 

ಕೆಎಎಸ್‌, ಪಿಎಸ್‌ಐ, ಸಹಾಯಕ ಪ್ರಾಧ್ಯಾಪಕ, ಎಫ್‌ಡಿಎ, ಎಸ್‌ಡಿಎ, ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿಯೇ ಸಾಲು ಸಾಲು ಅಕ್ರಮಗಳು ಒಂದೊಂದಾಗಿ ಬೆಳಕಿಗೆ ಬರುತ್ತಿರುವ ಬೆನ್ನಲ್ಲೇ ಇದೀಗ ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿಯೂ ಅಂದಾಜು 9.00 ಕೋಟಿ ರು. ಅವ್ಯವಹಾರ ನಡೆದಿದೆ ಎಂಬ ಆಪಾದನೆ ಕೇಳಿ ಬಂದಿದೆ. ಈ ಸಂಬಂಧ ನ್ಯಾಯವಾದಿ ಎ ಕೆ ಮಲ್ಲೇಶ್‌ನಾಯ್ಕ್‌ ಎಂಬುವರು ಸಹಕಾರ ಸಚಿವ ಎಸ್‌ ಟಿ ಸೋಮಶೇಖರ್‌ ಅವರಿಗೆ 2022ರ ಜುಲೈ 14ರಂದು ದೂರು ಸಲ್ಲಿಸಿದ್ದಾರೆ. ಈ ದೂರಿನ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

‘ನೇಮಕಾತಿ ಪರೀಕ್ಷೆ ನಡೆಯುವ ಮುನ್ನವೇ ಆಡಳಿತ ಮಂಡಳಿ ಸದಸ್ಯರು, ಸಚಿವರು, ಸ್ಥಳೀಯ ಶಾಸಕರು ಸೇರಿದಂತೆ ಪ್ರಭಾವಿಗಳು ತಮಗೆ ಬೇಕಾದವರನ್ನು ನೇಮಕಾತಿ ಮಾಡಿಕೊಳ್ಳಲು ಒಳಗೊಳಗೇ ವ್ಯವಹಾರ ಕುದುರಿಸಿದ್ದಾರೆ. ನೇಮಕಾತಿ ಪರೀಕ್ಷೆ ಜವಾಬ್ದಾರಿ ವಹಿಸಿಕೊಂಡ ಸಹಕಾರೇತರ ಸಂಸ್ಥೆಗಳ ಜೊತೆ ಮೊದಲೇ ಒಪ್ಪಂದ ಮಾಡಿಕೊಂಡು ವ್ಯವಹಾರ ಕುದುರಿಸಲಾಗುತ್ತಿದೆ. ಅರ್ಜಿ ಹಾಕುವ ಅಭ್ಯರ್ಥಿಗಳು ಕೇವಲ ನೆಪಮಾತ್ರಕ್ಕೆ ಪರೀಕ್ಷೆ ಎದುರಿಸುತ್ತಾರೆ. ಹೆಂಡತಿ, ಮಕ್ಕಳ ಹೆಸರಿನಲ್ಲಿ ಕರೆ ಮಾಡಿ ಅಭ್ಯರ್ಥಿಗಳಿಗೆ ಆಮಿಷವೊಡ್ಡುತ್ತಿದ್ದಾರೆ. ಪರೀಕ್ಷೆಯ ಒಎಂಆರ್‌ ಶೀಟ್‌ನಲ್ಲಿ ಮೂರನೇ ವ್ಯಕ್ತಿಯಿಂದ ಉತ್ತರ ಭರ್ತಿ ಮಾಡಲು ಸಂಚು ಹೂಡಿದ್ದಾರೆ,’ ಎಂದು ಮಲ್ಲೇಶ್‌ ನಾಯ್ಕ್‌ ಅವರು ದೂರಿನಲ್ಲಿ ವಿವರಿಸಿದ್ದಾರೆ.

 

9 ಕೋಟಿ ಅವ್ಯವಹಾರ?

 

ಕಿರಿಯ ಸಹಾಯಕರು/ಕಿರಿಯ ಕ್ಷೇತ್ರಾಧಿಕಾರಿಗಳ ಹುದ್ದೆಗೆ (29 ಹುದ್ದೆ) ತಲಾ 25 ಲಕ್ಷ ರು., ಕಂಪ್ಯೂಟರ್‌ ಎಂಜಿನಿಯರ್‌ (01) 30 ಲಕ್ಷ ರು., ಕಂಪ್ಯೂಟರ್‌ ಆಪರೇಟರ್‌ (01) 25 ಲಕ್ಷ, ವಾಹನ ಚಾಲಕರು (01) 15 ಲಕ್ಷ, ಕಿರಿಯ ಸೇವಕರು (16) ಹುದ್ದೆಗೆ 10ರಿಂದ 15 ಲಕ್ಷ ರು. ಲಂಚಕ್ಕೆ ಬೇಡಿಕೆ ಇಡಲಾಗುತ್ತಿದೆ ಎಂದು ದರಪಟ್ಟಿಯನ್ನು ನಮೂದಿಸಿರುವುದು ದೂರಿನಿಂದ ಗೊತ್ತಾಗಿದೆ.

 

ಮೀಸಲಾತಿ ಉಲ್ಲಂಘನೆ

 

ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ನೇಮಕಾತಿಗೆ ಹೊರಡಿಸಿರುವ ಅಧಿಸೂಚನೆಯಲ್ಲಿ ಹೈದ್ರಾಬಾದ್‌ ಕರ್ನಾಟಕ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ದೂರಿರುವ ಮಲ್ಲೇಶ್‌ನಾಯ್ಕ್‌ ಅವರು 48 ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ಹೈ-ಕ ಭಾಗದ ಅಭ್ಯರ್ಥಿಗಳಿಗೆ ಶೇ. 8 ರಷ್ಟು ಹುದ್ದೆಗಳಲ್ಲಿ ಮೀಸಲಿಡದೇ ವಂಚನೆ ಮಾಡಲಾಗಿದೆ,’ ಎಂದು ದೂರಿದ್ದಾರೆ.

 

‘ಸಹಕಾರ ಇಲಾಖೆಯ ಅಧೀನ ಸಂಸ್ಥೆಗಳ ನೇಮಕಾತಿಯಲ್ಲಿ ನಡೆಯುವ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಹಕಾರ ಪರೀಕ್ಷಾ ಪ್ರಾಧಿಕಾರ ರಚನೆಗೆ ಮುಂದಾಗಿದೆ. ಆದರೆ ರಾಜ್ಯದ ವಿವಿಧ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳ ನೇಮಕಾತಿಗಳಲ್ಲಿ ಸ್ವಜನಪಕ್ಷಪಾತ, ಲಂಚ, ನೇಮಕಾತಿ ಅವ್ಯವಹಾರ, ಭ್ರಷ್ಟಾಚಾರ ಅವ್ಯಾಹತವಾಗಿ ನಡೆಯುತ್ತಿವೆ. ರಿಸರ್ವ್ ಬ್ಯಾಂಕ್‌ ಆಫ್‌ ಇಂಡಿಯಾ ವ್ಯಾಪ್ತಿಗೆ ಬರುವ ಬ್ಯಾಂಕ್‌ಗಳಲ್ಲಿ ಪರೀಕ್ಷಾ ಪ್ರಾಧಿಕಾರದ ಮೂಲಕವೇ ನೇಮಕಾತಿ ನಡೆಯುತ್ತಿವೆ.

 

ಆರ್‌ಬಿಐ ಮಾದರಿಯಲ್ಲಿಯೇ ಪ್ರಾಧಿಕಾರ ರಚಿಸಿ ಪ್ರಾಮಾಣಿಕ ಅಧಿಕಾರಿಗಳನ್ನು ನೇಮಿಸಬೇಕು. ಪ್ರಶ್ನೆಪತ್ರಿಕೆ ತಯಾರಿಕೆ, ಮೌಲ್ಯಮಾಪನ ಹಾಗೂ ಫಲಿತಾಂಶವನ್ನು ಪ್ರಾಧಿಕಾರಕ್ಕೆ ವಹಿಸಿದರೆ ಅಕ್ರಮಗಳಿಗೆ ಕಡಿವಾಣ ಹಾಕಿದಂತಾಗುತ್ತದೆ,’ ಎಂದು ಮಲ್ಲೇಶ್‌ನಾಯ್ಕ್ ಅವರು ದೂರಿನಲ್ಲಿ ಪ್ರಸ್ತಾಪಿಸಿದ್ದಾರೆ.

Hot this week

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

ಹಿಂದುಳಿದ ಸಮುದಾಯ ಅಭಿವೃದ್ಧಿ ನಿಗಮಗಳಿಗೆ 473.41 ಕೋಟಿ ಅನುದಾನ ಹಂಚಿಕೆ; ನಾಲ್ಕೂವರೆ ತಿಂಗಳಾದರೂ ನಯಾಪೈಸೆಯೂ ಬಿಡುಗಡೆಯಾಗಿಲ್ಲ

ಬೆಂಗಳೂರು; ಆರ್ಥಿಕ ವರ್ಷ ಆರಂಭವಾಗಿ ನಾಲ್ಕೂವರೆ ತಿಂಗಳಾದರೂ ಸಹ ಹಿಂದುಳಿದ ವರ್ಗಗಳ...
Please Scan to make Your Contribution

Topics

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

ಫ್ರೀಡಂ ಹಬ್ಬಕ್ಕೆ 6 ಕೋಟಿ ವೆಚ್ಚ!; ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಕೆಲಸ ಆರಂಭಿಸಿದ ಕಂಪನಿ

ಬೆಂಗಳೂರು; ಹೊಸದಾಗಿ ವಿದ್ಯಾರ್ಥಿ ನಿಲಯಗಳ ಆರಂಭ, ಅನುಮೋದಿತ ಕಾಮಗಾರಿಗಳ ಕಾರ್ಯಭಾರಕ್ಕೆ ನಲುಗಿ...

3,206 ಪಂಚಾಯ್ತಿಗಳಲ್ಲಿ ಶಾಸನಬದ್ಧ ತೆರಿಗೆ ವಸೂಲು; ಸರ್ಕಾರಕ್ಕೆ ಪಾವತಿಯಾಗದ 17.28 ಕೋಟಿ ಎಲ್ಲಿದೆ?

ಬೆಂಗಳೂರು; ರಾಜ್ಯದ 27 ಜಿಲ್ಲೆಗಳ 3,206 ಪಂಚಾಯ್ತಿಗಳು ಸರಕು ಸೇವಾ ತೆರಿಗೆ,...

Related Articles

Popular Categories

error: Content is protected !!