Wednesday | June 10, 2026 |

ವಿ.ವಿ.ಗಳಲ್ಲಿ ಸರಸ್ವತಿ ವಿಗ್ರಹಕ್ಕಷ್ಟೇ ಅನುಮತಿ; ಮುನ್ನೆಲೆಗೆ ಬಂದ ಉನ್ನತ ಶಿಕ್ಷಣ ಪರಿಷತ್ತಿನ ನಿರ್ಣಯ

ಬೆಂಗಳೂರು; ಬೆಂಗಳೂರು ವಿಶ್ವವಿದ್ಯಾಲಯ  ಸೇರಿದಂತೆ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಈ ಹಿಂದೆ ಸ್ಥಾಪಿತಗೊಂಡಿರುವ ವಿಗ್ರಹಗಳನ್ನು ಹೊರತುಪಡಿಸಿ ಇನ್ನು ಮುಂದೆ ವಿಶ್ವವಿದ್ಯಾಲಯಗಳಲ್ಲಿ ಸರಸ್ವತಿ ವಿಗ್ರಹವನ್ನು ಬಿಟ್ಟು ಬೇರೆ ಯಾವುದೇ ವಿಗ್ರಹಗಳನ್ನು ಸ್ಥಾಪಿಸಬಾರದು ಎಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ 21ನೇ ಸಾಮಾನ್ಯ ಸಭೆಯು ಕೈಗೊಂಡಿದ್ದ ನಿರ್ಣಯವು ಇದೀಗ ಮುನ್ನೆಲೆಗೆ ಬಂದಿದೆ.

 

ಬೆಂಗಳೂರು ವಿಶ್ವವಿದ್ಯಾಲಯದ ಆವರಣದ ಒಳಗಡೆ ಗಣೇಶ ದೇವಾಲಯ ಸ್ಥಾಪನೆಗೆ ಅವಕಾಶ ನೀಡುವ ಮೂಲಕ ಬಿಜೆಪಿ ಸರ್ಕಾರ ವಿವಿ ಕ್ಯಾಂಪಸ್ನ್ನು ಕೇಸರಿಕರಣಗೊಳಿಸಲು ಪ್ರಯತ್ನಿಸುತ್ತಿದೆ ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಆರೋಪಿಸಿರುವುದು ಮತ್ತು ಸಿಂಡಿಕೇಟ್‌ ಸಭೆ ಕೂಡ ದೇಗುಲ ನಿರ್ಮಾಣಕ್ಕೆ ಅನುಮೋದನೆ ನೀಡಿರುವ ಬೆನ್ನಲ್ಲೇ ಸರಸ್ವತಿ ವಿಗ್ರಹ ಹೊರತುಪಡಿಸಿ ಬೇರೆ ಯಾವುದೇ ವಿಗ್ರಹಗಳನ್ನು ವಿವಿಗಳಲ್ಲಿ ಸ್ಥಾಪಿಸಬಾರದು ಎಂದು ಉನ್ನತ ಶಿಕ್ಷಣ ಪರಿಷತ್‌ ಕೈಗೊಂಡಿದ್ದ ನಿರ್ಣಯವು ಚರ್ಚೆಗೆ ಗ್ರಾಸವಾಗಿದೆ. ಈ ಸಭೆಯ ನಡವಳಿ ಮತ್ತು ಕೈಗೊಂಡಿದ್ದ ನಿರ್ಣಯದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಾಲುದಾರಿಕೆಯ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ವಿಶ್ವವಿದ್ಯಾಲಯಗಳಲ್ಲಿ ವಿಗ್ರಹಗಳನ್ನು ಸ್ಥಾಪಿಸುವ ವಿಚಾರದ ಕುರಿತು ಚರ್ಚೆಯಾಗಿತ್ತು. ಈ ಸಂಬಂಧ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ 21ನೇ ಸಾಮಾನ್ಯ ಸಭೆಯಲ್ಲಿ ಹಲವು ವಿಶ್ರಾಂತ ಕುಲಪತಿಗಳು ಚರ್ಚೆಯಲ್ಲಿ ಪಾಲ್ಗೊಂಡು ಸರಸ್ವತಿ ವಿಗ್ರಹ ಹೊರತುಪಡಿಸಿ ಬೇರಾವುದೇ ವಿಗ್ರಹಗಳನ್ನು ವಿಶ್ವವಿದ್ಯಾಲಯಗಳಲ್ಲಿ ಸ್ಥಾಪಿಸಬಾರದು ಎಂದು ಸಲಹೆ ನೀಡಿದ್ದರು.

 

 

ಸಭೆಯಲ್ಲಿ ಚರ್ಚೆಯಾಗಿದ್ದೇನು?

 

ಹಿಂದಿನಿಂದಲೂ ಸ್ಥಾಪಿತಗೊಂಡಿರುವ ಹಾಲಿ ವಿಗ್ರಹಗಳನ್ನು ಹೊರತುಪಡಿಸಿ ಇನ್ನು ಮುಂದೆ ವಿಶ್ವವಿದ್ಯಾಲಯಗಳಲ್ಲಿ ಸರಸ್ವತಿ ವಿಗ್ರಹವನ್ನು ಬಿಟ್ಟು ಬೇರೆ ಯಾವುದೇ ವಿಗ್ರಹಗಳನ್ನು ಸ್ಥಾಪಿಸಬಾರದು ಎಂದು ಸದಸ್ಯರು ಅಭಿಪ್ರಾಯಪಟ್ಟಿದ್ದರು. ಇದಕ್ಕೆ ಸಹಮತಿ ವ್ಯಕ್ತಪಡಿಸಿದ್ದ ಹಿಂದಿನ ಸಚಿವರು ವಿಶ್ವವಿದ್ಯಾಲಯಗಳಲ್ಲಿ ಹಾಲಿ ಹಿಂದಿನಿಂದಲೂ ಸ್ಥಾಪಿತಗೊಂಡಿರುವ ವಿಗ್ರಹಗಳನ್ನು ಹೊರತುಪಡಿಸಿ ಇನ್ನು ಮುಂದೆ ವಿಶ್ವವಿದ್ಯಾಲಯಗಳಲ್ಲಿ ಸರಸ್ವತಿ ವಿಗ್ರಹಗಳನ್ನು ಬಿಟ್ಟು ಬೇರೆ ಯಾವುದೇ ವಿಗ್ರಹಗಳನ್ನು ಸ್ಥಾಪಿಸಬಾರದೆಂದು ಹಾಗೂಯಥಾಸ್ಥಿತಿ ಮುಂದುದವರೆಸಿಕೊಂಡು ಹೋಗಬೇಕು ಎಂದು ಆದೇಶಿಸಿದ್ದರು.

 

ವಿಶ್ವವಿದ್ಯಾಲಯಗಳಲ್ಲಿ ಹಿಂದಿನಿಂದಲೂ ಸ್ಥಾಪಿತಗೊಂಡಿರುವ ವಿಗ್ರಹಗಳನ್ನು ಹೊರತುಪಡಿಸಿ ಇನ್ನು ಮುಂದೆ ವಿಶ್ವವಿದ್ಯಾಲಯಗಳಲ್ಲಿ ಸರಸ್ವತಿ ವಿಗ್ರಹವನ್ನು ಬಿಟ್ಟು ಬೇರೆ ಯಾವುದೇ ವಿಗ್ರಹಗಳನ್ನು ಸ್ಥಾಪಿಸಬಾರದೆಂದು ತೀರ್ಮಾನಿಸಲಾಗಿತ್ತಲ್ಲದೆ ಹಾಗೂ ಇನ್ನು ಮುಂದೆ ಕಡ್ಸಾಯವಾಗಿ ಸರ್ಕಾರದ ಅನುಮತಿಯೊಂದಿಗೇ ವಿಗ್ರಹಗಳನ್ನು ಸ್ಥಾಪಿಸಬೇಕು ಎಂದು ನಿರ್ಣಯಿಸಲಾಗಿತ್ತು.

 

ವಿಶ್ವವಿದ್ಯಾಲಯಗಳಲ್ಲಿ ಯಾವುದೇ ರಾಜಕೀಯ, ಧರ್ಮ ಹಾಗೂ ಇತರೆ ಶಾಂತಿಗೆ ಧಕ್ಕೆ ತರುವಂತಹ ಘಟನೆಗಳು ನಡೆಯಬಾರದು . ವಿದ್ಯಾರ್ಜನೆ ಮತ್ತು ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಬಗ್ಗೆ ಕ್ರಮ ವಹಿಸಬೇಕು. ವಿಶ್ವವಿದ್ಯಾಲಯಗಳ  ಖ್ಯಾತಿಗೆ ಧಕ್ಕೆ ಉಂಟಾಗದಂತೆ ಎಲ್ಲರೂ ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸಬೇಕ ಎಂದು ವಿವಿ.ಗಳ ಕುಲಪತಿಗಳಿಗೆ ನಿರ್ದೇಶನ ನೀಡಿದ್ದರು.

 

ವಿಶ್ರಾಂತ ಕುಲಪತಿ ಪ್ರೊ ಕೆ ಸುಧಾರಾವ್‌ ಅವರು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಜನೆಯೇ ಪ್ರಮುಖ ಧ್ಯೇಯವಾಗಿರುವುದರಿಂದ ಹಿಂದಿನಿಂದಲೂ ಸರಸ್ವತಿ ವಿಗ್ರಹವನ್ನು ಸ್ಥಾಪಿಸಲಾಗುತ್ತಿದೆ. ಆದ್ದರಿಂದ ಸರಸ್ವತಿ ವಿಗ್ರಹವನ್ನು ಬಿಟ್ಟು ಬೇರೆ  ಯಾವುದೇ ವಿಗ್ರಹಗಳನ್ನು ಸ್ಥಾಪಿಸಬಾರದು ಎಂದು ಎಂದು ಅಭಿಪ್ರಾಯಪಟ್ಟಿದ್ದರು.

 

ವಿಶ್ರಾಂತ ಕುಲಪತಿ ಪ್ರೊ ಒ ಅನಂತರಾಮಯ್ಯ ಅವರು ವಿವಿಗಳಲ್ಲಿ ಯಾವುದೇ ವಿಗ್ರಹ ಸ್ಥಾಪನೆಗೆ ಅವಕಾಶ ನೀಡಬಾರದು ಎಂದು ತಿಳಿಸುತ್ತಾ ಬೆಂಗಳೂರು ವಿಶ್ವವಿದ್ಯಾಯದಲ್ಲಿ ಈ ಹಿಂದೆ ಕುಲಪತಿಗಳಾಗಿದ್ದ ಡಾ ಡಿ ಎಂ ನಂಜುಂಡಪ್ಪ ಅವರು ಸರಸ್ವತಿ ವಿಗ್ರಹವನ್ನು ಸ್ಥಾಪಿಸಿ ಬೆಂಗಳೂರು ವಿವಿಗೆ ಮೆರಗುನ್ನು ತಂದುಕೊಟ್ಟಿದ್ದರು. ಎಂದು ವಿವರಿಸಿ ವಿವಿಗಳಲ್ಲಿ ಸರಸ್ವತಿ ವಿಗ್ರಹವನ್ನು ಬಿಟ್ಟು ಬೇರೆ ಯಾವುದೇ ವಿಗ್ರಹಗಳನ್ನು ಅಳವಡಿಸಬಾರದು ಎಂದು ಸಲಹೆ ನೀಡಿದ್ದರು. ಇದನ್ನೇ ಅಂತಿಮವಾಗಿ ನಿರ್ಣಯಿಸಲಾಗಿತ್ತು.

 

‘ಕೆ.ಆರ್‌. ವೇಣುಗೋಪಾಲ್‌ ಅವರು ಕುಲಪತಿಯಾಗಿದ್ದ ಸಂದರ್ಭದಲ್ಲಿ ದೇವಸ್ಥಾನ ನಿರ್ಮಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಆವರಣದಲ್ಲಿ ಈಗಾಗಲೇ ಸಭಾಂಗಣದ ಪಕ್ಕ ಇರುವ ದೇವಸ್ಥಾನವು ರಸ್ತೆ ವಿಸ್ತರಣೆ ಯೋಜನೆ ಸಂದರ್ಭದಲ್ಲಿ ಒಡೆದು ಹಾಕಲಾಗುತ್ತದೆ. ಹೀಗಾಗಿ, ದೇವಸ್ಥಾನದ ಮರುನಿರ್ಮಾಣ ಅಥವಾ ಸ್ಥಳಾಂತರಕ್ಕೆ ಹಿಂದಿನ ಕುಲಪತಿ ಅವರು ಒಪ್ಪಿಗೆ ಸೂಚಿಸಿದ್ದರು. ಜತೆಗ ಸ್ಥಳವನ್ನು ಸಹ ಅಂತಿಮಗೊಳಿಸಲಾಗಿತ್ತು’ ಎಂದು ಹಾಲಿ ಕುಲಪತಿ ತಿಳಿಸಿದ್ದರು.

 

ಈ ಕುರಿತಂತೆ ಪ್ರತಿಕ್ರಿಯಿಸಿದ್ದ ಕುಲಪತಿ ಡಾ. ಜಯಕರ ಶೆಟ್ಟಿ, ದೇವಾಲಯ ನಿರ್ಮಾಣ ನಿರ್ಧಾರವನ್ನು ತಮ್ಮ ಅವಧಿಯಲ್ಲಿ ತೆಗೆದುಕೊಂಡಿಲ್ಲ. ಈ ಹಿಂದೆಯೇ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಆದರೆ, ಇದೀಗ ಕೆಲಸ ಆರಂಭವಾಗಿದೆ. ದೇವಾಲಯ ವಿಚಾರದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುವಂತಿಲ್ಲ ಎಂದಿದ್ದರು. ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ದೇವಾಲಯ ನಿರ್ಮಾಣ ಕೆಲಸವನ್ನು ನಿಲ್ಲಿಸುವಂತೆ ಶೆಟ್ಟಿ ನಿರ್ದೇಶಿಸಿದ್ದರು. ಆದರೂ ಕಾಮಗಾರಿ ಮುಂದುವರೆದ ಹಿನ್ನೆಲೆಯಲ್ಲಿ ಅವರೇ ಸ್ಥಳಕ್ಕೆ ಧಾವಿಸಿ, ಕೆಲಸವನ್ನು ಸ್ಥಗಿತಗೊಳಿಸಿದ್ದನ್ನು ಸ್ಮರಿಸಬಹುದು.

 

ಒಂದು ವೇಳೆ ದೇವಾಲಯ ನಿರ್ಮಾಣ ಕೆಲಸವನ್ನು ಮುಂದುವರೆಸಿದರೆ ಅವರ ವಿರುದ್ಧ ಪೊಲೀಸ್ ದೂರು ಸಲ್ಲಿಸಲಾಗುವುದು ಎಂದು ನೈಜ ಹೋರಾಟಗಾರರ ವೇದಿಕೆ, ಸ್ನಾತಕೋತ್ತರ ಮತ್ತು ಸಂಶೋಧಕ ವಿದ್ಯಾರ್ಥಿಗಳ ಒಕ್ಕೂಟ ಎಚ್ಚರಿಕೆ ನೀಡಿತ್ತು.

 

ಆಡಳಿತಾರೂಢ ಬಿಜೆಪಿ ಸರ್ಕಾರದಿಂದ ವಿವಿ ಕ್ಯಾಂಪಸ್ ಒಳಗಡೆ ಕೇಸರಿಕರಣದ ಹುನ್ನಾರವಾಗಿದೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆರೋಪಿಸಿದರು. ಯುಜಿಸಿ ಮಾರ್ಗಸೂಚಿ ಮತ್ತು ಕಾನೂನಿನಲ್ಲಿ ದೇವಾಲಯ, ಚರ್ಚ್, ಮಸೀದಿಗಳಂತ ಧಾರ್ಮಿಕ ಸ್ಥಳಗಳ ನಿರ್ಮಾಣಕ್ಕೆ ಅವಕಾಶ ನೀಡಿಲ್ಲ ಎಂದು ವಿದ್ಯಾರ್ಥಿಗಳು ಹೇಳಿದ್ದನ್ನು ಸ್ಮರಿಸಬಹುದು.

 

ಕ್ಯಾಂಪಸ್‌ನಲ್ಲಿ ಎಷ್ಟೇ ಖರ್ಚಾದರೂ ದೇವಾಲಯ ನಿರ್ಮಿಸಲಾಗುವುದು ಆದರೆ, ಪ್ರತಿಭಟನೆಗಳು ವಿರೋಧ ಪಕ್ಷಗಳು ಮತ್ತು ಹಿಂದೂ ವಿರೋಧಿ ಶಕ್ತಿಗಳ ಪಿತೂರಿಯ ಭಾಗವಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ. ಆದರೆ, ಕ್ಯಾಂಪಸ್ ನಲ್ಲಿ ದೇವಾಲಯ ನಿರ್ಮಿಸಲು ಬಿಡುವುದಿಲ್ಲ ಎಂದು ವಿದ್ಯಾರ್ಥಿಗಳು ಬಹಿರಂಗವಾಗಿ ಸವಾಲು ಹಾಕಿದ್ದರು.

Hot this week

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...
Please Scan to make Your Contribution

Topics

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಈಗಲ್‌ಟನ್‌ ರೆಸಾರ್ಟ್‌ನಿಂದ ಸರ್ಕಾರಿ ಜಮೀನು ಒತ್ತುವರಿ; 29 ವರ್ಷಗಳಾದರೂ ಪ್ರಕರಣ ಇತ್ಯರ್ಥವಾಗಿಲ್ಲ, 982 ಕೋಟಿಯೂ ವಸೂಲಾಗಿಲ್ಲ

ಬೆಂಗಳೂರು; ರಾಮನಗರ ತಾಲೂಕು ಬಿಡದಿ ಹೋಬಳಿ ಶ್ಯಾನುಮಂಗಲ, ಬಿಲ್ಲಕೆಂಪನಹಳ್ಳಿ, ಬಾನಂದೂರು ಗ್ರಾಮದ...

Related Articles

Popular Categories

error: Content is protected !!