Wednesday | September 16, 2026 |

ಅರ್ಧಕೋಟಿ ಅವ್ಯವಹಾರ; ಆರೋಪಿತ ಅಧಿಕಾರಿಯ ಸ್ಥಳ ನಿಯುಕ್ತಿಗೆ ಶಿಫಾರಸ್ಸು, ರಕ್ಷಣೆಗಿಳಿದ ಸಚಿವ!

ಬೆಂಗಳೂರು; ಜಿಲ್ಲಾ ಆರೋಗ್ಯ ರಕ್ಷಾ ಸಮಿತಿಯಿಂದ ಜಿಲ್ಲಾ ಆಸ್ಪತ್ರೆಯ ರೋಗಿಗಳಿಗೆ ಪಾವತಿಸದೆಯೇ ಅರ್ಧಕೋಟಿಗೂ ಅಧಿಕ ಮೊತ್ತವನ್ನು ದುರ್ಬಳಕೆ ಮಾಡಿಕೊಂಡು ಭ್ರಷ್ಟಾಚಾರ ಎಸಗಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿದ್ದ ತುಮಕೂರು ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರ ಅವರನ್ನು ಆರೋಗ್ಯ ಇಲಾಖೆಯ ಯೋಜನೆ ವಿಭಾಗಕ್ಕೆ ವರ್ಗಾಯಿಸಿರುವುದು ಇದೀಗ ಬಹಿರಂಗವಾಗಿದೆ.

 

ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ಅವರ ಟಿಪ್ಪಣಿ ಮೇರೆಗೆ ಸರ್ಕಾರವು ಅವರನ್ನು ಆರೋಗ್ಯ ಸೌಧದಲ್ಲಿರುವ ಯೋಜನೆ ವಿಭಾಗಕ್ಕೆ ವರ್ಗಾಯಿಸಿದೆ. ಇವರ ಟಿಪ್ಪಣಿಯನ್ನು ಪರಿಶೀಲಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವರ್ಗಾವಣೆಗೆ ಅನುಮೋದಿಸಿದ್ದಾರೆ. ಈ ಸಂಬಂಧ ಟಿಪ್ಪಣಿ ಹಾಳೆಯೊಂದು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ನಡವಳಿಯಲ್ಲೇನಿದೆ?

 

ಡಾ ವೀರಭದ್ರಯ್ಯ ಟಿ ಎ ಜಿಲ್ಲಾ ಶಸ್ತ್ರಚಿಕಿತ್ಸಕ ಜಿಲ್ಲಾ ಆಸ್ಪತ್ರೆ ತುಮಕೂರು ಇವರನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ (ಆಕುಕ/739/ಹೆಚ್‌ಎಸ್‌ಹೆಚ್‌/2022 ದಿನಾಂಕ 12-09-2022ರಲ್ಲಿ ವರ್ಗಾವಣೆಗೊಳಿಸಲಾಗಿತ್ತು. ಸ್ಥಳ ನಿಯುಕ್ತಿಗೊಳಿಸಿರುವುದಿಲ್ಲ. ಆದ್ದರಿಂದ ಇವರನ್ನು ಖಾಲಿ ಇರುವ ಡಿಡಿ (ಪ್ಲಾನಿಂಗ್‌) ಆರೋಗ್ಯ ಬೆಂಗಳೂರು ಅಥವಾ ಡಿಡಿ (ಬ್ಯಾಕ್ಟಿರಿಯಾಲಜಿ) ಪಿಎಚ್‌ಐ ಕೆ ಆರ್‌ ವೃತ್ತ ಹುದ್ದೆಗೆ ವರ್ಗಾಯಿಸಬೇಕು ಎಂದು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ಅವರು 2022ರ ಸೆ.13ರಂದು ನಡವಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿದ್ದರು.

 

ಇದನ್ನು ಪರಿಶೀಲಿಸಿದ ನಂತರ ಅದೇ ನಡವಳಿಯಲ್ಲಿ ‘ ‘ಮುಂದುವರಿಯುವುದು’ ಎಂದು ಷರಾ ಬರೆದಿದ್ದರು.
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದ ಭ್ರಷ್ಟಾಚಾರ ಅರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ವೈ ಎಸ್‌ ಪಾಟೀಲ್‌ ಅವರು ಸಮಿತಿ ರಚಿಸಿ ತನಿಖೆಗೆ ಆದೇಶಿಸಿದ್ದರು. ಈ ಮಧ್ಯೆ ಅವರನ್ನು ಅಲ್ಲಿಂದ ವರ್ಗಾವಣೆ ಮಾಡಲಾಗಿತ್ತಾದರೂ ಯಾವುದೇ ಸ್ಥಳ ನಿಯುಕ್ತಿಗೊಳಿಸಿರಲಿಲ್ಲ. ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಸೂಚಿಸಬೇಕಿದ್ದ ಕಾನೂನು ಸಚಿವರೇ ಆರೋಪಿತ ಅಧಿಕಾರಿಗೆ ಸ್ಥಳ ನಿಯುಕ್ತಿಗೊಳಿಸಲು ಶಿಫಾರಸ್ಸು ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

 

ಪ್ರಕರಣವೇನು?

 

ಜಿಲ್ಲಾ ಆರೋಗ್ಯ ರಕ್ಷಾ ಸಮಿತಿಯಿಂದ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣವನ್ನು ಸಂದಾಯ ಮಾಡಬೇಕಿತ್ತು. ಈ ಹಣವನ್ನು ಖಾತೆ ಸಂಖ್ಯೆ 200101002676ಗೆ ಸಂದಾಯವಾಗಬೇಕಿತ್ತು. ಆದರೆ ಅರ್ಧಕೋಟಿಗೂ ಹೆಚ್ಚು ಮೊತ್ತವನ್ನು ಸಂದಾಯ ಮಾಡದೇ ಅವ್ಯವಹಾರ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

 

2018ರಲ್ಲಿ 24,12,863 ರು., 2019ರಲ್ಲಿ 18, 33,560 ರು., 2020ರಲ್ಲಿ 290161, 2021ರಲ್ಲಿ 1210063 ಸೇರಿ ಒಟ್ಟು 55,46,647 ರು. ದುರ್ಬಳಕೆ ಆಗಿದೆ ಎಂದು ಹೇಳಲಾಗಿತ್ತು. ಇದರಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ ಟಿ ಎ ವೀರಭದ್ರಯ್ಯ ಹಾಗೂ ವಿಷಯ ನಿರ್ವಾಹಕ ಹರೀಶ್‌ ಇವರು ಭಾಗಿಯಾಗಿದ್ದಾರೆ ಎಂದು ಆರೋಪಕ್ಕೆ ಗುರಿಯಾಗಿದ್ದರು. ಈ ಸಂಬಂಧ ಜಿಲ್ಲಾಧಿಕಾರಿ ವೈ ಎಸ್‌ ಪಾಟೀಲ್‌ ಅವರು ಹೆಚ್ಚುವರಿ ಜಿಲ್ಲಾಧಿಕಾರಿ ಕೆ ಚನ್ನಬಸಪ್ಪ, ಜಿ.ಪಂ ಲೆಕ್ಕಾಧಿಕಾರಿ ನಾಗೇಶ್‌, ಮಹಾನಗರಪಾಲಿಕೆ ಮುಖ್ಯ ಲೆಕ್ಕಾಧಿಕಾರಿ ಗುರಬಸವೇಗೌಡ, ಶಿರಸ್ತದಾರ್‌ ವಸಂತರಾಜು ಅವರನ್ನು ಒಳಗೊಂಡ ತನಿಖಾ ಸಮಿತಿಯನ್ನು ರಚಿಸಿದ್ದನ್ನು ಸ್ಮರಿಸಬಹುದು.

Hot this week

ಭೂಗತ ಸುರಂಗ ಮಾರ್ಗ; ರಿಯಾಯಿತಿ ಅವಧಿಯಲ್ಲೇ ಗರಿಷ್ಠ ಟೋಲ್‌ ಸಂಗ್ರಹಣೆ, ದರ ಪರಿಷ್ಕರಣೆಯ ಹಿಂದಿನ ರಹಸ್ಯ ಬಯಲು

ಬೆಂಗಳೂರು; ಭೂಗತ ಸುರಂಗ ಮಾರ್ಗದಲ್ಲಿ ರಿಯಾಯಿತಿ ಅವಧಿಯಲ್ಲಿ ಗರಿಷ್ಠ ಟೋಲ್‌ ಸಂಗ್ರಹಣೆ...

ಕೋವಿಡ್ ವೆಚ್ಚದಲ್ಲಿ ಅಕ್ರಮ ಆರೋಪ; ಐಎಎಸ್‌ ಗೌರವ್ ಗುಪ್ತಾ, ರಾಜೇಂದ್ರ ಚೋಳನ್ ಆರೋಪ ಮುಕ್ತ, ಕುನ್ಹಾ ವರದಿಗಿಲ್ಲ ಕಿಮ್ಮತ್ತು

ಬೆಂಗಳೂರು;  ಕೋವಿಡ್‌ 19ರ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಂದ ಅನುಮೋದನೆ ಇಲ್ಲದೆಯೇ,...

ಶಿವಮೊಗ್ಗ ಜಿಲ್ಲೆಯಿಂದ ಅತೀ ಹೆಚ್ಚು, ಕಲ್ಬುರ್ಗಿ ಜಿಲ್ಲೆಯಿಂದ ಅತೀ ಕಡಿಮೆ ಅನುದಾನಕ್ಕೆ ಬೇಡಿಕೆ; ಜಿಲ್ಲಾಡಳಿತ ನಿಷ್ಕ್ರೀಯವಾಯಿತೇ?

ಬೆಂಗಳೂರು;  ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿಯ ಅನುದಾನ ಬೇಡಿಕೆ ಮುಂದಿರಿಸಿರುವ ಇಲಾಖೆಗಳ ...

ಅದಾನಿ ಎಸಿಸಿ ಸಮೂಹಕ್ಕೆ ವಿಧಿಸಿದ್ದ 482.69 ಕೋಟಿ ರು ದಂಡದ ಬೇಡಿಕೆ ರದ್ದು; ರಾಜ್ಯದ ಅರ್ಜಿಯೂ ವಜಾ, ಪರಿಣಾಮಕಾರಿಯಾಗಿ ವಾದ ಮಂಡಿಸುವಲ್ಲಿ ವಿಫಲವಾಯಿತೇ ರಾಜ್ಯ?

ಬೆಂಗಳೂರು; ಕಲಬುರಗಿ ಜಿಲ್ಲೆಯ ಇಂಗಳಗಿ ಮತ್ತು ರಾವೂರ್ ಗ್ರಾಮಗಳಲ್ಲಿ ಗಣಿಗಾರಿಕೆ ನಡೆಸುತ್ತಿದ್ದ...
Please Scan to make Your Contribution

Topics

ಭೂಗತ ಸುರಂಗ ಮಾರ್ಗ; ರಿಯಾಯಿತಿ ಅವಧಿಯಲ್ಲೇ ಗರಿಷ್ಠ ಟೋಲ್‌ ಸಂಗ್ರಹಣೆ, ದರ ಪರಿಷ್ಕರಣೆಯ ಹಿಂದಿನ ರಹಸ್ಯ ಬಯಲು

ಬೆಂಗಳೂರು; ಭೂಗತ ಸುರಂಗ ಮಾರ್ಗದಲ್ಲಿ ರಿಯಾಯಿತಿ ಅವಧಿಯಲ್ಲಿ ಗರಿಷ್ಠ ಟೋಲ್‌ ಸಂಗ್ರಹಣೆ...

ಕೋವಿಡ್ ವೆಚ್ಚದಲ್ಲಿ ಅಕ್ರಮ ಆರೋಪ; ಐಎಎಸ್‌ ಗೌರವ್ ಗುಪ್ತಾ, ರಾಜೇಂದ್ರ ಚೋಳನ್ ಆರೋಪ ಮುಕ್ತ, ಕುನ್ಹಾ ವರದಿಗಿಲ್ಲ ಕಿಮ್ಮತ್ತು

ಬೆಂಗಳೂರು;  ಕೋವಿಡ್‌ 19ರ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಂದ ಅನುಮೋದನೆ ಇಲ್ಲದೆಯೇ,...

ಶಿವಮೊಗ್ಗ ಜಿಲ್ಲೆಯಿಂದ ಅತೀ ಹೆಚ್ಚು, ಕಲ್ಬುರ್ಗಿ ಜಿಲ್ಲೆಯಿಂದ ಅತೀ ಕಡಿಮೆ ಅನುದಾನಕ್ಕೆ ಬೇಡಿಕೆ; ಜಿಲ್ಲಾಡಳಿತ ನಿಷ್ಕ್ರೀಯವಾಯಿತೇ?

ಬೆಂಗಳೂರು;  ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿಯ ಅನುದಾನ ಬೇಡಿಕೆ ಮುಂದಿರಿಸಿರುವ ಇಲಾಖೆಗಳ ...

ಪೆರಿಫೆರಲ್ ರಿಂಗ್‌ ರೋಡ್‌- 2; 4,500 ಕೋಟಿ ಭೂ ಪರಿಹಾರ, 15,450 ಕೋಟಿ ಅಂದಾಜು ವೆಚ್ಚ, ಸರ್ಕಾರಕ್ಕೆ ಪರಿಷ್ಕೃತ ಯೋಜನೆ ಸಲ್ಲಿಕೆ

ಬೆಂಗಳೂರು; ರೈತರು ಮತ್ತು  ಸ್ಥಳೀಯರ ವಿರೋಧದ ನಡುವೆಯೂ ಫೆರಿಫೆರಲ್ ರಿಂಗ್‌ ರಸ್ತೆ (ಭಾಗ...

Related Articles

Popular Categories

error: Content is protected !!