Friday | March 20, 2026 |

ಅರ್ಧಕೋಟಿ ಅವ್ಯವಹಾರ; ಆರೋಪಿತ ಅಧಿಕಾರಿಯ ಸ್ಥಳ ನಿಯುಕ್ತಿಗೆ ಶಿಫಾರಸ್ಸು, ರಕ್ಷಣೆಗಿಳಿದ ಸಚಿವ!

Support THE-FILE

spot_img

ಬೆಂಗಳೂರು; ಜಿಲ್ಲಾ ಆರೋಗ್ಯ ರಕ್ಷಾ ಸಮಿತಿಯಿಂದ ಜಿಲ್ಲಾ ಆಸ್ಪತ್ರೆಯ ರೋಗಿಗಳಿಗೆ ಪಾವತಿಸದೆಯೇ ಅರ್ಧಕೋಟಿಗೂ ಅಧಿಕ ಮೊತ್ತವನ್ನು ದುರ್ಬಳಕೆ ಮಾಡಿಕೊಂಡು ಭ್ರಷ್ಟಾಚಾರ ಎಸಗಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿದ್ದ ತುಮಕೂರು ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರ ಅವರನ್ನು ಆರೋಗ್ಯ ಇಲಾಖೆಯ ಯೋಜನೆ ವಿಭಾಗಕ್ಕೆ ವರ್ಗಾಯಿಸಿರುವುದು ಇದೀಗ ಬಹಿರಂಗವಾಗಿದೆ.

 

ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ಅವರ ಟಿಪ್ಪಣಿ ಮೇರೆಗೆ ಸರ್ಕಾರವು ಅವರನ್ನು ಆರೋಗ್ಯ ಸೌಧದಲ್ಲಿರುವ ಯೋಜನೆ ವಿಭಾಗಕ್ಕೆ ವರ್ಗಾಯಿಸಿದೆ. ಇವರ ಟಿಪ್ಪಣಿಯನ್ನು ಪರಿಶೀಲಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವರ್ಗಾವಣೆಗೆ ಅನುಮೋದಿಸಿದ್ದಾರೆ. ಈ ಸಂಬಂಧ ಟಿಪ್ಪಣಿ ಹಾಳೆಯೊಂದು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ನಡವಳಿಯಲ್ಲೇನಿದೆ?

 

ಡಾ ವೀರಭದ್ರಯ್ಯ ಟಿ ಎ ಜಿಲ್ಲಾ ಶಸ್ತ್ರಚಿಕಿತ್ಸಕ ಜಿಲ್ಲಾ ಆಸ್ಪತ್ರೆ ತುಮಕೂರು ಇವರನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ (ಆಕುಕ/739/ಹೆಚ್‌ಎಸ್‌ಹೆಚ್‌/2022 ದಿನಾಂಕ 12-09-2022ರಲ್ಲಿ ವರ್ಗಾವಣೆಗೊಳಿಸಲಾಗಿತ್ತು. ಸ್ಥಳ ನಿಯುಕ್ತಿಗೊಳಿಸಿರುವುದಿಲ್ಲ. ಆದ್ದರಿಂದ ಇವರನ್ನು ಖಾಲಿ ಇರುವ ಡಿಡಿ (ಪ್ಲಾನಿಂಗ್‌) ಆರೋಗ್ಯ ಬೆಂಗಳೂರು ಅಥವಾ ಡಿಡಿ (ಬ್ಯಾಕ್ಟಿರಿಯಾಲಜಿ) ಪಿಎಚ್‌ಐ ಕೆ ಆರ್‌ ವೃತ್ತ ಹುದ್ದೆಗೆ ವರ್ಗಾಯಿಸಬೇಕು ಎಂದು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ಅವರು 2022ರ ಸೆ.13ರಂದು ನಡವಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿದ್ದರು.

 

ಇದನ್ನು ಪರಿಶೀಲಿಸಿದ ನಂತರ ಅದೇ ನಡವಳಿಯಲ್ಲಿ ‘ ‘ಮುಂದುವರಿಯುವುದು’ ಎಂದು ಷರಾ ಬರೆದಿದ್ದರು.
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದ ಭ್ರಷ್ಟಾಚಾರ ಅರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ವೈ ಎಸ್‌ ಪಾಟೀಲ್‌ ಅವರು ಸಮಿತಿ ರಚಿಸಿ ತನಿಖೆಗೆ ಆದೇಶಿಸಿದ್ದರು. ಈ ಮಧ್ಯೆ ಅವರನ್ನು ಅಲ್ಲಿಂದ ವರ್ಗಾವಣೆ ಮಾಡಲಾಗಿತ್ತಾದರೂ ಯಾವುದೇ ಸ್ಥಳ ನಿಯುಕ್ತಿಗೊಳಿಸಿರಲಿಲ್ಲ. ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಸೂಚಿಸಬೇಕಿದ್ದ ಕಾನೂನು ಸಚಿವರೇ ಆರೋಪಿತ ಅಧಿಕಾರಿಗೆ ಸ್ಥಳ ನಿಯುಕ್ತಿಗೊಳಿಸಲು ಶಿಫಾರಸ್ಸು ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

 

ಪ್ರಕರಣವೇನು?

 

ಜಿಲ್ಲಾ ಆರೋಗ್ಯ ರಕ್ಷಾ ಸಮಿತಿಯಿಂದ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣವನ್ನು ಸಂದಾಯ ಮಾಡಬೇಕಿತ್ತು. ಈ ಹಣವನ್ನು ಖಾತೆ ಸಂಖ್ಯೆ 200101002676ಗೆ ಸಂದಾಯವಾಗಬೇಕಿತ್ತು. ಆದರೆ ಅರ್ಧಕೋಟಿಗೂ ಹೆಚ್ಚು ಮೊತ್ತವನ್ನು ಸಂದಾಯ ಮಾಡದೇ ಅವ್ಯವಹಾರ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

 

2018ರಲ್ಲಿ 24,12,863 ರು., 2019ರಲ್ಲಿ 18, 33,560 ರು., 2020ರಲ್ಲಿ 290161, 2021ರಲ್ಲಿ 1210063 ಸೇರಿ ಒಟ್ಟು 55,46,647 ರು. ದುರ್ಬಳಕೆ ಆಗಿದೆ ಎಂದು ಹೇಳಲಾಗಿತ್ತು. ಇದರಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ ಟಿ ಎ ವೀರಭದ್ರಯ್ಯ ಹಾಗೂ ವಿಷಯ ನಿರ್ವಾಹಕ ಹರೀಶ್‌ ಇವರು ಭಾಗಿಯಾಗಿದ್ದಾರೆ ಎಂದು ಆರೋಪಕ್ಕೆ ಗುರಿಯಾಗಿದ್ದರು. ಈ ಸಂಬಂಧ ಜಿಲ್ಲಾಧಿಕಾರಿ ವೈ ಎಸ್‌ ಪಾಟೀಲ್‌ ಅವರು ಹೆಚ್ಚುವರಿ ಜಿಲ್ಲಾಧಿಕಾರಿ ಕೆ ಚನ್ನಬಸಪ್ಪ, ಜಿ.ಪಂ ಲೆಕ್ಕಾಧಿಕಾರಿ ನಾಗೇಶ್‌, ಮಹಾನಗರಪಾಲಿಕೆ ಮುಖ್ಯ ಲೆಕ್ಕಾಧಿಕಾರಿ ಗುರಬಸವೇಗೌಡ, ಶಿರಸ್ತದಾರ್‌ ವಸಂತರಾಜು ಅವರನ್ನು ಒಳಗೊಂಡ ತನಿಖಾ ಸಮಿತಿಯನ್ನು ರಚಿಸಿದ್ದನ್ನು ಸ್ಮರಿಸಬಹುದು.

Hot this week

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

Topics

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

Related Articles

Popular Categories

error: Content is protected !!