Monday | March 16, 2026 |

ಟಾಟಾ ಐರನ್‌ ಸ್ಟೀಲ್‌ ಕಂಪನಿ ಸೇರಿ 15 ಕೈಗಾರಿಕೆಗಳಿಗೆ ಬೀಗ; 2,086 ಮಂದಿಗೆ ಉದ್ಯೋಗ ನಷ್ಟ

Support THE-FILE

spot_img

ಬೆಂಗಳೂರು; ಕಚ್ಚಾ ಮಾಲಿನ ಕೊರತೆ, ಹಣಕಾಸಿನ ತೊಂದರೆ, ಕಬ್ಬಿನ ಬಾಕಿ ಬಿಲ್‌ ಪಾವತಿ ಮಾಡದಿರುವುದು, ಯೋಗ್ಯ ದರದಲ್ಲಿ ಕಚ್ಚಾ ವಸ್ತು ದೊರೆಯದಿರುವುದು ಸೇರಿದಂತೆ ಇನ್ನಿತರೆ ಕಾರಣಗಳನ್ನು ಮುಂದಿರಿಸಿಕೊಂಡು ಟಾಟಾ ಐರನ್‌ ಸ್ಟೀಲ್‌ ಕಂಪನಿ ಸೇರಿದಂತೆ ಕಳೆದ 3 ವರ್ಷಗಳಲ್ಲಿ ಒಟ್ಟು 15 ಬೃಹತ್‌ ಮತ್ತು ಮಧ್ಯಮ ಕೈಗಾರಿಕೆಗಳು ರಾಜ್ಯದಲ್ಲಿ ಮುಚ್ಚಿ ಹೋಗಿವೆ. ಇದರಿಂದಾಗಿ ಒಟ್ಟು 2,086 ಮಂದಿ ಕೆಲಸ ಕಳೆದುಕೊಂಡಿದ್ದಾರೆ.

 

ವಿಧಾನಪರಿಷತ್‌ನ ಟಿ ಎ ಶರವಣ ಅವರು ಕೇಳಿದ್ದ ಚುಕ್ಕೆ ಗುರುತಿನ ಪ್ರಶ್ನೆ (197)ಗೆ ಕೈಗಾರಿಕೆ ಸಚಿವ ಮುರುಗೇಶ್‌ ಆರ್‌ ನಿರಾಣಿ ಅವರು ಈ ಸಂಬಂಧ ಅಂಕಿ ಅಂಶಗಳನ್ನು ಒದಗಿಸಿದ್ದಾರೆ.

 

ಆಡಳಿತ ಮಂಡಳಿಯಲ್ಲಿ ಬದಲಾವಣೆ, ಘಟಕದ ವಿಸ್ತರಣೆ, ಹಾನಿ ಸಂಭವಿಸಿರುವುದು, ರೈತರ ಕಬ್ಬಿನ ಬಾಕಿ ಬಿಲ್‌ ಪಾವತಿ ಮಾಡದೇ ಇರುವುದು, ಹಣಕಾಸಿನ ತೊಂದರೆ, ಇತರೆ ತಾಂತ್ರಿಕ/ಹಣಕಾಸು, ಕಚ್ಛಾ ಮಾಲಿನ ಕೊರತೆ, ಹಣಕಾಸಿನ ಮುಗ್ಗಟ್ಟು, ಕಚ್ಚಾ ವಸ್ತು ಯೋಗ್ಯ ದರದಲ್ಲಿ ಮತ್ತು ಅವಶ್ಯಕ ಪ್ರಮಾಣದಲ್ಲಿ ದೊರೆಯದಿರುವುದು, ಎಕಾನಾಮಿಕ್‌ ವಯಬಲಿಟಿ ಇಲ್ಲದೇ ಕಾರ್ಮಿಕರಿಗೆ ಸಂಬಳ ಕೊಡದಲು ಸಾಧ್ಯವಾಗದೇ ಕಾರ್ಮಿಕರು ರಾಜೀನಾಮೆ ನೀಡಿರುವುದು, ಆರ್ಥಿಕನಷ್ಟ, ನಿರ್ವಹಣೆ ಮತ್ತು ಆಂತರಿಕ ಸಮಸ್ಯೆಗಳು ಕೈಗಾರಿಕೆಗಳು ಮುಚ್ಚಲು ಕಾರಣ ಎಂದು ವಿವರಣೆ ನೀಡಿದ್ದಾರೆ.

 

 

ಮುಚ್ಚಿ ಹೋಗಿರುವ ಕೈಗಾರಿಕೆಗಳ ಪಟ್ಟಿ

 

ಬಾಗಲಕೋಟೆ ಜಿಲ್ಲೆಯಲ್ಲಿ ಪ್ರಜಾ ಸೀಮೆಂಟ್ಸ್‌ ಪ್ರೈ ಲಿ., ರೈತರ ಸಹಕಾರಿ ಸಕ್ಕರೆ ಕಾಖಾfನೆ, ಸಾವರಿನ್‌ ಇಂಡಸ್ಟ್ರೀಸ್‌ ಕಂಪನಿಯು ಆಡಳಿತ ಮಂಡಳಿಯಲ್ಲಿ ಬದಲಾವಣೆ ಮತ್ತು ಘಟಕದ ವಿಸ್ತರಣೆ ಕೈಗೊಂಡಿರುವುದರಿಂದ ಮುಚ್ಚಿ ಹೋಗಿವೆ.

 

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸ್ಯಾನ್‌ ಸಿಲ್ಕ್‌ ಲಿ, ಟಾಟಾ ಐರನ್‌ ಸ್ಟೀಲ್‌ ಕಂಪನಿ, ತೇಜಕಮಲ್‌ ಫಾರ್ಮಾಸ್ಯುಟಿಕಲ್ಸ್‌, ವೆಲ್‌ ಫ್ಯಾಬ್‌ ಟೆಕ್ನೋಲಜಿ ಪ್ರೈ ಲಿ., ಕ್ಯಾಡ್ಜೀಸ್‌ ಇಂಡಿಯಾ ಪ್ರೈ ಲಿ., ಹಣಕಾಸಿನ ತೊಂದರೆಯಿಂದಾಗಿ ಬಾಗಿಲು ಮುಚ್ಚಿವೆ. ಈ ಪೈಕಿ ತೇಜಕಮಲ್‌ ಫಾರ್ಮಾಸ್ಯುಟಿಕಲ್ಸ್‌ ಕಂಪನಿಯು ಮುಚ್ಚಿರುವುದಕ್ಕೆ ನಿಖರವಾದ ಮಾಹಿತಿಯೇ ಲಭ್ಯವಿಲ್ಲ ಎಂದು ಸರ್ಕಾರ ಉತ್ತರಿಸಿದೆ.

 

ಕಚ್ಚಾ ಮಾಲಿನ ಕೊರತೆಯನ್ನು ಮುಂದಿರಿಸಿಕೊಂಡು ಚಿತ್ರದುರ್ಗದ ಎಂಟೈರ್‌ ಸೆರಾಮಿಕ್ಸ್‌, ಹಣಕಾಸಿನ ಮುಗ್ಗಟ್ಟು ಮತ್ತು ಎನ್‌ಸಿಎಲ್‌ಟಿಯಲ್ಲಿ ಪ್ರಕರಣವನ್ನು ಮುಂದಿರಿಸಿಕೊಂಡು ದಕ್ಷಿಣ ಕನ್ನಡದ ಜೆಬಿಎಫ್‌ ಪೆಟ್ರೋಕೆಮಿಕಲ್ಸ್‌ ಲಿ., ಕಚ್ಚಾ ವಸ್ತು ಯೋಗ್ಯ ದರದಲ್ಲಿ ದೊರೆತಿಲ್ಲ ಎಂಬ ಕಾರಣಕ್ಕಾಗಿ ಗದಗ್‌ನ ದಿ ಫಾರ್ಮರ್ಸ್‌ ಕೋ ಆಫ್‌ ಸ್ಪಿನ್ನಿಂಗ್‌ ಮಿ ಲಿ., ಎಕಾನಾಮಿಕ್‌ ವಯಬಲಿಟಿ ಇಲ್ಲದೇ ಕಾರ್ಮಿಕರಿಗೆ ಸಂಬಳ ಕೊಡಲು ಸಾಧ್ಯವಾಗದೇ ದಿ ಗದಗ್‌ ಕೋ ಆಫ್‌ ಟೆಕ್ಸ್‌ಟೈಲ್ಸ್‌ ಮಿಲ್‌ ಹುಲಿಕೋಟಿ, ತಾಂತ್ರಿಕ ಕಾರಣಗಳಿಂದಾಗಿ ಕೋಲಾರದ ಗ್ಸಾಕೋಸ್ಮಿತಿಕ್ಲೈನ್‌ ಫಾರ್ಮಾಸ್ಯುಟಿಕಲ್ಸ್‌,, ನಿರ್ವಹಣೆ ಮತ್ತು ಆಂತರಿಕ ಸಮಸ್ಯೆಗಳ ಕಾರಣಗಳಿಂದಾಗಿ ರಾಮನಗರದ ಟೆಕೋಯ್‌ ರಬ್ಬರ್‌ ಆಟೋಪಾರ್ಟ್ಸ್‌ ಇಂಡಿಯಾ ಪ್ರೈ ಲಿ., ಮುಚ್ಚಿ ಹೋಗಿವೆ ಎಂದು ಸಚಿವರು ಉತ್ತರದಲ್ಲಿ ವಿವರಣೆ ನೀಡಿದ್ದಾರೆ.

 

ಅದೇ ರೀತಿ ರಾಜ್ಯದಲ್ಲಿ 695 ಬೃಹತ್‌ ಕೈಗಾರಿಕೆಗಳಿಂದ 5,05,883 ಮತ್ತು 1274 ಮಧ್ಯಮ ಕೈಗಾರಿಕೆಗಳಿಂದ 3,01,984 ಸೇರಿ ಒಟ್ಟು 8,07,867 ಜನರಿಗೆ ಉದ್ಯೋಗ ದೊರಕಿಸಿದೆ.

Hot this week

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

ಎಪಿಎಂಸಿಯಲ್ಲಿ ಅಕ್ರಮ; ನಿಯಮಬಾಹಿರವಾಗಿ 2,132 ಕಮಿಷನ್ ಏಜೆಂಟ್ ಲೈಸೆನ್ಸ್ ಮಂಜೂರು,

ಬೆಂಗಳೂರು; ಕೃಷಿ ಉತ್ಪನ್ನ ಮಾರುಕಟ್ಟೆ  ಸ್ವಂತ ಪ್ರಾಂಗಣ ಹೊಂದದೇ ಇದ್ದರೂ ಸಹ...

Topics

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

ಎಪಿಎಂಸಿಯಲ್ಲಿ ಅಕ್ರಮ; ನಿಯಮಬಾಹಿರವಾಗಿ 2,132 ಕಮಿಷನ್ ಏಜೆಂಟ್ ಲೈಸೆನ್ಸ್ ಮಂಜೂರು,

ಬೆಂಗಳೂರು; ಕೃಷಿ ಉತ್ಪನ್ನ ಮಾರುಕಟ್ಟೆ  ಸ್ವಂತ ಪ್ರಾಂಗಣ ಹೊಂದದೇ ಇದ್ದರೂ ಸಹ...

ರಾಜ್ಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಬೇಕು 10,000 ಕೋಟಿ ಹೆಚ್ಚುವರಿ ಅನುದಾನ; ಸಚಿವ ಸಂಪುಟಕ್ಕೆ ಪ್ರಸ್ತಾವ

ಬೆಂಗಳೂರು; ರಾಜ್ಯ ಶಿಕ್ಷಣ ನೀತಿ ಆಯೋಗವು ಮಾಡಿರುವ  ಒಟ್ಟು 72 ಪ್ರಮುಖ...

ಸರ್ಕಾರಿ ಜಮೀನು ಭೂಗಳ್ಳರ ಪಾಲು; ಪಿ ನಂಬರ್ ದುರಸ್ತಿ ಹೆಸರಿನಲ್ಲಿ ಅಕ್ರಮ, ತಹಶೀಲ್ದಾರ್‍‌ಗಳೇ ಭಾಗಿ, ಕ್ರಮವೇ ಇಲ್ಲ

ಬೆಂಗಳೂರು;  ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಲಕ್ಕೂರು ಹೋಬಳಿ ಸಂಪಂಗೆರೆ ಗ್ರಾಮದಲ್ಲಿನ...

7ನೇ ವೇತನ ಆಯೋಗ ಶಿಫಾರಸ್ಸು; ಬದ್ಧ ವೆಚ್ಚದಲ್ಲಿ ಹೆಚ್ಚಳ, 15,000 ಕೋಟಿಯಿಂದ 20,000 ಕೋಟಿಗೆ ಏರಿಕೆ

ಬೆಂಗಳೂರು;  7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿದಲ್ಲಿ  ಮುಂಬರುವ ವರ್ಷಗಳಲ್ಲಿ ಬದ್ಧ...

Related Articles

Popular Categories

error: Content is protected !!