Monday | March 30, 2026 |

ಕೋವಿಡ್‌; ಡೀಸೆಲ್‌ ದರ ಹೆಚ್ಚಳ ನೆಪವಾಗಿರಿಸಿ ಸಾರಿಗೆ ನೌಕರರಿಗೆ ಪರಿಹಾರ ಕಷ್ಟಸಾಧ್ಯವೆಂದ ಸರ್ಕಾರ

Support THE-FILE

spot_img

ಬೆಂಗಳೂರು; ಡೀಸೆಲ್‌ ದರದಲ್ಲಿ ಹೆಚ್ಚಳಗೊಂಡಿರುವುದನ್ನು ನೆಪವಾಗಿರಿಸಿಕೊಂಡಿರುವ ಸಾರಿಗೆ ಇಲಾಖೆಯು ಕೋವಿಡ್‌ ಸಾಂಕ್ರಾಮಿಕಕ್ಕೆ ತುತ್ತಾಗಿ ಮೃತಪಟ್ಟಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಅವಲಂಬಿತರಿಗೆ ಪರಿಹಾರ ಮೊತ್ತ ವಿತರಿಸುವುದು ಕಷ್ಟಸಾಧ್ಯ ಎಂದು  ಕೈಎತ್ತಿದೆ.

 

ಪರಿಹಾರ ಮೊತ್ತಕ್ಕಾಗಿ ಎದುರು ನೋಡುತ್ತಿದ್ದ ಕೋವಿಡ್‌ ಸಾಂಕ್ರಾಮಿಕಕ್ಕೆ ತುತ್ತಾಗಿದ್ದ ಕೆಎಸ್‌ಆರ್‌ಟಿಸಿ ನಾಲ್ಕು ನಿಗಮಗಳ ನೌಕರರ ಅವಲಂಬಿತರಿಗೆ ಸರ್ಕಾರದ ಈ ನಿರ್ಧಾರದಿಂದ ಆಘಾತವಾದಂತಾಗಿದೆ.
ಈ ಕುರಿತು ವಿಧಾನಸಭೆ ಅಧಿವೇಶನದಲ್ಲಿ ಶಾಸಕ ಮಂಜುನಾಥ್‌ ಆರ್‌ ಅವರು ಕೇಳಿದ್ದ ಚುಕ್ಕೆಗುರುತಿಲ್ಲದ ಪ್ರಶ್ನೆ(623)ಗೆ ಉತ್ತರಿಸಿರುವ ಸಾರಿಗೆ ಸಚಿವ ಬಿ ಶ್ರೀರಾಮುಲು ಅವರು ಸರ್ಕಾರದ ನಿಲುವನ್ನು ಬಹಿರಂಗಪಡಿಸಿದ್ದಾರೆ.

 

‘ಕೋವಿಡ್‌ 19ರ ಹಿನ್ನೆಲೆಯಲ್ಲಿ ಹಾಗೂ ಡೀಸೆಲ್‌ ದರದ ಹೆಚ್ಚಳದ ಕಾರಣದಿಂದಾಗಿ ನಾಲ್ಕು ಸಾರಿಗೆ ಸಂಸ್ಥೆಗಳ ಆರ್ಥಿಕ ಪರಿಸ್ಥಿತಿಯು ಗಣನೀಐವಾಗಿ ಕುಂಠಿತವಾಗಿದೆ. ಈ ಪರಿಸ್ಥಿತಿಯಲಲಿ ಕೋವಿಡ್‌ 19ರ ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿ ಮೃತಪಟ್ಟ ನೌಕರರ ಅವಲಂಬಿತರಿಗೆ ಪರಿಹಾರ ಮೊತ್ತ ವಿತರಿಸುವುದು ಕಷ್ಟಸಾಧ್ಯವಾಗಿರುತ್ತದೆ,’ ಎಂದು ಲಿಖಿತ ಉತ್ತರ ನೀಡಿದ್ದಾರೆ.

 

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಒಟ್ಟು ನೌಕರರಲ್ಲಿ ಮೊದಲ ಅಲೆಯಲ್ಲಿ 39, ಎರಡನೇ ಅಲೆಯಲ್ಲಿ 71 ಮಂದಿ ಕೋವಿಡ್‌ ಸಾಂಕ್ರಾಮಿಕಕ್ಕೆ ತುತ್ತಾಗಿ ಮರಣ ಹೊಂದಿದ್ದರು. ಆದರೆ ಇದುವರೆಗೆ ಕೇವಲ 4 ಕುಟುಂಬದವರಿಗೆ ಮಾತ್ರ ತಲಾ 30 ಲಕ್ಷ ರು.ಗಳನ್ನು ಮಾತ್ರ ಪರಿಹಾರ ಧನ ನೀಡಿರುವುದು ಉತ್ತರದಿಂದ ತಿಳಿದು ಬಂದಿದೆ.

Hot this week

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

Topics

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

Related Articles

Popular Categories

error: Content is protected !!