Monday | August 24, 2026 |

ಕೋವಿಡ್‌; ಡೀಸೆಲ್‌ ದರ ಹೆಚ್ಚಳ ನೆಪವಾಗಿರಿಸಿ ಸಾರಿಗೆ ನೌಕರರಿಗೆ ಪರಿಹಾರ ಕಷ್ಟಸಾಧ್ಯವೆಂದ ಸರ್ಕಾರ

ಬೆಂಗಳೂರು; ಡೀಸೆಲ್‌ ದರದಲ್ಲಿ ಹೆಚ್ಚಳಗೊಂಡಿರುವುದನ್ನು ನೆಪವಾಗಿರಿಸಿಕೊಂಡಿರುವ ಸಾರಿಗೆ ಇಲಾಖೆಯು ಕೋವಿಡ್‌ ಸಾಂಕ್ರಾಮಿಕಕ್ಕೆ ತುತ್ತಾಗಿ ಮೃತಪಟ್ಟಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಅವಲಂಬಿತರಿಗೆ ಪರಿಹಾರ ಮೊತ್ತ ವಿತರಿಸುವುದು ಕಷ್ಟಸಾಧ್ಯ ಎಂದು  ಕೈಎತ್ತಿದೆ.

 

ಪರಿಹಾರ ಮೊತ್ತಕ್ಕಾಗಿ ಎದುರು ನೋಡುತ್ತಿದ್ದ ಕೋವಿಡ್‌ ಸಾಂಕ್ರಾಮಿಕಕ್ಕೆ ತುತ್ತಾಗಿದ್ದ ಕೆಎಸ್‌ಆರ್‌ಟಿಸಿ ನಾಲ್ಕು ನಿಗಮಗಳ ನೌಕರರ ಅವಲಂಬಿತರಿಗೆ ಸರ್ಕಾರದ ಈ ನಿರ್ಧಾರದಿಂದ ಆಘಾತವಾದಂತಾಗಿದೆ.
ಈ ಕುರಿತು ವಿಧಾನಸಭೆ ಅಧಿವೇಶನದಲ್ಲಿ ಶಾಸಕ ಮಂಜುನಾಥ್‌ ಆರ್‌ ಅವರು ಕೇಳಿದ್ದ ಚುಕ್ಕೆಗುರುತಿಲ್ಲದ ಪ್ರಶ್ನೆ(623)ಗೆ ಉತ್ತರಿಸಿರುವ ಸಾರಿಗೆ ಸಚಿವ ಬಿ ಶ್ರೀರಾಮುಲು ಅವರು ಸರ್ಕಾರದ ನಿಲುವನ್ನು ಬಹಿರಂಗಪಡಿಸಿದ್ದಾರೆ.

 

‘ಕೋವಿಡ್‌ 19ರ ಹಿನ್ನೆಲೆಯಲ್ಲಿ ಹಾಗೂ ಡೀಸೆಲ್‌ ದರದ ಹೆಚ್ಚಳದ ಕಾರಣದಿಂದಾಗಿ ನಾಲ್ಕು ಸಾರಿಗೆ ಸಂಸ್ಥೆಗಳ ಆರ್ಥಿಕ ಪರಿಸ್ಥಿತಿಯು ಗಣನೀಐವಾಗಿ ಕುಂಠಿತವಾಗಿದೆ. ಈ ಪರಿಸ್ಥಿತಿಯಲಲಿ ಕೋವಿಡ್‌ 19ರ ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿ ಮೃತಪಟ್ಟ ನೌಕರರ ಅವಲಂಬಿತರಿಗೆ ಪರಿಹಾರ ಮೊತ್ತ ವಿತರಿಸುವುದು ಕಷ್ಟಸಾಧ್ಯವಾಗಿರುತ್ತದೆ,’ ಎಂದು ಲಿಖಿತ ಉತ್ತರ ನೀಡಿದ್ದಾರೆ.

 

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಒಟ್ಟು ನೌಕರರಲ್ಲಿ ಮೊದಲ ಅಲೆಯಲ್ಲಿ 39, ಎರಡನೇ ಅಲೆಯಲ್ಲಿ 71 ಮಂದಿ ಕೋವಿಡ್‌ ಸಾಂಕ್ರಾಮಿಕಕ್ಕೆ ತುತ್ತಾಗಿ ಮರಣ ಹೊಂದಿದ್ದರು. ಆದರೆ ಇದುವರೆಗೆ ಕೇವಲ 4 ಕುಟುಂಬದವರಿಗೆ ಮಾತ್ರ ತಲಾ 30 ಲಕ್ಷ ರು.ಗಳನ್ನು ಮಾತ್ರ ಪರಿಹಾರ ಧನ ನೀಡಿರುವುದು ಉತ್ತರದಿಂದ ತಿಳಿದು ಬಂದಿದೆ.

Hot this week

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...
Please Scan to make Your Contribution

Topics

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

Related Articles

Popular Categories

error: Content is protected !!