Thursday | March 26, 2026 |

ವಿಶೇಷ ಚೇತನರಿಗೆ ಸೌಲಭ್ಯ ; ಸಾಧನ ಯೋಜನೆಯಡಿ ಕೇವಲ 16 ಫಲಾನುಭವಿಗಳಿಗಷ್ಟೇ ಸಲಕರಣೆ ವಿತರಣೆ

Support THE-FILE

spot_img

ಬೆಂಗಳೂರು; ತ್ರಿಚಕ್ರ ವಾಹನ, ಲ್ಯಾಪ್‌ಟಾಪ್ ಸೇರಿದಂತೆ ಇನ್ನಿತರೆ ಸಾಧನ ಸಲಕರಣೆಗಳನ್ನು ವಿಶೇಷ ಚೇತನರಿಗೆ ನಿಗದಿತ ಅವಧಿಯೊಳಗೆ ನೀಡದೇ ಶಾಸಕರ ಅನುಮತಿಯಿಲ್ಲದೇ ಅಧಿಕಾರಿಗಳು ಸರಬರಾಜು ಮಾಡುತ್ತಿಲ್ಲ ಎಂಬ ಗುರುತರವಾದ ಆರೋಪಗಳ ಕೇಳಿ ಬಂದಿರುವ ನಡುವೆಯೇ 2021-22ನೇ ಸಾಲಿನ ಹಣಕಾಸಿನ ವರ್ಷದ ಡಿಸೆಂಬರ್ ಅಂತ್ಯಕ್ಕೆ ಸಾಧನೆ ಯೋಜನೆಯಡಿ ಕೇವಲ 16 ಫಲಾನುಭವಿಗಳಿಗಷ್ಟೇ ಸಾಧನ ಸಲಕರಣೆಗಳನ್ನು ವಿತರಿಸಿದೆ. ಅ ಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸುವ ಅಂಗವಿಕಲ ಕ್ರೀಡಾಪಟುಗಳಿಗೆ ಧನ ಸಹಾಯ ನಿರೀಕ್ಷಿಸಿದ್ದ ವಿಶೇಷ ಚೇತನರು ತೊಂದರೆ ಅನುಭವಿಸಿರುವುದು ಇದೀಗ ಬಹಿರಂಗವಾಗಿದೆ.

 

ವಿಧಾನಪರಿಷತ್‌ ಅಧಿವೇಶನದಲ್ಲಿ ಸದಸ್ಯ ಎನ್‌ ರವಿಕುಮಾರ್‌ ಅವರು ಕೇಳಿದ್ದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿರುವ ಸಚಿವ ಹಾಲಪ್ಪ ಆಚಾರ್‌ ಅವರು ಈ ಮಾಹಿತಿಯನ್ನು ಒದಗಿಸಿದ್ದಾರೆ.

 

2020-21ನೇ ಸಾಲಿನಲ್ಲಿ 7,314 ವಿಶೇಷ ಚೇತನರಿಗೆ 2,220.00 ಲಕ್ಷ ರು. ವೆಚ್ಚ ಮಾಡಿರುವ ಇಲಾಖೆಯು ಡಿಸೆಂಬರ್‌ ಅಂತ್ಯಕ್ಕೆ ಗುರುತಿಸಲಾಗಿದ್ದ ವಿಶೇಷ ಚೇತನ ಫಲಾನುಭವಿಗಳಿಗೆ ಪ್ರತಿಯಾಗಿ ಕೇವಲ 16 ಫಲಾನುಭವಿಗಳಿಗೆ ಮಾತ್ರವೇ 69.55 ಲಕ್ಷ ರು. ವೆಚ್ಚ ಮಾಡಿದೆ.

 

2021-22ನೇ ಸಾಲಿನ ಹಣಕಾಸು ವರ್ಷದ ಕ್ರಿಯಾ ಯೋಜನೆಯಲ್ಲಿ ವಿವಿಧ ಫಲಾನುಭವಿ ಆಧರಿತ ಯೋಜನೆಗಳಡಿ ಒಟ್ಟು 2,20.00 ಲಕ್ಷ ರು.ಗಳನ್ನು ಆಯವ್ಯಯದಲ್ಲಿ ಒದಗಿಸಲಾಗಿತ್ತು. ಒಟ್ಟು 8,435 ಫಲಾನುಭವಿಗಳನ್ನು ಗುರುತಿಸಲಾಗಿತ್ತು. ಈ ಪೈಕಿ 8,681 ಸಲಕರಣೆಗಳನ್ನು ವಿತರಿಸಿದೆ. ಅದೇ ರೀತಿ ಡಿಸೆಂಬರ್‌ 2021ರ ಅಂತ್ಯಕ್ಕೆ ಸಾಧನ ಸಲಕರಣೆ ಯೋಜನೆಯಡಿ 1,815 ಫಲಾನುಭವಿಗಳಿಗೆ ಹಾಗೂ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸುವ ಅಂಗವಿಕಲ ಕ್ರೀಡಾ ಪಟುಗಳಿಗೆ ಧನಸಹಾಯ ಮಾಡುವ ಸಾಧನ ಯೋಜನೆಯಡಿ 16 ಫಲಾನುಭವಿಗಳಿಗೆ ಸೌಲಭ್ಯ ನೀಡಲಾಗಿದೆ ಎಂದು ಉತ್ತರಿಸಿದ್ದಾರೆ.

 

ಸಾಧನ ಸಲಕರಣೆಗಳಿಗಾಗಿ 248.50 ಲಕ್ಷ ರು., ಲ್ಯಾಪ್‌ಟಾಪ್‌ ಒದಗಿಸಲು 399.50 ಲಕ್ಷ ರು., ಯಂತ್ರಚಾಲಿತ ದ್ವಿಚಕ್ರ ವಾಹನಗಳಿಗಾಗಿ 1,350.00 ಲಕ್ಷ ರು., ಶ್ರವಣ ದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ವಿತರಿಸಲು 72.00 ಲಕ್ಷ ರು., ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್‌ ಮೊಬೈಲ್‌, ಬ್ರೈಲ್‌ ವಾಚ್‌, ವಾಕಿಂಗ್‌ ಸ್ಟಿಕ್‌ ಇನ್ನಿತರೆ ಕಿಟ್‌ಗಳಿಗೆ 100.00 ಲಕ್ಷ ರು., ಸಾಧನೆ ಯೋಜನೆಯಡಿ 50.00 ಲಕ್ಷ ರು.ಗಳನ್ನು ಆಯವ್ಯಯದಲ್ಲಿ ಅನುದಾನ ನಿಗದಿಪಡಿಸಲಾಗಿತ್ತು.

 

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೆ ಯಂತ್ರಚಾಲಿತ ತ್ರಿಚಕ್ರ ವಾಹನಗಳನ್ನು ವಿತರಿಸಲು ಸಚಿವ ಮಾಧುಸ್ವಾಮಿ ಅವರ ಆಪ್ತ ಸಹಾಯಕರು ಲಂಚಕ್ಕೆ ಬೇಡಿಕೆ ಇರಿಸಿದ್ದರು. ಈ ಕುರಿತು ಫಲಾನುಭವಿಯೊಬ್ಬರು ಅಧಿಕಾರಿಯೊಬ್ಬರೊಂದಿಗೆ ನಡೆದಿದ್ದ ಸಂಭಾಷಣೆಯು ಸೋರಿಕೆಯಾಗಿದ್ದನ್ನು ಸ್ಮರಿಸಬಹುದು.

Hot this week

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

Topics

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

Related Articles

Popular Categories

error: Content is protected !!