Wednesday | May 6, 2026 |

ವಿಶೇಷ ಚೇತನರಿಗೆ ಸೌಲಭ್ಯ ; ಸಾಧನ ಯೋಜನೆಯಡಿ ಕೇವಲ 16 ಫಲಾನುಭವಿಗಳಿಗಷ್ಟೇ ಸಲಕರಣೆ ವಿತರಣೆ

ಬೆಂಗಳೂರು; ತ್ರಿಚಕ್ರ ವಾಹನ, ಲ್ಯಾಪ್‌ಟಾಪ್ ಸೇರಿದಂತೆ ಇನ್ನಿತರೆ ಸಾಧನ ಸಲಕರಣೆಗಳನ್ನು ವಿಶೇಷ ಚೇತನರಿಗೆ ನಿಗದಿತ ಅವಧಿಯೊಳಗೆ ನೀಡದೇ ಶಾಸಕರ ಅನುಮತಿಯಿಲ್ಲದೇ ಅಧಿಕಾರಿಗಳು ಸರಬರಾಜು ಮಾಡುತ್ತಿಲ್ಲ ಎಂಬ ಗುರುತರವಾದ ಆರೋಪಗಳ ಕೇಳಿ ಬಂದಿರುವ ನಡುವೆಯೇ 2021-22ನೇ ಸಾಲಿನ ಹಣಕಾಸಿನ ವರ್ಷದ ಡಿಸೆಂಬರ್ ಅಂತ್ಯಕ್ಕೆ ಸಾಧನೆ ಯೋಜನೆಯಡಿ ಕೇವಲ 16 ಫಲಾನುಭವಿಗಳಿಗಷ್ಟೇ ಸಾಧನ ಸಲಕರಣೆಗಳನ್ನು ವಿತರಿಸಿದೆ. ಅ ಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸುವ ಅಂಗವಿಕಲ ಕ್ರೀಡಾಪಟುಗಳಿಗೆ ಧನ ಸಹಾಯ ನಿರೀಕ್ಷಿಸಿದ್ದ ವಿಶೇಷ ಚೇತನರು ತೊಂದರೆ ಅನುಭವಿಸಿರುವುದು ಇದೀಗ ಬಹಿರಂಗವಾಗಿದೆ.

 

ವಿಧಾನಪರಿಷತ್‌ ಅಧಿವೇಶನದಲ್ಲಿ ಸದಸ್ಯ ಎನ್‌ ರವಿಕುಮಾರ್‌ ಅವರು ಕೇಳಿದ್ದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿರುವ ಸಚಿವ ಹಾಲಪ್ಪ ಆಚಾರ್‌ ಅವರು ಈ ಮಾಹಿತಿಯನ್ನು ಒದಗಿಸಿದ್ದಾರೆ.

 

2020-21ನೇ ಸಾಲಿನಲ್ಲಿ 7,314 ವಿಶೇಷ ಚೇತನರಿಗೆ 2,220.00 ಲಕ್ಷ ರು. ವೆಚ್ಚ ಮಾಡಿರುವ ಇಲಾಖೆಯು ಡಿಸೆಂಬರ್‌ ಅಂತ್ಯಕ್ಕೆ ಗುರುತಿಸಲಾಗಿದ್ದ ವಿಶೇಷ ಚೇತನ ಫಲಾನುಭವಿಗಳಿಗೆ ಪ್ರತಿಯಾಗಿ ಕೇವಲ 16 ಫಲಾನುಭವಿಗಳಿಗೆ ಮಾತ್ರವೇ 69.55 ಲಕ್ಷ ರು. ವೆಚ್ಚ ಮಾಡಿದೆ.

 

2021-22ನೇ ಸಾಲಿನ ಹಣಕಾಸು ವರ್ಷದ ಕ್ರಿಯಾ ಯೋಜನೆಯಲ್ಲಿ ವಿವಿಧ ಫಲಾನುಭವಿ ಆಧರಿತ ಯೋಜನೆಗಳಡಿ ಒಟ್ಟು 2,20.00 ಲಕ್ಷ ರು.ಗಳನ್ನು ಆಯವ್ಯಯದಲ್ಲಿ ಒದಗಿಸಲಾಗಿತ್ತು. ಒಟ್ಟು 8,435 ಫಲಾನುಭವಿಗಳನ್ನು ಗುರುತಿಸಲಾಗಿತ್ತು. ಈ ಪೈಕಿ 8,681 ಸಲಕರಣೆಗಳನ್ನು ವಿತರಿಸಿದೆ. ಅದೇ ರೀತಿ ಡಿಸೆಂಬರ್‌ 2021ರ ಅಂತ್ಯಕ್ಕೆ ಸಾಧನ ಸಲಕರಣೆ ಯೋಜನೆಯಡಿ 1,815 ಫಲಾನುಭವಿಗಳಿಗೆ ಹಾಗೂ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸುವ ಅಂಗವಿಕಲ ಕ್ರೀಡಾ ಪಟುಗಳಿಗೆ ಧನಸಹಾಯ ಮಾಡುವ ಸಾಧನ ಯೋಜನೆಯಡಿ 16 ಫಲಾನುಭವಿಗಳಿಗೆ ಸೌಲಭ್ಯ ನೀಡಲಾಗಿದೆ ಎಂದು ಉತ್ತರಿಸಿದ್ದಾರೆ.

 

ಸಾಧನ ಸಲಕರಣೆಗಳಿಗಾಗಿ 248.50 ಲಕ್ಷ ರು., ಲ್ಯಾಪ್‌ಟಾಪ್‌ ಒದಗಿಸಲು 399.50 ಲಕ್ಷ ರು., ಯಂತ್ರಚಾಲಿತ ದ್ವಿಚಕ್ರ ವಾಹನಗಳಿಗಾಗಿ 1,350.00 ಲಕ್ಷ ರು., ಶ್ರವಣ ದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ವಿತರಿಸಲು 72.00 ಲಕ್ಷ ರು., ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್‌ ಮೊಬೈಲ್‌, ಬ್ರೈಲ್‌ ವಾಚ್‌, ವಾಕಿಂಗ್‌ ಸ್ಟಿಕ್‌ ಇನ್ನಿತರೆ ಕಿಟ್‌ಗಳಿಗೆ 100.00 ಲಕ್ಷ ರು., ಸಾಧನೆ ಯೋಜನೆಯಡಿ 50.00 ಲಕ್ಷ ರು.ಗಳನ್ನು ಆಯವ್ಯಯದಲ್ಲಿ ಅನುದಾನ ನಿಗದಿಪಡಿಸಲಾಗಿತ್ತು.

 

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೆ ಯಂತ್ರಚಾಲಿತ ತ್ರಿಚಕ್ರ ವಾಹನಗಳನ್ನು ವಿತರಿಸಲು ಸಚಿವ ಮಾಧುಸ್ವಾಮಿ ಅವರ ಆಪ್ತ ಸಹಾಯಕರು ಲಂಚಕ್ಕೆ ಬೇಡಿಕೆ ಇರಿಸಿದ್ದರು. ಈ ಕುರಿತು ಫಲಾನುಭವಿಯೊಬ್ಬರು ಅಧಿಕಾರಿಯೊಬ್ಬರೊಂದಿಗೆ ನಡೆದಿದ್ದ ಸಂಭಾಷಣೆಯು ಸೋರಿಕೆಯಾಗಿದ್ದನ್ನು ಸ್ಮರಿಸಬಹುದು.

Hot this week

ಒಂದೇ ಜಾಗದಲ್ಲಿ ಎರಡು ಫ್ಲೈ ಓವರ್, ಶೇ.50ರಷ್ಟು ಕಾಮಗಾರಿಯಾಗಿದ್ದರೂ ಪೂರ್ಣ ಪಾವತಿ; ಬ್ಯಾಂಕ್‌ ಗ್ಯಾರಂಟಿ ಮುಟ್ಟುಗೋಲಿಲ್ಲ, ಗುತ್ತಿಗೆದಾರರಿಗೆ ಲಾಭ, ಬಿಬಿಎಂಪಿ ನಿಧಿಗೆ ನಷ್ಟ

ಬೆಂಗಳೂರು;  ಈಜಿಪುರ ಮೇಲ್ಸೇತುವೆ ಎಲಿವೇಟೆಡ್‌ ಕಾರಿಡಾರ್  ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ  ಪೂರ್ಣಗೊಳಿಸದ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...
Please Scan to make Your Contribution

Topics

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

Related Articles

Popular Categories

error: Content is protected !!