Wednesday | June 10, 2026 |

ವಸತಿರಹಿತರಿಗೆ ಜಮೀನು ಗುರುತಿಸದ ಸರ್ಕಾರ, ಕ್ರಿಕೆಟ್‌ ಅಸೋಸಿಯೇಷನ್‌ಗೆ 23.25 ಎಕರೆ ಗುತ್ತಿಗೆಗೆ ಪ್ರಸ್ತಾವನೆ

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಬಕ ಗ್ರಾಮದಲ್ಲಿ ಸರ್ಕಾರದ ವಶದಲ್ಲಿರುವ 39.23 ಎಕರೆ ಪೈಕಿ 23.25 ಎಕರೆಯನ್ನು ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ಗೆ 30 ವರ್ಷಗಳ ಅವಧಿಯವರೆಗೆ ಗುತ್ತಿಗೆ ನೀಡಲು ಅವಕಾಶವಿಲ್ಲವೆಂದು ಕಾನೂನು ಇಲಾಖೆಯು ನೀಡಿದ್ದ ಅಭಿಪ್ರಾಯವನ್ನು ಬದಿಗೆ ಸರಿಸಿರುವ ಕಂದಾಯ ಇಲಾಖೆಯು ಸಚಿವ ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

 

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯವರು (KSCA) ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಪಂದ್ಯ ನಡೆಸುವಂತಹ ನೂತನ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಲು 19 ಎಕರೆ ಭೂಮಿ ನೀಡುವ ಸಂಬಂಧದ ಪ್ರಸ್ತಾವನೆಯನ್ನು ಸಚಿವ ಸಂಪುಟಕ್ಕೆ ಮಂಡಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿರುವ ಬೆನ್ನಲ್ಲೇ ಕಬಕ ಗ್ರಾಮದಲ್ಲಿ ಇದೇ ಸಂಸ್ಥೆಗೆ 23.25 ಎಕರೆ ಗುತ್ತಿಗೆ ನೀಡಲು ಕಾನೂನು ಇಲಾಖೆಯು ಅಸಮ್ಮತಿ ವ್ಯಕ್ತಪಡಿಸಿರುವುದು ಮುನ್ನೆಲೆಗೆ ಬಂದಿದೆ. ಸಚಿವ ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಸಲು ಸಚಿವ ಆರ್‌ ಅಶೋಕ್‌ ಅವರು ಅನುಮೋದಿಸಿದ್ದಾರೆ. ಕಂದಾಯ ಇಲಾಖೆಯು ಸಲ್ಲಿಸಿರುವ ಸಚಿವ ಸಂಪುಟ ಟಿಪ್ಪಣಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

 

 

ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ನಾನಾ ಯೋಜನೆ ಜಾರಿಗೊಳಿಸಲು ಅಥವಾ ವಸತಿ ರಹಿತರಿಗೆ ವಸತಿ ನೀಡಲು ಜಮೀನು ಕೊರತೆ ಇದ್ದರೂ ತಾಲೂಕು ಆಡಳಿತವು ಕಂದಾಯ ಜಮೀನು ಗುರುತಿಸಿರಲಿಲ್ಲ. ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣ ಉದ್ದೇಶಕ್ಕಾಗಿ 23.25 ಎಕರೆಯನ್ನು ನೀಡಲು ಸಚಿವ ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಸಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.

 

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಹೋಬಳಿ ಕಬಕ ಗ್ರಾಮದಲ್ಲಿ ಸರ್ಕಾರದ ವಶದಲ್ಲಿ 39.23 ಎಕರೆ ಇದೆ. ಇಲ್ಲಿ ಎಕರೆಯೊಂದಕ್ಕೆ ಮಾರ್ಗಸೂಚಿ ಮೌಲ್ಯ 4,00,000 ರು. ಇದೆ. ಇದರ ಪ್ರಕಾರ 23.25 ಎಕರೆಗೆ 93,00,000 ರು.ಗಳಾಗಲಿದೆ. ಈ ಜಮೀನನ್ನು ಕೃಷಿಯೇತರ ಉದ್ದೇಶಕ್ಕೆ ಜಮೀನಿನ ಮಾರ್ಗಸೂಚಿ ಮೌಲ್ಯದ ಶೇ.2.50ರಂತೆ ವಾರ್ಷಿಕ ಗುತ್ತಿಗೆ ಮೊತ್ತವನ್ನು ವಿಧಿಸಿ ಮಂಜೂರು ಮಾಡಲು ಕಂದಾಯ ಇಲಾಖೆಯು ಪ್ರಸ್ತಾವನೆ ಸಲ್ಲಿಸಿದೆ. ಈ ಸಂಬಂಧ ಕಾನೂನು ಇಲಾಖೆಯು ಅಸಮ್ಮತಿ ವ್ಯಕ್ತಪಡಿಸಿದೆ.

 

‘ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ ಖಾಸಗಿ ಸಂಸ್ಥೆ ಆಗಿರುವುದರಿಂದ ನಿಯಮ 19ರ ಅಡಿ ಗುತ್ತಿಗೆ ನೀಡಲು ಅವಕಾಶವಿಲ್ಲ. ಕರ್ನಾಟಕ ಭೂ ಮಂಜೂರಾತಿ ನಿಯಮ 22ಎ(2)ರಲ್ಲಿ ನಗರ ಪೌರ ವ್ಯಾಪ್ತಿಯಲ್ಲಿ ಉದ್ದೇಶಿತ ಮಂಜೂರಾತಿ ಜಮೀನು ಬರುವುದಾದಲ್ಲಿ ಅಂತಹ ಜಮೀನನ್ನು ಮಂಜೂರು ಮಾಡಬಾರದೆಂದು ಸ್ಪಷ್ಟಪಡಿಡಿದೆ. ಪ್ರಸ್ತುತ ಪ್ರಕರಣದಲ್ಲಿ ಜಮೀನು ನಗರ ಪೌರ ವ್ಯಾಪ್ತಿಯಿಂದ ಕೇವಲ 4.50 ಕಿ ಮೀ. ದೂರದಲ್ಲಿರುವುದರಿಂದ ಮಂಜೂರಾತಿಗೆ ಅವಕಾಶವಿಲ್ಲ,’ ಎಂದು ಕಾನೂನು ಇಲಾಖೆಯು ತನ್ನ ಅಭಿಪ್ರಾಯ ನೀಡಿದೆ.

 

 

ಅಲ್ಲದೇ ಇದೇ ಅಭಿಪ್ರಾಯದಲ್ಲಿ’ಭೂಮಂಜೂರಾತಿ ನಿಯಮಗಳಲ್ಲಿ ಏನೇ ನಿಯಮಾವಳಿಗಳ ಅಡೆತಡೆಗಗಳಿದ್ದಾಗ್ಯೂ ಸರ್ಕಾರವು ನಿಯಮ 27ರ ಅಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಯುಕ್ತ ಸಂದರ್ಭಗಳಲ್ಲಿ ನಿಯಮಗಳನ್ನು ಸಡಿಲಿಸಿ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದೆ,’ಎಂದೂ ಪ್ರಸ್ತಾವಿಸಿದೆ.

 

ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಶನ್‌ (ಕೆಎಸ್‌ಸಿಎ) ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸಲು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪುತ್ತೂರನ್ನು ಆಯ್ಕೆ ಮಾಡಿಕೊಂಡಿತ್ತು.
ವಿಶ್ವದರ್ಜೆಯ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸುವ ಕನಸು ಹೊಂದಿರುವ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಶನ್‌ ಈ ಸಂಬಂಧ ಹಲವು ವರ್ಷಗಳಿಂದ ಶೋಧ ಕಾರ್ಯಾಚರಣೆ ನಡೆಸುತ್ತಿತ್ತು. ಅಸೊಸಿಯೇಶನ್‌ ಜತೆ ಸಂಯೋಜನೆ ಹೊಂದಿರುವ ಯೂನಿಯನ್‌ ಕ್ರಿಕೆಟರ್ಸ್‌ ಪುತ್ತೂರು ಎಂಬ ಸಂಸ್ಥೆಯು ಈ ವಿಚಾರದಲ್ಲಿ ಸಹಾಯ ಮಾಡಿದ್ದು, ಅದರಂತೆ ಕಬಕ ಗ್ರಾಮದ ಪೆರಿಯತ್ತೋಡಿ ಸಮೀಪದಲ್ಲಿ 25 ಎಕರೆ ಸರಕಾರಿ ಜಮೀನನ್ನು ಪತ್ತೆ ಹಚ್ಚಿತ್ತು.

 

2017ರ ಸೆಪ್ಟೆಂಬರ್‌ 28ರಂದು ಈ ಬಗ್ಗೆ ಪುತ್ತೂರು ತಹಸೀಲ್ದಾರ್‌ ಅವರು ಪುತ್ತೂರು ನಗರಸಭೆಗೆ ಪತ್ರ ಬರೆದು ಕಬಕ ಗ್ರಾಮದ 25 ಎಕರೆ ಸರಕಾರಿ ಜಮೀನನ್ನು ಕೆಎಸ್‌ಸಿಎಗೆ ಗುತ್ತಿಗೆ ಆಧಾರದಲ್ಲಿ ನೀಡುವ ಬಗ್ಗೆ ನಿರಾಕ್ಷೇಪಣ ಪತ್ರ ನೀಡುವಂತೆ ಮನವಿ ಮಾಡಿದ್ದರು.

 

ನಗರಸಭೆ ವ್ಯಾಪ್ತಿಯಲ್ಲಿ ನಾನಾ ಯೋಜನೆ ಜಾರಿಗೊಳಿಸಲು ಅಥವಾ ವಸತಿ ರಹಿತರಿಗೆ ವಸತಿ ನೀಡಲು ಜಮೀನನ ಕೊರತೆ ಇದ್ದರೂ ಇಲ್ಲಿಯವರೆಗೆ ತಾಲೂಕು ಆಡಳಿತ ಕಂದಾಯ ಜಮೀನು ಗುರುತು ಮಾಡಿ ನೀಡಿಲ್ಲ. ಈಗ ಕ್ರಿಕೆಟ್‌ ಸ್ಟೇಡಿಯಂಗೆ ಕೇಳಿದಾಗ ಅಷ್ಟು ಬೇಗ 25 ಎಕರೆ ಹುಡುಕಿ ಕೊಟ್ಟಿದ್ದಾದರೂ ಹೇಗೆ ಎಂದು ಸದಸ್ಯರು ಪ್ರಶ್ನಿಸಿದ್ದನ್ನು ಸ್ಮರಿಸಬಹುದು.

Hot this week

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಈಗಲ್‌ಟನ್‌ ರೆಸಾರ್ಟ್‌ನಿಂದ ಸರ್ಕಾರಿ ಜಮೀನು ಒತ್ತುವರಿ; 29 ವರ್ಷಗಳಾದರೂ ಪ್ರಕರಣ ಇತ್ಯರ್ಥವಾಗಿಲ್ಲ, 982 ಕೋಟಿಯೂ ವಸೂಲಾಗಿಲ್ಲ

ಬೆಂಗಳೂರು; ರಾಮನಗರ ತಾಲೂಕು ಬಿಡದಿ ಹೋಬಳಿ ಶ್ಯಾನುಮಂಗಲ, ಬಿಲ್ಲಕೆಂಪನಹಳ್ಳಿ, ಬಾನಂದೂರು ಗ್ರಾಮದ...
Please Scan to make Your Contribution

Topics

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಈಗಲ್‌ಟನ್‌ ರೆಸಾರ್ಟ್‌ನಿಂದ ಸರ್ಕಾರಿ ಜಮೀನು ಒತ್ತುವರಿ; 29 ವರ್ಷಗಳಾದರೂ ಪ್ರಕರಣ ಇತ್ಯರ್ಥವಾಗಿಲ್ಲ, 982 ಕೋಟಿಯೂ ವಸೂಲಾಗಿಲ್ಲ

ಬೆಂಗಳೂರು; ರಾಮನಗರ ತಾಲೂಕು ಬಿಡದಿ ಹೋಬಳಿ ಶ್ಯಾನುಮಂಗಲ, ಬಿಲ್ಲಕೆಂಪನಹಳ್ಳಿ, ಬಾನಂದೂರು ಗ್ರಾಮದ...

ಮಾಜಿ ಸಿಎಂ ಸಿದ್ದರಾಮಯ್ಯ, ಪಾರ್ವತಿ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಆರೋಪ; 2 ವರ್ಷದಲ್ಲಿ 16 ಬಾರಿ ವಿಚಾರಣೆ, ಜುಲೈ 9ಕ್ಕೆ ವಿಚಾರಣೆಗೆ ದಿನಾಂಕ ನಿಗದಿ

ಬೆಂಗಳೂರು;  ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾಗಿದ್ದ...

ಎಂಎಸ್‌ಐಎಲ್‌ನಲ್ಲಿ ಅಕ್ರಮ; ನಿವೃತ್ತ ಐಎಎಸ್‌ ಜಿ ಸಿ ಪ್ರಕಾಶ್‌ ಸೇರಿ 7 ಮಂದಿ ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗದ ಚಾರ್ಜ್‌ಶೀಟ್‌

ಬೆಂಗಳೂರು; ಮೈಸೂರು ಸೇಲ್ಸ್‌ ಇಂಟರ್ ನ್ಯಾ‍ಷನಲ್‌ ಲಿಮಿಟೆಡ್‌ನಲ್ಲಿ ನಡೆದಿದೆ ಎನ್ನಲಾದ ವಿವಿಧ...

Related Articles

Popular Categories

error: Content is protected !!