Tuesday | March 10, 2026 |

ಕೇವಲ 10 ತಿಂಗಳಲ್ಲಿ 23.36 ಕೋಟಿ ಅವ್ಯವಹಾರ; ಡಿಸಿಸಿ ಬ್ಯಾಂಕ್‌ಗಳಲ್ಲಿ ಅಕ್ರಮಗಳದ್ದೇ ಪಾರುಪತ್ಯ

Support THE-FILE

spot_img

ಬೆಂಗಳೂರು; ದಾಖಲಾತಿಗಳ ಪರಿಶೀಲನೆ ನಡೆಸದೆಯೇ ಸಾಲ ನೀಡಿರುವುದು, ಸಾಲ ನೀಡುವ ಮುನ್ನ ಅನುಮೋದನೆ ಪಡೆಯದಿರುವುದು ಸೇರಿದಂತೆ ಇನ್ನಿತರೆ ವಾಮಮಾರ್ಗಗಳ ಮೂಲಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳಲ್ಲಿ ಬಹುಕೋಟಿ ಮೊತ್ತದ ಸಾಲ ನೀಡುವ ಮೂಲಕ ಅಕ್ರಮಗಳನ್ನೆಸಗಿರುವುದನ್ನು ನಬಾರ್ಡ್‌ ಸಂಸ್ಥೆಯು ಪರಿಶೀಲನೆ ವೇಳೆಯಲ್ಲಿ ಪತ್ತೆ ಹಚ್ಚಿದೆ.

 

2022-23ನೇ ಸಾಲಿನ ಅಕ್ಟೋಬರ್‌ 11ರ ಅಂತ್ಯಕ್ಕೆ ಕೇವಲ ನಾಲ್ಕೇ ನಾಲ್ಕು ಡಿಸಿಸಿ ಬ್ಯಾಂಕ್‌ಗಳಲ್ಲಿ 23.36 ಕೋಟಿ ರು. ಅವ್ಯವಹಾರ ನಡೆದಿದೆ. ನಬಾರ್ಡ್‌ನ ಕರ್ನಾಟಕ ಪ್ರಾದೇಶಿಕ ಕೆಂದ್ರ ವ್ಯಾಪ್ತಿಯಲ್ಲಿನ 2022-23ನೇ ಸಾಲಿನ ಸಹಕಾರ ಬ್ಯಾಂಕ್‌ಗಳ ಆರ್ಥಿಕ ಸ್ಥಿತಿಗತಿ ಕುರಿತು 2022ರ ಅಕ್ಟೋಬರ್‌ 11ರಂದು ನಡೆದ ಉನ್ನತ ಅಧಿಕಾರಯುಕ್ತ ಸಮಿತಿ ಸಭೆಯಲ್ಲಿ ಡಿಸಿಸಿ ಬ್ಯಾಂಕ್‌ಗಳ ಒಟ್ಟಾರೆ ಹಣಕಾಸು ವಹಿವಾಟು ಮತ್ತು ಅವ್ಯವಹಾರದ ಸ್ಥಿತಿಗತಿ ಕುರಿತು ಚರ್ಚೆ ನಡೆದಿದೆ. ಈ ಸಭೆಯ ಕಾರ್ಯಸೂಚಿ ಪಟ್ಟಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

1 ಕೋಟಿ ರು.ಗೂ ಮೇಲ್ಪಟ್ಟು ನಡೆದ ವಹಿವಾಟಿನಲ್ಲಿ ನಾಲ್ಕು ಡಿಸಿಸಿ ಬ್ಯಾಂಕ್‌ಗಳಲ್ಲಿ ಅವ್ಯವಹಾರ ನಡೆದಿದೆ. ವಿಜಯಪುರ ಡಿಸಿಸಿ ಬ್ಯಾಂಕ್‌ನಲ್ಲಿ 3.15 ಕೋಟಿ, ಬೀದರ್‌ ಡಿಸಿಸಿ ಬ್ಯಾಂಕ್‌ನಲ್ಲಿ 1.93 ಕೋಟಿ, ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ 6.01 ಕೋಟಿ, ಬಾಗಲಕೋಟೆ ಡಿಸಿಸಿ ಬ್ಯಾಂಕ್‌ನಲ್ಲಿ 12.27 ಕೋಟಿ ರು. ಅವ್ಯವಹಾರ ನಡೆದಿರುವುದು ಸಭೆಯ ಕಾರ್ಯಸೂಚಿ ಪಟ್ಟಿಯಿಂದ ತಿಳಿದು ಬಂದಿದೆ.  ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳಲ್ಲಿ ಹಣಕಾಸು ದುರುಪಯೋಗವಾಗುತ್ತಿದ್ದರೂ ಸಚಿವ ಸೋಮಶೇಖರ್‌ ಅವರು ಈ ನಿಟ್ಟಿನಲ್ಲಿ ಗಂಭೀರ ಕ್ರಮ ಕೈಗೊಂಡಿಲ್ಲ ಮತ್ತು ಹೆಚ್ಚಿನ ತನಿಖೆಗೆ ಆಸಕ್ತಿ ವಹಿಸಿಲ್ಲ ಎಂದು ಗೊತ್ತಾಗಿದೆ.

 

ದಾಖಲಾತಿಗಳನ್ನು ಸರಿಯಾಗಿ ಪರಿಶೀಲನೆ ನಡೆಸದಿರುವುದು, ಸಾಲಕ್ಕೆ ಖಾತ್ರಿಯನ್ನು ಪಡೆಯದಿರುವುದು, ಸಾಲಕ್ಕೆ ಖಾತ್ರಿ ನೀಡಿರುವವರ ಕುರಿತು ಪರಿಶೀಲನೆ ನಡೆಸದೆಯೇ ಕೋಟ್ಯಂತರ ರುಪಾಯಿ ಸಾಲ, ಹಣಕಾಸು ವಹಿವಾಟು ನಡೆಸಲಾಗಿದೆ. ಆದರೂ ಬ್ಯಾಂಕ್‌ನ ಆಡಳಿತ ಮಂಡಳಿ ಮೌನ ವಹಿಸಿದೆ ಎಂಬ ಅಂಶವನ್ನು ಕಾರ್ಯಸೂಚಿ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

 

ಈ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳಲ್ಲಿ ಆಂತರಿಕ ಲೆಕ್ಕಪರಿಶೋಧನೆ ಕ್ರಮಬದ್ಧವಾಗಿ ನಡೆದಿಲ್ಲ. ಸಾಲ ಮಂಜೂರು ಮಾಡಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ದಾಖಲಾತಿಗಳನ್ನು ಬ್ಯಾಂಕ್‌ನ ಆಂತರಿಕ ಲೆಕ್ಕಪರಿಶೋಧಕರು ಪರಿಶೀಲನೆಗೆ ಒಳಪಡಿಸಿಲ್ಲ. ವ್ಯವಸ್ಥೆಯಲ್ಲಿನ ದೌರ್ಬಲ್ಯಗಳು ಮತ್ತು ಆಂತರಿಕ ಆಡಳಿತದಲ್ಲಿನ ಲೋಪ ದೋಷಗಳಿಂದಾಗಿ ಬ್ಯಾಂಕ್‌ಗಳ ಹಣಕಾಸು ವಹಿವಾಟಿನಲ್ಲಿ ಅವ್ಯವಹಾರಗಳು ನಡೆಯುತ್ತಿವೆ ಎಂದು ಕಾರ್ಯಸೂಚಿಯ ಪಟ್ಟಿಯಲ್ಲಿ ವಿವರಿಸಲಾಗಿದೆ.

 

ಭಾರತೀಯ ರಿಸರ್ವ್‌ ಬ್ಯಾಂಕ್‌ ಮತ್ತು ನಬಾರ್ಡ್‌ನ ಮಾರ್ಗಸೂಚಿಗಳಂತೆ ಬೀದರ್‌ ಡಿಸಿಸಿ ಬ್ಯಾಂಕ್‌,ಕಲ್ಬುರ್ಗಿ ಯಾದಗೀರ್‌, ಮೈಸೂರು, ತುಮಕೂರು ಡಿಸಿಸಿ ಸೇರಿದಂತೆ ರಾಜ್ಯದ ಹಲವು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳು ನಿಯಮಿತವಾಗಿ ಲೆಕ್ಕ ಪರಿಶೋಧನೆ ನಡೆಸುತ್ತಿಲ್ಲ. ಬ್ಯಾಲೆನ್ಸ್‌ ಶೀಟ್‌ಗಳನ್ನು ಸಂಬಂಧಿಸಿದ ಸಕ್ಷಮ ಪ್ರಾಧಿಕಾರಗಳಿಗೆ ಸಲ್ಲಿಸುತ್ತಿಲ್ಲ. 2021-22ನೇ ಸಾಲಿನ ಲೆಕ್ಕಪರಿಶೋಧನೆ ಮತ್ತು ಬ್ಯಾಲೆನ್ಸ್‌ ಶೀಟ್‌ಗಳನ್ನು 2022ರ ಜೂನ್‌ ಮೀರಿದರೂ ಸಲ್ಲಿಸಿಲ್ಲ ಎಂಬುದು ಕಾರ್ಯಸೂಚಿ ಪಟ್ಟಿಯಿಂದ ತಿಳಿದು ಬಂದಿದೆ.

 

ಅದೇ ರೀತಿ ಭಾರತೀಯ ರಿಸರ್ವ್‌ ಬ್ಯಾಂಕ್‌ ಅನುಮತಿ ಪಡೆಯದೇ ಕೆಲ ಸಹಕಾರಿ ಬ್ಯಾಂಕ್‌ಗಳು ಶಾಖೆಗಳನ್ನು ತೆರೆದಿದೆ. ಧಾರವಾಡದ ಕೆಸಿಸಿ ಬ್ಯಾಂಕ್‌ ಬ್ಯಾಹಟ್ಟಿ ಮತ್ತು ಬಂಕಾಪುರದಲ್ಲಿ ಕ್ರಮವಾಗಿ 2022ರ ಮೇ 13 ಮತ್ತು ಜೂನ್‌ 13ರಂದು ತೆರೆದಿದೆ. ಶಾಖೆಗಳನ್ನು ಆರಂಭಿಸುವ ಮುನ್ನ ಆರ್‌ಬಿಐನ ಅನುಮತಿ ಪಡೆದಿಲ್ಲ ಎಂಬುದು ಕಾರ್ಯಸೂಚಿ ಪಟ್ಟಿಯಿಂದ ಗೊತ್ತಾಗಿದೆ.

Hot this week

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

Topics

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

Related Articles

Popular Categories

spot_imgspot_img
error: Content is protected !!