Monday | March 9, 2026 |

ಅನಧಿಕೃತ ಮಾರಾಟಗಾರರಿಂದ ಖರೀದಿ; ಪ್ಲೈವುಡ್‌ ಶೀಟ್‌ ಮೇಲೆ ಮೀಟರ್‌ ಅಳವಡಿಸಿ 31.80 ಕೋಟಿ ಲೂಟಿ

Support THE-FILE

spot_img

ಬೆಂಗಳೂರು; ದೀನದಯಾಳ್‌ ಉಪಾಧ್ಯಾಯ ಗ್ರಾಮ ವಿದ್ಯುತ್‌ ಯೋಜನೆಯಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಕಳಪೆ ಗುಣಮಟ್ಟದ ಮೀಟರ್‌ ಬೋರ್ಡ್‌ಗಳನ್ನು ಅಳವಡಿಸಲಾಗಿತ್ತು. ಪ್ಲೈವುಡ್‌ ಶೀಟಿನ ಮೇಲೆ ಮೀಟರ್‌ಗಳನ್ನು ಅಳವಡಿಸುವ ಮೂಲಕ 31.80 ಕೋಟಿ ರು.ಗಳನ್ನು ಕೊಳ್ಳೆ ಹೊಡೆಯಲಾಗಿತ್ತು ಎಂಬುದು ಇದೀಗ ಬಹಿರಂಗವಾಗಿದೆ.

 

ದೀನದಯಾಳ್‌ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ ಜಾರಿಗಾಗಿ 31.80 ಕೋಟಿ ರು. ಮೌಲ್ಯದಲ್ಲಿ ಮೀಟರ್‌ಗಳ ಖರೀದಿಯಲ್ಲಿ ನಡೆದಿರುವ ಅಕ್ರಮಗಳನ್ನು ಹೊರಗೆಡವಿರುವ ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ ವರದಿಯು ಯೋಜನೆ ಅನುಷ್ಠಾನದ ಎಲ್ಲಾ ಮಗ್ಗುಲುಗಳನ್ನು ಅನಾವರಣಗೊಳಿಸಿದೆ.

 

ಬೆಂಗಳೂರು ನಗರ ಗ್ರಾಮಾಂತರ ಜಿಲ್ಲೆ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ ಮತ್ತು ತುಮಕೂರು ಜಿಲ್ಲೆಯಲ್ಲಿನ 1,05,990 ಕುಟುಂಬಗಳ ಮನೆಗಳ ವಿದ್ಯುದ್ದೀಕರಣಕ್ಕೆ ಮುಕ್ತ ಮಾರುಕಟ್ಟೆಯಲ್ಲಿ ಅನುಮೋದಿತಗೊಂಡಿರುವ ಮಾರಾಟಗಾರರಿಂದ ಮೀಟರ್‌ ಸೇರಿದಂತೆ ಇನ್ನಿತರೆ ಉಪಕರಣಗಳನ್ನು ಖರೀದಿಸಬೇಕಿದ್ದ ಇಂಧನ ಇಲಾಖೆಯು ಅನುಮೋದಿತಗೊಂಡಿರದ/ಅನಧಿಕೃತ ಮಾರಾಟಗಾರರಾದ ಎಲ್‌ವಿಎಚ್‌ ಎನರ್ಜಿ ಪ್ರೈವೈಟ್‌ ಲಿಮಿಟೆಡ್‌, ಸೌತ್‌ ಏಷಿಯಾ ಇಂಪೆಕ್ಸ್‌ (ಇಂಡಿಯಾ) ಮಾರಾಟಗಾರರಿಂದ ಖರೀದಿಸಿತ್ತು. ಅನಧಿಕೃತ ಮಾರಾಟಗಾರರಿಂದ ಉಪಕರಣಗಳನ್ನು ಖರೀದಿಸುವ ಮೂಲಕ ಗುತ್ತಿಗೆ ಷರತ್ತನ್ನೂ ಮಾರ್ಗಪಲ್ಲಟಗೊಳಿಸಲಾಗಿತ್ತು ಎಂಬುದನ್ನು ಸಿಎಜಿ ಲೆಕ್ಕಪರಿಶೋಧನೆಯು ಪತ್ತೆ ಮಾಡಿದೆ.

 

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಪೈಕಿ ತುಮಕೂರಿನ ಕೊರಟಗೆರೆ, ಸಿರಾ ಹಾಗೂ ತುಮಕೂರು ಜಿಲ್ಲೆಯ ಹಲವು ತಾಲೂಕುಗಳ ಫಲಾನುಭವಿಗಳ ಮನೆಗಳ ಸಮೀಕ್ಷೆ ಮಾಡಿದ್ದ ಸಮಯದಲ್ಲಿ ಮೀಟರ್‌ ಬೋರ್ಡ್‌ಗಳಿಗಾಗಿ ನಿಕೃಷ್ಟ ಗುಣಮಟ್ಟದ ಸಾಮಗ್ರಿಗಳನ್ನು ಬಳಸಲಾಗಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

 

‘ಮೀಟರ್‌ ಬೋರ್ಡ್‌ಗಳು ಉತ್ತಮ ಗುಣಮಟ್ಟದ ಮರದಿಂದ ಅಥವಾ ಫೈಬರ್‌ ಗ್ಲಾಸ್‌ ರೀಇನ್ಫೋರ್ಸ್‌ಡ್‌ ಪಾಲಿಸ್ಟರ್‌ ಶೀಟ್‌ಗಳ ಮೌಲ್ಡಿಂಗ್‌ ಕಾಂಪೌಂಡ್‌ನಿಂದ ತಯಾರಿಸಿರಬೇಕು ಎಂದು ಗುತ್ತಿಗೆಯಲ್ಲಿ ನಿರ್ದಿಷ್ಟಪಡಿಸಲಾಗಿತ್ತು. ಆದರೂ ಫ್ಲೈವುಡ್‌ ಶೀಟ್‌ನ ಮೇಲೆ ಸ್ಥಿರಿಕರಿಸಲಾಗಿತ್ತು. ಮತ್ತು ಅವುಗಳು ಜಖಂಗೊಂಡಿದ್ದ ಸ್ಥಿತಿಯಲ್ಲಿದ್ದವು,’ ಎಂದು ವರದಿಯಲ್ಲಿ ವಿವರಿಸಲಾಗಿದೆ.

 

ಅದೇ ರೀತಿ ಪಿವಿಸಿ ಪೈಪು, ಇನ್‌ಸ್ಯೂಲೇಟೆಡ್‌ ಕೇಬಲ್‌, ಆಂತರಿಕ ವೈರಿಂಗ್‌ ಕಿಟ್‌, ಎಂಎಸ್‌ ಕಂಬಗಳಗಳು ಉತ್ತಮ ಗುಣಮಟ್ಟದಿಂದ ಕೂಡಿರಲಿಲ್ಲ. ಅನುಮೋದನೆಯನ್ನು ಹೊಂದಿರದ/ಅನಧಿಕೃತ ಮಾರಾಟಗಾರರಿಂದ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಸಿಂಗಲ್‌ ಫೀಸ್‌ ವಿದ್ಯುತ್‌ ಮೀಟರ್‌ ಹಾಗೂ ಮೀಟರ್‌ ಬಾಕ್ಸ್‌ಗಳನ್ನೊಳಗೊಂಡ ಕಿಟ್‌ಗಳನ್ನು ಪೂರೈಸಲಾಗಿತ್ತು.

 

ಈ ಸಂಬಂಧ ಇಂಧನ ಇಲಾಖೆಯು ‘ ಸಿಂಗಲ್‌ ಫೇಸ್‌ ವಿದ್ಯುತ್‌ ಮೀಟರ್‌ ಮತ್ತು ಮೀಟರ್‌ ಬಾಕ್ಸ್ ಹೊರತುಪಡಿಸಿದಂತೆ ನಿರ್ದಿಷ್ಟ ಅನುಮೋದಿತ ಮಾರಾಟಗಾರರುಗಳು ಇರಲಿಲ್ಲ. ಹೀಗಾಗಿ ಇತರೆ ಐಟಂಗಳನ್ನು ಮುಕ್ತ ಮಾರುಕಟ್ಟೆಯಿಂದ ಖರೀದಿಸಬೇಕಾಗಿತ್ತು. ಎಚ್‌ಟಿ ಮೀಟರಿಂಗ್‌ ಕ್ಯೂಬಿಕಲ್ಸ್‌ಗಳ ಪರೀಕ್ಷಣೆಗೆ ಸಂಬಂಧಿಸಿದಂತೆ ಸಾಮಗ್ರಿಯ ಮೂಲ ಮಾದರಿಯನ್ನು ಫ್ಯಾಕ್ಟರಿ ಸ್ಥಳದಲ್ಲಿ ಮಾಡಲಾಗಿತ್ತು. ಹಾಗೂ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಬೇಕಾಗಿದ್ದರಿಂದ 90 ಹೆಚ್‌ಟಿ ಕ್ಯೂಬಿಕಲ್‌ಗಳಿಗೆ ಪರೀಕ್ಷಣೆಯನ್ನು ಮನ್ನಾ ಮಾಡಲಾಗಿತ್ತು,’ ಎಂದು ಸರ್ಕಾರವು ನೀಡಿದ್ದ ಉತ್ತರವನ್ನು ಸಿಎಜಿ ಒಪ್ಪಿರಲಿಲ್ಲ.

Hot this week

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

Topics

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

Related Articles

Popular Categories

spot_imgspot_img
error: Content is protected !!