Thursday | April 30, 2026 |

ಶ್ರೀಗಂಧ ನೀತಿ ಪರಿಷ್ಕರಿಸಿ ಸಚಿವ ಸಂಪುಟಕ್ಕೆ ಮಂಡನೆ; ಕಾರ್ಪೋರೇಟ್‌ ಜಂಟಿ ಉದ್ಯಮಕ್ಕೆ ರತ್ನಗಂಬಳಿ

ಬೆಂಗಳೂರು; ಖಾಸಗಿ ಭೂ ಮಾಲೀಕರು, ಶ್ರೀಗಂಧ ಬೆಳೆಗಾರ-ಕಂಪನಿಗಳ (ಕಾರ್ಪೋರೇಟ್‌) ಜಂಟಿ ಉದ್ಯಮ ಸೇರಿದಂತೆ ರಾಜ್ಯದಲ್ಲಿ ಖಾಸಗಿ ಶ್ರೀಗಂಧದ ಕೃಷಿ ನೀತಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶ್ರೀಗಂಧ ನೀತಿಯನ್ನು ಸರ್ಕಾರವು ಪರಿಷ್ಕರಿಸಿದೆ.

 

ರಾಜ್ಯದಲ್ಲಿ ಶ್ರೀಗಂಧ ಮರದ ಸಂಪನ್ಮೂಲವು ಕಡಿಮೆಯಾಗುತ್ತಿದೆ ಎಂಬ ಕಾರಣವನ್ನು ಮುಂದಿರಿಸಿಕೊಂಡು ನಗರ ಪ್ರದೇಶಗಳ ಹತ್ತಿರದಲ್ಲಿರುವ ಭೂಮಾಲೀಕರು, ಕೃಷಿ ಕಾರ್ಮಿಕರು ಲಭ್ಯತೆ ಇಲ್ಲದಿರುವುದರಿಂದ ಕಾರ್ಪೋರೇಟ್‌ ಜಂಟಿ ಉದ್ಯಮದಲ್ಲಿ ಶ್ರೀಗಂಧ ಮರದ ಸಾಗುವಳಿ ಪ್ರದೇಶ ಹೆಚ್ಚಿಸಲು ಮುಂದಾಗಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯು ಈ ಸಂಬಂಧ ಸಚಿವ ಸಂಪುಟಕ್ಕೆ (ಇ-ಕಡತ ಸಂಖ್ಯೆ;ಅಪಜೀ 32 ಎಫ್‌ಡಿಪಿ 2020-2022) ಪ್ರಸ್ತಾವನೆ ಸಲ್ಲಿಸಿದೆ. ಇದನ್ನು  ಸಚಿವ ಸಂಪುಟದ ಮುಂದೆ ಮಂಡಿಸಲು ಅರಣ್ಯ ಖಾತೆಯ ಪ್ರಭಾರವನ್ನೂ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನುಮೋದಿಸಿದ್ದಾರೆ.  ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

‘ಸುಧಾರಿತ ಸಸಿಗಳ ಸ್ಟಾಕ್‌ ಉತ್ಪಾದನೆ, ಅರಣ್ಯ ಸಸ್ಯಕ್ಷೇತ್ರಗಳಲ್ಲಿ ಶ್ರೀಗಂಧ ಮರದ ಸಸಿಗಳ ಉತ್ಪಾದನೆ ಹೆಚ್ಚಳ, ಖಾಗಿ ಸಸ್ಯ ಕ್ಷೇತ್ರಗಳಲ್ಲಿ ಶ್ರೀಗಂಧದ ಸಸಿಗಳ ಉತ್ಪಾದನೆಗೆ ಪ್ರೋತ್ಸಾಹ, ಶ್ರೀಗಂಧ ಮರಗಳ ರಕ್ಷಣೆಯ ಕ್ರಮಗಳ ಸುಧಾರಣೆ, ಅರಣ್ಯ ಪ್ರದೇಶಗಳಲ್ಲಿ ಶ್ರೀಗಂಧದ ನೆಡುತೋಪುಗಳು, ಶ್ರೀಗಂಧ ತೋಟಗಳ ಗುರುತಿಸುವಿಕೆ, ರಕ್ಷಣೆ, ಖಾಸಗಿ ಭೂ ಮಾಲೀಕರು, ರೈತರಿಗಾಗಿ ಕಾರ್ಯನೀತಿ, ಸುಧಾರಿತ ಕೃಷಿ ಮಾದರಿ, ಶ್ರೀಗಂಧ ಬೆಳೆಗಾರ-ಕಂಪನಿಗಳ (ಕಾರ್ಪೋರೇಟ್‌) ಜಂಟಿ ಉದ್ಯಮ, ಶ್ರೀಗಂಧ ಬೆಳೆಗಾರರ ಸಹಕಾರ ಸಂಘದ ಮೂಲಕ ಕ್ಲಸ್ಟರ್‌ ಅಭಿವೃದ್ಧಿ, ಖಾಸಗಿ ಶ್ರೀಗಂಧ ಎಸ್ಟೇಟ್‌ಗಳಿಗೆ ನೆರವು,’ ನೀಡಲು ಇಲಾಖೆಯು ಹೊಸ ನೀತಿಯಲ್ಲಿ ಪ್ರಸ್ತಾಪಿಸಿದೆ.

 

ಸಚಿವ ಸಂಪುಟಕ್ಕೆ ಮಂಡನೆಯಾಗಿರುವ ಪ್ರಸ್ತಾವನೆ

 

ಅದೇ ರೀತಿ ಶ್ರಿಗಂಧ ಮರದ ಕಟಾವು, ಸಾಗಾಣಿಕೆ, ಮಾರಾಟ, ಮರ ಕಡಿಯುವ ಮತ್ತು ಸಾಗಣೆ ಪ್ರಕ್ರಿಯೆಗಳ ಸರಳೀಕರಣಕ್ಕಾಗಿ ಆನ್ಲೈನ್‌ ವ್ಯವಸ್ಥೆ, ಶ್ರೀಗಂಧ ಮರದ ವರ್ಗೀಕರಣದ ಸರಳೀಕರಣ, ಶ್ರೀಗಂಧ ಮರವನ್ನು ಪರಿವರ್ತಿಸುವ ವಿಷಯದಲ್ಲಿ ಸಾಮರ್ಥ್ಯ ವರ್ಧನೆ, ಉತ್ತೇಜನ, ಇ-ಮಾರ್ಕೇಂಟಿಂಗ್‌ ಮೂಲಕ ಕುಶಲ ಕಲಾವಿದರು ತಯಾರಿಸಿದ ಶ್ರೀಗಂಧ ಕರಕುಶಲ ವಸ್ತುಗಳ ಮಾರಾಟ, ಉದ್ದೇಶಿತ ಸಾಂಸ್ಥಿಕ ಮತ್ತು ಮಾನಿಟಿರಿಂಗ್‌ ಇತ್ಯಾದಿಗಳನ್ನೂ ನೂತನ ನೀತಿಯಲ್ಲಿ ಸೇರ್ಪಡೆಗೊಳಿಸಲಾಗಿದೆ.

 

‘ಶ್ರೀಗಂಧದ ಕುರಿತ ನೀತಿಯನ್ನು ರಾಜ್ಯದಲ್ಲಿ ಖಾಸಗಿ ಶ್ರೀಗಂಧದ ಕೃಷಿಗೆ ಅನುಕೂಲವಾಗುವಂತೆ ಪರಿಷ್ಕರಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಶ್ರೀಗಂಧದ ಮರಗಲ ಕಟಾವು, ಸಾಗಾಣೀಕೆ ಮತ್ತು ಮಾರಾಟ ಮುಂತಾದ ಪ್ರಕ್ರಿಯೆಗಳಿಗೆ ಕರ್ನಾಟಕ ಅರಣ್ಯ ನಿಯಮಗಳು 1969ರಲ್ಲಿನ ನಿಬಂಧನೆಗಳಣ್ನು ಸರಳೀಕರಣಗೊಳಿಸಿ ಅವಶ್ಯ ತಿದ್ದುಪಡಿಗಳನ್ನು ತರಲು ಈ ಟಿಪ್ಪಣಿಯಲ್ಲಿ ಪ್ರಸ್ತಾಪಿಸಲಾಗಿದೆ,’ ಎಂದು ಇಲಾಖೆಯು ತಿಳಿಸಿದೆ.

 

ಟಿಪ್ಪು ಸುಲ್ತಾನ್‌ ಆಡಳಿತ ಸಮಯದಲ್ಲಿ ಶ್ರೀಗಂಧ ಮರವನ್ನು ರಾಯಲ್‌ ಟ್ರೀ ಎಂದು ಘೋಷಿಸಲಾಗಿತ್ತು. 1792ರ ರಾಜ್ಯ ಬಜೆಟ್‌ನಲ್ಲಿ ಶ್ರಿಗಂಧವನ್ನು ಆರ್ಥಿಕತೆಯ ಪ್ರಮುಖ ಮೂಲವಾಗಿ ಪರಿಗಣಿಸಲಾಗಿತ್ತು. ವಾಣಿಜ್ಯ ಮಹತ್ವ ಹೊಂದಿರುವ ಶ್ರೀಗಂಧವು 16 ಪ್ರಭೇದಗಳನ್ನು ಒಳಗೊಂಡಿದೆ. ಜಗತ್ತಿನ ಒಟ್ಟು ಶ್ರೀಗಂಧ ಉತ್ಪಾದನೆಯ ಪೈಕಿ ಶೇ.85ರಷ್ಟು ಭಾರತ ದೇಶದಲ್ಲಿ ಉತ್ಪಾದನೆಯಾಗುತ್ತಿದೆ.

 

ಮಾರುಕಟ್ಟೆ ದರದ ಪ್ರಲೋಭನೆಯಿಂದಾಗಿ ಶ್ರೀಗಂಧ ಕಳ್ಳಸಾಗಾಣಿಕೆಯಿಂದಾಗಿ ಶ್ರೀಗಂಧ ಮರಗಳು ವಿನಾಶದ ಅಂಚಿಗೆ ಬಂದಿವೆ. ಕಳೆದ 25 ವರ್ಷಗಳಿಂದ ಶ್ರೀಗಂಧದ ಉತ್ಪಾದನೆಯು ಪೂರ್ಣ ಪ್ರಮಾಣದಲ್ಲಿ ಕುಂಠಿತವಾಗಿದೆ.

Hot this week

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

Topics

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

ವರ್ಗಾವಣೆ ರದ್ದುಗೊಳಿಸಲು ತಲಾ 20 ಲಕ್ಷಕ್ಕೆ ಬೇಡಿಕೆ ಆರೋಪ; ಟೆಂಡರ್ ಕಮಿಷನ್ ಆಪಾದನೆ ಬೆನ್ನಲ್ಲೇ ಕರೀಗೌಡರ ವಿರುದ್ಧ ದೂರು

ಬೆಂಗಳೂರು; ಒಂದೆಡೆ ಮಂಜೂರಾಗಿರುವ ಹುದ್ದೆಗಳನ್ನು  ಭರ್ತಿ ಮಾಡುತ್ತಿಲ್ಲ, ಶೇ. 40ರಷ್ಟು ಹುದ್ದೆಗಳು...

ಈಜಿಪುರ ಮೇಲ್ಸೇತುವೆ ಕಾಮಗಾರಿ; ಪರಿಷ್ಕೃತ ಅಂದಾಜಿನಲ್ಲಿಯೇ ಲೋಪ ಪತ್ತೆ, 8.80 ಕೋಟಿ ಮೊತ್ತಕ್ಕೆ ಲೆಕ್ಕ ಪರಿಶೋಧಕರ ಆಕ್ಷೇಪಣೆ

ಬೆಂಗಳೂರು;  ಈಜಿಪುರ ಎಲಿವೇಟೆಡ್ ಕಾಮಗಾರಿಗೆ ಸಂಬಂಧಿಸಿದಂತೆ ಬೃಹತ್‌ ಬೆಂಗಳೂರು ಮಹಾನಗರಪಾಲಿಕೆಯು ಮಾಡಿದ್ದ...

Related Articles

Popular Categories

error: Content is protected !!