Saturday | March 7, 2026 |

ಬಹುಗ್ರಾಮದಲ್ಲಿ ಬಹುಕೋಟಿ ಭ್ರಷ್ಟಾಚಾರ; ಆರೋಪಿ ಇಂಜಿನಿಯರ್‌ಗಳ ವಿರುದ್ಧ ಕ್ರಮಕ್ಕೆ ಮೀನಮೇಷ

Support THE-FILE

spot_img

ಬೆಂಗಳೂರು; ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಸಂಸ್ಕರಿಸಲಾದ ನೀರನ್ನು ಗುರುತ್ವಾಕರ್ಷಣೆ ಮೂಲಕ ಹರಿಸುವ ಯೋಜನೆಗೆ ಕೋಟ್ಯಂತರ ರುಪಾಯಿ ಖರ್ಚು ಮಾಡಿದ್ದರೂ ಗ್ರಾಮಗಳಿಗೆ ನೀರು ಪೂರೈಕೆ ಮಾಡುವಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಸರ್ಕಾರವು ಮೀನಮೇಷ ಎಣಿಸುತ್ತಿದೆ.

 

ಉಪ ವಿಭಾಗದ ಮುಖ್ಯಸ್ಥರು ಮತ್ತು ವಿಭಾಗದ ಮುಖ್ಯಸ್ಥರ ಮೂಲಕವೇ ಈ ಯೋಜನೆಯ ಅನುಷ್ಠಾನವು ನಡೆಯಬೇಕಿದ್ದರೂ ಸಹ ಇವರಿಗಿಂತ ಕೆಳದರ್ಜೆಯ ಅಧಿಕಾರಿ, ನೌಕರರು ನಿಭಾಯಿಸಿರುವ ಕಾರಣ ಬಾಗಲಕೋಟೆ ಜಿಲ್ಲೆಯೊಂದರ 13 ಗ್ರಾಮಗಳೊಂದರಲ್ಲೇ 150 ಲಕ್ಷ ರು. ಆರ್ಥಿಕ ಹೊರೆಯುಂಟಾಗಿದೆ.

 

ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದ ಅಧಿಕಾರಿಗಳ ವಿರುದ್ಧ ನಡೆದಿದ್ದ ಇಲಾಖೆ ವಿಚಾರಣೆಯಲ್ಲಿ ಆರೋಪವು ಸಾಬೀತಾಗಿದೆ. ಆದರೂ ಸರ್ಕಾರವು ದೋಷಾರೋಪಣೆ ಜಾರಿಯಲ್ಲಿಯೇ ಕಾಲಹರಣ ಮಾಡಿ ಸಕಾಲದಲ್ಲಿ ಕ್ರಮಕೈಗೊಳ್ಳುತ್ತಿಲ್ಲ. ಹೀಗಾಗಿ ಆರೋಪಿತ ಅಧಿಕಾರಿಗಳು ಯಾವುದೇ ಶಿಸ್ತು ಕ್ರಮವನ್ನು ಅನುಭವಿಸದೆಯೇ ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ. ಅಲ್ಲದೆ ಇಂತಹ ಅಧಿಕಾರಿಗಳಿಂದ ಹಣವನ್ನು ವಸೂಲು ಮಾಡುವಲ್ಲಿಯೂ ವಿಫಲರಾಗುತ್ತಿರುವುದು ಇದೀಗ ಬಹಿರಂಗವಾಗಿದೆ.

 

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕು ಸೇರಿದಂತೆ ರಾಜ್ಯದಾದ್ಯಂತ ಹಲವು ಜಿಲ್ಲೆಗಳಲ್ಲಿ ಇಂತಹ ಪ್ರಕರಣಗಳು ಸಂಭವಿಸಿರುವುದು ಬೆಳಕಿಗೆ ಬಂದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮುಖ್ಯ ಇಂಜಿನಿಯರ್‌ಗಳಿಗೆ ಹಲವು ಪತ್ರಗಳನ್ನು ಬರೆಯುತ್ತಲೇ ಇದೆ. ಆದರೂ ಯಾವ ಕ್ರಮವೂ ಜರುಗಿಲ್ಲ ಎಂದು ತಿಳಿದು ಬಂದಿದೆ.

 

ಬಾಗಲಕೋಟೆಯ ಬಾದಾಮಿ ತಾಲೂಕಿನ ಕಟೆಗೇರಿ ಮತ್ತಿತರ 13 ಗ್ರಾಮಗಳಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆ ಸಂಸ್ಕರಿಸಲಾದ ನೀರನ್ನು ಗುರುತ್ವಾಕರ್ಷಣೆ ಮೂಲಕ ಹರಿಸುವ ಕಾಮಗಾರಿಗೆ ಮಂಜೂರಾಗಿದ್ದ ಸಂಪೂರ್ಣ ಅನುದಾನ ವೆಚ್ಚವಾಗಿತ್ತು. ಆದರೆ ಯೋಜನೆ ವ್ಯಾಪ್ತಿಯಲ್ಲಿನ ಎಲ್ಲಾ ಗ್ರಾಮಗಳಿಗೆ ನೀರನ್ನು ಒದಗಿಸುವಲ್ಲಿ ಕಿರಿಯ ಇಂಜಿನಿಯರ್‌ಗಳು ವಿಫಲರಾಗಿದ್ದರು. ಈ ಸಂಬಂಧ ಕ್ರಮಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌ ಕೆ ಅತೀಕ್‌ ಅವರು ಯೋಜನೆಯ ಮುಖ್ಯ ಇಂಜನಿಯರ್‌ಗೆ 2022ರ ಜೂನ್‌ 27ರಂದು ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಬಾದಾಮಿ ತಾಲೂಕಿನಲ್ಲಿ ಯೋಜನೆ ಅನುಷ್ಠಾನದಲ್ಲಿ ವಿಫಲರಾಗಿದ್ದ ಕಿರಿಯ ಇಂಜಿನಿಯರ್‌ಗಳಾದ ಎಂ ಆರ್‌ ಚಿತ್ತರಗಬಿ, ಎಂಹೆಚ್‌ ತೋಟಗೇರ ಸೇರಿದಂತೆ ಇನ್ನಿತರ ಅಧಿಕಾರಿಗಳು ಭಾಗಿಯಾಗಿದ್ದರು. ಇದರಲ್ಲಿ ಭಾಗಿ ಆಗಿದ್ದ ಕೆಲವು ಇಂಜಿನಿಯರ್‌ಗಳು, ಅಧಿಕಾರಿಗಳು ಮತ್ತು ನೌಕರರು ಸೇವೆಯಿಂದಲೇ ನಿವೃತ್ತರಾಗಿದ್ದಾರೆ. ಅಲ್ಲದೆ ಈ ಪ್ರಕರಣವು 2011ಕ್ಕೂ ಹೆಚ್ಚು ಪೂರ್ವದಲ್ಲಿ ನಡೆದ ಘಟನೆಯಾದ ಕಾರಣ ಅವರುಗಳ ವಿರುದ್ಧ ಇಲಾಖೆ ವಿಚಾರಣೆಯನ್ನೂ ಕೈಗೊಳ್ಳಲು ಸಾಧ್ಯವಾಗಿಲ್ಲ ಎಂಬ ಸಂಗತಿಯು ಪತ್ರದಿಂದ ತಿಳಿದು ಬಂದಿದೆ.

 

ಪ್ರಕರಣದ ವಿವರ

 

ಬಾದಾಮಿ ತಾಲೂಕಿನ ಕಟಗೇರಿ ಮತ್ತು ಇತರೆ 13 ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು 7.21 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಗುತ್ತಿಗೆದಾರರು ನಿರ್ಮಿಸಿದ್ದ ಎಂಬಿಟಿ ಗ್ರೌಂಡ್‌ ಲೆವೆಲ್‌ 598.48 ಇತ್ತು. ಅನುಮೋದಿತ  ವಿನ್ಯಾಸಕ್ಕಿಂತ 26.52 ಮೀಟರ್‌ನಷ್ಟು ಕಡಿಮೆ ಇತ್ತು. ಹಾಗೂ ವಿನ್ಯಾಸದಲ್ಲಿ ನಿಗದಿಪಡಿಸಿದ್ದ ಎತ್ತರಕ್ಕಿಂತ 29 ಮೀರ್‌ ಕೆಳಮಟ್ಟದಲ್ಲಿ ನಿರ್ಮಾಣವಾಗಿತ್ತು. ವಿನ್ಯಾಸದಲ್ಲಿನ ಇಂತಹ ವ್ಯತ್ಯಾಸದಿಂದಾಗಿ 14 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜಿನಿಂದ ವಂಚಿತವಾಗಿತ್ತು ಎಂಬ ಸಂಗತಿಯು ಪತ್ರದಿಂದ ಗೊತ್ತಾಗಿದೆ.

 

ಕಾಮಗಾರಿಯನ್ನು ಮಂಜೂರಾದ ಅಂದಾಜಿನ ಅನುಸಾರ ಅನುಷ್ಠಾನಗೊಳಿಸಿಲ್ಲ. ಹೀಗಾಗಿ ಕಾಮಗಾರಿಯನ್ನು ಪುನಃ ಅಭಿವೃದ್ಧಿಪಡಿಸಲು 150 ಲಕ್ಷ ರು. ಅನುದಾನ ವೆಚ್ಚವಾಗಿತ್ತು. ಇದು ಅರ್ಥಿಕ ನಷ್ಟ ಎಂದು ಆರೋಪಣೆ ಪಟ್ಟಿಯಲ್ಲಿ ನಮೂದಿಸಲಾಗಿತ್ತು. ಇದಕ್ಕೆ ಸಂಬಂಧಿಸಿದ ನೌಕರರು ಸಂಪೂರ್ಣ ಜವಾಬ್ದಾರರಾಗಿದ್ದರು. ಹಾಗೆಯೇ ಕಾಮಗಾರಿಯ ಅನುಷ್ಠಾನದ ಜವಾಬ್ದಾರಿ ಹೊಂದಿದ್ದ ಅಧಿಕಾರಿಗಳ ಪೈಕಿ ಅತೀ ಕಡಿಮೆ ದರ್ಜೆಯ ನೌಕರರಿದ್ದರು.

 

ಕಾಮಗಾರಿಗಳ ಅನುಷ್ಠಾನದ ಸ್ಥಳ ಗುರುತಿಸುವ ಜವಾಬ್ದಾರಿಯು ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ಮತ್ತು ವಿಭಾಗದ ಇಂಜಿನಿಯರ್‌ಗಳ ಮೇಲೆ ಇದೆ. ಈ ರೀತಿ ಸ್ಥಳ ನಿಗದಿಪಡಿಸುವುದು ಮತ್ತು ಕಾಮಗಾರಿಯು ಮಂಜೂರಾದ ಅಂದಾಜು ಮತ್ತು ವಿನ್ಯಾಸದ ಅನುಸಾರ ಪೂರ್ಣಗೊಂಡಿದೆಯೇ ಇಲ್ಲವೇ ಎಂಬುದನ್ನು ಸಂಪೂರ್ಣವಾಗಿ ಪರಿಶೀಲಿಸುವ ಜವಾಬ್ದಾರಿಯು ಸಹ ಕಿರಿಯ ಇಂಜಿನಿಯರ್‌ಗಳಿಗಿಂತ ಉಪ ವಿಭಾಗದ ಮುಖ್ಯಸ್ಥರು ಮತ್ತು ವಿಭಾಗದ ಮುಖ್ಯಸ್ಥರ ಮೇಲೂ ಇರುತ್ತದೆ. ಆದರೆ ಕೆಳ ದರ್ಜೆ ಅಧಿಕಾರಿ, ನೌಕರರಿಂದ ಈ ಕಾಮಗಾರಿಯು ನಡೆದು  150 ಲಕ್ಷ ರು. ಆರ್ಥಿಕ ಹೊರೆಗೆ ಕಾರಣರಾಗಿದ್ದಾರೆ ಎಂಬ ಅಂಶವು ಪತ್ರದಿಂದ ತಿಳಿದು ಬಂದಿದೆ.

 

ಕಳೆದ ಕೆಲವು ದಶಕಗಳಲ್ಲಿ ಗ್ರಾಮೀಣ ನೀರು ಮತ್ತು ನೈರ್ಮಲ್ಯಕ್ಕಾಗಿ ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ವಾರ್ಷಿಕವಾಗಿ ಕೋಟ್ಯಂತರ ರುಪಾಯಿಗಳನ್ನು ಖರ್ಚು ಮಾಡಿವೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ರಾಜ್ಯ ಸರ್ಕಾರವು ಸಾಕಷ್ಟು ಹಣವನ್ನು ವ್ಯಯ ಮಾಡಿದೆ.

 

ಕೋಟ್ಯಂತರ ರುಪಾಯಿ ಖರ್ಚು ಮಾಡಿದರೂ ಉದ್ದೇಶವು ಈಡೇರಿಲ್ಲ. ಒಂದೊಂದು ಬಹುಗ್ರಾಮ ಕುಡಿಯುವ ನೀರಿನ ಒಂದೊಂದು ಯೋಜನೆಗೆ ಕನಿಷ್ಠ 10 ಕೋಟಿಗೂ ಮಿಗಿಲಾಗಿ ಹಣವನ್ನು ತೊಡಗಿಸಲಾಗಿತ್ತು. ಆದರೆ ಈ ಯೋಜನೆಗಳಿಗೆ ಅಗತ್ಯವಿರುವ ಪಂಪ್‌ಲೈನ್‌ ಜೋಡಣೆಯಾಗಿದೆ. ಆದರೆ ಈ ಬಹುಗ್ರಾಮ ಯೋಜನೆಗಳಿಂದ ಇದುವರೆಗೂ ಒಂದು ಹನಿ ಕುಡಿಯುವ ನೀರನ್ನು ಸರಬರಾಜು ಮಾಡಿಲ್ಲ ಎಂದು ಅಧಿಕಾರಿಯೊಬ್ಬರು ‘ದಿ ಫೈಲ್‌’ಗೆ ಪ್ರತಿಕ್ರಿಯಿಸಿದರು.

Hot this week

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

Topics

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

Related Articles

Popular Categories

spot_imgspot_img
error: Content is protected !!