Thursday | May 7, 2026 |

ಮೀಸಲಾತಿ ಕ್ಷೇತ್ರಕ್ಕಿಂತಲೂ ಸಾಮಾನ್ಯ ಕ್ಷೇತ್ರಕ್ಕೇ ಹೆಚ್ಚು ಅನುದಾನ; ಉಪಯೋಜನೆ ಮಾರ್ಗಸೂಚಿ ಉಲ್ಲಂಘನೆ

ಬೆಂಗಳೂರು; ಕರ್ನಾಟಕ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆ (ಎಸ್‌ಸಿಪಿ/ಟಿಎಸ್‌ಪಿ)ಯಡಿಯಲ್ಲಿ ಲೋಕೋಪಯೋಗಿ ಇಲಾಖೆಯು ಬಿಡುಗಡೆ ಮಾಡುತ್ತಿರುವ ಅನುದಾನವನ್ನು ಮೀಸಲಾತಿ ಕ್ಷೇತ್ತಕ್ಕೆ ಹೋಲಿಸಿದಲ್ಲಿ ಸಾಮಾನ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದೆ. ಇಲಾಖೆಯ ಆಯವ್ಯಯದ ಗಾತ್ರವು ಹೆಚ್ಚಾಗಿದ್ದರೂ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವು ಕಡಿಮೆಯಾಗಿದೆ ಎಂಬುದನ್ನು ಬಿಜೆಪಿ ಶಾಸಕ ಎಂ ಪಿ ಕುಮಾರಸ್ವಾಮಿ ಅಧ್ಯಕ್ಷರಾಗಿರುವ  ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿಯು ಬಹಿರಂಗಗೊಳಿಸಿದೆ.

 

ಲೋಕೋಪಯೋಗಿ ಇಲಾಖೆಯು ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನ ಬಳಕೆ ಕುರಿತು (2021-22ನೇ) ಸಮಿತಿಯು ವಿಧಾನಮಂಡಲಕ್ಕೆ 2022ರ ಸೆ.21ರಂದು ಸಲ್ಲಿಸಿರುವ ಐದನೇ ವರದಿಯಲ್ಲಿ ವಿಶ್ಲೇಷಿಸಿದೆ.
ಕಳೆದ 3 ವರ್ಷಗಳಲ್ಲಿ ಲೋಕೋಪಯೋಗಿ ಇಲಾಖೆಗೆ ಉಪ ಯೋಜನೆಗಳಡಿಯಲ್ಲಿ 4,100.87 ಕೋಟಿ ರು.ಗಳನ್ನು ಆಯವ್ಯಯದಲ್ಲಿ ಒದಗಿಸಲಾಗಿದೆ. ಈ ಪೈಕಿ 3,165.84 ಕೋಟಿ ರು. ಖರ್ಚು ಮಾಡಿ ವೆಚ್ಚಕ್ಕೆ 66.06 ಕೋಟಿ ರು.ಗಳನ್ನು ಬಾಕಿ ಇರಿಸಿಕೊಂಡಿದೆ ಎಂದು ವರದಿಯಲ್ಲಿ ವಿವರಿಸಲಾಗಿದೆ.

 

‘ಕರ್ನಾಟಕ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪಹಂಚಿಕೆ ಅನುದಾನವನ್ನು ಮೀಸಲಾತಿ ಕ್ಷೇತ್ರಕ್ಕೆ ಹೋಲಿಸಿದಲ್ಲಿ ಸಾಮಾನ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುತ್ತಿದೆ. ಈ ಅನುದಾನವನ್ನು ಕ್ಷೇತ್ರಗಳಿಗೆ ಹಂಚಿಕೆ ಮಾಡುವ ಪ್ರಕ್ರಿಯೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಇತರ ಇಲಾಖೆಗಳ ನಡುವೆ ಸಮನ್ವಯತೆ ಕೊರತೆ ಇದೆ. ಆಯವ್ಯಯದ ಗಾತ್ರ ಹೆಚ್ಚಾಗಿದ್ದರೂ ಈ ಯೋಜನೆಯಡಿಯ ಅನುದಾನವು ಕಡಿಮೆಯಾಗಿದೆ,’ ಎಂಬುದನ್ನು ಸಮಿತಿಯು ಗಂಭೀರವಾಗಿ ಪರಿಗಣಿಸಿದೆ.

 

ಅದೇ ರೀತಿ ಅನುದಾನದ ಹಣವನ್ನು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಸಮುದಾಯದ ಅಭಿವೃದ್ಧಿಗಾಗಿ ಬಳಸುವುದರ ಬದಲಿಗೆ ಈ ಅನುದಾನದ ಹಣದಲ್ಲಿ ತಾಲೂಕು, ಜಿಲ್ಲಾ ಮಟ್ಟದಲ್ಲಿ ಸಂಬಳ, ಆಡಳಿತಾತ್ಮಕ ವೆಚ್ಚಗಳಿಗಾಗಿ ಭರಿಸಿರುವುದು ವರದಿಯಿಂದ ತಿಳಿದು ಬಂದಿದೆ.

 

‘ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಿಡುಗಡೆ ಮಾಡದೇ ಯೋಜನೆಗಳ ಕಾರ್ಯಪ್ರಗತಿಯ ಆಧಾರದ ಮೇಲೆ ಅನುದಾನ ಬಿಡುಗಡೆ ಮಾಡುತ್ತಿರುವುದರಿಂದ ಯೋಜನೆಗಳು ಕಾಲಮಿತಿಯೊಳಗೆ ಪೂರ್ಣಗೊಳ್ಳುತ್ತಿಲ್ಲ.ಬಾಕಿ ಉಳಿದ ಹಣವು ಕ್ಯಾರಿ ಫಾರ್ವರ್ಡ್‌ ಆಗುತ್ತಿದೆ. ಅನುದಾನದ ಹಣ ಕ್ಯಾರಿ ಫಾರ್ವರ್ಡ್‌ ಆದಲ್ಲಿ ಹಣವನ್ನು ಮುಂದಿನ ವರ್ಷದ ಅನುದಾನದ ಜೊತೆಗೆ ಸೇರಿಸಿ ಕೊಡುವುದರ ಬದಲಿಗೆ ಒಂದು ವರ್ಷ ಬಿಟ್ಟು ಅದರ ಮುಂದಿನ ವರ್ಷಕ್ಕೆ ಕೊಡುತ್ತಿದೆ,’ ಎಂದು ಸಮಿತಿಯು ಇಲಾಖೆಯ ಕಾರ್ಯವೈಖರಿಯನ್ನು ವರದಿಯಲ್ಲಿ ವಿವರಿಸಿದೆ.

 

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹೆಚ್ಚು ಜನಸಂಖ್ಯೆ ಇರುವ ಮೀಸಲು ಕ್ಷೇತ್ರಗಳಲ್ಲಿ ಈ ಸಮುದಾಯದ ಜನರಿಗೆ ವಿವಿಧ ಯೋಜನೆಗಳಲ್ಲಿ ಸೌಲಭ್ಯಗಳನ್ನು ಒದಗಿಸಬೇಕು. ಹೀಗಾಗಿ ಈ ಉಪ ಯೋಜನೆಗಳಡಿಯಲ್ಲಿ ಜನಸಂಖ್ಯಾಧರಿತ ಹೆಚ್ಚು ಅನುದಾನವನ್ನು ಮೀಸಲು ಕ್ಷೇತ್ರಗಳಿಗೆ ಆದ್ಯತೆ ಮೇರೆಗೆ ನಿಗದಿಗೊಳಿಸಿ ಮಂಜೂರು ಮಾಡಬೇಕು ಎಂದು ಸಮಿತಿಯು ಶಿಫಾರಸ್ಸು ಮಾಡಿದೆ.

Hot this week

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

ಒಂದೇ ಜಾಗದಲ್ಲಿ ಎರಡು ಫ್ಲೈ ಓವರ್, ಶೇ.50ರಷ್ಟು ಕಾಮಗಾರಿಯಾಗಿದ್ದರೂ ಪೂರ್ಣ ಪಾವತಿ; ಬ್ಯಾಂಕ್‌ ಗ್ಯಾರಂಟಿ ಮುಟ್ಟುಗೋಲಿಲ್ಲ, ಗುತ್ತಿಗೆದಾರರಿಗೆ ಲಾಭ, ಬಿಬಿಎಂಪಿ ನಿಧಿಗೆ ನಷ್ಟ

ಬೆಂಗಳೂರು;  ಈಜಿಪುರ ಮೇಲ್ಸೇತುವೆ ಎಲಿವೇಟೆಡ್‌ ಕಾರಿಡಾರ್  ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ  ಪೂರ್ಣಗೊಳಿಸದ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...
Please Scan to make Your Contribution

Topics

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

Related Articles

Popular Categories

error: Content is protected !!