Friday | June 12, 2026 |

ವ್ಯಾಜ್ಯದಲ್ಲಿರುವ ಜಮೀನು ಹಂಚಿಕೆ; ದಲಿತರು ಉದ್ಯಮಿಗಳಾಗದಂತೆ ತಡೆಗಟ್ಟುವ ಹುನ್ನಾರ

ಬೆಂಗಳೂರು; ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವ್ಯಾಜ್ಯದಿಂದ ಕೂಡಿರುವ ಭೂಮಿಯನ್ನು ಗುರುತಿಸಿ ವ್ಯಾಜ್ಯಗಳು ಪೂರ್ಣಪ್ರಮಾಣದಲ್ಲಿ ಇತ್ಯರ್ಥವಾಗುವವರೆಗೂ ಭೂಮಿ ಹಂಚಿಕೆ ಮಾಡದೇ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯು ವಿಳಂಬ ಮಾಡುತ್ತಿದೆ.

 

ರಸ್ತೆಗಳ ಸಂಪರ್ಕವೇ ಇಲ್ಲದ ಜಮೀನುಗಳನ್ನು ಪ.ಜಾತಿ ಮತ್ತು ಪ.ಪಂಗಡದವರಿಗೆ ಹಂಚಿಕೆ ಮಾಡುತ್ತಿರುವ ಇಲಾಖೆಯು ಭೂಮಿ ಹಂಚಿಕೆಯಲ್ಲಿ ಅನುಸರಿಸಿರುವ ಅಸ್ಪ್ರಶ್ಯತೆಯನ್ನು ಬಿಜೆಪಿ ಶಾಸಕ ಎಂ ಪಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿರುವ ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿಯು ಬಹಿರಂಗಗೊಳಿಸಿದೆ.

 

ಹೈಟೆಕ್‌ ಡಿಫೆನ್ಸ್‌ ಏರೋಸ್ಪೇಸ್‌ ಪಾರ್ಕ್‌ ಸೇರಿದಂತೆ ರಾಜ್ಯದಾದ್ಯಂತ ಕೈಗಾರಿಕೆ, ವಿಶೇಷ ವಲಯ ರಚನೆ ಸಂಬಂಧ ಸ್ವಾಧೀನಪಡಿಸಿಕೊಂಡ ಭೂಮಿ ಹಂಚಿಕೆ ಸಂದರ್ಭದಲ್ಲಿ ಸಾಮಾನ್ಯ ಜನಾಂಗದವರಿಗೆ ಪ್ರಥಮ ಆದ್ಯತೆ ನೀಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನಾಂಗದವರಿಗೆ ವಂಚನೆ ಮಾಡಲಾಗುತ್ತಿರುವುದನ್ನು ಸಮಿತಿಯು ಹೊರಗೆಡವಿದೆ.

 

2021-22ನೇ ಸಾಲಿಗೆ ಸಂಬಂಧಿಸಿದಂತೆ ಸಮಿತಿಯು ವಿಧಾನಮಂಡಲಕ್ಕೆ 2022ರ ಸೆ.21ರಂದು ಸಲ್ಲಿಸಿರುವ ಐದನೇ ವರದಿಯಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡವನ್ನು ಹೇಗೆ ಶೋಷಿಸುತ್ತಿದೆ ಎಂಬುದರ ಕುರಿತು ವಿಶ್ಲೇಷಿಸಿದೆ.

 

ಬೆಂಗಳೂರು ನಗರ ಜಿಲ್ಲೆಗೆ ಸಂಬಂಧಿಸಿದಂತೆ ಹೈಟೆಕ್‌ ಡಿಫೆನ್ಸ್‌ ಏರೋಸ್ಪೇಸ್‌ ಪಾರ್ಕ್‌ ಮೊದಲನೇ ಹಂತಕ್ಕೆ ಒಟ್ಟು 2,737.1 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು. ಈ ಪೈಕಿ 353.45 ಎಕರೆ ಹಂಚಿಕೆ ಮಾಡಬೇಕಿತ್ತು. ಆದರೆ ಕೇವಲ 193 ಎಕರೆಯನ್ನಷ್ಟೇ ಹಂಚಿಕೆ ಮಾಡಿರುವ ಇಲಾಖೆಯು ಇನ್ನೂ 90 ಎಕರೆಯನ್ನು ಹಂಚಿಕೆ ಮಾಡಿಲ್ಲ. ಹೀಗಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಕೇವಲ ಶೇ.22.65ರಷ್ಟೇ ಹಂಚಿಕೆಯಾದಂತಿದೆ. ನಿಯಮಾನುಸಾರ ಶೇ.24.1ರಷ್ಟು ಹಂಚಿಕೆ ಮಾಡುವಲ್ಲಿ ಇಲಾಖೆಯು ವಿಫಲವಾಗಿದೆ ಎಂಬ ಅಂಶವನ್ನು ವರದಿಯಲ್ಲಿ ಉಲ್ಲೇಖಿಸಿದೆ.

 

‘ಏರೋಸ್ಪೇಸ್‌ ಪಾರ್ಕ್‌ ಮೊದಲನೇ ಹಂತದಲ್ಲಿ ಪ.ಜಾತಿ ಜನಾಂಗದವರಿಗೆ ನಿರ್ದಿಷ್ಟಪಡಿಸಿದ ಶೇ.24.1ರಷ್ಟು ಭೂಮಿಯನ್ನು ಆದ್ಯತೆ ಮೇರೆಗೆ ಹಂಚಿಕೆ ಮಾಡದೇ ಸ್ವಾಧೀನಪಡಿಸಿಕೊಂಡಿರುವ ಭೂಮಿಯಲ್ಲಿ ಸಾಮಾನ್ಯ ಜನಾಂಗದವರಿಗೆ ಪ್ರಥಮ ಆದ್ಯತೆ ನೀಡಿ ಹಂಚಿಕೆ ಮಾಡಲಾಗಿದೆ. ಮೊದಲ ಹಂತದಲ್ಲಿ ಭೂಮಿ ಪಡೆಯಲು ಪ.ಜಾತಿ ಮತ್ತು ಪ.ಪಂಗಡದ ಜನಾಂಗದವರು ವಂಚಿತರಾಗಿದ್ದಾರೆ,’ ಎಂದು ಸಮಿತಿಯು ಗಂಭೀರವಾಗಿ ಪರಿಗಣಿಸಿದೆ.

 

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಹಂಚಿಕೆ ಮಾಡುವ ಭೂಮಿಯು ವ್ಯಾಜ್ಯದಲ್ಲಿರುತ್ತವೆ. ಈ ಜನಾಂಗದವರಿಗೆ ಭೂಮಿ ಹಂಚಿಕೆ ಮಾಡುವಾಗ ವ್ಯಾಜ್ಯದಲ್ಲಿರುವ ಭೂಮಿಯನ್ನು ಗುರುತಿಸಿ ಈ ವ್ಯಾಜ್ಯಗಳು ಪೂರ್ಣ ಪ್ರಮಾಣದಲ್ಲಿ ಇತ್ಯರ್ಥವಾಗುವವರೆಗೆ ಭೂಮಿ ಹಂಚಿಕೆ ಮಾಡದೆಯೇ ವಿಳಂಬ ಮಾಡಲಾಗುತ್ತಿದೆ ಎಂದು ಸಮಿತಿಯು ಆಕ್ಷೇಪಿಸಿರುವುದು ವರದಿಯಿಂದ ಗೊತ್ತಾಗಿದೆ.

 

ಹಾಗೆಯೆ ಪ.ಜಾತಿ ಮತ್ತು ಪ.ಪಂಗಡದವರಿಗೆ ಭೂಮಿ ಹಂಚಿಕೆ ಮಾಡಲು ವ್ಯಾಜ್ಯರಹಿತ ಭೂಮಿಯನ್ನು ಗುರುತಿಸಿ ಅವರುಗಳಿಗೆ ಮೊದಲ ಆದ್ಯತೆ ಮೇರೆಗೆ ಆಯಾಯ ಹಂತಗಳಲ್ಲಿಯೇ ಹಂಚಿಕೆ ಮಾಡಬೇಕಿತ್ತು. ಕಾಯ್ದೆ ಉಲ್ಲಂಘಿಸಿ ಭೂಮಿ ಹಂಚಿಕೆಯಲ್ಲಿ ಕೊರತೆಯುಂಟು ಮಾಡಿದ ಅಧಿಕಾರಿಗಳ ವಿರುದ್ಧ ಶಿಸ್ತು, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಮಿತಿಯು ನಿರ್ದೇಶಿಸಿದೆ.

 

ಲ್ಯಾಂಡ್‌ ಆಡಿಟ್‌ ಕಮಿಟಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರಿಗೆ ಹಂಚಿಕೆಗೆ ನಿಗದಿಯಾಗಿದ್ದ 2 ಎಕರೆ ಭೂಮಿಯನ್ನು ಏಕ ಗವಾಕ್ಷಿ ಸಮಿತಿಯು ಒಂದು ಎಕರೆಗೆ ಇಳಿಸಿ ತಿದ್ದುಪಡಿ ಮಾಡಿರುವುದಕ್ಕೆ ತೀವ್ರವಾಗಿ ವಿರೋಧಿಸಿರುವ ಸಮಿತಿಯು ‘2 ಎಕರೆ ಭೂಮಿಯನ್ನು ಒಂದು ಎಕರೆಗೆ ಇಳಿಸಿರುವುದ್ನನು ಪುನರ್‌ ಪರಿಶೀಲಿಸಬೇಕು. ನಿಗದಿಪಡಿಸಿರುವಂತೆ 2 ಎಕರೆ ಭೂಮಿಯನ್ನು ಹಂಚಿಕೆ ಮಾಡಲು ಕ್ರಮವಹಿಸಬೇಕು,’ ಎಂದು ನಿರ್ದೇಶಿಸಿದೆ.

Hot this week

ಆರ್ಥಿಕ ಬಿಕ್ಕಟ್ಟು; ಶಿಕ್ಷಕರ ನೇಮಕಾತಿ, ವೃತ್ತಿಪರತೆ ಅಭಿವೃದ್ಧಿ ವೆಚ್ಚಕ್ಕೆ ತಡೆಹಿಡಿದಿತ್ತೇ ಸರ್ಕಾರ?

ಬೆಂಗಳೂರು; ರಾಜ್ಯದ ಹೆಚ್ಚಿನ ಸರ್ಕಾರಿ ಶಾಲೆಗಳು ಆರ್‍‌ಟಿಇ ಕಾಯ್ದೆಯು ಭೌತಿಕ ಮೂಲಸೌಕರ್ಯಗಳು...

ತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ ಆರೋಪ; ಮಧ್ಯಪ್ರವೇಶಕ್ಕೆ ಲೋಕಭವನ ಕದ ತಟ್ಟಿದ ಬಿಜೆಪಿ, ಸ್ವತಂತ್ರ ತನಿಖೆಗೆ ಮುಂದಾಗುವರೇ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ...
Please Scan to make Your Contribution

Topics

ಆರ್ಥಿಕ ಬಿಕ್ಕಟ್ಟು; ಶಿಕ್ಷಕರ ನೇಮಕಾತಿ, ವೃತ್ತಿಪರತೆ ಅಭಿವೃದ್ಧಿ ವೆಚ್ಚಕ್ಕೆ ತಡೆಹಿಡಿದಿತ್ತೇ ಸರ್ಕಾರ?

ಬೆಂಗಳೂರು; ರಾಜ್ಯದ ಹೆಚ್ಚಿನ ಸರ್ಕಾರಿ ಶಾಲೆಗಳು ಆರ್‍‌ಟಿಇ ಕಾಯ್ದೆಯು ಭೌತಿಕ ಮೂಲಸೌಕರ್ಯಗಳು...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

Related Articles

Popular Categories

error: Content is protected !!