Saturday | June 6, 2026 |

ವ್ಯಾಜ್ಯದಲ್ಲಿರುವ ಜಮೀನು ಹಂಚಿಕೆ; ದಲಿತರು ಉದ್ಯಮಿಗಳಾಗದಂತೆ ತಡೆಗಟ್ಟುವ ಹುನ್ನಾರ

ಬೆಂಗಳೂರು; ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವ್ಯಾಜ್ಯದಿಂದ ಕೂಡಿರುವ ಭೂಮಿಯನ್ನು ಗುರುತಿಸಿ ವ್ಯಾಜ್ಯಗಳು ಪೂರ್ಣಪ್ರಮಾಣದಲ್ಲಿ ಇತ್ಯರ್ಥವಾಗುವವರೆಗೂ ಭೂಮಿ ಹಂಚಿಕೆ ಮಾಡದೇ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯು ವಿಳಂಬ ಮಾಡುತ್ತಿದೆ.

 

ರಸ್ತೆಗಳ ಸಂಪರ್ಕವೇ ಇಲ್ಲದ ಜಮೀನುಗಳನ್ನು ಪ.ಜಾತಿ ಮತ್ತು ಪ.ಪಂಗಡದವರಿಗೆ ಹಂಚಿಕೆ ಮಾಡುತ್ತಿರುವ ಇಲಾಖೆಯು ಭೂಮಿ ಹಂಚಿಕೆಯಲ್ಲಿ ಅನುಸರಿಸಿರುವ ಅಸ್ಪ್ರಶ್ಯತೆಯನ್ನು ಬಿಜೆಪಿ ಶಾಸಕ ಎಂ ಪಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿರುವ ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿಯು ಬಹಿರಂಗಗೊಳಿಸಿದೆ.

 

ಹೈಟೆಕ್‌ ಡಿಫೆನ್ಸ್‌ ಏರೋಸ್ಪೇಸ್‌ ಪಾರ್ಕ್‌ ಸೇರಿದಂತೆ ರಾಜ್ಯದಾದ್ಯಂತ ಕೈಗಾರಿಕೆ, ವಿಶೇಷ ವಲಯ ರಚನೆ ಸಂಬಂಧ ಸ್ವಾಧೀನಪಡಿಸಿಕೊಂಡ ಭೂಮಿ ಹಂಚಿಕೆ ಸಂದರ್ಭದಲ್ಲಿ ಸಾಮಾನ್ಯ ಜನಾಂಗದವರಿಗೆ ಪ್ರಥಮ ಆದ್ಯತೆ ನೀಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನಾಂಗದವರಿಗೆ ವಂಚನೆ ಮಾಡಲಾಗುತ್ತಿರುವುದನ್ನು ಸಮಿತಿಯು ಹೊರಗೆಡವಿದೆ.

 

2021-22ನೇ ಸಾಲಿಗೆ ಸಂಬಂಧಿಸಿದಂತೆ ಸಮಿತಿಯು ವಿಧಾನಮಂಡಲಕ್ಕೆ 2022ರ ಸೆ.21ರಂದು ಸಲ್ಲಿಸಿರುವ ಐದನೇ ವರದಿಯಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡವನ್ನು ಹೇಗೆ ಶೋಷಿಸುತ್ತಿದೆ ಎಂಬುದರ ಕುರಿತು ವಿಶ್ಲೇಷಿಸಿದೆ.

 

ಬೆಂಗಳೂರು ನಗರ ಜಿಲ್ಲೆಗೆ ಸಂಬಂಧಿಸಿದಂತೆ ಹೈಟೆಕ್‌ ಡಿಫೆನ್ಸ್‌ ಏರೋಸ್ಪೇಸ್‌ ಪಾರ್ಕ್‌ ಮೊದಲನೇ ಹಂತಕ್ಕೆ ಒಟ್ಟು 2,737.1 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು. ಈ ಪೈಕಿ 353.45 ಎಕರೆ ಹಂಚಿಕೆ ಮಾಡಬೇಕಿತ್ತು. ಆದರೆ ಕೇವಲ 193 ಎಕರೆಯನ್ನಷ್ಟೇ ಹಂಚಿಕೆ ಮಾಡಿರುವ ಇಲಾಖೆಯು ಇನ್ನೂ 90 ಎಕರೆಯನ್ನು ಹಂಚಿಕೆ ಮಾಡಿಲ್ಲ. ಹೀಗಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಕೇವಲ ಶೇ.22.65ರಷ್ಟೇ ಹಂಚಿಕೆಯಾದಂತಿದೆ. ನಿಯಮಾನುಸಾರ ಶೇ.24.1ರಷ್ಟು ಹಂಚಿಕೆ ಮಾಡುವಲ್ಲಿ ಇಲಾಖೆಯು ವಿಫಲವಾಗಿದೆ ಎಂಬ ಅಂಶವನ್ನು ವರದಿಯಲ್ಲಿ ಉಲ್ಲೇಖಿಸಿದೆ.

 

‘ಏರೋಸ್ಪೇಸ್‌ ಪಾರ್ಕ್‌ ಮೊದಲನೇ ಹಂತದಲ್ಲಿ ಪ.ಜಾತಿ ಜನಾಂಗದವರಿಗೆ ನಿರ್ದಿಷ್ಟಪಡಿಸಿದ ಶೇ.24.1ರಷ್ಟು ಭೂಮಿಯನ್ನು ಆದ್ಯತೆ ಮೇರೆಗೆ ಹಂಚಿಕೆ ಮಾಡದೇ ಸ್ವಾಧೀನಪಡಿಸಿಕೊಂಡಿರುವ ಭೂಮಿಯಲ್ಲಿ ಸಾಮಾನ್ಯ ಜನಾಂಗದವರಿಗೆ ಪ್ರಥಮ ಆದ್ಯತೆ ನೀಡಿ ಹಂಚಿಕೆ ಮಾಡಲಾಗಿದೆ. ಮೊದಲ ಹಂತದಲ್ಲಿ ಭೂಮಿ ಪಡೆಯಲು ಪ.ಜಾತಿ ಮತ್ತು ಪ.ಪಂಗಡದ ಜನಾಂಗದವರು ವಂಚಿತರಾಗಿದ್ದಾರೆ,’ ಎಂದು ಸಮಿತಿಯು ಗಂಭೀರವಾಗಿ ಪರಿಗಣಿಸಿದೆ.

 

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಹಂಚಿಕೆ ಮಾಡುವ ಭೂಮಿಯು ವ್ಯಾಜ್ಯದಲ್ಲಿರುತ್ತವೆ. ಈ ಜನಾಂಗದವರಿಗೆ ಭೂಮಿ ಹಂಚಿಕೆ ಮಾಡುವಾಗ ವ್ಯಾಜ್ಯದಲ್ಲಿರುವ ಭೂಮಿಯನ್ನು ಗುರುತಿಸಿ ಈ ವ್ಯಾಜ್ಯಗಳು ಪೂರ್ಣ ಪ್ರಮಾಣದಲ್ಲಿ ಇತ್ಯರ್ಥವಾಗುವವರೆಗೆ ಭೂಮಿ ಹಂಚಿಕೆ ಮಾಡದೆಯೇ ವಿಳಂಬ ಮಾಡಲಾಗುತ್ತಿದೆ ಎಂದು ಸಮಿತಿಯು ಆಕ್ಷೇಪಿಸಿರುವುದು ವರದಿಯಿಂದ ಗೊತ್ತಾಗಿದೆ.

 

ಹಾಗೆಯೆ ಪ.ಜಾತಿ ಮತ್ತು ಪ.ಪಂಗಡದವರಿಗೆ ಭೂಮಿ ಹಂಚಿಕೆ ಮಾಡಲು ವ್ಯಾಜ್ಯರಹಿತ ಭೂಮಿಯನ್ನು ಗುರುತಿಸಿ ಅವರುಗಳಿಗೆ ಮೊದಲ ಆದ್ಯತೆ ಮೇರೆಗೆ ಆಯಾಯ ಹಂತಗಳಲ್ಲಿಯೇ ಹಂಚಿಕೆ ಮಾಡಬೇಕಿತ್ತು. ಕಾಯ್ದೆ ಉಲ್ಲಂಘಿಸಿ ಭೂಮಿ ಹಂಚಿಕೆಯಲ್ಲಿ ಕೊರತೆಯುಂಟು ಮಾಡಿದ ಅಧಿಕಾರಿಗಳ ವಿರುದ್ಧ ಶಿಸ್ತು, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಮಿತಿಯು ನಿರ್ದೇಶಿಸಿದೆ.

 

ಲ್ಯಾಂಡ್‌ ಆಡಿಟ್‌ ಕಮಿಟಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರಿಗೆ ಹಂಚಿಕೆಗೆ ನಿಗದಿಯಾಗಿದ್ದ 2 ಎಕರೆ ಭೂಮಿಯನ್ನು ಏಕ ಗವಾಕ್ಷಿ ಸಮಿತಿಯು ಒಂದು ಎಕರೆಗೆ ಇಳಿಸಿ ತಿದ್ದುಪಡಿ ಮಾಡಿರುವುದಕ್ಕೆ ತೀವ್ರವಾಗಿ ವಿರೋಧಿಸಿರುವ ಸಮಿತಿಯು ‘2 ಎಕರೆ ಭೂಮಿಯನ್ನು ಒಂದು ಎಕರೆಗೆ ಇಳಿಸಿರುವುದ್ನನು ಪುನರ್‌ ಪರಿಶೀಲಿಸಬೇಕು. ನಿಗದಿಪಡಿಸಿರುವಂತೆ 2 ಎಕರೆ ಭೂಮಿಯನ್ನು ಹಂಚಿಕೆ ಮಾಡಲು ಕ್ರಮವಹಿಸಬೇಕು,’ ಎಂದು ನಿರ್ದೇಶಿಸಿದೆ.

Hot this week

ಮಾಜಿ ಸಿಎಂ ಸಿದ್ದರಾಮಯ್ಯ, ಪಾರ್ವತಿ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಆರೋಪ; 2 ವರ್ಷದಲ್ಲಿ 16 ಬಾರಿ ವಿಚಾರಣೆ, ಜುಲೈ 9ಕ್ಕೆ ವಿಚಾರಣೆಗೆ ದಿನಾಂಕ ನಿಗದಿ

ಬೆಂಗಳೂರು;  ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾಗಿದ್ದ...

ಎಂಎಸ್‌ಐಎಲ್‌ನಲ್ಲಿ ಅಕ್ರಮ; ನಿವೃತ್ತ ಐಎಎಸ್‌ ಜಿ ಸಿ ಪ್ರಕಾಶ್‌ ಸೇರಿ 7 ಮಂದಿ ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗದ ಚಾರ್ಜ್‌ಶೀಟ್‌

ಬೆಂಗಳೂರು; ಮೈಸೂರು ಸೇಲ್ಸ್‌ ಇಂಟರ್ ನ್ಯಾ‍ಷನಲ್‌ ಲಿಮಿಟೆಡ್‌ನಲ್ಲಿ ನಡೆದಿದೆ ಎನ್ನಲಾದ ವಿವಿಧ...

ಮತದಾರರ ಪಟ್ಟಿ ಪರಿಷ್ಕರಣೆ; ಹಲವು ಜಿಲ್ಲೆಗಳಲ್ಲಿ ವರ್ಷವಾದರೂ ನೇಮಕವಾಗದ ಬಿಎಲ್‌ಒ, ಕಾಲಕಸವಾಯಿತೇ ಆಯೋಗದ ಪತ್ರ?

ಬೆಂಗಳೂರು; ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಮತ್ತು ವಿಶೇಷ ಸಂಕ್ಷಿಪ್ತ...

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಪ್ರಕರಣ; 6 ವರ್ಷವಾದರೂ ಹೈಕೋರ್ಟ್‌ನಲ್ಲಿ ವಿಚಾರಣೆಗೆ ನಿಗದಿಯಾಗದ ದಿನಾಂಕ

ಬೆಂಗಳೂರು;  ಹಾಲಿ ಮುಖ್ಯಮಂತ್ರಿ  ಡಿ ಕೆ ಶಿವಕುಮಾರ್ ಅವರು ಸೇರಿದಂತೆ ಅವರ...
Please Scan to make Your Contribution

Topics

ಮಾಜಿ ಸಿಎಂ ಸಿದ್ದರಾಮಯ್ಯ, ಪಾರ್ವತಿ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಆರೋಪ; 2 ವರ್ಷದಲ್ಲಿ 16 ಬಾರಿ ವಿಚಾರಣೆ, ಜುಲೈ 9ಕ್ಕೆ ವಿಚಾರಣೆಗೆ ದಿನಾಂಕ ನಿಗದಿ

ಬೆಂಗಳೂರು;  ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾಗಿದ್ದ...

ಎಂಎಸ್‌ಐಎಲ್‌ನಲ್ಲಿ ಅಕ್ರಮ; ನಿವೃತ್ತ ಐಎಎಸ್‌ ಜಿ ಸಿ ಪ್ರಕಾಶ್‌ ಸೇರಿ 7 ಮಂದಿ ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗದ ಚಾರ್ಜ್‌ಶೀಟ್‌

ಬೆಂಗಳೂರು; ಮೈಸೂರು ಸೇಲ್ಸ್‌ ಇಂಟರ್ ನ್ಯಾ‍ಷನಲ್‌ ಲಿಮಿಟೆಡ್‌ನಲ್ಲಿ ನಡೆದಿದೆ ಎನ್ನಲಾದ ವಿವಿಧ...

ಮತದಾರರ ಪಟ್ಟಿ ಪರಿಷ್ಕರಣೆ; ಹಲವು ಜಿಲ್ಲೆಗಳಲ್ಲಿ ವರ್ಷವಾದರೂ ನೇಮಕವಾಗದ ಬಿಎಲ್‌ಒ, ಕಾಲಕಸವಾಯಿತೇ ಆಯೋಗದ ಪತ್ರ?

ಬೆಂಗಳೂರು; ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಮತ್ತು ವಿಶೇಷ ಸಂಕ್ಷಿಪ್ತ...

ಆರ್‍‌ಬಿಎಸ್‌ಎಸ್ಎನ್‌ ಗಣಿ ಕಂಪನಿಗೆ 64.50 ಎಕರೆ ವಿಸ್ತೀರ್ಣದ ಸರ್ಕಾರಿ ಜಮೀನು; 3 ಬಾರಿ ಪ್ರಸ್ತಾವ ತಿರಸ್ಕೃತವಾದರೂ ಸಚಿವ ಸಂಪುಟಕ್ಕೆ ಮಂಡಿಸಲು ಸಿಎಂ ನಿರ್ದೇಶನ

ಬೆಂಗಳೂರು; ಕಾನೂನುಬಾಹಿರವಾಗಿ ಗಣಿಗಾರಿಕೆ ನಡೆಸುತ್ತಿದೆ ಎಂಬ ಗಂಭೀರ ಆರೋಪಕ್ಕೆ ಗುರಿಯಾಗಿರುವ ಆರ್‍‌ಬಿಎಸ್‌ಎನ್‌...

ಶೈಕ್ಷಣಿಕ ಅಸಮಾನತೆ ಹೆಚ್ಚಳ; ರಾಜ್ಯದ ಆರ್ಥಿಕ ಪ್ರಗತಿಗೆ ಬೆದರಿಕೆ ಹಾಕುವ ಸಾಧ್ಯತೆ, ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಆಯೋಗ

ಬೆಂಗಳೂರು; ಪ್ರಾಥಮಿಕ ಶಾಲೆ ಮತ್ತು ವಿಶ್ವವಿದ್ಯಾಲಯ ಮಟ್ಟಗಳೆರಡರಲ್ಲೂ ಸಾಂಸ್ಥಿಕ ಮೂಲ ಸೌಕರ್ಯಗಳ...

Related Articles

Popular Categories

error: Content is protected !!