Friday | April 3, 2026 |

ಸೌಭಾಗ್ಯ ವಿದ್ಯುತ್‌ ಯೋಜನೆ ಕಾಮಗಾರಿಗೆ ಅನುಮೋದನೆ ಇರದಿದ್ದರೂ ಅನುಷ್ಠಾನ;ಗುತ್ತಿಗೆದಾರರಿಗೆ ಅಧಿಕ ಪಾವತಿ

ಬೆಂಗಳೂರು; ಸೌಭಾಗ್ಯ ಯೋಜನೆಯಡಿ 4.75 ಕೋಟಿ ರು ಮೊತ್ತದ ಗ್ರಾಮೀಣ ವಿದ್ಯುದ್ದೀಕರಣ ಕಾಮಗಾರಿಗಳನ್ನು ಅನುಮೋದನೆ ಇಲ್ಲದೆಯೇ ಕಾರ್ಯಗತಗೊಳಿಸಿದ್ದ ಇಂಧನ ಇಲಾಖೆಯು ಲೆಕ್ಕಪತ್ರಗಳ ಕೈಪಿಡಿಯನ್ನು ಉಲ್ಲಂಘಿಸಿತ್ತು ಎಂಬುದನ್ನು ಸಿಎಜಿ ವರದಿಯು ಬಹಿರಂಗಗೊಳಿಸಿದೆ.

 

ಪೂರ್ವಭಾವಿ ಯೋಜನೆ ಹಾಗೂ ಅಂದಾಜುಗಳನ್ನು ಸಕ್ಷಮ ಪ್ರಾಧಿಕಾರವು ಅನುಮೋದಿಸಬೇಕು. ಅನುಮೋದಿಸದ ಹೊರತು ಯಾವುದೇ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬಾರದು. ಅನುಮೋದಿತ ಅಂದಾಜಿನಲ್ಲಿ ನಿರ್ದಿಷ್ಟವಾಗಿ ಅನುವು ಮಾಡದಿರುವ ಕಾಮಗಾರಿಗಳ ಐಟಂಗಳನ್ನು ಪರಿಷ್ಕೃತ ಅಂದಾಜು ಅಥವಾ ಪೂರಕ ಅಂದಾಜನ್ನು ಅನುಮೋದಿಸದ ಹೊರತು ಕೈಗೆತ್ತಿಕೊಳ್ಳಬಾರದು ಎಂದು ಲೆಕ್ಕಪತ್ರಗಳ ಕೈಪಿಡಿ ಸಂಪುಟ 2ರಲ್ಲಿ ಸ್ಪಷ್ಟವಾಗಿ ಸೂಚಿಸಲಾಗಿದೆ. ಆದರೆ ಇದನ್ನು ಇಂಧನ ಇಲಾಖೆಯು ನೇರಾನೇರ ಉಲ್ಲಂಘಿಸಿದೆ ಎಂದು ಸಿಎಜಿ ವರದಿಯಲ್ಲಿ ವಿವರಿಸಲಾಗಿದೆ.

 

‘ರಾಯಚೂರು ಜಿಲ್ಲೆಯ ಮಾನ್ವಿ, ರಾಯಚೂರು, ದೇವದುರ್ಗ, ಸಿಂಧನೂರು ತಾಲೂಕು ವ್ಯಾಪ್ತಿಯಲ್ಲಿ ಸೌಭಾಗ್ಯ ಯೋಜನೆ ಅಡಿಯಲ್ಲಿ ಗ್ರಾಮೀಣ ವಿದ್ಯುದ್ದೀಕರಣ ಕಾಮಗಾರಿಗಳಿಗೆ ಸಂಬಂಧಿಸಿದಂತೆ 4.75 ಕೋಟಿ ರು ಅನುದಾನ ಒದಗಿಸಲಾಗಿತ್ತು. ಈ ಕಾಮಗಾರಿಗಳಿಗೆ ಕಾರ್ಯನಿರ್ವಾಹಕ ಇಂಜಿನಿಯರ್‌, ಅಧೀಕ್ಷಕ ಇಂಜಿನಿಯರ್‌ ಮತ್ತು ಮುಖ್ಯ ಇಂಜಿನಿಯರ್‌ರಿಂದ ಅಂದಾಜುಗಳಿಗೆ ಪೂರ್ವಾನುಮೋದನೆ ಪಡೆದುಕೊಳ್ಳದೆಯೇ ಕಾರ್ಯಗತಗೊಳಿಸಲಾಗಿತ್ತು,’ ಎಂಬುದು ಲೆಕ್ಕಪರಿಶೋಧನೆ ವೇಳೆ ಪತ್ತೆಯಾಗಿದೆ.

 

ಅದೇ ರೀತಿ ಬೀದರ್‌ ಜಿಲ್ಲೆಯಲ್ಲಿಯೂ ಸೌಭಾಗ್ಯ ಯೋಜನೆಯಡಿಯಲ್ಲಿ 9,432 ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ವಿದ್ಯುದ್ದೀಕರಣಗೊಳಿಸಲು 17.17 ಕೋಟಿ ರು. ಮೌಲ್ಯಕ್ಕೆ ಮಹದೇವ್‌ ಪ್ರೀಸ್ಪೆಸ್ಸ್‌ಡ್‌ ಪ್ರಾಡಕ್ಟ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ ಗುತ್ತಿಗೆ ನೀಡಲಾಗಿತ್ತು. ಕಾಮಗಾರಿ ಆದೇಶ ಪಡೆದ ಮೂರು ತಿಂಗಳ ಒಳಗೇ ಈ ಕುಟುಂಬಗಳಿಗೆ ಅಂದರೆ 2019ರ ಫೆಬ್ರುವರಿ ಅಂತ್ಯಕ್ಕೆ ವಿದ್ಯುದ್ದೀಕರಣ ಸೌಲಭ್ಯವನ್ನು ಪೂರ್ಣಗೊಳಿಸಬೇಕಿತ್ತು. ಆದರೆ ಈ ಕಾಮಗಾರಿಗಳು ವಿಳಂಬವಾಗಿದ್ದರಿಂದ 2020ರ ಮಾರ್ಚ್‌ನಲ್ಲಿ 9.78 ಕೋಟಿ ರು.ವೆಚ್ಚದಲ್ಲಿ ಪೂರ್ಣಗೊಂಡಿದ್ದವು.

 

ಆದರೆ ಗುತ್ತಿಗೆದಾರರು ಮತ್ತು ಸಂಬಂಧಿತ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಸಹಿ ಮಾಡಿದ್ದ ಜಂಟಿ ಸರಕು ಸಾಮಗ್ರಿಗಳು ಮತ್ತು ಮುಖ್ಯ ಇಂಜಿನಿಯರ್‌ ಅವರು ಅನುಮೋದಿಸಿದ್ದಂತಹ (ಜನವರಿ 2021) ದಾಖಲೆಗಳಲ್ಲಿ ವ್ಯತ್ಯಯವಾಗಿದ್ದವು. ಇದು ಗುತ್ತಿಗೆದಾರರಿಗೆ ಅಧಿಕ ಪ್ರಮಾಣದಲ್ಲಿ ಪಾವತಿಗೆ ಕಾರಣವಾಗಿತ್ತು ಎಂಬುದನ್ನು ಸಾಬೀತುಪಡಿಸುತ್ತದೆ ಎಂದು ಸಿಎಜಿ ವರದಿಯಲ್ಲಿ ವಿವರಿಸಲಾಗಿದೆ.

 

242 ಕುಟುಂಬಗಳಿಗೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ 23,34,993 ರು. ಮೊತ್ತವನ್ನು ಅಧಿಕವಾಗಿ ಪಾವತಿಸಲಾಗಿತ್ತು. ಅಲ್ಲದೆ ಪ್ರಮಾಣೀಕರಿಸಿದ್ದ 9,426 ಕುಟುಂಬಗಳಿಗೆ ಪ್ರತಿಯಾಗಿ 9,668 ಕುಟುಂಬಗಳು ಎಂದು ನಮೂದಿಸಲಾಗಿತ್ತು. ಆದರೆ ಮುಖ್ಯ ಇಂಜನಿಯರ್‌ ಅವರು ಯಾವುದೇ ಅಧಿಕ ಪ್ರಮಾಣದಲ್ಲಿ ಪಾವತಿಯಾಗಿರಲಿಲ್ಲ ಎಂದು ಸಮಜಾಯಿಷಿ ನೀಡಿದ್ದರೂ ಸಹ ಲೆಕ್ಕಪರಿಶೋಧನೆಯಲ್ಲಿ ಗಮನಿಸಿದ್ದ ಅಂಶಗಳಿಗೆ ಯಾವುದೇ ಉತ್ತರಗಳನ್ನು ನೀಡಿರಲಿಲ್ಲ.

Hot this week

ಕೆಎಎಸ್ 2011ರ ನೇಮಕಾತಿ ಅಕ್ರಮದ ತನಿಖಾ ವರದಿಗೆ ಕೊನೆ ಮೊಳೆ; ವಿಚಾರಣೆಯಿಲ್ಲದೇ ಪ್ರಕರಣ ಹಿಂಪಡೆಯುವ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು; 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ಅವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ...

ಗಂಗಾ ಕಲ್ಯಾಣ ಯೋಜನೆ ವಿದ್ಯುದ್ದೀಕರಣ; ವಾಸ್ತವಿಕ ವೆಚ್ಚದಲ್ಲಿ ಏರಿಕೆ, ಎಸ್ಕಾಂಗಳಿಗೆ ಆರ್ಥಿಕ ಸಂಕಷ್ಟ

ಬೆಂಗಳೂರು; ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳ ವಿದ್ಯುದ್ದೀಕರಣ ವಿದ್ಯುತ್ ಸರಬರಾಜು...

ಅಂಬೇಡ್ಕರ್, ಜಗಜೀವನ್ ರಾಂ ಪ್ರಶಸ್ತಿಗೆ ಲಾಬಿ!; ಸರಜೂ ಕಾಟ್ಕರ್ ಸೇರಿ ಹಲವರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯು ಪ್ರತೀ ಏಪ್ರಿಲ್ ತಿಂಗಳಲ್ಲಿ ನೀಡುವ ಡಾ...

ಗ್ಯಾರಂಟಿಗಳಿಂದ ಹೆಚ್ಚಿದ ಹಣಕಾಸಿನ ಒತ್ತಡ, ಶಾಸಕಾಂಗದ ಅನುಮೋದನೆಯಿಲ್ಲದೇ 10,035 ಕೋಟಿ ವೆಚ್ಚಕ್ಕೆ ಆದೇಶ

ಬೆಂಗಳೂರು; ರಾಜ್ಯ ಶಾಸಕಾಂಗದ ಅನುಮೋದನೆಗೆ ಮುಂಚಿತವಾಗಿಯೇ 10,035.13 ಕೋಟಿ ರು ವೆಚ್ಚಕ್ಕೆ...

ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ; ವರ್ಷವಾದರೂ ಇಲಾಖೆಗಳಿಂದ ಬಾರದ ಮಾಹಿತಿ, ಅಧಿಸೂಚನೆಗೂ ಕಿಮ್ಮತ್ತಿಲ್ಲ, ನೆನಪೋಲೆಯ ಕಾಲಹರಣ

ಬೆಂಗಳೂರು; ರಾಜ್ಯ ಸರ್ಕಾರದ ವಿರುದ್ಧ ತಪ್ಪು ಮಾಹಿತಿ, ತಿರುಚುವಿಕೆ ಹಾಗೂ ಸುಳ್ಳು...

Topics

ಕೆಎಎಸ್ 2011ರ ನೇಮಕಾತಿ ಅಕ್ರಮದ ತನಿಖಾ ವರದಿಗೆ ಕೊನೆ ಮೊಳೆ; ವಿಚಾರಣೆಯಿಲ್ಲದೇ ಪ್ರಕರಣ ಹಿಂಪಡೆಯುವ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು; 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ಅವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ...

ಗಂಗಾ ಕಲ್ಯಾಣ ಯೋಜನೆ ವಿದ್ಯುದ್ದೀಕರಣ; ವಾಸ್ತವಿಕ ವೆಚ್ಚದಲ್ಲಿ ಏರಿಕೆ, ಎಸ್ಕಾಂಗಳಿಗೆ ಆರ್ಥಿಕ ಸಂಕಷ್ಟ

ಬೆಂಗಳೂರು; ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳ ವಿದ್ಯುದ್ದೀಕರಣ ವಿದ್ಯುತ್ ಸರಬರಾಜು...

ಅಂಬೇಡ್ಕರ್, ಜಗಜೀವನ್ ರಾಂ ಪ್ರಶಸ್ತಿಗೆ ಲಾಬಿ!; ಸರಜೂ ಕಾಟ್ಕರ್ ಸೇರಿ ಹಲವರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯು ಪ್ರತೀ ಏಪ್ರಿಲ್ ತಿಂಗಳಲ್ಲಿ ನೀಡುವ ಡಾ...

ಗ್ಯಾರಂಟಿಗಳಿಂದ ಹೆಚ್ಚಿದ ಹಣಕಾಸಿನ ಒತ್ತಡ, ಶಾಸಕಾಂಗದ ಅನುಮೋದನೆಯಿಲ್ಲದೇ 10,035 ಕೋಟಿ ವೆಚ್ಚಕ್ಕೆ ಆದೇಶ

ಬೆಂಗಳೂರು; ರಾಜ್ಯ ಶಾಸಕಾಂಗದ ಅನುಮೋದನೆಗೆ ಮುಂಚಿತವಾಗಿಯೇ 10,035.13 ಕೋಟಿ ರು ವೆಚ್ಚಕ್ಕೆ...

ಗೋವಾ ತಮ್ನಾರ್; ಭೂಮಿಯ ಗಡಿ ಗುರುತು, ಮರಗಳ ಗಣತಿ ಅಪೂರ್ಣ, ಆದರೂ ನಿರ್ವಹಣಾ ಯೋಜನೆ ಸಲ್ಲಿಕೆ

ಬೆಂಗಳೂರು; ಪಶ್ಚಿಮ ಘಟ್ಟದ ಕಾಳಿ ಹುಲಿ ಸಂರಕ್ಷಿತಾರಣ್ಯ ಸೇರಿ ಬರೋಬ್ಬರಿ 174...

1,094.81 ಕೋಟಿಯಷ್ಟು ಭೂ ಕಂದಾಯ ಬಾಕಿ; ವಸೂಲಾತಿಗೆ ರೇರಾ ಮೀನಮೇಷ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ...

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

Related Articles

Popular Categories

error: Content is protected !!