Saturday | March 7, 2026 |

ಅರಣ್ಯ ಉತ್ಪನ್ನ ಸಾಗಾಣಿಕೆಯಲ್ಲಿ ಭ್ರಷ್ಟಾಚಾರ; 7.50 ಕೋಟಿ ಮುಂಗಡ ಹಣಕ್ಕೆ ಲೆಕ್ಕವೇ ಇಲ್ಲ

Support THE-FILE

spot_img

ಬೆಂಗಳೂರು; ಅರಣ್ಯ ಉತ್ಪನ್ನಗಳನ್ನು ಸಾಗಾಣಿಕೆ ಮಾಡುವ ಸಂಬಂಧ ನೀಡಿದ್ದ ಕೋಟ್ಯಂತರ ರುಪಾಯಿ ಮುಂಗಡ ಹಣವನ್ನು ಬಳಸಿಕೊಂಡಿರುವ ಅರಣ್ಯಾಧಿಕಾರಿಗಳು , ಲಾಗಿಂಗ್‌ ಮೇಲ್ವಿಚಾರಕರು , ಆರ್‌ಎಂಪಿ ಘಟಕದ ಪ್ರಾದೇಶಿಕ ವ್ಯವಸ್ಥಾಪಕರು ಲೆಕ್ಕಪತ್ರಗಳನ್ನು ಸಲ್ಲಿಸಲು ಮುಂದಾಗಿಲ್ಲ.

 

ಅಲ್ಲದೇ ಮುಂಗಡ ಹಣಕ್ಕೆ ಸರಿ ಹೊಂದಿಸದೇ ಇರುವ ಹಲವಾರು ಪ್ರಕರಣಗಳು ಮತ್ತು ನಿಗಮಕ್ಕೆ ಬರಬೇಕಿರುವ ಬಹುಕೋಟಿ ರು.ಗಳಷ್ಟು ಬಾಕಿ ಹಣವನ್ನೂ ವಸೂಲು ಮಾಡಲು ಯಾವುದೇ ಕ್ರಮಗಳನ್ನೂ ಕೈಗೊಂಡಿಲ್ಲ ಎಂಬುದು ಸೇರಿದಂತೆ ಆರ್ಥಿಕ ಅಶಿಸ್ತಿನ ಹಲವು ಪ್ರಕರಣಗಳು ಇದೀಗ ಬಹಿರಂಗವಾಗಿದೆ.
ಅಲ್ಲದೇ ನೆಡುತೋಪುಗಳಲ್ಲಿನ ಯೋಗ್ಯವಾದ ವಿವಿಧ ಜಾತಿಯ ಮರಗಳನ್ನು ಕಡಿದು ನಿಗದಿಪಡಿಸಿದ ಡಿಪೋಗಳಿಗೆ ಅರಣ್ಯ ಉತ್ಪನ್ನಗಳನ್ನು ಸಾಗಾಣಿಕೆ ಮಾಡುವುದರಲ್ಲಿ ದೊಡ್ಡಮಟ್ಟದ ಭ್ರಷ್ಟಾಚಾರ ನಡೆದಿದೆ ಎಂಬ ಗುರುತರವಾದ ಆರೋಪಗಳು ಕೇಳಿ ಬಂದಿವೆ.

 

ಇದಕ್ಕೆ ಪೂರಕವಾಗಿ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಆರ್‌ಎಂಪಿ ಘಟಕದ ಪ್ರಾದೇಶಿಕ ವ್ಯವಸ್ಥಾಪಕ ಎಂ ಬಿ ಸುಧೀಂದ್ರನಾಯಕ್‌ ಅವರ ಪ್ರಕರಣವು ನಿದರ್ಶನವನ್ನು ಒದಗಿಸಿದೆ. 7.82 ಕೋಟಿ ರು. ಮುಂಗಡ ಹಣ ಪಡೆದಿದ್ದ ಸುಧೀಂದ್ರನಾಯಕ್‌ ಅವರು ಈ ಹಣವನ್ನು ವಿನಿಯೋಗಿಸಿದ ಬಗ್ಗೆ ಲೆಕ್ಕಪತ್ರಗಳನ್ನು ಸಲ್ಲಿಸಿಲ್ಲ. ಹಾಗೂ ಮುಂಗಡ ಹಣಕ್ಕೆ ಸರಿಹೊಂದಿಸಿಲ್ಲ. ಹೀಗಾಗಿ ಇವರನ್ನು ಅಮಾನತು ಮಾಡಿ 2022ರ ಅಕ್ಟೋಬರ್‌ 25ರಂದು ಆದೇಶ ಹೊರಡಿಸಲಾಗಿದೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಈ ಹಿನ್ನೆಲೆಯಲ್ಲಿ ‘ಕರ್ನಾಟಕ ನಾಗರಿಕ ಸೇವಾ ನಿಯಮಗಳು 1966ರ ನಿಯಮ 3ರಂತೆ ಕರ್ತವ್ಯದಲ್ಲಿ ಅಶಿಸ್ತು ಮತ್ತು ಅನಧಿಕೃತ ಗೈರು ಹಾಜರಿ ಇರುವುದರಿಂದ ಮತ್ತು ತೀವ್ರ ಆರ್ಥಿಕ ದುರ್ಬಳಕೆ ಅಶಿಸ್ತಿನ ಕಾರಣ ಎಂ ಬಿ ಸುಧೀಂದ್ರನಾಯಕ ಅವರ ವಿರುದ್ಧ ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ನಿಗಮದ ಸೇವೆಯಿಂದ ಅಮಾನತುಗೊಳಿಸಲಾಗಿದೆ,’ ಎಂದು ಆದೇಶದಲ್ಲಿ ವಿವರಿಸಲಾಗಿದೆ.

 

ಆದೇಶದಲ್ಲೇನಿದೆ?

 

ಅರಣ್ಯ ಇಲಾಖೆಯು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮಕ್ಕೆ ವಹಿಸಿಕೊಡುವ ವಿವಿಧ ವಿಭಾಗಗಳಲ್ಲಿನ ಆಯ್ದ ನೆಡುತೋಪುಗಳಲ್ಲಿನ ಮರಗಳನ್ನು ಕಡಿಯಲು ಯೋಗ್ಯವಾದ ವಿವಿಧ ಜಾತಿಯ ಮರಗಳನ್ನು ಕಡಿದು ನಿಗದಿಪಡಿಸಿದ ಡಿಪೋಗಳಿಗೆ ಅರಣ್ಯ ಉತ್ಪನ್ನಗಳನ್ನು ಸಾಗಾಣಿಕೆ ಮಾಡಬೇಕಿದೆ. ಈ ರೀತಿ ಕಾಮಗಾರಿಗಳಿಗಾಗಿ ಆರ್‌ಎಂಪಿ ಘಟಕದ ಪ್ರಾದೇಶಿಕ ವ್ಯವಸ್ಥಾಪಕ (ಹೆಚ್ಚುವರಿ ಪ್ರಭಾರ) ಎಂ ಬಿ ಸುಧೀಂದ್ರನಾಯಕ್‌ ಎಂಬುವರಿಗೆ 7.82 ಕೋಟಿ ರು. ಮುಂಗಡ ಹಣ ನೀಡಲಾಗಿತ್ತು.

 

ಆದರೆ ಈ ಹಣವನ್ನು ಉಪಯೋಗಿಸಿಕೊಂಡು ಕಾಮಗಾರಿ ಕೈಗೊಂಡ ಅರಣ್ಯ ಉತ್ಪನ್ನಗಳನ್ನು ತಯಾರಿಸಿ ಡಿಪೋಗಳಿಗೆ ಸಾಗಿಸಿದ ಕುರಿತು ಯಾವುದೇ ಪ್ರಗತಿ ವರದಿಗಳನ್ನು ಸಲ್ಲಿಸಿಲ್ಲ. ಅಲ್ಲದೇ ಈ ಹಣವನ್ನು ವಿನಿಯೋಗಿಸಿದ ಬಗ್ಗೆ ಲೆಕ್ಕಪತ್ರಗಳನ್ನು ಸಲ್ಲಿಸಿ ಮುಂಗಡ ಹಣಕ್ಕೆ ಸರಿ ಹೊಂದಿಸಿರುವುದಿಲ್ಲ.

 

ಅಲ್ಲದೆ ಖರೀದಿದಾರರಿಂದ ಹಾಗೂ ಇತರರಿಗೆ ನಿಗಮಕ್ಕೆ ಬರಬೇಕಿದ್ದ ಬಾಕಿ 3.78 ಕೋಟಿ ರು. ವಸೂಲಿ ಮಾಡಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆದೇಶದಲ್ಲಿ ವಿವರಿಸಲಾಗಿದೆ.

Hot this week

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

Topics

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

Related Articles

Popular Categories

spot_imgspot_img
error: Content is protected !!