Tuesday | August 25, 2026 |

ಅರಣ್ಯ ಉತ್ಪನ್ನ ಸಾಗಾಣಿಕೆಯಲ್ಲಿ ಭ್ರಷ್ಟಾಚಾರ; 7.50 ಕೋಟಿ ಮುಂಗಡ ಹಣಕ್ಕೆ ಲೆಕ್ಕವೇ ಇಲ್ಲ

ಬೆಂಗಳೂರು; ಅರಣ್ಯ ಉತ್ಪನ್ನಗಳನ್ನು ಸಾಗಾಣಿಕೆ ಮಾಡುವ ಸಂಬಂಧ ನೀಡಿದ್ದ ಕೋಟ್ಯಂತರ ರುಪಾಯಿ ಮುಂಗಡ ಹಣವನ್ನು ಬಳಸಿಕೊಂಡಿರುವ ಅರಣ್ಯಾಧಿಕಾರಿಗಳು , ಲಾಗಿಂಗ್‌ ಮೇಲ್ವಿಚಾರಕರು , ಆರ್‌ಎಂಪಿ ಘಟಕದ ಪ್ರಾದೇಶಿಕ ವ್ಯವಸ್ಥಾಪಕರು ಲೆಕ್ಕಪತ್ರಗಳನ್ನು ಸಲ್ಲಿಸಲು ಮುಂದಾಗಿಲ್ಲ.

 

ಅಲ್ಲದೇ ಮುಂಗಡ ಹಣಕ್ಕೆ ಸರಿ ಹೊಂದಿಸದೇ ಇರುವ ಹಲವಾರು ಪ್ರಕರಣಗಳು ಮತ್ತು ನಿಗಮಕ್ಕೆ ಬರಬೇಕಿರುವ ಬಹುಕೋಟಿ ರು.ಗಳಷ್ಟು ಬಾಕಿ ಹಣವನ್ನೂ ವಸೂಲು ಮಾಡಲು ಯಾವುದೇ ಕ್ರಮಗಳನ್ನೂ ಕೈಗೊಂಡಿಲ್ಲ ಎಂಬುದು ಸೇರಿದಂತೆ ಆರ್ಥಿಕ ಅಶಿಸ್ತಿನ ಹಲವು ಪ್ರಕರಣಗಳು ಇದೀಗ ಬಹಿರಂಗವಾಗಿದೆ.
ಅಲ್ಲದೇ ನೆಡುತೋಪುಗಳಲ್ಲಿನ ಯೋಗ್ಯವಾದ ವಿವಿಧ ಜಾತಿಯ ಮರಗಳನ್ನು ಕಡಿದು ನಿಗದಿಪಡಿಸಿದ ಡಿಪೋಗಳಿಗೆ ಅರಣ್ಯ ಉತ್ಪನ್ನಗಳನ್ನು ಸಾಗಾಣಿಕೆ ಮಾಡುವುದರಲ್ಲಿ ದೊಡ್ಡಮಟ್ಟದ ಭ್ರಷ್ಟಾಚಾರ ನಡೆದಿದೆ ಎಂಬ ಗುರುತರವಾದ ಆರೋಪಗಳು ಕೇಳಿ ಬಂದಿವೆ.

 

ಇದಕ್ಕೆ ಪೂರಕವಾಗಿ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಆರ್‌ಎಂಪಿ ಘಟಕದ ಪ್ರಾದೇಶಿಕ ವ್ಯವಸ್ಥಾಪಕ ಎಂ ಬಿ ಸುಧೀಂದ್ರನಾಯಕ್‌ ಅವರ ಪ್ರಕರಣವು ನಿದರ್ಶನವನ್ನು ಒದಗಿಸಿದೆ. 7.82 ಕೋಟಿ ರು. ಮುಂಗಡ ಹಣ ಪಡೆದಿದ್ದ ಸುಧೀಂದ್ರನಾಯಕ್‌ ಅವರು ಈ ಹಣವನ್ನು ವಿನಿಯೋಗಿಸಿದ ಬಗ್ಗೆ ಲೆಕ್ಕಪತ್ರಗಳನ್ನು ಸಲ್ಲಿಸಿಲ್ಲ. ಹಾಗೂ ಮುಂಗಡ ಹಣಕ್ಕೆ ಸರಿಹೊಂದಿಸಿಲ್ಲ. ಹೀಗಾಗಿ ಇವರನ್ನು ಅಮಾನತು ಮಾಡಿ 2022ರ ಅಕ್ಟೋಬರ್‌ 25ರಂದು ಆದೇಶ ಹೊರಡಿಸಲಾಗಿದೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಈ ಹಿನ್ನೆಲೆಯಲ್ಲಿ ‘ಕರ್ನಾಟಕ ನಾಗರಿಕ ಸೇವಾ ನಿಯಮಗಳು 1966ರ ನಿಯಮ 3ರಂತೆ ಕರ್ತವ್ಯದಲ್ಲಿ ಅಶಿಸ್ತು ಮತ್ತು ಅನಧಿಕೃತ ಗೈರು ಹಾಜರಿ ಇರುವುದರಿಂದ ಮತ್ತು ತೀವ್ರ ಆರ್ಥಿಕ ದುರ್ಬಳಕೆ ಅಶಿಸ್ತಿನ ಕಾರಣ ಎಂ ಬಿ ಸುಧೀಂದ್ರನಾಯಕ ಅವರ ವಿರುದ್ಧ ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ನಿಗಮದ ಸೇವೆಯಿಂದ ಅಮಾನತುಗೊಳಿಸಲಾಗಿದೆ,’ ಎಂದು ಆದೇಶದಲ್ಲಿ ವಿವರಿಸಲಾಗಿದೆ.

 

ಆದೇಶದಲ್ಲೇನಿದೆ?

 

ಅರಣ್ಯ ಇಲಾಖೆಯು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮಕ್ಕೆ ವಹಿಸಿಕೊಡುವ ವಿವಿಧ ವಿಭಾಗಗಳಲ್ಲಿನ ಆಯ್ದ ನೆಡುತೋಪುಗಳಲ್ಲಿನ ಮರಗಳನ್ನು ಕಡಿಯಲು ಯೋಗ್ಯವಾದ ವಿವಿಧ ಜಾತಿಯ ಮರಗಳನ್ನು ಕಡಿದು ನಿಗದಿಪಡಿಸಿದ ಡಿಪೋಗಳಿಗೆ ಅರಣ್ಯ ಉತ್ಪನ್ನಗಳನ್ನು ಸಾಗಾಣಿಕೆ ಮಾಡಬೇಕಿದೆ. ಈ ರೀತಿ ಕಾಮಗಾರಿಗಳಿಗಾಗಿ ಆರ್‌ಎಂಪಿ ಘಟಕದ ಪ್ರಾದೇಶಿಕ ವ್ಯವಸ್ಥಾಪಕ (ಹೆಚ್ಚುವರಿ ಪ್ರಭಾರ) ಎಂ ಬಿ ಸುಧೀಂದ್ರನಾಯಕ್‌ ಎಂಬುವರಿಗೆ 7.82 ಕೋಟಿ ರು. ಮುಂಗಡ ಹಣ ನೀಡಲಾಗಿತ್ತು.

 

ಆದರೆ ಈ ಹಣವನ್ನು ಉಪಯೋಗಿಸಿಕೊಂಡು ಕಾಮಗಾರಿ ಕೈಗೊಂಡ ಅರಣ್ಯ ಉತ್ಪನ್ನಗಳನ್ನು ತಯಾರಿಸಿ ಡಿಪೋಗಳಿಗೆ ಸಾಗಿಸಿದ ಕುರಿತು ಯಾವುದೇ ಪ್ರಗತಿ ವರದಿಗಳನ್ನು ಸಲ್ಲಿಸಿಲ್ಲ. ಅಲ್ಲದೇ ಈ ಹಣವನ್ನು ವಿನಿಯೋಗಿಸಿದ ಬಗ್ಗೆ ಲೆಕ್ಕಪತ್ರಗಳನ್ನು ಸಲ್ಲಿಸಿ ಮುಂಗಡ ಹಣಕ್ಕೆ ಸರಿ ಹೊಂದಿಸಿರುವುದಿಲ್ಲ.

 

ಅಲ್ಲದೆ ಖರೀದಿದಾರರಿಂದ ಹಾಗೂ ಇತರರಿಗೆ ನಿಗಮಕ್ಕೆ ಬರಬೇಕಿದ್ದ ಬಾಕಿ 3.78 ಕೋಟಿ ರು. ವಸೂಲಿ ಮಾಡಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆದೇಶದಲ್ಲಿ ವಿವರಿಸಲಾಗಿದೆ.

Hot this week

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...
Please Scan to make Your Contribution

Topics

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

Related Articles

Popular Categories

error: Content is protected !!