Saturday | July 11, 2026 |

ಅರಣ್ಯ ಉತ್ಪನ್ನ ಸಾಗಾಣಿಕೆಯಲ್ಲಿ ಭ್ರಷ್ಟಾಚಾರ; 7.50 ಕೋಟಿ ಮುಂಗಡ ಹಣಕ್ಕೆ ಲೆಕ್ಕವೇ ಇಲ್ಲ

ಬೆಂಗಳೂರು; ಅರಣ್ಯ ಉತ್ಪನ್ನಗಳನ್ನು ಸಾಗಾಣಿಕೆ ಮಾಡುವ ಸಂಬಂಧ ನೀಡಿದ್ದ ಕೋಟ್ಯಂತರ ರುಪಾಯಿ ಮುಂಗಡ ಹಣವನ್ನು ಬಳಸಿಕೊಂಡಿರುವ ಅರಣ್ಯಾಧಿಕಾರಿಗಳು , ಲಾಗಿಂಗ್‌ ಮೇಲ್ವಿಚಾರಕರು , ಆರ್‌ಎಂಪಿ ಘಟಕದ ಪ್ರಾದೇಶಿಕ ವ್ಯವಸ್ಥಾಪಕರು ಲೆಕ್ಕಪತ್ರಗಳನ್ನು ಸಲ್ಲಿಸಲು ಮುಂದಾಗಿಲ್ಲ.

 

ಅಲ್ಲದೇ ಮುಂಗಡ ಹಣಕ್ಕೆ ಸರಿ ಹೊಂದಿಸದೇ ಇರುವ ಹಲವಾರು ಪ್ರಕರಣಗಳು ಮತ್ತು ನಿಗಮಕ್ಕೆ ಬರಬೇಕಿರುವ ಬಹುಕೋಟಿ ರು.ಗಳಷ್ಟು ಬಾಕಿ ಹಣವನ್ನೂ ವಸೂಲು ಮಾಡಲು ಯಾವುದೇ ಕ್ರಮಗಳನ್ನೂ ಕೈಗೊಂಡಿಲ್ಲ ಎಂಬುದು ಸೇರಿದಂತೆ ಆರ್ಥಿಕ ಅಶಿಸ್ತಿನ ಹಲವು ಪ್ರಕರಣಗಳು ಇದೀಗ ಬಹಿರಂಗವಾಗಿದೆ.
ಅಲ್ಲದೇ ನೆಡುತೋಪುಗಳಲ್ಲಿನ ಯೋಗ್ಯವಾದ ವಿವಿಧ ಜಾತಿಯ ಮರಗಳನ್ನು ಕಡಿದು ನಿಗದಿಪಡಿಸಿದ ಡಿಪೋಗಳಿಗೆ ಅರಣ್ಯ ಉತ್ಪನ್ನಗಳನ್ನು ಸಾಗಾಣಿಕೆ ಮಾಡುವುದರಲ್ಲಿ ದೊಡ್ಡಮಟ್ಟದ ಭ್ರಷ್ಟಾಚಾರ ನಡೆದಿದೆ ಎಂಬ ಗುರುತರವಾದ ಆರೋಪಗಳು ಕೇಳಿ ಬಂದಿವೆ.

 

ಇದಕ್ಕೆ ಪೂರಕವಾಗಿ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಆರ್‌ಎಂಪಿ ಘಟಕದ ಪ್ರಾದೇಶಿಕ ವ್ಯವಸ್ಥಾಪಕ ಎಂ ಬಿ ಸುಧೀಂದ್ರನಾಯಕ್‌ ಅವರ ಪ್ರಕರಣವು ನಿದರ್ಶನವನ್ನು ಒದಗಿಸಿದೆ. 7.82 ಕೋಟಿ ರು. ಮುಂಗಡ ಹಣ ಪಡೆದಿದ್ದ ಸುಧೀಂದ್ರನಾಯಕ್‌ ಅವರು ಈ ಹಣವನ್ನು ವಿನಿಯೋಗಿಸಿದ ಬಗ್ಗೆ ಲೆಕ್ಕಪತ್ರಗಳನ್ನು ಸಲ್ಲಿಸಿಲ್ಲ. ಹಾಗೂ ಮುಂಗಡ ಹಣಕ್ಕೆ ಸರಿಹೊಂದಿಸಿಲ್ಲ. ಹೀಗಾಗಿ ಇವರನ್ನು ಅಮಾನತು ಮಾಡಿ 2022ರ ಅಕ್ಟೋಬರ್‌ 25ರಂದು ಆದೇಶ ಹೊರಡಿಸಲಾಗಿದೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಈ ಹಿನ್ನೆಲೆಯಲ್ಲಿ ‘ಕರ್ನಾಟಕ ನಾಗರಿಕ ಸೇವಾ ನಿಯಮಗಳು 1966ರ ನಿಯಮ 3ರಂತೆ ಕರ್ತವ್ಯದಲ್ಲಿ ಅಶಿಸ್ತು ಮತ್ತು ಅನಧಿಕೃತ ಗೈರು ಹಾಜರಿ ಇರುವುದರಿಂದ ಮತ್ತು ತೀವ್ರ ಆರ್ಥಿಕ ದುರ್ಬಳಕೆ ಅಶಿಸ್ತಿನ ಕಾರಣ ಎಂ ಬಿ ಸುಧೀಂದ್ರನಾಯಕ ಅವರ ವಿರುದ್ಧ ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ನಿಗಮದ ಸೇವೆಯಿಂದ ಅಮಾನತುಗೊಳಿಸಲಾಗಿದೆ,’ ಎಂದು ಆದೇಶದಲ್ಲಿ ವಿವರಿಸಲಾಗಿದೆ.

 

ಆದೇಶದಲ್ಲೇನಿದೆ?

 

ಅರಣ್ಯ ಇಲಾಖೆಯು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮಕ್ಕೆ ವಹಿಸಿಕೊಡುವ ವಿವಿಧ ವಿಭಾಗಗಳಲ್ಲಿನ ಆಯ್ದ ನೆಡುತೋಪುಗಳಲ್ಲಿನ ಮರಗಳನ್ನು ಕಡಿಯಲು ಯೋಗ್ಯವಾದ ವಿವಿಧ ಜಾತಿಯ ಮರಗಳನ್ನು ಕಡಿದು ನಿಗದಿಪಡಿಸಿದ ಡಿಪೋಗಳಿಗೆ ಅರಣ್ಯ ಉತ್ಪನ್ನಗಳನ್ನು ಸಾಗಾಣಿಕೆ ಮಾಡಬೇಕಿದೆ. ಈ ರೀತಿ ಕಾಮಗಾರಿಗಳಿಗಾಗಿ ಆರ್‌ಎಂಪಿ ಘಟಕದ ಪ್ರಾದೇಶಿಕ ವ್ಯವಸ್ಥಾಪಕ (ಹೆಚ್ಚುವರಿ ಪ್ರಭಾರ) ಎಂ ಬಿ ಸುಧೀಂದ್ರನಾಯಕ್‌ ಎಂಬುವರಿಗೆ 7.82 ಕೋಟಿ ರು. ಮುಂಗಡ ಹಣ ನೀಡಲಾಗಿತ್ತು.

 

ಆದರೆ ಈ ಹಣವನ್ನು ಉಪಯೋಗಿಸಿಕೊಂಡು ಕಾಮಗಾರಿ ಕೈಗೊಂಡ ಅರಣ್ಯ ಉತ್ಪನ್ನಗಳನ್ನು ತಯಾರಿಸಿ ಡಿಪೋಗಳಿಗೆ ಸಾಗಿಸಿದ ಕುರಿತು ಯಾವುದೇ ಪ್ರಗತಿ ವರದಿಗಳನ್ನು ಸಲ್ಲಿಸಿಲ್ಲ. ಅಲ್ಲದೇ ಈ ಹಣವನ್ನು ವಿನಿಯೋಗಿಸಿದ ಬಗ್ಗೆ ಲೆಕ್ಕಪತ್ರಗಳನ್ನು ಸಲ್ಲಿಸಿ ಮುಂಗಡ ಹಣಕ್ಕೆ ಸರಿ ಹೊಂದಿಸಿರುವುದಿಲ್ಲ.

 

ಅಲ್ಲದೆ ಖರೀದಿದಾರರಿಂದ ಹಾಗೂ ಇತರರಿಗೆ ನಿಗಮಕ್ಕೆ ಬರಬೇಕಿದ್ದ ಬಾಕಿ 3.78 ಕೋಟಿ ರು. ವಸೂಲಿ ಮಾಡಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆದೇಶದಲ್ಲಿ ವಿವರಿಸಲಾಗಿದೆ.

Hot this week

ಕಸದ ವಾಹನಗಳ ಇಂಧನಕ್ಕೆ ಸಾವಿರಾರು ಲೀಟರ್‌ ಪೆಟ್ರೋಲ್, ಡೀಸೆಲ್ ಬಳಕೆ; ನಗರಾಭಿವೃದ್ಧಿ ಸಚಿವರ ತವರಲ್ಲೇ ಇ ವಿ ವಾಹನಗಳ ಬಳಕೆಗೆ ಉದಾಸೀನತೆ

ಮೈಸೂರು; ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ಕಸ ವಿಲೇವಾರಿ ಮಾಡುತ್ತಿರುವ ಒಟ್ಟು ವಾಹನಗಳ...

ಪಿಎಸ್‌ಐ ನೇಮಕಾತಿ ಹಗರಣ; ಎಡಿಜಿಪಿ ಅಮೃತ್‌ ಪೌಲ್ ವಿರುದ್ಧ 4 ವರ್ಷಗಳ ಬಳಿಕ ಇಲಾಖೆ ವಿಚಾರಣೆ ಪ್ರಕ್ರಿಯೆಗೆ ಚಾಲನೆ, ದೋಷಾರೋಪಣೆ ಪಟ್ಟಿ ಜಾರಿ

ಬೆಂಗಳೂರು; ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಪ್ರಕರಣದ ಹಗರಣದಲ್ಲಿ ಆರೋಪಿಯಾಗಿ, ಅಮಾನತುಗೊಂಡಿರುವ ಪೊಲೀಸ್‌...

ಸುರಂಗ ಮಾರ್ಗ; ಅದಾನಿ ಎಂಟರ್ ಪ್ರೈಸೆಸ್‌ಗೆ ಬಿಟ್ಟಿ ರಿಯಲ್‌ ಎಸ್ಟೇಟ್‌ ಆದಾಯ ಭಾಗ್ಯ ಕರುಣಿಸಲಿದೆಯೇ ಸರ್ಕಾರ?

ಬೆಂಗಳೂರು; ಹೆಬ್ಬಾಳದಿಂದ ಸಿಲ್ಕ್ ಬೋರ್ಡ್‌ವರೆಗೆ ಉದ್ದೇಶಿತ  ಸುರಂಗ ಮಾರ್ಗ ನಿರ್ಮಾಣದ ಹೆಸರಿನಲ್ಲಿ...
Please Scan to make Your Contribution

Topics

ಪಿಎಸ್‌ಐ ನೇಮಕಾತಿ ಹಗರಣ; ಎಡಿಜಿಪಿ ಅಮೃತ್‌ ಪೌಲ್ ವಿರುದ್ಧ 4 ವರ್ಷಗಳ ಬಳಿಕ ಇಲಾಖೆ ವಿಚಾರಣೆ ಪ್ರಕ್ರಿಯೆಗೆ ಚಾಲನೆ, ದೋಷಾರೋಪಣೆ ಪಟ್ಟಿ ಜಾರಿ

ಬೆಂಗಳೂರು; ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಪ್ರಕರಣದ ಹಗರಣದಲ್ಲಿ ಆರೋಪಿಯಾಗಿ, ಅಮಾನತುಗೊಂಡಿರುವ ಪೊಲೀಸ್‌...

ಸುರಂಗ ಮಾರ್ಗ; ಅದಾನಿ ಎಂಟರ್ ಪ್ರೈಸೆಸ್‌ಗೆ ಬಿಟ್ಟಿ ರಿಯಲ್‌ ಎಸ್ಟೇಟ್‌ ಆದಾಯ ಭಾಗ್ಯ ಕರುಣಿಸಲಿದೆಯೇ ಸರ್ಕಾರ?

ಬೆಂಗಳೂರು; ಹೆಬ್ಬಾಳದಿಂದ ಸಿಲ್ಕ್ ಬೋರ್ಡ್‌ವರೆಗೆ ಉದ್ದೇಶಿತ  ಸುರಂಗ ಮಾರ್ಗ ನಿರ್ಮಾಣದ ಹೆಸರಿನಲ್ಲಿ...

ಈಶಾ ಎಜುಕೇಷನ್, ಈಶಾ ಯೋಗ ಸೆಂಟರ್‍‌ಗೆ ಅಕ್ರಮ ಲಾಭ, ಸರ್ಕಾರಕ್ಕೆ ವಂಚನೆ, ದ್ರೋಹ ಆರೋಪ; ದಿ ಫೈಲ್ ವರದಿ ಬೆನ್ನಲ್ಲೇ ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಸರ್ಕಾರ

ಬೆಂಗಳೂರು; ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದಲ್ಲಿನ ವಿವಿಧ ಸರ್ವೇ ನಂಬರ್‍‌ಗಳಲ್ಲಿ ಒಟ್ಟಾರೆ...

Related Articles

Popular Categories

error: Content is protected !!