Saturday | March 21, 2026 |

ಸಿಎಂ ಆಪ್ತ ಸಹಾಯಕನನ್ನೇ ಹನಿಟ್ರ್ಯಾಪ್‌ ಬಲೆಗೆ ಕೆಡವಿತ್ತೇ, ಬಿಜೆಪಿ ಶಾಸಕಾಂಗ ಕಚೇರಿಯ ಗುತ್ತಿಗೆ ನೌಕರನ ಕೂಟ?

Support THE-FILE

spot_img

ಬೆಂಗಳೂರು; ವಿಧಾನಸೌಧದ ಮೊದಲನೇ ಮಹಡಿಯಲ್ಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯ ಗುತ್ತಿಗೆ ನೌಕರ ಮತ್ತು ವಿಧಾನ ಪರಿಷತ್‌ ಸಚಿವಾಲಯದ ಡಿ ಗ್ರೂಪ್‌ ಮಹಿಳಾ ನೌಕರಳೊಬ್ಬಳು ಶಾಮೀಲಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಪ್ತ ಸಹಾಯಕನನ್ನೇ ಹನಿಟ್ರ್ಯಾಪ್‌ ಬಲೆಗೆ ಕೆಡವಿದ್ದರು ಎಂಬ ಸ್ಫೋಟಕ ಮಾಹಿತಿ ತಿಳಿದು ಬಂದಿದೆ.

 

ಮುಖ್ಯಮಂತ್ರಿಗಳ ಸಚಿವಾಲಯವು ದೀಪಾವಳಿ ಹಬ್ಬದ ಸೋಗಿನಲ್ಲಿ ಪತ್ರಕರ್ತರಿಗೆ ಸ್ವೀಟ್‌ ಬಾಕ್ಸ್‌ ಮತ್ತು ಲಕ್ಷಾಂತರ ರು. ಮೊತ್ತದ ನಗದು ಹಣವನ್ನು ನೀಡಿತ್ತು ಎಂಬ ಗಂಭೀರ ಆರೋಪಕ್ಕೆ ಗುರಿಯಾಗಿ ಇಕ್ಕಟ್ಟಿನಲ್ಲಿ ಸಿಲುಕಿದೆ. ಇದೀಗ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯ ಗುತ್ತಿಗೆ ನೌಕರನೊಬ್ಬ ಡಿ ಗ್ರೂಪ್‌ ಮಹಿಳಾ ನೌಕರೊಬ್ಬಳನ್ನು ಬಳಸಿಕೊಂಡು ಮುಖ್ಯಮಂತ್ರಿಗಳ ಆಪ್ತ ಸಹಾಯಕನನ್ನೇ ಹನಿಟ್ರ್ಯಾಪ್‌ ಬಲೆಗೆ ಕೆಡವಲಾಗಿತ್ತು ಎಂಬ ಪ್ರಕರಣವು ಮುಖ್ಯಮಂತ್ರಿಗಳ ಸಚಿವಾಲಯವನ್ನು ಇನ್ನಷ್ಟು ಆಳಕ್ಕೆ ದೂಡಿದೆ.

 

ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯ ಗುತ್ತಿಗೆ ನೌಕರನೇ ಮುಖ್ಯಮಂತ್ರಿಗಳ ಆಪ್ತ ಸಹಾಯಕನನ್ನು ಹನಿಟ್ರ್ಯಾಪ್‌ ಬಲೆಗೆ ಕೆಡವಿದ್ದ ಎಂಬ   ಪ್ರಕರಣವು ಬಿಜೆಪಿ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯ ಗುತ್ತಿಗೆ ನೌಕರನು  ಹತ್ತಾರು ಹನಿಟ್ರ್ಯಾಪ್‌ ಮಾಡಿಸಿದ್ದಾನೆ ಎಂಬ ಮಾತುಗಳು ಕೇಳಿ ಬರುತ್ತಿವೆ.

 

ಹನಿಟ್ರ್ಯಾಪ್‌ ಪ್ರಕರಣವು ಗಮನಕ್ಕೆ ಬರುತ್ತಿದ್ದಂತೆ ಮುಖ್ಯಮಂತ್ರಿ ಸಚಿವಾಲಯದ ಉನ್ನತ ಅಧಿಕಾರಿಗಳು ತಕ್ಷಣವೇ ಮಧ್ಯಪ್ರವೇಶಿಸಿ ದೂರು ದಾಖಲಾಗದಂತೆ ಸಂಧಾನದ ಮೂಲಕ ಇತ್ಯರ್ಥಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಗೊತ್ತಾಗಿದೆ. ಅಲ್ಲದೇ ಹನಿಟ್ರ್ಯಾಪ್‌ಗೆ ಒಳಗಾಗಿದ್ದ ಎಂದು ಹೇಳಲಾಗಿರುವ ಸಚಿವಾಲಯದ ಸಿ ಗುಂಪಿನ ನೌಕರನನ್ನು ಮುಖ್ಯಮಂತ್ರಿಗಳ ಆಪ್ತ ಸಹಾಯಕನ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ. ಆತ ಈಗಾಗಲೇ ಬಹುಮಹಡಿ ಕಟ್ಟಡದಲ್ಲಿರುವ ಡಿಪಿಎಆರ್‌ ಕಚೇರಿಗೆ ವರದಿ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

 

ಮತ್ತೊಂದು ಮೂಲದ ಪ್ರಕಾರ ಹನಿಟ್ರ್ಯಾಪ್‌ಗೆ ಒಳಗಾಗಿದ್ದಾನೆ ಎಂದು ಹೇಳಲಾಗಿರುವ ಮುಖ್ಯಮಂತ್ರಿಗಳ ಆಪ್ತ ಸಹಾಯಕ, ವಿಧಾನಪರಿಷತ್‌ ಸಚಿವಾಲಯದ ಡಿ ಗ್ರೂಪ್‌ ಮಹಿಳಾ ನೌಕರಳ ಹೆಸರಿನಲ್ಲಿ ಕನಕಪುರದ ಬಳಿ 13 ಎಕರೆ ಜಮೀನು ಖರೀದಿಸಿದ್ದ. ಈ ಜಮೀನಿನ ದಾಖಲೆಗಳನ್ನು ತನ್ನ ವಶಕ್ಕೆ ನೀಡಲು ಸಿಎಂ ಆಪ್ತ ಸಹಾಯಕನು ಒತ್ತಾಯಪಡಿಸಿದಾಗ ಆಕೆ ವಿಡಿಯೋ ಮತ್ತು ಆಡಿಯೋವನ್ನು ತೋರಿಸಿ ಬ್ಲಾಕ್‌ಮೇಲ್‌ ಮಾಡಿದ್ದಳು ಎಂದೂ ಹೇಳಲಾಗುತ್ತಿದೆ.

 

‘ಬಿಜೆಪಿ ಶಾಸಕಾಂಗದ ಪಕ್ಷದ ಕಚೇರಿಯ ಗುತ್ತಿಗೆ ನೌಕರನೇ ಮುಖ್ಯಮಂತ್ರಿಗಳ ಆಪ್ತ ಸಹಾಯಕನನ್ನು ಹನಿಟ್ರ್ಯಾಪ್‌ ಮಾಡಿಸಿರುವುದು ನಿಜಕ್ಕೂ ಬೆಚ್ಚಿ ಬೀಳಿಸುವಂತದ್ದು. ವಿಧಾನಸೌಧದ ಕಟ್ಟಡದಲ್ಲೇ ಇಂತಹ ತಂಡವೊಂದು ಕಾರ್ಯಾಚರಿಸುತ್ತಿರುವುದು ನಿಜಕ್ಕೂ ಗಾಬರಿಬೀಳಿಸುವಂತಿದೆ. ಈ ಪ್ರಕರಣವನ್ನು ತನಿಖೆಗೊಳಪಡಿಸಿದ್ದರೆ ಇನ್ನಷ್ಟು ಪ್ರಕರಣಗಳು ಹೊರಬೀಳುತ್ತಿದ್ದವು. ಆದರೆ ದೂರು ದಾಖಲಾಗದಂತೆ ಉನ್ನತ ಅಧಿಕಾರಿಗಳು ನೋಡಿಕೊಂಡಿರುವುದರ ಹಿಂದೆ ಅವರೂ ಸಹ ಈ ಬಲೆಗೆ ಬಿದ್ದಿದ್ದಾರೆ ಎಂದೆನಿಸುತ್ತದೆ,’ ಎನ್ನುತ್ತಾರೆ ಮುಖ್ಯಮಂತ್ರಿಗಳ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು.

 

ಈ ಕುರಿತು ಪ್ರತಿಕ್ರಿಯೆಗಾಗಿ  ಮುಖ್ಯಮಂತ್ರಿಗಳ ಆಪ್ತ ಸಹಾಯಕನಿಗೆ  ‘ದಿ ಫೈಲ್‌’ ವಾಟ್ಸಾಪ್‌ ಮೂಲಕ ಸಂಪರ್ಕಿಸಿದೆ. ಪ್ರತಿಕ್ರಿಯೆ ನೀಡಿದ ನಂತರ ಅದನ್ನು ವರದಿಯಲ್ಲಿ ಸೇರ್ಪಡೆಗೊಳಿಸಿ ಅಪ್‌ಡೇಟ್‌ ಮಾಡಲಾಗುವುದು.

Hot this week

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

Topics

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

Related Articles

Popular Categories

error: Content is protected !!