Saturday | May 2, 2026 |

ನ್ಯಾಕ್‌ ಸಮಿತಿ ಪರಿಶೀಲನೆ ಪ್ರಕ್ರಿಯೆಗೆ 2 ಕೋಟಿಗೂ ಹೆಚ್ಚು ವೆಚ್ಚ; ವರದಿ ನೀಡಲು ನಿರ್ದೇಶನ ನೀಡಿದ ಸರ್ಕಾರ

ಬೆಂಗಳೂರು; ದಾವಣಗೆರೆ ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿ ನೇಮಕಗೊಳಿಸಲು ಶೋಧನಾ ಸಮಿತಿಯು ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದ ಸಂದರ್ಭದಲ್ಲೇ ವಿಶ್ವವಿದ್ಯಾಲಯದ ಅಧಿಕಾರಿಗಳು 10 ಸೂಟ್‌ಕೇಸ್‌ಗಳನ್ನು ಖರೀದಿಸಲಾಗಿತ್ತು ಎಂದು ‘ದಿ ಫೈಲ್‌’ ಪ್ರಕಟಿಸಿದ ವರದಿ ಚರ್ಚೆ ಹುಟ್ಟುಹಾಕಿರುವ ಬೆನ್ನಲ್ಲೇ ಇದೇ ದಾವಣಗೆರೆ ವಿಶ್ವವಿದ್ಯಾಲಯಕ್ಕೆ ನ್ಯಾಕ್‌ ಸಮಿತಿಯು ಭೇಟಿ ನೀಡಿದಾಗಲೂ 2 ಕೋಟಿ ರು.ಗೂ ಹೆಚ್ಚು ಹಣವನ್ನು ಖರ್ಚು ಮಾಡಲಾಗಿತ್ತು ಎಂಬುದು ಇದೀಗ ಬಹಿರಂಗಗೊಂಡಿದೆ.

 

ನ್ಯಾಕ್‌ ಸಮಿತಿಗೆ ಎಷ್ಟೆಷ್ಟು ಹಣ ಖರ್ಚಾಗಿದೆ ಎಂಬುದನ್ನು ಪತ್ತೆ ಹಚ್ಚಿರುವ ವಿಶ್ವವಿದ್ಯಾಲಯದ ಸಿಂಡಿಕೇಟ್‌ನ ಉಪ ಸಮಿತಿಯ ಸದಸ್ಯರು ವಿ ವಿ ಬೊಕ್ಕಸದಿಂದ ಹಣ ಹೇಗೆ ಲೂಟಿಯಾಗುತ್ತಿದೆ ಎಂಬುದನ್ನೂ ಹೊರಗೆಳೆದಿದ್ದಾರೆ. ಸಿಂಡಿಕೇಟ್‌ ಸದಸ್ಯರುಗಳು ನೀಡಿದ್ದ ದೂರನ್ನಾಧರಿಸಿ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯು ಈ ಸಂಬಂಧ ಒಂದು ವಾರದೊಳಗೆ ವರದಿ ಸಲ್ಲಿಸಬೇಕು ಎಂದು 2022ರ ನವೆಂಬರ್‌ 10ರಂದೇ ನಿರ್ದೇಶನ ನೀಡಿದ್ದಾರೆ. ವಿಶ್ವವಿದ್ಯಾಲಯದ ಕುಲಸಚಿವರಿಗೆ ನಿರ್ದೇಶನ ನೀಡಿರುವ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

‘ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ, ಹಣ ದುರುಪಯೋಗಕ್ಕೆ ಸಂಬಂಧಿಸಿದಂತೆ ಸಿಂಡಿಕೇಟ್‌ ಮತ್ತು ಸರ್ಕಾರದ ಗಮನಕ್ಕೆ ಬಾರದಂತೆ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಸಿಂಡಿಕೇಟ್‌ ಸದಸ್ಯರು ಸಲ್ಲಿಸಿರುವ ದೂರಿನಲ್ಲಿನ ಪ್ರತಿಯೊಂದು ಅಂಶಗಳಿಗೆ ಕಂಡಿಕೆವಾರು ಮಾಹಿತಿ/ವರದಿಯನ್ನು ಒಂದು ವಾರದೊಳಗೆ ನೀಡಬೇಕು,’ ಎಂದು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶೀತಲ್‌ ಎಂ ಹಿರೇಮಠ ಅವರು ಸೂಚಿಸಿದ್ದಾರೆ.

 

ನ್ಯಾಕ್‌ ಸಮಿತಿ ಭೇಟಿ ಮತ್ತು ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಆಗಿರುವ ವೆಚ್ಚವನ್ನು ಪರಿಶೀಲಿಸಿರುವ ಸಿಂಡಿಕೇಟ್‌ ಉಪ ಸಮಿತಿ ಸದಸ್ಯರುಗಳು ವೆಚ್ಚಕ್ಕೆ ಸಂಬಂಧಿಸಿದಂತೆ ನಿಯಮಗಳನ್ನು ಪಾಲಿಸಿಲ್ಲ ಎಂಬುದನ್ನೂ ಪತ್ತೆ ಹಚ್ಚಿದ್ದಾರೆ.

 

8ನೇ ಘಟಿಕೋತ್ಸವಕ್ಕೆ ಶಾಮೀಯಾನಕ್ಕೆ ಹೆಚ್ಚುವರಿಯಾಗಿ 5,86,548 ರು., ಊಟೋಪಚಾರಕ್ಕೆಂದು 1,87, 030 ರು. ವೆಚ್ಚ ಮಾಡಲಾಗಿದೆ. 9ನೇ ಘಟಿಕೋತ್ಸವಕ್ಕೆ ಸಂಬಂಧಿಸಿದಂತೆ ಶಾಮೀಯಾನಕ್ಕೆ 6,39,029 ರು., ಊಟೋಪಚಾರಕ್ಕೆಂದು 3,98,899 ರು.ಗಳನ್ನು ಹೆಚ್ಚುವರಿಯಾಗಿ ವೆಚ್ಚ ಮಾಡಲಾಗಿದೆ ಎಂದು ಸಿಂಡಿಕೇಟ್‌ ಉಪ ಸಮಿತಿ ಸದಸ್ಯರುಗಳು ಬಹಿರಂಗಗೊಳಿಸಿದ್ದಾರೆ.

 

ಇದಲ್ಲದೇ ಸರ್ಕಾರದ ಜತೆ ಸಮಾಲೋಚನೆ ನಡೆಸದೆಯೇ 10 ಬೋಧಕೇತರ ಹುದ್ದೆಗಳಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನು 2022ರ ಸೆ.19ರಂದು ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ 2016,2017, 2018ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತಲ್ಲದೇ ಈಗಾಗಲೇ ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆಯೂ ನಡೆಸಲಾಗಿದೆ. ಅರ್ಹತಾ ಪಟ್ಟಿ ಸಿದ್ಧಗೊಂಡಿದ್ದರೂ ಇನ್ನೂ ಪ್ರಕಟಿಸಿಲ್ಲ ಎಂದು ಸಿಂಡಿಕೇಟ್‌ ಸದಸ್ಯರುಗಳು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

 

ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಆಯ್ಕೆ ಪ್ರಕ್ರಿಯೆ ವೇಳೆಯಲ್ಲಿ ವಿ ವಿ ಅಧಿಕಾರಿಗಳು 10 ಸೂಟ್‌ಕೇಸ್‌ಗಳನ್ನು ಖರೀದಿಸಿದ್ದರು. ಮತ್ತು ಶೋಧನಾ ಸಮಿತಿಯ ಖರ್ಚು ವೆಚ್ಚಗಳಿಗಾಗಿ ಸಿಂಡಿಕೇಟ್‌ ಅನುಮೋದನೆಯಿಲ್ಲದೆಯೇ ಮುಂಗಡವಾಗಿ ಎ ಸಿ ಬಿಲ್‌ನಲ್ಲಿ 5.00 ಲಕ್ಷ ರು.ಗಳನ್ನು ವಿವಿ ಅಧಿಕಾರಿಗಳು ಪಡೆದಿದ್ದರು.

ಕುಲಪತಿ ನೇಮಕ ಪ್ರಕ್ರಿಯೆಗೆ 8 ಲಕ್ಷ ಖರ್ಚು; ಶೋಧನಾ ಸಮಿತಿ ಸದಸ್ಯರಿಗೆ 10 ಸೂಟ್‌ಕೇಸ್‌ ಖರೀದಿ

ಹಾಗೂ ಶೋಧನಾ ಸಮಿತಿಯ ಸದಸ್ಯರುಗಳಿಗೆ ಬ್ಯುಸಿನೆಸ್‌ ಕ್ಲಾಸ್‌ ವಿಮಾನಯಾನ ದರ ಪಾವತಿಸಲಾಗಿತ್ತು. ನೂತನ ಕುಲಪತಿಗಳ ಆಯ್ಕೆಗೆ ಸಂಬಂಧಿಸಿದಂತೆ ಒಟ್ಟು 8,06,209 ರು.ಗಳನ್ನು ಖರ್ಚು ಮಾಡಲಾಗಿತ್ತು ಎಂಬುದನ್ನು ಸಿಂಡಿಕೇಟ್‌ ಉಪ ಸಮಿತಿಯ ಅಧ್ಯಕ್ಷ ಡಾ ಶ್ರೀಧರ್‌ ಎಸ್‌ ನೇತೃತ್ವದ ಸಮಿತಿಯ ಸದಸ್ಯರು ಬಯಲಿಗೆಳೆದಿದ್ದನ್ನು ಸ್ಮರಿಸಬಹುದು.

Hot this week

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

Topics

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

Related Articles

Popular Categories

error: Content is protected !!