Saturday | March 7, 2026 |

ಮಹಾಯೋಜನೆಯಿಂದ ನಿರಾಣಿ ಶುಗರ್ಸ್‌ ಕೈಗಾರಿಕೆ ಜಮೀನು ಹೊರಗಿಡಲು ಸಚಿವರ ಒತ್ತಡ?

Support THE-FILE

spot_img

ಬೆಂಗಳೂರು; ಸಂಗಮೇಶ ಆರ್‌ ನಿರಾಣಿ ನಿರ್ದೇಶಕರಾಗಿರುವ ನಿರಾಣಿ ಶುಗರ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ ಸಂಬಂಧಿಸಿದ ಸರ್ವೆ ನಂಬರ್‌ಗಳನ್ನು ಮುಧೋಳ ಮಹಾಯೋಜನೆ ವ್ಯಾಪ್ತಿಯಿಂದ ಹೊರಗಿಡಬೇಕು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರೂ ಮತ್ತು ಎಂಆರ್‌ಎನ್‌ ಗ್ರೂಪ್‌ನ ಅಧ್ಯಕ್ಷರೂ ಆಗಿರುವ ಡಾ ಮುರುಗೇಶ ಆರ್‌ ನಿರಾಣಿ ಅವರು ಸರ್ಕಾರಕ್ಕೆ ಬರೆದಿರುವ ಟಿಪ್ಪಣಿಯು ಇದೀಗ ಬಹಿರಂಗವಾಗಿದೆ.

 

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರ ವಿಸ್ತರಿಸುವ ತಾತ್ಕಾಲಿಕ ಹೊಸ ಯೋಜನೆಯಲ್ಲಿ ನಿರಾಣಿ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದ ಸರ್ವೆ ನಂಬರ್‌ಗಳನ್ನು ಸೇರಿಸಲಾಗಿತ್ತು. ಈ ಕುರಿತು ಕಾರ್ಖಾನೆಯ ನಿರ್ದೇಶಕ ಸಂಗಮೇಶ ಆರ್‌ ನಿರಾಣಿ ಅವರು 2021ರ ಸೆಪ್ಟಂಬರ್‌ 30ರಂದು ನಗರ ಯೋಜನಾ ಪ್ರಾಧಿಕಾರದ ನಿರ್ದೇಶಕರಿಗೆ ಪತ್ರ ಬರೆದಿದ್ದರು. ಈ ಪತ್ರ ಬರೆದ ಒಂದು ವರ್ಷದ ನಂತರ ಕೈಗಾರಿಕೆ ಸಚಿವ ಡಾ ಮುರುಗೇಶ ಆರ್‌ ನಿರಾಣಿ ಅವರು 2022ರ ಆಗಸ್ಟ್‌ 24ರಂದು ಟಿಪ್ಪಣಿ ಬರೆದಿದ್ದಾರೆ. ಪತ್ರ ಮತ್ತು ಟಿಪ್ಪಣಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಮುಧೋಳ ಸ್ಥಳೀಯ ಯೋಜನಾ ಪ್ರಾಧಿಕಾರ ತಯಾರಿಸಿರುವ ವಿಸ್ತರಿತ ತಾತ್ಕಾಲಿಕ ಮಹಾ ಯೋಜನೆಯಲ್ಲಿ ಮುಧೋಳ ತಾಲೂಕಿನ ಕುಳಲಿ ಮತ್ತು ಮಾಲಾಪುರ ಗ್ರಾಮದ ವ್ಯಾಪ್ತಿಯಲ್ಲಿ ಬರುವ ನಿರಾಣಿ ಸಕ್ಕರೆ ಕಾರ್ಖಾನೆಗೆ ಸೇರಿದ ಭೂಮಿಯೂ ಸೇರಿರುವುದು ಪತ್ರದಿಂದ ತಿಳಿದು ಬಂದಿದೆ.

 

ಮುಧೋಳ (ಗ್ರಾಮಾಂತರ) ಗ್ರಾಮಕ್ಕೆ ಸಂಬಂಧಿಸಿದ ಸರ್ವೇ ನಂಬರ್‌ 166, 165, 158, 157, 143, 144, 154, 145, 156, 155, 159, 154, ಈ ಜಮೀನುಗಳು ಮಾಲಾಪುರ, ಕುಳಲಿ, ಸೋರಗಾವಿ ಗ್ರಾಮದ ಸರ್ವೆ ನಂಬರ್‌ಗಳು ಹೊಂದಿಕೊಂಡಿವೆ. ಮಾಲಾಪುರ ಗ್ರಾಮದ ಸರ್ವೆ ನಂಬರ್‌ಗಳಾದ 15,16,17,18,19,20,21,52,53,54,55,56,57,58 ಸರ್ವೆ ನಂಬರ್‌ಗಳಲ್ಲಿನ ಜಮೀನುಗಳು ಈ ಆದೇಶದಲ್ಲಿ ಸೇರ್ಪಡೆಗೊಂಡಿರುವುದು ಸಂಗಮೇಶ ಆರ್‌ ನಿರಾಣಿ ಅವರ ಪತ್ರದಿಂದ ಗೊತ್ತಾಗಿದೆ.

 

 

‘ನಮ್ಮ ಕೈಗಾರಿಕೆ ಪ್ರದೇಶದ ಸರ್ವೆ ನಂಬರ್‌ಗಳನ್ನು ಮುಧೋಳ ಪಟ್ಟಣದ ಮಹಾಯೋಜನೆಯ ವ್ಯಾಪ್ತಿಯಿಂದ ಹೊರಗುಳಿಸಿ ಕುಳಲಿ ಮತ್ತು ಮಾಲಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಒಳಪಡಿಸುವಂತೆ ಠರಾವು ಕೋರಿರುವುದರಿಂದ ಹಾಗೂ ಸಕ್ಕರೆ ಕಾರ್ಖಾನೆಯುಕೃಷಿ ಆಧರಿತ ಗ್ರಾಮೀಣ ಕೈಗಾರಿಕೆಯೆಂದು ಸರ್ಕಾರವು ಘೋಷಿಸಿರುವುದರಿಂದ ಸರ್ವೆ ನಂಬರ್‌ಗಳಲ್ಲಿನ ಜಮೀನುಗಳನ್ನು ಮುಧೋಳ ಮಹಾ ಯೋಜನೆಯ ವ್ಯಾಪ್ತಿಯಿಂದ ಹೊರಗಿಡುವಂತೆ ಆಕ್ಷೇಪಣೆ ಸಲ್ಲಿಸಲಾಗಿದೆ. ನಿರಾಣಿ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದ ಕೈಗಾರಿಕೆ ಜಮೀನುಗಳನ್ನು ಮಹಾಯೋಜನೆಯ ವ್ಯಾಪ್ತಿಯಿಂದ ಹೊರಗಿಡಲು ತಮ್ಮ ಶಿಫಾರಸ್ಸಿನೊಂದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು,’ ಎಂದು ಸಂಗಮೇಶ ಆರ್‌ ನಿರಾಣಿ ಅವರು ಪತ್ರದಲ್ಲಿ ಕೋರಿದ್ದರು.

 

ಈ ಪತ್ರ ಬರೆದ ಒಂದು ವರ್ಷದ ನಂತರ ಡಾ ಮುರುಗೇಶ ಆರ್‌ ನಿರಾಣಿ ಅವರೂ ಸರ್ಕಾರಕ್ಕೆ 2022ರ ಆಗಸ್ಟ್‌ 24ರಂದು ಟಿಪ್ಪಣಿ ಬರೆದಿದ್ದಾರೆ. ತಾತ್ಕಾಲಿಕ ಮಹಾಯೋಜನೆಯನ್ನು ಅಂತಿಮಗೊಳಿಸುವ ಬಗ್ಗೆ ನಗರ ಯೋಜನಾ ಪ್ರಾಧಿಕಾರದ ಕಾರ್ಯದರ್ಶಿಗೆ ಸಲ್ಲಿಸಿರುವ ಆಕ್ಷೇಪಣೆಯನ್ನು ಪುರಸ್ಕರಿಸಬೇಕು. ಪ್ರಾದೇಶಿಕ ಆಯುಕ್ತರೂ ಸಹ ಈ ಎಲ್ಲಾ ಅಂಶಗಳ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಮುರುಗೇಶ್‌ ಆರ್‌ ನಿರಾಣಿ ಅವರು ಟಿಪ್ಪಣಿಯಲ್ಲಿ ಕೋರಿದ್ದಾರೆ ಎಂದು ಗೊತ್ತಾಗಿದೆ.

Hot this week

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

Topics

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Related Articles

Popular Categories

spot_imgspot_img
error: Content is protected !!