Tuesday | July 7, 2026 |

ಮಹಾಯೋಜನೆಯಿಂದ ನಿರಾಣಿ ಶುಗರ್ಸ್‌ ಕೈಗಾರಿಕೆ ಜಮೀನು ಹೊರಗಿಡಲು ಸಚಿವರ ಒತ್ತಡ?

ಬೆಂಗಳೂರು; ಸಂಗಮೇಶ ಆರ್‌ ನಿರಾಣಿ ನಿರ್ದೇಶಕರಾಗಿರುವ ನಿರಾಣಿ ಶುಗರ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ ಸಂಬಂಧಿಸಿದ ಸರ್ವೆ ನಂಬರ್‌ಗಳನ್ನು ಮುಧೋಳ ಮಹಾಯೋಜನೆ ವ್ಯಾಪ್ತಿಯಿಂದ ಹೊರಗಿಡಬೇಕು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರೂ ಮತ್ತು ಎಂಆರ್‌ಎನ್‌ ಗ್ರೂಪ್‌ನ ಅಧ್ಯಕ್ಷರೂ ಆಗಿರುವ ಡಾ ಮುರುಗೇಶ ಆರ್‌ ನಿರಾಣಿ ಅವರು ಸರ್ಕಾರಕ್ಕೆ ಬರೆದಿರುವ ಟಿಪ್ಪಣಿಯು ಇದೀಗ ಬಹಿರಂಗವಾಗಿದೆ.

 

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರ ವಿಸ್ತರಿಸುವ ತಾತ್ಕಾಲಿಕ ಹೊಸ ಯೋಜನೆಯಲ್ಲಿ ನಿರಾಣಿ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದ ಸರ್ವೆ ನಂಬರ್‌ಗಳನ್ನು ಸೇರಿಸಲಾಗಿತ್ತು. ಈ ಕುರಿತು ಕಾರ್ಖಾನೆಯ ನಿರ್ದೇಶಕ ಸಂಗಮೇಶ ಆರ್‌ ನಿರಾಣಿ ಅವರು 2021ರ ಸೆಪ್ಟಂಬರ್‌ 30ರಂದು ನಗರ ಯೋಜನಾ ಪ್ರಾಧಿಕಾರದ ನಿರ್ದೇಶಕರಿಗೆ ಪತ್ರ ಬರೆದಿದ್ದರು. ಈ ಪತ್ರ ಬರೆದ ಒಂದು ವರ್ಷದ ನಂತರ ಕೈಗಾರಿಕೆ ಸಚಿವ ಡಾ ಮುರುಗೇಶ ಆರ್‌ ನಿರಾಣಿ ಅವರು 2022ರ ಆಗಸ್ಟ್‌ 24ರಂದು ಟಿಪ್ಪಣಿ ಬರೆದಿದ್ದಾರೆ. ಪತ್ರ ಮತ್ತು ಟಿಪ್ಪಣಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಮುಧೋಳ ಸ್ಥಳೀಯ ಯೋಜನಾ ಪ್ರಾಧಿಕಾರ ತಯಾರಿಸಿರುವ ವಿಸ್ತರಿತ ತಾತ್ಕಾಲಿಕ ಮಹಾ ಯೋಜನೆಯಲ್ಲಿ ಮುಧೋಳ ತಾಲೂಕಿನ ಕುಳಲಿ ಮತ್ತು ಮಾಲಾಪುರ ಗ್ರಾಮದ ವ್ಯಾಪ್ತಿಯಲ್ಲಿ ಬರುವ ನಿರಾಣಿ ಸಕ್ಕರೆ ಕಾರ್ಖಾನೆಗೆ ಸೇರಿದ ಭೂಮಿಯೂ ಸೇರಿರುವುದು ಪತ್ರದಿಂದ ತಿಳಿದು ಬಂದಿದೆ.

 

ಮುಧೋಳ (ಗ್ರಾಮಾಂತರ) ಗ್ರಾಮಕ್ಕೆ ಸಂಬಂಧಿಸಿದ ಸರ್ವೇ ನಂಬರ್‌ 166, 165, 158, 157, 143, 144, 154, 145, 156, 155, 159, 154, ಈ ಜಮೀನುಗಳು ಮಾಲಾಪುರ, ಕುಳಲಿ, ಸೋರಗಾವಿ ಗ್ರಾಮದ ಸರ್ವೆ ನಂಬರ್‌ಗಳು ಹೊಂದಿಕೊಂಡಿವೆ. ಮಾಲಾಪುರ ಗ್ರಾಮದ ಸರ್ವೆ ನಂಬರ್‌ಗಳಾದ 15,16,17,18,19,20,21,52,53,54,55,56,57,58 ಸರ್ವೆ ನಂಬರ್‌ಗಳಲ್ಲಿನ ಜಮೀನುಗಳು ಈ ಆದೇಶದಲ್ಲಿ ಸೇರ್ಪಡೆಗೊಂಡಿರುವುದು ಸಂಗಮೇಶ ಆರ್‌ ನಿರಾಣಿ ಅವರ ಪತ್ರದಿಂದ ಗೊತ್ತಾಗಿದೆ.

 

 

‘ನಮ್ಮ ಕೈಗಾರಿಕೆ ಪ್ರದೇಶದ ಸರ್ವೆ ನಂಬರ್‌ಗಳನ್ನು ಮುಧೋಳ ಪಟ್ಟಣದ ಮಹಾಯೋಜನೆಯ ವ್ಯಾಪ್ತಿಯಿಂದ ಹೊರಗುಳಿಸಿ ಕುಳಲಿ ಮತ್ತು ಮಾಲಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಒಳಪಡಿಸುವಂತೆ ಠರಾವು ಕೋರಿರುವುದರಿಂದ ಹಾಗೂ ಸಕ್ಕರೆ ಕಾರ್ಖಾನೆಯುಕೃಷಿ ಆಧರಿತ ಗ್ರಾಮೀಣ ಕೈಗಾರಿಕೆಯೆಂದು ಸರ್ಕಾರವು ಘೋಷಿಸಿರುವುದರಿಂದ ಸರ್ವೆ ನಂಬರ್‌ಗಳಲ್ಲಿನ ಜಮೀನುಗಳನ್ನು ಮುಧೋಳ ಮಹಾ ಯೋಜನೆಯ ವ್ಯಾಪ್ತಿಯಿಂದ ಹೊರಗಿಡುವಂತೆ ಆಕ್ಷೇಪಣೆ ಸಲ್ಲಿಸಲಾಗಿದೆ. ನಿರಾಣಿ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದ ಕೈಗಾರಿಕೆ ಜಮೀನುಗಳನ್ನು ಮಹಾಯೋಜನೆಯ ವ್ಯಾಪ್ತಿಯಿಂದ ಹೊರಗಿಡಲು ತಮ್ಮ ಶಿಫಾರಸ್ಸಿನೊಂದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು,’ ಎಂದು ಸಂಗಮೇಶ ಆರ್‌ ನಿರಾಣಿ ಅವರು ಪತ್ರದಲ್ಲಿ ಕೋರಿದ್ದರು.

 

ಈ ಪತ್ರ ಬರೆದ ಒಂದು ವರ್ಷದ ನಂತರ ಡಾ ಮುರುಗೇಶ ಆರ್‌ ನಿರಾಣಿ ಅವರೂ ಸರ್ಕಾರಕ್ಕೆ 2022ರ ಆಗಸ್ಟ್‌ 24ರಂದು ಟಿಪ್ಪಣಿ ಬರೆದಿದ್ದಾರೆ. ತಾತ್ಕಾಲಿಕ ಮಹಾಯೋಜನೆಯನ್ನು ಅಂತಿಮಗೊಳಿಸುವ ಬಗ್ಗೆ ನಗರ ಯೋಜನಾ ಪ್ರಾಧಿಕಾರದ ಕಾರ್ಯದರ್ಶಿಗೆ ಸಲ್ಲಿಸಿರುವ ಆಕ್ಷೇಪಣೆಯನ್ನು ಪುರಸ್ಕರಿಸಬೇಕು. ಪ್ರಾದೇಶಿಕ ಆಯುಕ್ತರೂ ಸಹ ಈ ಎಲ್ಲಾ ಅಂಶಗಳ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಮುರುಗೇಶ್‌ ಆರ್‌ ನಿರಾಣಿ ಅವರು ಟಿಪ್ಪಣಿಯಲ್ಲಿ ಕೋರಿದ್ದಾರೆ ಎಂದು ಗೊತ್ತಾಗಿದೆ.

Hot this week

3 ವರ್ಷವಾದರೂ ಆರಂಭವಾಗದ ಕಟ್ಟಡ ಭಗ್ನಾವಶೇಷ ಘಟಕ; ನಗರಾಭಿವೃದ್ಧಿ ಸಚಿವರ ತವರಲ್ಲೇ ನಾಗರಿಕರಿಗೆ ದಂಡ, ರದ್ದಾಗದ ಬೈಲಾ

ಮೈಸೂರು;  ನಗರಾಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿನ ...

ಖಾಸಗಿ ಮಠದ ಒಡೆತನದ ಆಸ್ತಿಯಲ್ಲಿ ಸರ್ಕಾರಿ ಕಾಮಗಾರಿ, 8.4 ಕೋಟಿ ವೆಚ್ಚ; ತನಿಖೆ ಹಾದಿ ತಪ್ಪಿಸಿದರೇ ನಿವೃತ್ತ ಐಎಎಸ್ ಅಧಿಕಾರಿ ಐಎಸ್‌ಎನ್ ಪ್ರಸಾದ್‌?

ಬೆಂಗಳೂರು;  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಾಮಚಂದ್ರಾಪುರ ಗ್ರಾಮದ ಚಂದ್ರಮೌಳೇಶ್ವರ ದೇವಸ್ಥಾನ...

ಸಿಎಂ, ಡಿಸಿಎಂ ಸೇರಿ ಐವರು ಸಚಿವರ ವಸತಿಗೃಹ ನವೀಕರಣ, ದುರಸ್ತಿ, ಪೀಠೋಪಕರಣ, ಗೃಹಪಯೋಗಿ ವಸ್ತುಗಳ ಖರೀದಿ; 3 ವರ್ಷದಲ್ಲಿ 19.01 ಕೋಟಿ ರು ವೆಚ್ಚ

ಬೆಂಗಳೂರು; ಸರ್ಕಾರಿ ಶಾಲೆ, ಸರ್ಕಾರಿ ವಿದ್ಯಾರ್ಥಿ ನಿಲಯಗಳ ನಿರ್ಮಾಣ, ಇರುವ ಕೊಠಡಿಗಳ...
Please Scan to make Your Contribution

Topics

3 ವರ್ಷವಾದರೂ ಆರಂಭವಾಗದ ಕಟ್ಟಡ ಭಗ್ನಾವಶೇಷ ಘಟಕ; ನಗರಾಭಿವೃದ್ಧಿ ಸಚಿವರ ತವರಲ್ಲೇ ನಾಗರಿಕರಿಗೆ ದಂಡ, ರದ್ದಾಗದ ಬೈಲಾ

ಮೈಸೂರು;  ನಗರಾಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿನ ...

ಖಾಸಗಿ ಮಠದ ಒಡೆತನದ ಆಸ್ತಿಯಲ್ಲಿ ಸರ್ಕಾರಿ ಕಾಮಗಾರಿ, 8.4 ಕೋಟಿ ವೆಚ್ಚ; ತನಿಖೆ ಹಾದಿ ತಪ್ಪಿಸಿದರೇ ನಿವೃತ್ತ ಐಎಎಸ್ ಅಧಿಕಾರಿ ಐಎಸ್‌ಎನ್ ಪ್ರಸಾದ್‌?

ಬೆಂಗಳೂರು;  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಾಮಚಂದ್ರಾಪುರ ಗ್ರಾಮದ ಚಂದ್ರಮೌಳೇಶ್ವರ ದೇವಸ್ಥಾನ...

ಶಾಲಾ ಶಿಕ್ಷಣಕ್ಕಾಗಿ ಹಣಕಾಸು ಪೂರೈಕೆ; ವೆಚ್ಚ ಸಾಲದು, ಹೆಚ್ಚಿದ ಸಂಪನ್ಮೂಲ ಅಂತರ, ಬಜೆಟ್‌ನಲ್ಲಿ ಕುಸಿತ, ಖಾಸಗೀಕರಣಕ್ಕೆ ದಾರಿಯಾಗಲಿದೆಯೇ?

ಬೆಂಗಳೂರು; ರಾಜ್ಯದ ಶಾಲೆಗಳಲ್ಲಿ ದಾಖಲಾತಿ ಪ್ರಮಾಣವು ವೇಗವಾಗಿ ಹೆಚ್ಚುತ್ತಿದ್ದರೂ ಸಹ ಶಿಕ್ಷಣದ ಮೇಲಿನ...

Related Articles

Popular Categories

error: Content is protected !!