Thursday | July 16, 2026 |

ಕುಲಪತಿ ನೇಮಕ ವಿವಾದ; ಸರ್ಚ್‌ ಕಮಿಟಿ ಶಿಫಾರಸ್ಸು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ದೆಹಲಿ ಪ್ರಾಧ್ಯಾಪಕ

ಬೆಂಗಳೂರು; ಬೆಂಗಳೂರು, ಧಾರವಾಡ ಕೃಷಿ ವಿವಿ ಕುಲಪತಿ ಹುದ್ದೆಗೆ ಏಕೆ ಆಯ್ಕೆ ಮಾಡಿಲ್ಲವೆಂದು ಶೋಧನಾ ಸಮಿತಿಯನ್ನೇ ಪ್ರಶ್ನಿಸಿ ದೆಹಲಿ ಮೂಲದ  ಆಕಾಂಕ್ಷಿ ಪ್ರಾಧ್ಯಾಪಕ  ಭಾಸ್ಕರ್‌ ಎಂಬುವರು ರಾಜ್ಯಪಾಲರನ್ನು ಪ್ರತಿವಾದಿಯನ್ನಾಗಿಸಿ ಹೈಕೋರ್ಟ್‌ ಮೆಟ್ಟಿಲೇರಿರುವುದು ಇದೀಗ ಬಹಿರಂಗವಾಗಿದೆ.

 

ಬೆಂಗಳೂರು ಮತ್ತು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಆಕಾಂಕ್ಷಿ ಪ್ರಾಧ್ಯಾಪಕರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸದ ಶೋಧನಾ ಸಮಿತಿಗಳು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿದ್ಯಾಲಯದ ಶೋಧನಾ ಸಮಿತಿಯು ಪರಿಗಣಿಸಿದ್ದನ್ನು ಆಧರಿಸಿ ಹೈಕೋರ್ಟ್‌ ಮೆಟ್ಟಿಲೇರಿರುವುದು ಶೋಧನಾ ಸಮಿತಿಗಳ ಕಾರ್ಯವೈಖರಿ ಮತ್ತು ಪಾರದರ್ಶಕತೆಯನ್ನು ಒರೆಗೆ ಹಚ್ಚಿದಂತಾಗಿದೆ.

 

ವಿವಿಧ ವಿಶ್ವವಿದ್ಯಾಲಯಗಳ ಕುಲಪತಿ ಆಯ್ಕೆಗಾಗಿ ರಚನೆಯಾಗುವ ಶೋಧನಾ ಸಮಿತಿ (ಸರ್ಚ್‌ ಕಮಿಟಿ) ಗಳ ಕಾರ್ಯವೈಖರಿ ಮತ್ತು ಶಿಫಾರಸ್ಸಿನ ಹಿಂದೆ ಹಣದ ವಹಿವಾಟು ನಡೆಯುತ್ತವೆ ಎಂಬ ಗುರುತರ ಆರೋಪಗಳು ಕೇಳಿ ಬರುತ್ತಿರುವ ನಡುವೆಯೇ ಮುನ್ನೆಲೆಗೆ ಬಂದಿರುವ ಬೆಂಗಳೂರು, ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಆಯ್ಕೆಗೆ ಶೋಧನಾ ಸಮಿತಿಯು ನಡೆಸಿದ್ದ ಆಯ್ಕೆ ಪ್ರಕ್ರಿಯೆಗಳು ಹಲವು ಅನುಮಾನಕ್ಕೆ ದಾರಿಮಾಡಿಕೊಟ್ಟಿವೆ.

 

ಬೆಂಗಳೂರು, ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಹೊಸದಿಲ್ಲಿಯ ಡಾ ಎಸ್‌ ಭಾಸ್ಕರ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ಈ ಎರಡೂ ವಿಶ್ವವಿದ್ಯಾಲಯಗಳ ಶೋಧನಾ ಸಮಿತಿಗಳು ಪರಿಗಣಿಸಿರಲಿಲ್ಲ. ಆದರೆ ಇದೇ ಭಾಸ್ಕರ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಶೋಧನಾ ಸಮಿತಿಯು ಅರ್ಜಿಯನ್ನು ಪರಿಗಣಿಸಿತ್ತಲ್ಲದೇ ಶಿಫಾರಸ್ಸು ಮಾಡಿದ್ದ ಪಟ್ಟಿಯಲ್ಲಿಯೂ ಅವರ ಹೆಸರಿತ್ತು.

 

ಹೀಗಾಗಿ ಇದನ್ನೇ ಆಧರಿಸಿ ಭಾಸ್ಕರ್‌ ಎಂಬುವರು ಇದೀಗ ಹೈಕೋರ್ಟ್‌ ಮೆಟ್ಟಿಲೇರಿ ರಿಟ್‌ ಅರ್ಜಿ ಸಲ್ಲಿಸಿದ್ದಾರೆ. ‘ಬೆಂಗಳೂರು, ಧಾರವಾಡ ಕುಲಪತಿಗಳ ಹುದ್ದೆಯ ಆಯ್ಕೆ ಸಂದರ್ಭದಲ್ಲಿ ಏಕೆ ಆಯ್ಕೆ ಮಾಡಿಲ್ಲವೆಂದು ತಿಳಿಯದೇ ಬೇರೆ ದಾರಿಯಿಲ್ಲದೇ ನ್ಯಾಯಾಲಯದ ಮೊರೆ ಹೋಗಿದ್ದೇನೆ. ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥವಾಗುವವರೆಗೂ ಧಾರವಾಡ, ಬೆಂಗಳೂರು ಕೃಷಿ ವಿವಿ ಕುಲಪತಿ ಹುದ್ದೆ ಆಯ್ಕೆಯನ್ನು ತಡೆಹಿಡಿಯಬೇಕು ಎಂದು,’ ದಾವೆಯಲ್ಲಿ ಕೋರಿದ್ದಾರೆ. ಈ ಸಂಬಂಧ ಕೆಲ ಟಿಪ್ಪಣಿ ಹಾಳೆಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ಆದರೆ ಈಗಾಗಲೇ ಧಾರವಾಡ ಕೃಷಿ ವಿಶ್ವವಿದ್ಯಾಲಯಕ್ಕೆ ಪಿ ಎಲ್‌ ಪಾಟೀಲ್‌ ಅವರನ್ನು ಕುಲಪತಿಯನ್ನಾಗಿ ರಾಜ್ಯಪಾಲರು ಆಯ್ಕೆಗೊಳಿಸಿ ಆದೇಶ ಹೊರಡಿಸಿರುವುದರಿಂದ ಅವರ ಆಯ್ಕೆ ಪ್ರಕ್ರಿಯೆಯನ್ನು ತಡೆಹಿಡಿಯಲು ಅವಕಾಶವಿರುವುದಿಲ್ಲ ಎಂದು ಕೃಷಿ ಇಲಾಖೆಯು ನಿಲುವು ತಳೆದಿರುವುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

 

ಅಲ್ಲದೇ ‘ಈ ಪ್ರಕರಣದಲ್ಲಿ ರಾಜ್ಯಪಾಲರು ಮತ್ತು ಕುಲಾಧಿಪತಿಯವರ ಕಾರ್ಯದರ್ಶಿಯವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಈ ಪ್ರಕರಣವು ಮಹತ್ವದ ಪ್ರಕರಣವಾಗಿದೆ. ಆದ್ದರಿಂದ ಈ ಪ್ರಕರಣದಲ್ಲಿ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ಅವರನ್ನು ನೇಮಕಗೊಳಿಸಬೇಕು,’ ಎಂದು ಇಲಾಖೆಯು ಕಾನೂನು ಕೋಶವನ್ನು ಕೋರಿರುವುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

 

ಬೆಂಗಳೂರು ಹಾಗೂ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗಳ ಆಯ್ಕೆಗಾಗಿ ರಚಿಸಿದ್ದ ಶೋಧನಾ ಸಮಿತಿಗೆ ವಿಶ್ರಾಂತ ಕುಲಪತಿ ಡಾ ಪಿ ಜಿ ಚಂಗಪ್ಪ ಅವರನ್ನು ಅಧ್ಯಕ್ಷರನ್ನಾಗಿಸಲಾಗಿತ್ತು. ಮತ್ತೊಬ್ಬ ವಿಶ್ರಾಂತ ಕುಲಪತಿ ಡಾ ಎಂ ಎನ್‌ ಶೀಲವಂತರ ಅವರನ್ನು ಸರ್ಚ್‌ ಕಮಿಟಿ ಸದಸ್ಯರನ್ನಾಗಿಸಲಾಗಿತ್ತು. ಈ ಸಮಿತಿಯು ಭಾಸ್ಕರ್‌ ಎಂಬುವರ ಅರ್ಜಿಯನ್ನು ಪರಿಗಣಿಸಿರಲಿಲ್ಲ.

 

ಶಿಫಾರಸ್ಸು ಮಾಡುವಾಗ ಸಲ್ಲಿಸಲಾಗಿರುವ ಮಾಹಿತಿಯು ಅಪೂರ್ಣವಾಗಿದೆಯೆಂದು ಭಾಸ್ಕರ್‌ ಅವರ ಅರ್ಜಿಯನ್ನು ಪರಿಗಣಿಸಿರಲಿಲ್ಲ. ಆದರೆ ಇದೇ ಅರ್ಜಿಯನ್ನು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಹುದ್ದೆಗೆ ಸಲ್ಲಿಸಿದ್ದರು. ಈ ವಿಶ್ವವಿದ್ಯಾಲಯದ ಕುಲಪತಿ ಆಯ್ಕೆಗೆ ರಚನೆಗೊಂಡಿದ್ದ ಶೋಧನಾ ಸಮಿತಿಯು ಭಾಸ್ಕರ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ್ದರು. ಮತ್ತು ಶಿಫಾರಸ್ಸು ಪಟ್ಟಿಯಲ್ಲಿ ಅವರ ಹೆಸರನ್ನೂ ಸೇರಿಸಿ ಆಯ್ಕೆ ಮಾಡಿದ್ದರು ಎಂಬುದು ಟಿಪ್ಪಣಿ ಹಾಳೆಯಿಂದ ತಿಳಿದುಬಂದಿದೆ.

 

‘ಬೆಂಗಳೂರು, ಧಾರವಾಡ ಕುಲಪತಿಗಳ ಹುದ್ದೆಯ ಆಯ್ಕೆ ಸಂದರ್ಭದಲ್ಲಿ ಏಕೆ ಆಯ್ಕೆ ಮಾಡಿಲ್ಲವೆಂದು ತಿಳಿಯದೇ ಬೇರೆ ದಾರಿಯಿಲ್ಲದೇ ನ್ಯಾಯಾಲಯದ ಮೊರೆ ಹೋಗಿದ್ದೇನೆ. ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥವಾಗುವವರೆಗೂ ಧಾರವಾಡ, ಬೆಂಗಳೂರು ಕೃಷಿ ವಿವಿ ಕುಲಪತಿ ಹುದ್ದೆ ಆಯ್ಕೆಯನ್ನು ತಡೆಹಿಡಿಯಬೇಕು,’ ಎಂದು ಕೋರಿರುವ ರಿಟ್‌ (WP 20144/2022) ಅರ್ಜಿಯಲ್ಲಿ ರಾಜ್ಯಪಾಲರು ಮತ್ತು ಕುಲಾಧಿಪತಿಯೂ ಆಗಿರುವ ರಾಜ್ಯಪಾಲರ ಕಾರ್ಯದರ್ಶಿಯನ್ನೂ ಪ್ರತಿವಾದಿಯನ್ನಾಗಿಸಲಾಗಿದೆ.

Hot this week

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಎಬಿ-ಎಆರ್‍‌ಕೆ ಯೋಜನೆಯಲ್ಲಿ ಅಕ್ರಮ; ಜಿಮ್ಸ್‌ ಸಿಬ್ಬಂದಿ, ಖಾಸಗಿ ಆಸ್ಪತ್ರೆ ಶಾಮೀಲು, ರಾಜೀನಾಮೆ ನೀಡಿದ್ದ ವೈದ್ಯರ ಹೆಸರಿನಲ್ಲೂ ನಕಲಿ ಓಆರ್‍‌ಎಸ್‌ ಸೃಜನೆ; ತನಿಖಾ ವರದಿ

ಬೆಂಗಳೂರು; ಆಯುಷ್ಮಾನ್‌ ಭಾರತ್ ಮತ್ತು  ಎಆರ್‍‌ಕೆ ಯೋಜನೆಯಡಿಯಲ್ಲಿ  ಕಲ್ಬುರ್ಗಿ ಜಿಲ್ಲಾ  ಆಸ್ಪತ್ರೆಯಿಂದ...
Please Scan to make Your Contribution

Topics

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಜಿಎಸ್‌ಡಿಪಿ 23,34,000 ಕೋಟಿ, ಉನ್ನತ ಶಿಕ್ಷಣಕ್ಕಾಗಿ ಕೇವಲ 5,646 ಕೋಟಿ ರು ಖರ್ಚು; ಇತರೆ ರಾಜ್ಯಗಳಿಗಿಂತ ಕೆಳಗಿಳಿದ ಕರ್ನಾಟಕ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದ ಮೊದಲನೇ ಆರ್ಥಿಕ...

Related Articles

Popular Categories

error: Content is protected !!