Saturday | May 9, 2026 |

‘ಟೂ ತೌಸಂಡ್‌ ನಾನೊಬ್ಳೆ ಇಟ್ಕೊಳ್ಳಲ್ಲ, ಅದು ಸಾಕಾಗಲ್ಲ, ನೀವೇ ಕೊಟ್ಹೋಗಿ’; ಸರ್ಕಾರಿ ಆಸ್ಪತ್ರೆ ಕ್ರೌರ್ಯ ದರ್ಶನ

ಬೆಂಗಳೂರು; ‘ನೀವ್‌ ಕೊಡೋ ಟೂ ತೌಸಂಡ್‌ನ್ನು ನಾನೊಬ್ಳೇ ಇಟ್ಕೊಳ್ಳಲ್ಲ…ನಾನು ಎಲ್ರಿಗೂ ಡಿವೈಡ್‌ ಮಾಡ್ಬೇಕು… ನೀವ್ ಕೊಟ್ಟಿರೋ ಟೂ ತೌಸೆಂಡ್‌ನಲ್ಲಿ ಯಾರ್ಯಾರಿಗೆ ಕೊಡ್ಲಿ….ನಾನೊಬ್ಳೇ ಇಟ್ಕೊಳ್ಳಲ್ಲ..’
ಹೀಗೆಂದು ಗಾರ್ಮೆಂಟ್‌ ನೌಕರೊಬ್ಬರಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯ ಸಾರ್ವಜನಿಕ ಆಸ್ಪತ್ರೆಯೊಂದರ ಮಹಿಳಾ ನೌಕರರೊಬ್ಬರು ಹಣಕ್ಕಾಗಿ ಬೇಡಿಕೆ ಇರಿಸಿದ್ದಾರೆ.

 

ಗಾರ್ಮೆಂಟ್‌ ನೌಕರ ತನ್ನ ಪತ್ನಿಯನ್ನು ಉಳಿಸಿಕೊಳ್ಳಲು ಗೋಗರೆದರೂ ಮತ್ತು ವೇತನ ಆಗಿಲ್ಲ ಎಂದು ಅಂಗಲಾಚಿದರೂ ಕಿಂಚಿತ್ತೂ ಕರಗದ ಆಸ್ಪತ್ರೆ ನೌಕರರು ಹೆಚ್ಚಿನ ಹಣಕ್ಕೆ ಬೇಡಿಕೆ ಇರಿಸುವ ಮೂಲಕ ಕ್ರೌರ್ಯವನ್ನು ಮೆರೆದಿದ್ದಾರೆ. ಈ ಸಂಬಂಧ ವಿಡಿಯೋ ತುಣುಕು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ನಡೆದ ಬಾಣಂತಿ ಮತ್ತು ಅವಳಿ ಹಸುಳೆಗಳ ಸಾವು ಮಾಸುವ ಮುನ್ನವೇ, ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯ ಆಸ್ಪತ್ರೆಗಳು ಭ್ರಷ್ಟಾಚಾರದ ತವರುಗಳಾಗಿರುವುದಕ್ಕೆ ಈಗ ಲಭ್ಯವಾಗಿರುವ ವಿಡಿಯೋವೊಂದು ಮತ್ತಷ್ಟು ಸಾಕ್ಷ್ಯವನ್ನು ಒದಗಿಸುತ್ತಿದೆ. ಆದರೆ ಈ ವಿಡಿಯೋ ಯಾವ ತಾಲೂಕಿನದು ಎಂಬುದು ಖಚಿತಪಟ್ಟಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಹರಿದಾಡುತ್ತಿದೆ.

 

ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಂದ ಆಸ್ಪತ್ರೆ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವಸೂಲಿಗಿಳಿದಿರುವ ಕುರಿತು ಹಲವು ಬಾರಿ ದೂರುಗಳು ಸಲ್ಲಿಕೆಯಾಗಿದ್ದರೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಬಿದ್ದಿಲ್ಲ. ಸಾರ್ವಜನಿಕ ಆಸ್ಪತ್ರೆಗಳಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್‌ ಅವರು ಹೇಳಿಕೆ ನೀಡಿದ್ದರೂ ಆಸ್ಪತ್ರೆಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಬಿದ್ದಿಲ್ಲ.

 

‘ನಾನು ಅವ್ರಿಗೆ ಟೂ ತೌಸಂಡ್‌ ಕೊಡ್ಬೇಕು. ಇವ್ರಿಗೆ ಟೂ ತೌಸಂಡ್‌ ಕೊಡ್ಬೇಕು….ನೀವು ಕೊಡೋ ಟೂ ತೌಸೆಂಡ್‌ನ್ನು ಫೈವ್‌ ಹಂಡ್ರೆಡ್‌ ನಂತೆ ಹಂಚಬೇಕು.ಯಾರಿಗೆ ಕೊಡ್ಲಿ…ನೀವೇ ಕೊಟ್ಟು ಹೋಗಿ…ನನಗೆ ತಲೆನೋವೇ ಇರಲ್ಲ….ಎಲ್ರಿಗೋ ಒಂದೇ ರೂಲ್ಸು….ಪಾರ್ಟಿಯಾಲಿಟಿ ಮಾಡೋಕ್ಕಾಗಲ್ಲ….’ ಎಂದು ಗಾರ್ಮೆಂಟ್‌ ನೌಕರನಿಂದ ಹಣ ಸುಲಿಗೆ ಇಳಿದಿರುವುದು ವಿಡಿಯೋ ತುಣುಕಿನಿಂದ ತಿಳಿದು ಬಂದಿದೆ.

 

ಸಾರ್ವಜನಿಕ ಆಸ್ಪತ್ರೆಗಳಿಗೆ ದಾಖಲಾಗುವ ರೋಗಿಗಳ ಬಹುತೇಕರು ಆರ್ಥಿಕವಾಗಿ ದುರ್ಬಲರು. ಗಾರ್ಮೆಂಟ್ಸ್‌, ದಿನಗೂಲಿ ಆಧಾರದ ಮೇಲೆ ದುಡಿದು ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿರುವವರ ಸಂಖ್ಯೆಯೇ ಹೆಚ್ಚು. ಇಂತಹವರಿಂದಲೇ ಆಸ್ಪತ್ರೆ ವೈದ್ಯಾಧಿಕಾರಿಗಳು, ಸಿಬ್ಬಂದಿ ಹಣಕ್ಕಾಗಿ ಬೇಡಿಕೆ ಇರಿಸುವ ಮೂಲಕ ರೋಗಿಗಳನ್ನು ಸುಲಿಗೆ ಮಾಡುತ್ತಿರುವುದು ಸಾರ್ವಜನಿಕ ಆಸ್ಪತ್ರೆಗಳ ನರಕ ದರ್ಶನ ಮಾಡಿಸುತ್ತಿದ್ದಾರೆ

Hot this week

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...
Please Scan to make Your Contribution

Topics

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

Related Articles

Popular Categories

error: Content is protected !!