Thursday | June 11, 2026 |

ಬಿಜೆಪಿ ಅಧಿಕಾರದಲ್ಲಿಲ್ಲದ ಅವಧಿಯಲ್ಲೇ ಅತೀ ಹೆಚ್ಚು ಕೋಮುಗಲಭೆ; 15 ವರ್ಷಗಳಲ್ಲಿ 1,402 ಪ್ರಕರಣ ವರದಿ

ಬೆಂಗಳೂರು; ರಾಜ್ಯದಲ್ಲಿ ಬಿಜೆಪಿ ಪಕ್ಷವು ಅಧಿಕಾರದಲ್ಲಿ ಇಲ್ಲದೇ ಇದ್ದ ವರ್ಷಗಳಲ್ಲಿ ಅತಿ ಹೆಚ್ಚು ಕೋಮುಗಲಭೆಗಳು ನಡೆದಿವೆ. ಕೋಮುಗಲಭೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳದ ಕಾರಣ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿಯೇ ಅತಿ ಹೆಚ್ಚು ಕೋಮುಗಲಭೆ ಪ್ರಕರಣಗಳು ವರದಿಯಾಗಿವೆ.

 

ಕರ್ನಾಟಕ ವಿಧಾನಮಂಡಲವು 2022ರ ಸೆಪ್ಟಂಬರ್‌ನಲ್ಲಿ ನಡೆದಿದ್ದ ಅಧಿವೇಶನದಲ್ಲಿ ಗೃಹ ಇಲಾಖೆಯು ವಿಧಾನಪರಿಷತ್‌ಗೆ ಅಂಕಿ ಅಂಶಗಳನ್ನು ಒದಗಿಸಿದೆ. ಈ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಅತೀ ಹೆಚ್ಚು ಎಂದರೆ (2013-2018) 697 ಕೋಮುಗಲಭೆ ಪ್ರಕರಣಗಳು ನಡೆದಿವೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯೇ ಸಿಂಹಪಾಲು ಪಡೆದಿದೆ.

 

ಇನ್ನುಳಿದಂತೆ ರಾಜ್ಯದಲ್ಲಿ ಕಳೆದ 15 ವರ್ಷಗಳಲ್ಲಿ 1,402 ಕೋಮು ಗಲಭೆ ಪ್ರಕರಣಗಳು ವರದಿಯಾಗಿವೆ. ಕಳೆದ 3 ವರ್ಷಗಳಲ್ಲಿ 163 ಪ್ರಕರಣಗಳು ವರದಿಯಾಗಿವೆ. 2015ರ ವರ್ಷವೊಂದರಲ್ಲೇ 336 ಪ್ರಕರಣಗಳು ವರದಿಯಾಗಿವೆ.

 

 

2010ರಲ್ಲಿ ಶಿವಮೊಗ್ಗದಲ್ಲಿ 180, 2015ರಲ್ಲಿ 80 ಪ್ರಕರಣಗಳು ವರದಿಯಾಗಿವೆ. 2016ರಿಂದ 2019ರವರೆಗೆ ಒಂದೇ ಒಂದು ಕೋಮುಗಲಭೆ ಪ್ರಕರಣ ವರದಿಯಾಗಿಲ್ಲ. 2020ರಲ್ಲಿ 15, 2022ರಲ್ಲಿ 42 ಪ್ರಕರಣಗಳು ವರದಿಯಾಗಿವೆ.

 

ದಕ್ಷಿಣ ಕನ್ನಡದಲ್ಲಿ 2012ರಲ್ಲಿ 24, 2015ರಲ್ಲಿ 66, 2017ರಲ್ಲಿ 36, 2020ರಲ್ಲಿ 3, 2022ರಲ್ಲಿ 7 ಪ್ರಕರಣಗಳು ವರದಿಯಾಗಿವೆ. ಕೊಡಗಿನಲ್ಲಿ 2015ರಲ್ಲಿ 45, 2021ಮತ್ತು 2022ರಲ್ಲಿ ತಲಾ 5 ಪ್ರಕರಣಗಳು ವರದಿಯಾಗಿವೆ.

 

2013ರಿಂದ 2018ರವರೆಗಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಒಟ್ಟಾರೆ 697 ಕೋಮುಗಲಭೆಗಳು ನಡೆದಿವೆ. 2007ರಲ್ಲಿ 80, 2008ರಲ್ಲಿ 29, 2009ರಲ್ಲಿ 75, 2010ರಲ್ಲಿ 279, 2011ರಲ್ಲಿ 24, 2012ರಲ್ಲಿ 54, 2013ರಲ್ಲಿ 52, 2014ರಲ್ಲಿ 94, 2015ರಲ್ಲಿ 336, 2016ರಲ್ಲಿ 46, 2017ರಲ್ಲಿ 138, 2018ರಲ್ಲಿ 32, 2019ರಲ್ಲಿ 16, 2020ರಲ್ಲಿ 19, 2021ರಲ್ಲಿ 32, 2022ರಲ್ಲಿ 96 ಪ್ರಕರಣಗಳು ವರದಿಯಾಗಿವೆ.

 

 

ಕರ್ನಾಟಕದಲ್ಲಿ ಮೂರು ವರ್ಷಗಳಲ್ಲಿ ನಡೆದ ಕೋಮು ಗಲಭೆಗಳಿಗೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ 100 ಆರೋಪಪಟ್ಟಿಗಳ ಪೈಕಿ ಕೇವಲ ಐದು ಪ್ರಕರಣಗಳಲ್ಲಷ್ಟೇ ಅಪರಾಧಿಗಳಿಗೆ ಶಿಕ್ಷೆ ವಿಧಿಸಲಾಗಿದೆ ಎಂದು ರಾಷ್ಟ್ರೀಯ ಅಪರಾಧಗಳ ದಾಖಲೆ ಬ್ಯುರೊ (ಎನ್‌ಸಿಆರ್‌ಬಿ) ಅಂಕಿ ಅಂಶ ಬಿಡುಗಡೆ ಮಾಡಿತ್ತು.

 

ಲೋಕಸಭೆಯಲ್ಲಿ ಮಂಡನೆಯಾದ ಅಂಕಿ ಅಂಶಗಳ ಪ್ರಕಾರ 2018ರಲ್ಲಿ 29 ಪ್ರಕರಣಗಳು ದಾಖಲಾಗಿ 224 ಮಂದಿಯನ್ನು ಬಂಧಿಸಲಾಗಿತ್ತು.62 ಆರೋಪ ಪಟ್ಟಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಎರಡು ಪ್ರಕರಣಗಳಲ್ಲಿ 9 ಅಪರಾಧಿಗಳಿಗೆ ಶಿಕ್ಷೆ ಆಗಿದೆ. 2019ರಲ್ಲಿ 11 ಪ್ರಕರಣಗಳಲ್ಲಿ ಎಫ್‌ಐಆರ್‌ ದಾಖಲಾಗಿ, 77 ಮಂದಿಯನ್ನು ಬಂಧಿಸಲಾಗಿತ್ತು. 22 ಆರೋಪ ಪಟ್ಟಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಒಂದು ಪ್ರಕರಣದಲ್ಲಿ ಆರೋಪಿಯೊಬ್ಬರಿಗೆ ಶಿಕ್ಷೆ ನೀಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯವು ಉತ್ತರ ಒದಗಿಸಿತ್ತು.

 

2020ರಲ್ಲಿ 10 ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾಗಿ, 16 ಆರೋಪ ಪಟ್ಟಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. 63 ಮಂದಿಯನ್ನು ಬಂಧಿಸಲಾಗಿದ್ದು, 151 ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಿದ್ಧಪಡಿಸಲಾಗಿತ್ತು. ಎರಡು ಪ್ರಕರಣಗಳಲ್ಲಿ 54 ಮಂದಿಗೆ ಶಿಕ್ಷೆ ಆಗಿದೆ ಎಂದು ವಿವರ ನೀಡಿತ್ತು.

 

ಅನ್ಯ ರಾಜ್ಯದ ವ್ಯಕ್ತಿಗಳು ಕರ್ನಾಟಕಕ್ಕೆ ಬಂದು ಇಲ್ಲಿನ ಜನರನ್ನು ಬರ್ಬರವಾಗಿ ಹತ್ಯೆ ಮಾಡುತ್ತಿರುವ ಬಗ್ಗೆ ಇತ್ತೀಚಿಗೆ ಯಾವುದೇ ಘಟನೆಗಳು ಕಂಡು ಬಂದಿಲ್ಲ. ಕೋಮುಗಲಭೆಗಳಿಗೆ ಕಾರಣರಾದ ವ್ಯಕ್ತಿಗಳು ಹೊಂದಿರುವ ಅನಧಿಕೃತ ಅಕ್ರಮ ಆಸ್ತಿಗಳನ್ನು ಸರ್ಕಾರ ವಶಪಡಿಸಿಕೊಳ್ಳಲು ಮತ್ತು ಅನಧಿಕೃತ ಅಕ್ರಮ ಆಸ್ತಿಗಳನ್ನು ನೆಲಸಮ ಮಾಡುವ ಸಂಬಂಧ ಒಳಾಡಳಿತ ಇಲಾಖೆ ಮುಂದೆ ಅಂತಹ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು 2022ರ ಸೆ.15ರಂದು ನಡೆದ ವಿಧಾನನಪರಿಷತ್‌ ಅಧಿವೇಶನದಲ್ಲಿ ಉತ್ತರ ಒದಗಿಸಿದ್ದಾರೆ.

Hot this week

ಸಂಘ, ಸಂಸ್ಥೆಗಳಿಗೆ 71.85 ಕೋಟಿ ರು ಅನುದಾನ; ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್, ಕಾಗಿನೆಲೆ ಕನಕ ಗುರುಪೀಠ, ಕುರುಬರ ಸಂಘ, ಕನಕ ಸಮದಾಯ ಭವನಗಳದ್ದು ಸಿಂಹಪಾಲು

ಬೆಂಗಳೂರು; ಗದಗ್‌ನಲ್ಲಿರುವ ಶ್ರೀ ರಾಕೇಶ ಸಿದ್ದರಾಮಯ್ಯ ಟ್ರಸ್ಟ್, ಕಾಗಿನೆಲೆ ಕನಕ ಗುರುಪೀಠ,...

ತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ ಆರೋಪ; ಮಧ್ಯಪ್ರವೇಶಕ್ಕೆ ಲೋಕಭವನ ಕದ ತಟ್ಟಿದ ಬಿಜೆಪಿ, ಸ್ವತಂತ್ರ ತನಿಖೆಗೆ ಮುಂದಾಗುವರೇ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...
Please Scan to make Your Contribution

Topics

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

Related Articles

Popular Categories

error: Content is protected !!