Thursday | July 23, 2026 |

ಖಾಸಗಿ ವ್ಯಕ್ತಿಗಳಿಗೆ ಅರಣ್ಯ ಪ್ರದೇಶ ಪರಭಾರೆ ಪ್ರಕರಣ; ಡೀಮ್ಡ್‌ ಅರಣ್ಯವಾಗಿದ್ದರೂ ಗೋಮಾಳವೆಂದು ವರದಿ

ಬೆಂಗಳೂರು; ಕರ್ನಾಟಕ ಅರಣ್ಯ ಇಲಾಖೆಯಿಂದ ಅರಣ್ಯ ಅಭಿವೃದ್ಧಿ ನಿಗಮಕ್ಕೆ ಹಸ್ತಾಂತರವಾಗಿರುವ ಹೆಕ್ಟೇರ್‌ಗಟ್ಟಲೇ ಅರಣ್ಯ ಪ್ರದೇಶಗಳು ಸದ್ದಿಲ್ಲದೇ ಖಾಸಗಿ ವ್ಯಕ್ತಿಗಳಿಗೆ ಪರಭಾರೆ ಮಾಡುತ್ತಿರುವುದು ಇದೀಗ ಬಹಿರಂಗವಾಗಿದೆ. ಪರಿಭಾವಿತ ಅರಣ್ಯ ಪ್ರದೇಶ ಎಂದು ತಿಳಿದಿದ್ದರೂ ಕೂಡ ಈ ಭೂಮಿಯು ಗೋಮಾಳ ಎಂದು ನೀಡಿರುವ ವರದಿಯು ಮುನ್ನೆಲೆಗೆ ಬಂದಿದೆ.

 

ಈ ಕುರಿತು ಸರ್ಕಾರಕ್ಕೆ ಹಲವು ಬಾರಿ ದಾಖಲೆಗಳ ಸಹಿತ ದೂರು ಸಲ್ಲಿಸಿದ್ದರೂ ನಿರ್ಲಕ್ಷ್ಯವಹಿಸಿದ್ದ ನಿಗಮವು ಇದೀಗ ಅರಣ್ಯ ಪ್ರದೇಶಗಳ ಪರಭಾರೆ, ನೆಡುತೋಪುಗಳ ಕಣ್ಮರೆ ಸೇರಿದಂತೆ ವಿವಿಧ ರೀತಿಯ ಅಕ್ರಮಗಳ ಕುರಿತು ಸಲ್ಲಿಕೆಯಾಗಿರುವ ದೂರಿನ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಿವೃತ್ತ ನ್ಯಾಯಾಧೀಶರರ ನೇತೃತ್ವದಲ್ಲಿ ಸಮಿತಿ ರಚಿಸಬೇಕು ಎಂದು ಅರಣ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ 2022ರ ನವೆಂಬರ್‌ 16ರಂದು ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಚಿಕ್ಕಮಗಳೂರು ವಿಭಾಗದ ಬ್ಯಾಗಡಿಹಳ್ಳಿ ಸರ್ವೆನಂಬರ್‌ 32ರಲ್ಲಿನ ನಿಗಮಕ್ಕೆ ಹಸ್ತಾಂತರಿಸಿರುವ 192.00 ಎಕರೆ ಒಟ್ಟು ವಿಸ್ತೀರ್ಣದಲ್ಲಿ 52. ಎಕರೆ ವಿಸ್ತೀರ್ಣದ ಭೂಮಿಯನ್ನು ತಲಾ 4 ಎಕರೆಯಂತೆ ಒಟ್ಟು 13 ಮಂದಿಗೆ ಹಂಚಿಕೆ ಮಾಡಲಾಗಿದೆ. ಇದು ಪರಿಭಾವಿತ ಅರಣ್ಯ ಪ್ರದೇಶ ಎಂದು ತಿಳಿದಿದ್ದರೂ ಕೂಡ ಈ ಭೂಮಿಯು ಗೋಮಾಳ ಎಂದು ವರದಿ ನೀಡಲಾಗಿದೆ. ಮತ್ತು ಈ ಪ್ರದೇಶದಲ್ಲಿ ಮರಗಳನ್ನು ಬೆಳೆಸುವುದರಲ್ಲಿ ಅಕ್ರಮ ನಡೆದಿದೆ ಎಂದು ಅರಣ್ಯ ಅಭಿವೃದ್ದಿ ನಿಗಮದ ನೌಕರರಾಗಿದ್ದ ಪಾಪೇಗೌಡ ಅವರು ದೂರಿನಲ್ಲಿ ವಿವರಿಸಿದ್ದಾರೆ.

 

ಅದೇ ರೀತಿ ಬೆಂಗಳೂರು ವಿಭಾಗ ಮತ್ತು ಕೋಲಾರ ಪ್ರಾಂತೀಯ ವಿಭಾಗ ವ್ಯಾಪ್ತಿಯ ಶ್ರೀನಿವಾಸಪುರ ಘಟಕದಲ್ಲಿನ ಕದರೀಪುರ ಸರ್ವೆ ನಂಬರ್‌ 270.42 ಹೆಕ್ಟೇರ್‌ ವಿಸ್ತೀರ್ಣದ ಅರಣ್ಯ ಪ್ರದೇಶದಲ್ಲಿ ಒತ್ತುವರಿಯಾಗಿದೆ. ಕದರೀಪುರ ನೆಡುತೋಪಿನ ಬದಿಗಿರಿರುವ ಮದನಹಳ್ಳಿ ಗ್ರಾಮದ ಸರ್ವೆ ನಂಬರ್‌ 124 ಮತ್ತು 125ರಲ್ಲಿ ನಿಗಮದ ವತಿಯಿಂದ ಬೆಳೆಸಲಾಗಿರುವ ನೆಡುತೋಪಿನಲ್ಲಿ 50 ಎಕರೆ ವಿಸ್ತೀರ್ಣ ಪ್ರದೇಶ ಒತ್ತುವರಿಯಾಗಿದೆ ಎಂದು ಸರ್ಕಾರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ  ಗಮನಕ್ಕೆ ತಂದಿದ್ದಾರೆ.

 

ನಿಗಮಕ್ಕೆ ಹಸ್ತಾಂತರಿಸಿರುವ ಅರಣ್ಯ ಪ್ರದೇಶಗಳಲ್ಲಿ 8,000 ಎಕರೆ ಅರಣ್ಯ ಪ್ರದೇಶ ಕಾಣೆಯಾಗಿದೆ. ಎಂದು ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ತಪಾಸಣೆ ನಡೆಸಿದ ಸಿಎಜಿ ವರದಿಯಲ್ಲಿ ಸೇರಿಸಲಾಗಿದೆ. ಇದರ ಬಗ್ಗೆಯೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.

 

‘ಈ ಎಲ್ಲಾ ಪ್ರಕರಣಗಳಲ್ಲಿ ನೈಜತೆ ಮತ್ತು ವಾಸ್ತವತೆಯನ್ನು ತಿಳಿಯುವ ಸಲುವಾಗಿ ಕೂಲಂಕುಷ ಮತ್ತು ನಿಷ್ಪಕ್ಷಪಾತ ವಿಚಾರಣೆ ನಡೆಸಿ ಸತ್ಯ ಹೊರಬರಲು ನಿವೃತ್ತ ನ್ಯಾಯಾಧೀಶರ ನೇತೃತ್ವದ ಒಂದು ಸಮಿತಿಯನ್ನು ನೇಮಕ ಮಾಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು,’ ಎಂದು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಅರಣ್ಯ ಪಡೆಯ ಮುಖ್ಯಸ್ಥರೂ ಅಗಿರುವ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರಿಗೆ ಪತ್ರದಲ್ಲಿ ಕೋರಿರುವುದು ತಿಳಿದು ಬಂದಿದೆ.

Hot this week

ರೈಲ್ವೇ ಯೋಜನೆಗಳಿಗೆ ಗ್ರಹಣ; 7,748 ಕೋಟಿ ರು ಅನುದಾನವಿದ್ದರೂ ಬಿರುಸುಗೊಳ್ಳದ ಭೂಸ್ವಾಧೀನ ಪ್ರಕ್ರಿಯೆ, ರಾಜ್ಯದತ್ತಲೇ ಬೊಟ್ಟು ಮಾಡಿದ ಕೇಂದ್ರ ಸರ್ಕಾರ

ಬೆಂಗಳೂರು; ಕರ್ನಾಟಕದಲ್ಲಿ  ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರವು  2026-27ನೇ ಸಾಲಿನಲ್ಲಿ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೇರದ ಭದ್ರಾ ಮೇಲ್ದಂಡೆ ಯೋಜನೆ; ಸಹಾಯಧನ ಬಿಡುಗಡೆ ವಿಳಂಬಕ್ಕೆ ನೆಪವೊಡ್ಡಿದ ಕೇಂದ್ರ

ಬೆಂಗಳೂರು; ರಾಜ್ಯದ ಮಹತ್ವಾಕಾಂಕ್ಷೆ ನೀರಾವರಿ ಯೋಜನೆ ಭದ್ರಾ ಮೇಲ್ದಂಡೆ ಯೋಜನೆಯ ಅಂದಾಜು...

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...
Please Scan to make Your Contribution

Topics

ರೈಲ್ವೇ ಯೋಜನೆಗಳಿಗೆ ಗ್ರಹಣ; 7,748 ಕೋಟಿ ರು ಅನುದಾನವಿದ್ದರೂ ಬಿರುಸುಗೊಳ್ಳದ ಭೂಸ್ವಾಧೀನ ಪ್ರಕ್ರಿಯೆ, ರಾಜ್ಯದತ್ತಲೇ ಬೊಟ್ಟು ಮಾಡಿದ ಕೇಂದ್ರ ಸರ್ಕಾರ

ಬೆಂಗಳೂರು; ಕರ್ನಾಟಕದಲ್ಲಿ  ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರವು  2026-27ನೇ ಸಾಲಿನಲ್ಲಿ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೇರದ ಭದ್ರಾ ಮೇಲ್ದಂಡೆ ಯೋಜನೆ; ಸಹಾಯಧನ ಬಿಡುಗಡೆ ವಿಳಂಬಕ್ಕೆ ನೆಪವೊಡ್ಡಿದ ಕೇಂದ್ರ

ಬೆಂಗಳೂರು; ರಾಜ್ಯದ ಮಹತ್ವಾಕಾಂಕ್ಷೆ ನೀರಾವರಿ ಯೋಜನೆ ಭದ್ರಾ ಮೇಲ್ದಂಡೆ ಯೋಜನೆಯ ಅಂದಾಜು...

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...

Related Articles

Popular Categories

error: Content is protected !!