Tuesday | May 5, 2026 |

ದಲಿತ ಸ್ನಾತಕೋತ್ತರ ವಿದ್ಯಾರ್ಥಿಗಳ 2ನೇ ಪದವಿಗೆ ಹಾಸ್ಟೆಲ್‌ಗೆ ಅವಕಾಶವಿಲ್ಲ; ಸುತ್ತೋಲೆ ಬಹಿರಂಗ

ಬೆಂಗಳೂರು; ಎರಡನೇ ಸ್ನಾತಕೋತ್ತರ ಪದವಿಯ ವ್ಯಾಸಂಗ ಮಾಡುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದ ವಿದ್ಯಾರ್ಥಿ ನಿಲಯದಲ್ಲಿ ಅವಕಾಶ ನೀಡಬಾರದು ಎಂದು ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಸುತ್ತೋಲೆ ಹೊರಡಿಸಿದ್ದಾರೆ.

 

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆಯಡಿಯಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಒದಗಿಸಲು ಅನುದಾನವಿಲ್ಲ ಎಂದು ಸರ್ಕಾರವು ಕೈ ಚೆಲ್ಲಿರುವ ಬೆನ್ನಲ್ಲೇ ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ 2022ರ ಡಿಸೆಂಬರ್ 2ರಂದು ಸುತ್ತೊಲೆ ಹೊರಡಿಸಿರುವ ಸುತ್ತೋಲೆಯು ಚರ್ಚೆಗೆ ಗ್ರಾಸವಾಗಿದೆ.

 

ಸುತ್ತೋಲೆಯಲ್ಲೇನಿದೆ?

 

2022-23ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದ ಹಾಸ್ಟೆಲ್‌ ಪ್ರವೇಶ ನೀಡುವ ಸಂದರ್ಭದಲ್ಲಿ ಎರಡನೇ ಸ್ನಾತಕೋತ್ತರ ಪದವಿಗೆ ಕಡ್ಡಾಯವಾಗಿ ಅವಕಾಶ ನೀಡಬಾರದೆಂದು ತಿಳಿಸಲಾಗಿದೆ. ಕಾರಣ ಸರ್ಕಾರದ ಆದೇಶದನ್ವಯ ಒಂದು ಬಾರಿ ಸರ್ಕಾರಿ ಅಥವಾ ವಿಶ್ವವಿದ್ಯಾಲಯದ ಸೌಲಭ್ಯಗಲನ್ನು ಪಡೆದಿರುವವರಿಗೆ ಮತ್ತೊಮ್ಮೆ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕೆ ಅವಕಾಶವಿಲ್ಲ. ಇದನ್ನು ಅತೀ ಸೂಕ್ಷ್ಮವಾಗಿ ಪರಿಗಣಿಸಿ ಪ್ರವೇಶ ನೀಡುವ ಸಂದರ್ಭದಲ್ಲಿ ಎಲ್ಲಾ ದಾಖಲಾತಿಗಳನ್ನು ಪರಿಶೀಲಿಸಿ ಪ್ರವೇಶ ನೀಡಬೇಕು ಎಂದು ಸೂಚಿಸಲಾಗಿದೆ.

 

ಆದ್ದರಿಂದ ಎಲ್ಲಾ ಪ್ರಧಾನ ಕ್ಷೇಮ ಪಾಲಕರುಗಲೂ ವಿದ್ಯಾರ್ಥಿಗಳ ವಿವರಗಳನ್ನು ಪರಿಶೀಲಿಸಿ ಮುಚ್ಚಳಿಕೆಯನ್ನು ಪಡೆದು ಹಾಸ್ಟೆಲ್‌ ಪ್ರವೇಶ ನೀಡುವುದು. ವಿಭಾಗಗಳಿಗೆ ಪ್ರವೇಶ ನೀಡುವ ಸಂದಭ್ದಲ್ಲಿ ವಿದ್ಯಾರ್ಥಿಗಳ ಎಲ್ಲಾ ದಾಖಲಾತಿಗಳನ್ನು ಪರಿಶೀಲಿಸಬೇಕು. ಮತ್ತು ಮೊದಲ ಪಿ ಜಿ ಮತ್ತು ಎರಡನೇ ಪಿ ಜಿ ಎಂಬುದನ್ನು ಪರಿಶೀಲಿಸಿಕೊಂಡು ವಿಭಾಗಗಳ ಮುಖ್ಯಸ್ಥರು ವಿದ್ಯಾರ್ಥಿಗಳ ಹಾಸ್ಟೆಲ್‌ ಪ್ರವೇಶದ ಅರ್ಜಿಗಳನ್ನು ದೃಢೀಕರಿಸಬೇಕು ಎಂದು ನಿರ್ದೇಶನ ನೀಡಿರುವುದು ಸುತ್ತೋಲೆಯಿಂದ ಗೊತ್ತಾಗಿದೆ.

 

‘ಬೆಂಗಳೂರು ವಿಶ್ವವಿದ್ಯಾಲಯವು ದಲಿತ ವಿರೋಧಿ ನೀತಿಯನ್ನು ಪದೇ ಪದೇ ಜಾಹೀರು ಮಾಡಿದೆ. ಬಿಜೆಪಿಯ ರಹಸ್ಯ ಕಾರ್ಯಸೂಚಿ ಬೆತ್ತಲಾಗಿದೆ. ದಲಿತ ವಿದ್ಯಾರ್ಥಿಗಳಿಗೆ ಎರಡನೇ ಸ್ನಾತಕೋತ್ತರ ಪದವಿಗೆ ಹಾಸ್ಟೆಲ್‌ಗೆ ಅವಕಾಶ ನೀಡದಂತೆ ಸುತ್ತೋಲೆ ನೀಡಿ ಅವರ ಹಕ್ಕು ಕಸಿಯಲು ಶಿಕ್ಷಣ ವಂಚಿತ ಮಾಡಲು ಹೊರಟಿದೆ,’ ಎಂದು ವಿಧಾನಪರಿಷತ್‌ನ ಮಾಜಿ ಸದಸ್ಯ ಕಾಂಗ್ರೆಸ್‌ನ ರಮೇಶ್‌ಬಾಬು ಅವರು ಟ್ವೀಟ್‌ ಮಾಡಿದ್ದಾರೆ.

Hot this week

ಒಂದೇ ಜಾಗದಲ್ಲಿ ಎರಡು ಫ್ಲೈ ಓವರ್, ಶೇ.50ರಷ್ಟು ಕಾಮಗಾರಿಯಾಗಿದ್ದರೂ ಪೂರ್ಣ ಪಾವತಿ; ಬ್ಯಾಂಕ್‌ ಗ್ಯಾರಂಟಿ ಮುಟ್ಟುಗೋಲಿಲ್ಲ, ಗುತ್ತಿಗೆದಾರರಿಗೆ ಲಾಭ, ಬಿಬಿಎಂಪಿ ನಿಧಿಗೆ ನಷ್ಟ

ಬೆಂಗಳೂರು;  ಈಜಿಪುರ ಮೇಲ್ಸೇತುವೆ ಎಲಿವೇಟೆಡ್‌ ಕಾರಿಡಾರ್  ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ  ಪೂರ್ಣಗೊಳಿಸದ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...
Please Scan to make Your Contribution

Topics

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

Related Articles

Popular Categories

error: Content is protected !!