Wednesday | March 25, 2026 |

ನರೇಗಾ; ಕೇಂದ್ರ ಸರ್ಕಾರದ ಮಾನ ಉಳಿಸಲು 750 ಕೋಟಿ ಮುಂಗಡ ಬಿಡುಗಡೆಗೆ ಪ್ರಸ್ತಾವ

Support THE-FILE

spot_img

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2021-22 ಮತ್ತು 2022-23ನೇ ಸಾಲಿಗೆ ಸಂಬಂಧಿಸಿದ ಸಾಮಗ್ರಿ ಬಿಲ್‌ಗಳ ಪಾವತಿ ಮತ್ತು ರಾಜ್ಯದ ಕೂಲಿ ಕಾರ್ಮಿಕರಿಗೆ ಕೂಲಿ ಪಾವತಿ ಮಾಡಲು ಕೇಂದ್ರ ಸರ್ಕಾರವು ತನ್ನ ಪಾಲಿನ ಅನುದಾನವನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಹೀಗಾಗಿ ರಾಜ್ಯ ಬಿಜೆಪಿ ಸರ್ಕಾರವು ಕೇಂದ್ರ ಸರ್ಕಾರದ ಪರವಾಗಿ 750 ಕೋಟಿ ರು.ಗಳನ್ನು ಮುಂಗಡವಾಗಿ ಬಿಡುಗಡೆ ಮಾಡಲು ಪ್ರಸ್ತಾವನೆ ಸಲ್ಲಿಸಿರುವುದು  ಇದೀಗ ಬಹಿರಂಗವಾಗಿದೆ.

 

ಕೇಂದ್ರ ಪುರಸ್ಕೃತ ಯೋಜನೆಗಳ ಪೈಕಿ ಬಹುತೇಕ ಯೋಜನೆಗಳಿಗೆ ಕೇಂದ್ರ ಸರ್ಕಾರವು ಬದ್ಧತಾ ವೆಚ್ಚಕ್ಕೆ ಸಂಬಂಧಿಸಿದಂತೆ ಕೋಟ್ಯಂತರ ರುಪಾಯಿ ಮೊತ್ತದ ಅನುದಾನವನ್ನು ಬಿಡುಗಡೆ ಮಾಡಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. ಈ ನಡುವೆಯೇ ನರೇಗಾ ಯೋಜನೆಯಡಿ ಬಿಡುಗಡೆ ಮಾಡಬೇಕಾದ ಮೊತ್ತವನ್ನು ರಾಜ್ಯ ಸರ್ಕಾರವೇ ಮುಂಗಡವಾಗಿ ಬಿಡುಗಡೆ ಮಾಡಲು ಪ್ರಸ್ತಾವನೆ ಸಲ್ಲಿಸುವ ಮೂಲಕ ಕೇಂದ್ರ ಸರ್ಕಾರದ ಮಾನವನ್ನು ಕಾಪಾಡಲು ಮುಂದಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ.

 

ಈ ಕುರಿತಾದ ಕೆಲ ಟಿಪ್ಪಣಿ ಹಾಳೆಗಳು (FD/389/EXP-6/2022-FINANCE DEPARTMENT) ‘ದಿ ಫೈಲ್‌’ಗೆ ಲಭ್ಯವಾಗಿವೆ.

 

‘ಸಾಮಗ್ರಿಗಳ ಬಿಲ್‌ ಪಾವತಿ ಮತ್ತು ಹಾಲಿ ಇರುವ ಕಾಮಗಾರಿಗಳ ಅನುಷ್ಠಾನಕ್ಕಾಗಿ ಹಾಗೂ ರಾಜ್ಯದಲ್ಲಿ ಕೂಲಿ ಕಾರ್ಮಿಕರಿಗೆ ಸಕಾಲದಲ್ಲಿ ಕೂಲಿ ಪಾವತಿ ಮಾಡುವ ಬದ್ಧತೆಯಿರುವುದರಿಂದ ಮತ್ತು ಕೇಂದ್ರ ಸರ್ಕಾರದಿಂದ ಅಉದಾನ ಬಿಡುಗಡೆಯಾಗುವ ಹಿನ್ನೆಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದ ದೃಷ್ಟಿಯಿಂದ 2022-23ನೇ ಸಾಲಿಗೆ ರಾಜ್ಯ ಸರ್ಕಾರವು ಕೇಂದ್ರದ ಪಾಲಿನ ಅನುದಾನವನ್ನು ಮುಂಗಡವಾಗಿ 1,000 ಕೋಟಿ ರು.ಗಳನ್ನು ಬಿಡುಗಡೆ ಮಾಡಲು ಕೋರಬಹುದು,’ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಆರ್ಥಿಕ ಇಲಾಖೆಗೆ ಕೋರಿರುವುದು ಪ್ರಸ್ತಾವನೆಯಿಂದ ತಿಳಿದು ಬಂದಿದೆ.

 

ಈ ಯೋಜನೆಯಡಿ ರಾಜ್ಯ ಸರ್ಕಾರವು ಯಾವುದೇ ಅನುದಾನವನ್ನು ಬಾಕಿ ಉಳಿಸಿಕೊಂಡಿಲ್ಲ. ಅಲ್ಲದೇ ಕೊನೆಯ ಮುಂಗಡವನ್ನೂ ಈಗಾಗಲೇ ಮರುಪಾವತಿ ಮಾಡಿದೆ. 1,000 ಕೋಟಿ ರು.ಗಳ ಹೆಚ್ಚುವರಿ ಅನುದಾನವನ್ನು ಭಾರತ ಸರ್ಕಾರದಿಂದ ಬಿಡುಗಡೆ ಮಾಡಲಾಗುವ ಅನುದಾನದಲ್ಲಿ ಹೊಂದಾಣಿಕೆ ಮಾಡಿಕೊಂಡು ಹೆಚ್ಚುವರಿ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಆರ್ಥಿಕ ಇಲಾಖೆಯನ್ನು ಕೋರಿರುವುದು ಪ್ರಸ್ತಾವನೆಯಿಂದ ಗೊತ್ತಾಗಿದೆ.

 

‘ಈಗಾಗಲೇ ರಾಜ್ಯ ಸರ್ಕಾರವು ಮುಂಗಡವಾಗಿ ಬಿಡುಗಡೆ ಮಾಡಲಾಗಿರುವ ಕೇಂದ್ರದ ಪಾಲು 750 ಕೋಟಿ ರು.ಗಳಲ್ಲಿ 317,25,24,000 ರು.ಗಳನ್ನು ಹಾಗೂ ಮುಂಗಡವಾಗಿ ಬಿಡುಗಡೆ ಮಾಡಲಾಗಿದ್ದ ರಾಜ್ಯದ ಪಾಲು 250 ಕೋಟಿ ರು ಗಳಲ್ಲಿ 105,75,08,000 ರು.ಗಳನ್ನು ಹೊಂದಾಣಿಕೆ ಮಾಡಿಕೊಂಡು ಉಳಿಕೆ ಆಡಳಿತ ವೆಚ್ಚಕ್ಕೆ ಬಿಡುಗಡೆಯಾಗಿರುವ ಕೇಂದ್ರದ ಪಾಲಿನ 74,31,06,250 ರು.ಗಳನ್ನು ಬಿಡುಗಡೆ ಮಾಡಲೂ ಪ್ರಸ್ತಾಪಿಸಿದೆ.

 

ಕೇಂದ್ರವು (ಲೆಕ್ಕ ಶೀರ್ಷಿಕೆ 2505-60-196-6-04) 700000.00 ಲಕ್ಷ ರು. ಮತ್ತು 200000.00 ಲಕ್ಷ ರು. ಸೇರಿ ಒಟ್ಟು 900000.00 ಲಕ್ಷ ರು ಅನುದಾನವನ್ನು ನೀಡಬೇಕಿತ್ತು. ನರೇಗಾ ಯೋಜನೆಯಡಿ 2017-18 ಮತ್ತು 2021-22ರ ಅವಧಿಯಲ್ಲಿ 3,505.71 ಕೋಟಿ ರು ಅನುದಾನ ಬಿಡುಗಡೆ ಮಾಡಬೇಕು ಎಂದು ರಾಜ್ಯ ಸರ್ಕಾರವು ಕೇಂದ್ರಕ್ಕೆ 2022ರ ಮೇ 11ರಂದು ಪತ್ರ ಬರೆದಿತ್ತು ಎಂದು ತಿಳಿದು ಬಂದಿದೆ.

 

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2022-23ನೇ ಸಾಲಿಗೆ ಆಯವ್ಯಯದಲ್ಲಿ ಒಟ್ಟು 1,280 ಕೋಟಿ ರು.ಗಳಲ್ಲಿ ಕೇಂದ್ರ ಪಾಲು 960.00 ಕೋಟಿ ರು ಮತ್ತು ರಾಜ್ಯದ ಪಾಲು 320 ಕೋಟಿ ರು ಅನುದಾನವನ್ನು ಹಂಚಿಕೆ ಮಾಡಲಾಗಿತ್ತು. ಈಗಾಗಲೇ ಆರ್ಥಿಕ ಇಲಾಖೆಯು (ಸರ್ಕಾರಿ ಆದೇಶ ಸಂಖ್ಯೆ; ಆಇ 75 ಬಿಆರ್‌ಎಸ್‌ 2022 ದಿನಾಂಕ 18-07-2022) ಹೆಚ್ಚುವರಿ ಆದೇಶದ ಮೂಲಕ 265 ಕೋಟಿ ರು.ಗಳನ್ನು ನೀಡಿತ್ತು.

 

‘ಆಡಳಿತ ಇಲಾಖೆಯು ಕೋರಿದಂತೆ 1,000 ಕೋಟಿ ರ.ಗಳ ಅನುದಾನವನ್ನು ಬಿಡುಗಡೆ ಮಾಡಲು ಕೇಂದ್ರ ಮತ್ತು ರಾಜ್ಯದ ಪಾಲು 75;25ರಂತೆ ಕೇಂದ್ರ ಪಾಲಿನ 750 ಕೋಟಿ ಹಾಗೂ ರಾಜ್ಯದ 250 ಕೋಟಿ ರು.ಗಳನ್ನು ಒದಗಿಸಬೇಕಾಗುತ್ತದೆ. ಕೇಂದ್ರದ ಪಾಲಿನ 750 ಕೋಟಿ ರು.ಗಳನ್ನು ಹೆಚ್ಚುವರಿ ಆದೇಶದ ಮೂಲಕ ಒದಗಿಸಿ ಪೂರಕ ಅಂದಾಜು -2ರಲ್ಲಿ ಸಕ್ರಮಗೊಳಿಸಬಹುದು. ರಾಜ್ಯದ ಪಾಲಿನ ಅನುದಾನವನ್ನು ಸದ್ಯ ಲಭ್ಯವಿರುವ ಅನುದಾನದಿಂದ ಬಿಡುಗಡೆ ಮಾಡಬಹುದು,’ ಎಂದು ಆರ್ಥಿಕ ಇಲಾಖೆಯು ತನ್ನ ಅಭಿಪ್ರಾಯವನ್ನು ತಿಳಿಸಿದೆ ಎಂದು ಗೊತ್ತಾಗಿದೆ.

 

ಸದ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಹೊಣೆ ಹೊತ್ತಿರುವುದನ್ನು ಸ್ಮರಿಸಬಹುದು.

Hot this week

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

Topics

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

Related Articles

Popular Categories

error: Content is protected !!