Saturday | May 2, 2026 |

ಕಾನೂನು ವಿವಿ; ಸರ್ಕಾರದ ಶಿಫಾರಸ್ಸು ಬದಿಗಿರಿಸಿ ಕುಲಪತಿ ನೇಮಕಗೊಳಿಸಿದ ರಾಜ್ಯಪಾಲರು

ಬೆಂಗಳೂರು; ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ಕುಲಪತಿಗಳನ್ನಾಗಿ ನೇಮಕ ಮಾಡುವ ಸಂಬಂಧ ಕಾನೂನು ಮತ್ತು ಸಂಸದೀಯ ಸಚಿವರು ಮತ್ತು ರಾಜ್ಯ ಸರ್ಕಾರವು ಮಾಡಿದ್ದ ಶಿಫಾರಸ್ಸನ್ನು ಬದಿಗಿರಿಸಿದ್ದ ರಾಜ್ಯಪಾಲರು ಸರ್ಕಾರವು ಶಿಫಾರಸ್ಸು ಮಾಡದೇ ಇದ್ದ ಅಭ್ಯರ್ಥಿಯನ್ನು ಕುಲಪತಿಯನ್ನಾಗಿ ನೇಮಕ ಮಾಡಿದ್ದರು ಎಂಬುದು ಇದೀಗ ದಾಖಲೆ ಸಹಿತ ಬಹಿರಂಗವಾಗಿದೆ.

 

ಕುಲಪತಿಗಳ ನೇಮಕಕ್ಕೆ 6-7 ಕೋಟಿ ಹಣದ ವ್ಯವಹಾರ ನಡೆದಿದೆ ಎಂಬ ಗುರುತರವಾದ ಆರೋಪವನ್ನು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಅವರು ಆಡಿದ್ದ ಮಾತುಗಳು ವಿಶ್ವವಿದ್ಯಾಲಯ ಮತ್ತು ಶೈಕ್ಷಣಿಕ ವಲಯದಲ್ಲಿ ಹೆಚ್ಚು ಚರ್ಚೆಗಳಾಗುತ್ತಿರುವ ಹೊತ್ತಿನಲ್ಲಿಯೇ ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಕುಲಪತಿ ಹುದ್ದೆಗೆ ರಾಜ್ಯ ಸರ್ಕಾರ ಮಾಡಿದ್ದ ಶಿಫಾರಸ್ಸನ್ನು ರಾಜ್ಯಪಾಲರು ಬದಿಗಿರಿಸಿದ್ದರು ಎಂಬುದು ಇದೀಗ  ಮುನ್ನೆಲೆಗೆ ಬಂದಿದೆ. ಈ ಸಂಬಂಧ ‘ದಿ ಫೈಲ್‌’ಗೆ ಕೆಲ ದಾಖಲೆಗಳು ಲಭ್ಯವಾಗಿವೆ.

 

ಕುಲಪತಿ ಹುದ್ದೆಗೆ ನೇಮಕ ಮಾಡುವ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಸಮಾಲೋಚನೆ ನಡೆಸಬೇಕು ಎಂಬ ಅಧಿನಿಯಮವಿದ್ದರೂ ಶೋಧನಾ ಸಮಿತಿಯು ಮಾಡಿದ್ದ  ಆಯ್ಕೆಪಟ್ಟಿಯಲ್ಲಿ ರಾಜ್ಯ ಸರ್ಕಾರವು ಮಾಡಿದ್ದ ಶಿಫಾರಸ್ಸನ್ನು ರಾಜ್ಯಪಾಲರು ಪುರಸ್ಕರಿಸದಿರುವುದೂ ಚರ್ಚೆಗೆ ಗ್ರಾಸವಾಗಿದೆ.

 

ಭೂಪಾಲ್‌ನಲ್ಲಿರುವ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಡಾ ವಿ ವಿಜಯಕುಮಾರ್‌ ಅಧ್ಯಕ್ಷತೆಯಲ್ಲಿ ರಚಿತವಾಗಿದ್ದ ಶೋಧನಾ ಸಮಿತಿಯು ಅಶೋಕ್‌ ರಾಮಪ್ಪ ಪಾಟೀಲ್, ಡಾ ಬಸವರಾಜು ಸಿ, ಪ್ರೊ ನಂದಿಮಠ ಓಂಪ್ರಕಾಶ್‌ ವೀರಯ್ಯ ಅವರನ್ನೊಳಗೊಂಡ ಆಯ್ಕೆಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು.

 

ಶೋಧನಾ ಸಮಿತಿ ಮಾಡಿದ್ದ ಶಿಫಾರಸ್ಸು ಪ್ರತಿ

 

ಈ ಪೈಕಿ ಆರ್ಹತೆ, ಸಮಾನತೆ ಮತ್ತು ಸಾಮಾಜಿಕ ನ್ಯಾಯ ತತ್ವದಡಿಯಲ್ಲಿ ಕಾನೂನು ಸಂಸದೀಯ ಸಚಿವ ಜೆ ಸಿ ಮಾಧುಸ್ವಾಮಿ ಅವರು ಪ್ರೊ ನಂದಿಮಠ ಓಂಪ್ರಕಾಶ್‌ ವೀರಯ್ಯ ಅವರನ್ನು ಕುಲಪತಿ ಹುದ್ದೆಗೆ ಶಿಫಾರಸ್ಸು ಮಾಡಿದ್ದರು. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಅನುಮೋದಿಸಿದ್ದರು ಎಂಬುದು ದಾಖಲೆಯಿಂದ (NO LAW 55 KLM 2022) ತಿಳಿದು ಬಂದಿದೆ.

 

ಕಾನೂನು ವಿವಿ ಕುಲಪತಿ ಹುದ್ದೆಗೆ ಹೆಸರು ಶಿಫಾರಸ್ಸು ಮಾಡಿ ಕಾನೂನು ಇಲಾಖೆ ಬರೆದಿದ್ದ ಪತ್ರದ ಪ್ರತಿ

 

ಆದರೆ ರಾಜ್ಯಪಾಲರು ಪ್ರೊ ನಂದಿಮಠ ಓಂಪ್ರಕಾಶ್‌ ವೀರಯ್ಯ ಅವರ ಬದಲಿಗೆ ಡಾ ಸಿ ಬಸವರಾಜು ಎಂಬುವರನ್ನು ನೇಮಕಗೊಳಿಸಿದ್ದರು.

 

ಕುಲಪತಿ ಹುದ್ದೆಗೆ ನೇಮಕ ಮಾಡುವಾಗ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲರು ಅರ್ಹತೆ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ತತ್ವವನ್ನು ಅನುಸರಿಸಬೇಕು. ಇದನ್ನು ರಾಜ್ಯ ಸರ್ಕಾರದೊಂದಿಗೆ ಸಮಾಲೋಚನೆ ಮತ್ತು ಒಪ್ಪಿಗೆಯನ್ನೂ ಪಡೆಯಬೇಕು. ಆದರೆ ಕಾನೂನು ವಿಶ್ವವಿದ್ಯಾಲಯ ಕುಲಪತಿ ಹುದ್ದೆಗೆ ನೇಮಕ ಪ್ರಕ್ರಿಯೆ ಸಂದರ್ಭದಲ್ಲಿ ಈ ಪ್ರಕ್ರಿಯೆಗಳು ನಡೆದಿಲ್ಲ ಎಂಬುದು ಲಭ್ಯವಿರುವ ದಾಖಲೆಯಿಂದ ತಿಳಿದು ಬಂದಿದೆ.

 

ಪ್ರೊ ಡಾ ಜಿ ಆರ್‌ ಜಗದೀಶ್‌, ಪ್ರೊ ಎಸ್‌ ಯು ಕೆ ಪಾಟೀಲ್‌, ಪ್ರೊ ಬಿ ಎಸ್ ರೆಡ್ಡಿ, ಡಾ ರಮೇಶ್‌, ಶರತ್‌ ಬಾಬು, ಡಾ ಶಿವಾನಂದ ಹೆಚ್‌, ಪ್ರೊ ವೆಂಕಟಚಲಾ ಜಿ ಹೆಗ್ಡೆ ಅವರು ಸೇರಿದಂತೆ ಒಟ್ಟು 10 ಮಂದಿ ಕುಲಪತಿ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು.

Hot this week

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

Topics

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

Related Articles

Popular Categories

error: Content is protected !!