Thursday | July 16, 2026 |

ಕಾನೂನು ವಿವಿ; ಸರ್ಕಾರದ ಶಿಫಾರಸ್ಸು ಬದಿಗಿರಿಸಿ ಕುಲಪತಿ ನೇಮಕಗೊಳಿಸಿದ ರಾಜ್ಯಪಾಲರು

ಬೆಂಗಳೂರು; ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ಕುಲಪತಿಗಳನ್ನಾಗಿ ನೇಮಕ ಮಾಡುವ ಸಂಬಂಧ ಕಾನೂನು ಮತ್ತು ಸಂಸದೀಯ ಸಚಿವರು ಮತ್ತು ರಾಜ್ಯ ಸರ್ಕಾರವು ಮಾಡಿದ್ದ ಶಿಫಾರಸ್ಸನ್ನು ಬದಿಗಿರಿಸಿದ್ದ ರಾಜ್ಯಪಾಲರು ಸರ್ಕಾರವು ಶಿಫಾರಸ್ಸು ಮಾಡದೇ ಇದ್ದ ಅಭ್ಯರ್ಥಿಯನ್ನು ಕುಲಪತಿಯನ್ನಾಗಿ ನೇಮಕ ಮಾಡಿದ್ದರು ಎಂಬುದು ಇದೀಗ ದಾಖಲೆ ಸಹಿತ ಬಹಿರಂಗವಾಗಿದೆ.

 

ಕುಲಪತಿಗಳ ನೇಮಕಕ್ಕೆ 6-7 ಕೋಟಿ ಹಣದ ವ್ಯವಹಾರ ನಡೆದಿದೆ ಎಂಬ ಗುರುತರವಾದ ಆರೋಪವನ್ನು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಅವರು ಆಡಿದ್ದ ಮಾತುಗಳು ವಿಶ್ವವಿದ್ಯಾಲಯ ಮತ್ತು ಶೈಕ್ಷಣಿಕ ವಲಯದಲ್ಲಿ ಹೆಚ್ಚು ಚರ್ಚೆಗಳಾಗುತ್ತಿರುವ ಹೊತ್ತಿನಲ್ಲಿಯೇ ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಕುಲಪತಿ ಹುದ್ದೆಗೆ ರಾಜ್ಯ ಸರ್ಕಾರ ಮಾಡಿದ್ದ ಶಿಫಾರಸ್ಸನ್ನು ರಾಜ್ಯಪಾಲರು ಬದಿಗಿರಿಸಿದ್ದರು ಎಂಬುದು ಇದೀಗ  ಮುನ್ನೆಲೆಗೆ ಬಂದಿದೆ. ಈ ಸಂಬಂಧ ‘ದಿ ಫೈಲ್‌’ಗೆ ಕೆಲ ದಾಖಲೆಗಳು ಲಭ್ಯವಾಗಿವೆ.

 

ಕುಲಪತಿ ಹುದ್ದೆಗೆ ನೇಮಕ ಮಾಡುವ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಸಮಾಲೋಚನೆ ನಡೆಸಬೇಕು ಎಂಬ ಅಧಿನಿಯಮವಿದ್ದರೂ ಶೋಧನಾ ಸಮಿತಿಯು ಮಾಡಿದ್ದ  ಆಯ್ಕೆಪಟ್ಟಿಯಲ್ಲಿ ರಾಜ್ಯ ಸರ್ಕಾರವು ಮಾಡಿದ್ದ ಶಿಫಾರಸ್ಸನ್ನು ರಾಜ್ಯಪಾಲರು ಪುರಸ್ಕರಿಸದಿರುವುದೂ ಚರ್ಚೆಗೆ ಗ್ರಾಸವಾಗಿದೆ.

 

ಭೂಪಾಲ್‌ನಲ್ಲಿರುವ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಡಾ ವಿ ವಿಜಯಕುಮಾರ್‌ ಅಧ್ಯಕ್ಷತೆಯಲ್ಲಿ ರಚಿತವಾಗಿದ್ದ ಶೋಧನಾ ಸಮಿತಿಯು ಅಶೋಕ್‌ ರಾಮಪ್ಪ ಪಾಟೀಲ್, ಡಾ ಬಸವರಾಜು ಸಿ, ಪ್ರೊ ನಂದಿಮಠ ಓಂಪ್ರಕಾಶ್‌ ವೀರಯ್ಯ ಅವರನ್ನೊಳಗೊಂಡ ಆಯ್ಕೆಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು.

 

ಶೋಧನಾ ಸಮಿತಿ ಮಾಡಿದ್ದ ಶಿಫಾರಸ್ಸು ಪ್ರತಿ

 

ಈ ಪೈಕಿ ಆರ್ಹತೆ, ಸಮಾನತೆ ಮತ್ತು ಸಾಮಾಜಿಕ ನ್ಯಾಯ ತತ್ವದಡಿಯಲ್ಲಿ ಕಾನೂನು ಸಂಸದೀಯ ಸಚಿವ ಜೆ ಸಿ ಮಾಧುಸ್ವಾಮಿ ಅವರು ಪ್ರೊ ನಂದಿಮಠ ಓಂಪ್ರಕಾಶ್‌ ವೀರಯ್ಯ ಅವರನ್ನು ಕುಲಪತಿ ಹುದ್ದೆಗೆ ಶಿಫಾರಸ್ಸು ಮಾಡಿದ್ದರು. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಅನುಮೋದಿಸಿದ್ದರು ಎಂಬುದು ದಾಖಲೆಯಿಂದ (NO LAW 55 KLM 2022) ತಿಳಿದು ಬಂದಿದೆ.

 

ಕಾನೂನು ವಿವಿ ಕುಲಪತಿ ಹುದ್ದೆಗೆ ಹೆಸರು ಶಿಫಾರಸ್ಸು ಮಾಡಿ ಕಾನೂನು ಇಲಾಖೆ ಬರೆದಿದ್ದ ಪತ್ರದ ಪ್ರತಿ

 

ಆದರೆ ರಾಜ್ಯಪಾಲರು ಪ್ರೊ ನಂದಿಮಠ ಓಂಪ್ರಕಾಶ್‌ ವೀರಯ್ಯ ಅವರ ಬದಲಿಗೆ ಡಾ ಸಿ ಬಸವರಾಜು ಎಂಬುವರನ್ನು ನೇಮಕಗೊಳಿಸಿದ್ದರು.

 

ಕುಲಪತಿ ಹುದ್ದೆಗೆ ನೇಮಕ ಮಾಡುವಾಗ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲರು ಅರ್ಹತೆ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ತತ್ವವನ್ನು ಅನುಸರಿಸಬೇಕು. ಇದನ್ನು ರಾಜ್ಯ ಸರ್ಕಾರದೊಂದಿಗೆ ಸಮಾಲೋಚನೆ ಮತ್ತು ಒಪ್ಪಿಗೆಯನ್ನೂ ಪಡೆಯಬೇಕು. ಆದರೆ ಕಾನೂನು ವಿಶ್ವವಿದ್ಯಾಲಯ ಕುಲಪತಿ ಹುದ್ದೆಗೆ ನೇಮಕ ಪ್ರಕ್ರಿಯೆ ಸಂದರ್ಭದಲ್ಲಿ ಈ ಪ್ರಕ್ರಿಯೆಗಳು ನಡೆದಿಲ್ಲ ಎಂಬುದು ಲಭ್ಯವಿರುವ ದಾಖಲೆಯಿಂದ ತಿಳಿದು ಬಂದಿದೆ.

 

ಪ್ರೊ ಡಾ ಜಿ ಆರ್‌ ಜಗದೀಶ್‌, ಪ್ರೊ ಎಸ್‌ ಯು ಕೆ ಪಾಟೀಲ್‌, ಪ್ರೊ ಬಿ ಎಸ್ ರೆಡ್ಡಿ, ಡಾ ರಮೇಶ್‌, ಶರತ್‌ ಬಾಬು, ಡಾ ಶಿವಾನಂದ ಹೆಚ್‌, ಪ್ರೊ ವೆಂಕಟಚಲಾ ಜಿ ಹೆಗ್ಡೆ ಅವರು ಸೇರಿದಂತೆ ಒಟ್ಟು 10 ಮಂದಿ ಕುಲಪತಿ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು.

Hot this week

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಎಬಿ-ಎಆರ್‍‌ಕೆ ಯೋಜನೆಯಲ್ಲಿ ಅಕ್ರಮ; ಜಿಮ್ಸ್‌ ಸಿಬ್ಬಂದಿ, ಖಾಸಗಿ ಆಸ್ಪತ್ರೆ ಶಾಮೀಲು, ರಾಜೀನಾಮೆ ನೀಡಿದ್ದ ವೈದ್ಯರ ಹೆಸರಿನಲ್ಲೂ ನಕಲಿ ಓಆರ್‍‌ಎಸ್‌ ಸೃಜನೆ; ತನಿಖಾ ವರದಿ

ಬೆಂಗಳೂರು; ಆಯುಷ್ಮಾನ್‌ ಭಾರತ್ ಮತ್ತು  ಎಆರ್‍‌ಕೆ ಯೋಜನೆಯಡಿಯಲ್ಲಿ  ಕಲ್ಬುರ್ಗಿ ಜಿಲ್ಲಾ  ಆಸ್ಪತ್ರೆಯಿಂದ...
Please Scan to make Your Contribution

Topics

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಜಿಎಸ್‌ಡಿಪಿ 23,34,000 ಕೋಟಿ, ಉನ್ನತ ಶಿಕ್ಷಣಕ್ಕಾಗಿ ಕೇವಲ 5,646 ಕೋಟಿ ರು ಖರ್ಚು; ಇತರೆ ರಾಜ್ಯಗಳಿಗಿಂತ ಕೆಳಗಿಳಿದ ಕರ್ನಾಟಕ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದ ಮೊದಲನೇ ಆರ್ಥಿಕ...

Related Articles

Popular Categories

error: Content is protected !!