Thursday | June 25, 2026 |

ಉಕ್ರೇನ್‌ ಬಿಕ್ಕಟ್ಟು; ರಾಜ್ಯಕ್ಕೆ ಹಿಂದಿರುಗಿರುವ 700 ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಬೆಂಗಳೂರು; ಯುದ್ಧಪೀಡಿತವಾಗಿದ್ದ ಉಕ್ರೇನ್‌ನಿಂದ ವೈದ್ಯಕೀಯ ವಿದ್ಯಾಭ್ಯಾಸ ಮೊಟಕುಗೊಳಿಸಿ ರಾಜ್ಯಕ್ಕೆ ಹಿಂದಿರುಗಿರುವ ಅಂದಾಜು 700 ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ಇನ್ನೂ ಅತಂತ್ರವಾಗಿಯೇ ಇದೆ. ಯುದ್ಧ ಮುಗಿದು ಹಲವು ತಿಂಗಳಾದರೂ ಸಹ ಅಲ್ಲಿಂದ ಹೊರಬಂದಿರುವ ವೈದ್ಯಕೀಯ ಶಿಕ್ಷಣ ಕುರಿತು ತೀರ್ಮಾನವಾಗಲೀ, ರಾಷ್ಟ್ರೀಯ ಮಟ್ಟದಲ್ಲೂ ಏಕರೂಪದ ನೀತಿಯೂ ಸಹ ಇದುವರೆಗೂ ರೂಪಿತಗೊಂಡಿಲ್ಲ.

 

ಉಕ್ರೇನ್‌ನಿಂದ ಹೊರಬಿದ್ದಿರುವ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯದ ಕುರಿತು ವಿಧಾನಸಭೆಯಲ್ಲಿ ಶಾಸಕ ಯಶವಂತರಾಯಗೌಡ ವಿಠಲಗೌಡ ಪಾಟೀಲ ಅವರು ನಿಯಮ 351ರಡಿ ಪ್ರಸ್ತಾಪಿಸಿದ್ದ ಸೂಚನೆಗೆ ವೈದ್ಯಕೀಯ ಹಾಗೂ ಆರೋಗ್ಯ ಕುಟುಂಬ ಕಲ್ಯಾಣ ಸಚಿವ ಸಚಿವ ಡಾ ಕೆ ಸುಧಾಕರ್‌ ಅವರು ನೀಡಿರುವ ಉತ್ತರದಲ್ಲಿ ಮೇಲಿನ ಅಂಶವನ್ನು ಉಲ್ಲೇಖಿಸಿದೆ.

 

ಉಕ್ರೇನ್‌ ಯುದ್ಧ ಪರಿಣಾಮವಾಗಿ ವ್ಯಾಸಂಗವನ್ನು ಮೊಟಕುಗೊಳಿಸಿ ಸ್ವದೇಶಕ್ಕೆ ವಾಪಸ್ಸಾದ ವೈದ್ಯಕೀಯ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಶೀಲಿಸಲು ಹಾಗೂ ಸಮಸ್ಯೆಗಳಿಗೆ ಸೂಕ್ತ ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ಸಲಹೆಗಳನ್ನು ನೀಡಲು ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ಆದರೆ ವೈದ್ಯಕೀಯ ಶಿಕ್ಷಣ ಸಂಬಂಧಿಸಿದಂತೆ ಅಗ್ರಮಾನ್ಯ ಶಾಸನಬದ್ಧ ಸಂಸ್ಥೆಯಾದ ರಾಷ್ಟ್ರೀಯ ವೈದ್ಯಕೀಯ ಆಯೋಗದ ತೀರ್ಮಾನದತ್ತ ಮುಖ ಮಾಡಿರುವ ಕಾರಣ ವೈದ್ಯಕೀಯ ಶಿಕ್ಷಣ ವಿದ್ಯಾರ್ಥಿಗಳ ಮುಂದಿನ ವ್ಯಾಸಂಗದ ಕುರಿತು ಇನ್ನು ಯಾವುದೇ ಅಂತಿಮ ತೀರ್ಮಾನ ಹೊರಬಿದ್ದಿಲ್ಲ.

 

ಅಲ್ಲದೇ ಈ ಕುರಿತು ರಾಷ್ಟ್ರೀಯ ವೈದ್ಯಕೀಯ ಆಯೋಗವು ಇನ್ನೂ ಏಕರೂಪದ ನೀತಿ ರೂಪಿಸದ ಕಾರಣ ರಾಜೀವ್‌ಗಾಂಧಿ ವಿಶ್ವವಿದ್ಯಾಲಯದ ಕುಲಪತಿ ಅಧ್ಯಕ್ಷತೆಯ ಸಮಿತಿಯೂ ಯಾವುದೇ ಸ್ಪಷ್ಟ ಹೆಜ್ಜೆಗಳನ್ನಿಟ್ಟಿಲ್ಲ ಎಂದು ಗೊತ್ತಾಗಿದೆ.

 

ನಿಯಮ 351ರಡಿ ಸಚಿವ ಸುಧಾಕರ್‌ ಅವರು ನೀಡಿರುವ ಉತ್ತರದ ಪ್ರತಿ

 

‘ವೈದ್ಯಕೀಯ ಶಿಕ್ಷಣ ಸಂಬಂಧಿಸಿದಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗ ನಮ್ಮ ರಾಷ್ಟ್ರದಲ್ಲಿ ವೈದ್ಯಕೀಯ ಶಿಕ್ಷಣ ನೀತಿಯನ್ನು ರೂಪಿಸುವ ಅಗ್ರಮಾನ್ಯ ಶಾಸನಬದ್ಧ ಸಂಸ್ಥೆಯಾಗಿದೆ. ಉಕ್ರೇನ್‌ನಿಂದ ವೈದ್ಯಕೀಯ ವಿದ್ಯಾಭ್ಯಾಸ ಮೊಟಕುಗೊಳಿಸಿ ರಾಜ್ಯಕ್ಎಕ ಹಿಂತಿರುಗಿರುವ ಪ್ರಕರಣಗಳು ಕರ್ನಾಟಕ ರಾಜ್ಯದಲ್ಲಿ ಮಾತ್ರವಲ್ಲದೇ ಭಾರತದ ಇತರೆ ರಾಜ್ಯಗಳ ವಿದ್ಯಾರ್ಥಿಗಳನ್ನು ಸಹ ಒಳಗೊಂಡಿರುವ ಕಾರಣ ಈ ವಿಷಯದಲ್ಲಿ ಏಕರೂಪದ ನೀತಿ ಕೈಗೊಳ್ಳಬೇಕಿರುತ್ತದೆ,’ ಎಂದು ಸಚಿವ ಡಾ ಕೆ ಸುಧಾಕರ್‌ ಅವರು ಉತ್ತರದಲ್ಲಿ ವಿವರಿಸಿದ್ದಾರೆ.

 

ಇದೊಂದು ವಿಶೇಷ ಸಂದರ್ಭವಾಗಿದ್ದು ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಕೇಂಧ್ರ ಮತ್ತು ರಾಜ್ಯ ಸರ್ಕಾರವು ಅವಶ್ಯಕ ಕ್ರಮ ಕೈಗೊಳ್ಳುವ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಿ ಹಾಗೂ ಕ್ಷೇತ್ರ ಪರಿಣಿತರೊಂದಿಗೆ ಚರ್ಚಿಸಿ ರಾಷ್ಟ್ರೀಯ ವೈದ್ಯಕೀಯ ಆಯೋಗವು ನೀಡುವ ಸೂಚನೆಗಳನ್ನು ನಿರೀಕ್ಷಿಸಲಾಗುತ್ತಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗವು ನೀಡುವ ಸೂಚನೆಗಳನುಸಾರ ಅಗತ್ಯ ಕ್ರಮವಹಿಸಲಾಗುವುದು ಎಂದೂ ಉತ್ತರದಲ್ಲಿ ತಿಳಿಸಿದ್ದಾರೆ.

 

ರಾಷ್ಟ್ರೀಯ ವೈದ್ಯಕೀಯ ಆಯೋಗವು 2022ರ ಸೆ.15ರಂದು ಸಾರ್ವಜನಿಕ ಸೂಚನೆ ಹೊರಡಿಸಿತ್ತು. ಉಕ್ರೇನ್‌ನಲ್ಲಿ ವ್ಯಾಸಂಗ ಮೊಟಕುಗೊಳಿಸಿರುವ ಭಾರತೀಯ ವೈದ್ಯಕೀಯ ವಿದ್ಯಾರ್ಥಿಗಳು ಶೈಕ್ಷಣಿಕ ಚಲಶೀಲತೆಗಾಗಿ ತಾತ್ಕಾಲಿಕವಾಗಿ ಹೊರದೇಶಗಳಾದ ಪೋಲೆಂಡ್‌, ಆಸ್ಟ್ರಿಯಾ , ಜೆಕ್‌ ರಿಪಬ್ಲಿಕ್‌, ಫ್ರಾನ್ಸ್‌, ಜಾರ್ಜಿಯಾ, ಕಝಕಿಸ್ತಾನ, ಮಾಲ್ಡಿವಿಯಾ, ಸ್ಪೈನ್‌, ಉಜ್ಬೇಕಿಸ್ತಾನ, ಯುಎಸ್‌, ಇಟಲಿ, ಬೆಲ್ಜಿಯಂ, ಈಜಿಪ್ಟ್‌, ಲಾಟ್ವಿಯಾ, ಗ್ರೀಸ್‌, ರುಮೇನಿಯಾ, ಸ್ವೀಡನ್‌, ಇಸ್ರೇಲ್‌, ಇರಾನ್‌, ಬಲ್ಗೇರಿಯಾ, ಜರ್ಮನಿ, ಟರ್ಕಿ, ಹಂಗೇರಿ ಸೇರಿ ಇನ್ನಿತರೆಡಗಳಲ್ಲಿ ವ್ಯಾಸಂಗ ಮುಗಿಸಿ ಮಾತೃ ಸಂಸ್ಥೆ ಉಕ್ರೇನ್‌ ವಿಶ್ವವಿದ್ಯಾಲಯದಲ್ಲಿ ಪದವಿಯನ್ನು ಪಡೆಯಬಹುದಾಗಿದೆ ಎಂದು ತಿಳಿಸಿ ಮೊಬಿಲಿಟಿ ಕಾರ್ಯಕ್ರಮವನ್ನು ಅಳವಡಿಸಿಕೊಳ್ಳಲು ಸಲಹೆ ನೀಡಿರುವುದು ಗೊತ್ತಾಗಿದೆ.

Hot this week

ಮೆಟ್ರೋ ರೈಲು 3ನೇ ಹಂತಕ್ಕೆ 7.02 ಎಕರೆ ಭೂಮಿ; 203.76 ಕೋಟಿ ರುಪಾಯಿ ಭೂ ಪರಿಹಾರ ಕೇಳಿದ ರಕ್ಷಣಾ ಇಲಾಖೆ, ಸರ್ಕಾರದ ನಿಲುವೇನು?

ಬೆಂಗಳೂರು: ಮೆಟ್ರೋ ರೈಲು ಯೋಜನೆಯ ಮೂರನೇ ಹಂತದ ಅನುಷ್ಠಾನಕ್ಕಾಗಿ ಅಗತ್ಯವಿರುವ 7.02...

39, 437.37 ಕೋಟಿ ರು ಮೊತ್ತದ ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆ ಪರಿಶೀಲನೆ; ನಿಗದಿತ ಅವಧಿಯೊಳಗೆ ವರದಿ ಸಲ್ಲಿಸುವಲ್ಲಿ ಅಂಜುಂ ಪರ್ವೇಜ್ ಸಮಿತಿ ವಿಫಲ, 15 ದಿನಗಳ ಕಾಲಾವಕಾಶ ವಿಸ್ತರಣೆ

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳನ್ನು...

ಸುರಂಗ ಮಾರ್ಗ; ಸಂಚಾರ ದಟ್ಟಣೆ ಕಡಿಮೆಯಾದರೂ 40 ವರ್ಷಕ್ಕೆ ಗುತ್ತಿಗೆ ವಿಸ್ತರಣೆಗೆ ಪ್ರಸ್ತಾವ, ಅದಾನಿ ಎಂಟರ್ ಪ್ರೈಸೆಸ್‌ಗೆ ಡಿ ಕೆ ಸರ್ಕಾರದಿಂದ 10 ವರ್ಷ ಅವಧಿಯ ಗಿಫ್ಟ್‌!

ಬೆಂಗಳೂರು; ಗ್ರೇಟರ್‌ಬೆಂಗಳೂರು ಪ್ರದೇಶ ವ್ಯಾಪ್ತಿಯಲ್ಲಿನ ಹೆಬ್ಬಾಳ (ಎಸ್ಟಿಮ್‌ಮಾಲ್) ಜಂಕ್ಷನ್‌ನಿಂದ ಹೆಚ್‌.ಎಸ್‌.ಆರ್‌ ಲೇಔಟ್‌...
Please Scan to make Your Contribution

Topics

ಮೆಟ್ರೋ ರೈಲು 3ನೇ ಹಂತಕ್ಕೆ 7.02 ಎಕರೆ ಭೂಮಿ; 203.76 ಕೋಟಿ ರುಪಾಯಿ ಭೂ ಪರಿಹಾರ ಕೇಳಿದ ರಕ್ಷಣಾ ಇಲಾಖೆ, ಸರ್ಕಾರದ ನಿಲುವೇನು?

ಬೆಂಗಳೂರು: ಮೆಟ್ರೋ ರೈಲು ಯೋಜನೆಯ ಮೂರನೇ ಹಂತದ ಅನುಷ್ಠಾನಕ್ಕಾಗಿ ಅಗತ್ಯವಿರುವ 7.02...

39, 437.37 ಕೋಟಿ ರು ಮೊತ್ತದ ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆ ಪರಿಶೀಲನೆ; ನಿಗದಿತ ಅವಧಿಯೊಳಗೆ ವರದಿ ಸಲ್ಲಿಸುವಲ್ಲಿ ಅಂಜುಂ ಪರ್ವೇಜ್ ಸಮಿತಿ ವಿಫಲ, 15 ದಿನಗಳ ಕಾಲಾವಕಾಶ ವಿಸ್ತರಣೆ

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳನ್ನು...

ಸುರಂಗ ಮಾರ್ಗ; ಸಂಚಾರ ದಟ್ಟಣೆ ಕಡಿಮೆಯಾದರೂ 40 ವರ್ಷಕ್ಕೆ ಗುತ್ತಿಗೆ ವಿಸ್ತರಣೆಗೆ ಪ್ರಸ್ತಾವ, ಅದಾನಿ ಎಂಟರ್ ಪ್ರೈಸೆಸ್‌ಗೆ ಡಿ ಕೆ ಸರ್ಕಾರದಿಂದ 10 ವರ್ಷ ಅವಧಿಯ ಗಿಫ್ಟ್‌!

ಬೆಂಗಳೂರು; ಗ್ರೇಟರ್‌ಬೆಂಗಳೂರು ಪ್ರದೇಶ ವ್ಯಾಪ್ತಿಯಲ್ಲಿನ ಹೆಬ್ಬಾಳ (ಎಸ್ಟಿಮ್‌ಮಾಲ್) ಜಂಕ್ಷನ್‌ನಿಂದ ಹೆಚ್‌.ಎಸ್‌.ಆರ್‌ ಲೇಔಟ್‌...

ದಲಿತರ ಜಮೀನು ಭೂ ಪರಿವರ್ತನೆ; ಜಿಲ್ಲಾಧಿಕಾರಿಯಿಂದ ವಾಸ್ತವಾಂಶ ವರದಿ, ಪ್ರಕರಣವನ್ನೇ ಮುಚ್ಚಿ ಹಾಕಿತೇ?

ಬೆಂಗಳೂರು;  ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಸಾದಲಿ ಹೋಬಳಿಯ ಪುರ ಬೈರನಹಳ್ಳಿ...

ಜಿಬಿಎ 5 ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ನಿರ್ಮಾಣ; 992.00 ಕೋಟಿ ರು ವೆಚ್ಚ , 749 ಕಿಮೀ ಉದ್ದದಲ್ಲಿ 88 ಕಿ ಮೀ ಮಾತ್ರ ಪೂರ್ಣ

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 5 ನಗರಪಾಲಿಕೆಗಳು ಮುಖ್ಯಮಂತ್ರಿಗಳ ಮೂಲ...

Related Articles

Popular Categories

error: Content is protected !!