Wednesday | July 15, 2026 |

ಕಾಮಗಾರಿ ಅಕ್ರಮ; 42 ಕೋಟಿ ನಷ್ಟವಾದರೂ ಸಿಬಿಐ, ಲೋಕಾಯುಕ್ತಕ್ಕೆ ವಹಿಸದ ಸರ್ಕಾರ

ಬೆಂಗಳೂರು; ನಾರಾಯಣಪುರ ಬಲದಂಡೆ ವಿತರಣೆ ಕಾಲುವೆ ಹಾಗೂ ಸೀಳು ಕಾಲುವೆಗಳ ಆಧುನೀಕರಣ ಕಾಮಗಾರಿಯ ಅಂದಾಜು ಪತ್ರಿಕೆಯಲ್ಲಿ ಅನವಶ್ಯಕ ಐಟಂ ಸೇರಿಸಿ 42.78 ಕೋಟಿ ರು. ನಷ್ಟ ಸಂಭವಿಸಿದ್ದರೂ ಈ ಪ್ರಕರಣವನ್ನು ಸಿಬಿಐ ಅಥವಾ ಲೋಕಾಯುಕ್ತಕ್ಕೆ ವಹಿಸಿಲ್ಲ.

 

ಅಂದಾಜುಪತ್ರಿಕೆ ಗಾತ್ರ ಹೆಚ್ಚಿಸಿದ್ದ ಪ್ರಕರಣದಲ್ಲಿ ಗುತ್ತಿಗೆದಾರರಿಂದ ನಷ್ಟದ ಮೊತ್ತವನ್ನು ವಸೂಲು ಮಾಡಲಾಗಿದೆಯಾದರೂ ಇದಕ್ಕೆ ಕಾರಣರಾದ ಅಧಿಕಾರಿ, ಸಿಬ್ಬಂದಿ ವಿರುದ್ಧ ಇಲಾಖಾ ಹಂತದಲ್ಲಿಯೂ ಯಾವುದೇ ಕ್ರಮವಹಿಸಿಲ್ಲ.

 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬಸವನಗೌಡ ದದ್ದಲ ಹಾಗೂ ಹೂಲಗೇರಿ ಡಿ ಎಸ್‌ ಅವರು ವಿಧಾನಸಭೆಯಲ್ಲಿ ಕೇಳಿದ್ದ ಪ್ರಶ್ನೆಗೆ ಉತ್ತರಿಸಿರುವ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಪ್ರಕರಣವನ್ನು ಲೋಕಾಯುಕ್ತ ಅಥವಾ ಸಿಬಿಐಗೆ ವಹಿಸುವ ಸಂಬಂಧ ಯಾವುದೇ ನಿಲುವನ್ನೂ ತಿಳಿಸಿಲ್ಲ.

 

95.00 ರಿಂದ 145.00 ವರೆಗೆ ಮುಖ್ಯ ಕಾಲುವೆ ವಿಸ್ತರಣೆ ಕಾಮಗಾರಿ ಪೂರ್ಣಗೊಂಡಿದ್ದು 145ರಿಂದ 155ವರೆಗಿನ ಕಾಮಗಾರಿಯು ಪ್ರಗತಿಯಲ್ಲಿದೆ. ಪ್ರತಿ ಕಿ ಮೀ ಗೆ ಒಟ್ಟಾರೆ ಸರಾಸರಿ 16.96 ಕೋಟಿ ರು ಖರ್ಚಾಗಿದೆ. ಪ್ಯಾಕೇಜ್‌-1ರ ಕಾಮಗಾರಿ (526.10 ಕಿ ಮೀ) ಸಂಬಂಧಿಸಿದಂತೆ ಗುತ್ತಿಗೆದಾರರಿಗೆ 373.30 ಕೋಟಿ ರು., ಪ್ಯಾಕೇಜ್‌ -2 ಕಾಮಗಾರಿಗೆ (431 ಕಿ ಮೀ) ಗುತ್ತಿಗೆದಾರರಿಗೆ 180.59 ಕೋಟಿ ರು.ಗಳನ್ನು ಈಗಾಗಲೇ ಪಾವತಿಸಲಾಗಿದೆ.

 

ಸಚಿವ ಗೋವಿಂದ ಕಾರಜೋಳ ಅವರು ನೀಡಿರುವ ಉತ್ತರದ ಪ್ರತಿ

 

ಪ್ರಕರಣದ ವಿವರ

 

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನಲ್ಲಿ ಬರುವ ನಾರಾಯಣಪುರ ಬಲದಂಡೆ ಕಾಲುವೆಯು 0.00 ಕಿ ಮೀ. 95 ಕಿ ಮೀ ವರೆಗೆ ವಿತರಣೆ ಕಾಲುವೆ ಹಾಗೂ ಸೀಳುಕಾಲುವೆಗಳ ಆಧುನೀಕರಣದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಅಧಿಕಾರಿಗಳು ಈ ಸಂಬಂಧ ಸಿದ್ಧಪಡಿಸಿದ್ದ ಅಂದಾಜು ಪತ್ರಿಕೆಯಲ್ಲಿ ಅನವಶ್ಯಕ ಐಟಂ ಸೇರಿಸಿ ಗಾತ್ರವನ್ನು ಹೆಚ್ಚಳ ಮಾಡಲಾಗಿತ್ತು. ಇದರಿಂದಾಗಿ 45 ಕೋಟಿ ರು. ಸರ್ಕಾರದ ಬೊಕ್ಕಸಕ್ಕೆ ನಷ್ಟವುಂಟಾಗಿತ್ತು ಎಂದು ಸರ್ಕಾರವೇ ರಚಿಸಿದ್ದ ಸತ್ಯಶೋಧನೆ ಸಮಿತಿ ವರದಿ ಕೊಟ್ಟಿತ್ತು.

 

‘ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಯ ಕಿ ಮೀ 0.00 ರಿಂದ 95.00 ಕಿ ಮೀ ವರೆಗಿನ ಆಧುನೀಕರಣ ಪ್ಯಾಕೇಜ್‌ ಕಾಮಗಾರಿಗೆ ಸಂಬಂಧಪಟ್ಟ ಸರ್ಕಾರ ರಚಿಸಿದ್ದ ಸತ್ಯಶೋಧನಾ ಸಮಿತಿಯ ಶಿಫಾರಸ್ಸುಗಳನ್ವಯ (ಸರ್ಕಾರದ ಆದೇಶ ಸಂಖ್ಯೆ ಜಸಂಇ 146ಸೇಇವಿ 2020 ದಿನಾಂಕ 05-07-2021) ರಂದು ಒಟ್ಟು 42.785 ಕೋಟಿ ರು.ಗಳನ್ನು ಸಂಬಂಧಪಟ್ಟ ಗುತ್ತಿಗೆದಾರರಿಂದ ವಸೂಲಾತಿ ಮಾಡಲಾಗಿದೆ,’ ಎಂದು ಸಚಿವ ಗೋವಿಂದ ಕಾರಜೋಳ ಅವರು ಸದನಕ್ಕೆ ಉತ್ತರ ಒದಗಿಸಿದ್ದಾರೆ.

 

ಇದಲ್ಲದೇ ರಾಯಚೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಗೆ ಅಡ್ಡಲಾಗಿ ನಿರ್ಮಿಸಿರುವ ಉಪ, ಸೀಳು ಕಾಲುವೆಯ ಆಧುನೀಕರಣ ಪ್ಯಾಕೇಜ್‌ 1 ಮತ್ತು 2 ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಂಜೂರಾದ ಅಂದಾಜು ಪತ್ರಿಕೆಗಳಲ್ಲಿ ಕಂಡು ಬಂದ ಲೋಪದೋಷಗಳನ್ನು ಪ್ರಮಾಣೀಕರಿಸುವ ಸಲುವಾಗಿ (ಸರ್ಕಾರದ ಆದೇಶ ದಿನಾಂಕ 2022ರ ಜೂನ್‌ 10) ತಾಂತ್ರಿಕ ಸಮಿತಿ ರಚಿಸಲಾಗಿತ್ತು. ಮಂಜೂರಾದ ಅಂದಾಜು ಪತ್ರಿಕೆಗಳಲ್ಲಿ ಅಳವಡಿಸಿಕೊಂಡಿರುವ ಐಟಂಗಳಲ್ಲಿನ ಅವಶ್ಯಕತೆ ಹಾಗೂ ಅಂದಾಜು ಪತ್ರಿಕೆಗಳನ್ನು ಪರಿಶೀಲಿಸಿ ಗಮನಿಸಿರುವ ತಾಂತ್ರಿಕ ನ್ಯೂನತೆಗಳನ್ನು ಪ್ರಮಾಣೀಕರಿಸಿ ಸಿದ್ಧಪಡಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುವುದು ಉತ್ತರದಿಂದ ತಿಳಿದು ಬಂದಿದೆ.

 

1495 ಎಕರೆ ಜಮೀನನ್ನು ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಜಮೀನನ್ನು ವಶಪಡಿಸಿಕೊಳ್ಳಲಾಗಿದೆ. ಈ ಪೈಜಕಿ 165 ಎಕರೆ 10 ಗುಂಟೆ ಜಮೀಇಗೆ ಹಣ ಪಾವತಿಯಾಗಿದೆ. 953 ಎಕರೆ 38 ಗುಂಟೆ ಜಮೀನಿಗೆ ಹಣ ಪಾವತಿಸುವ ಹಂತದಲ್ಲಿದೆ. ಮತ್ತು 180 ಎಕರೆ 11 ಗುಂಟೆಯಷ್ಟು ಜಮೀನಿಗೆ ಅವಾರ್ಡ್‌ ಸ್ಟೇಜ್‌ ಹಂತದಲ್ಲಿದೆ.

Hot this week

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಎಬಿ-ಎಆರ್‍‌ಕೆ ಯೋಜನೆಯಲ್ಲಿ ಅಕ್ರಮ; ಜಿಮ್ಸ್‌ ಸಿಬ್ಬಂದಿ, ಖಾಸಗಿ ಆಸ್ಪತ್ರೆ ಶಾಮೀಲು, ರಾಜೀನಾಮೆ ನೀಡಿದ್ದ ವೈದ್ಯರ ಹೆಸರಿನಲ್ಲೂ ನಕಲಿ ಓಆರ್‍‌ಎಸ್‌ ಸೃಜನೆ; ತನಿಖಾ ವರದಿ

ಬೆಂಗಳೂರು; ಆಯುಷ್ಮಾನ್‌ ಭಾರತ್ ಮತ್ತು  ಎಆರ್‍‌ಕೆ ಯೋಜನೆಯಡಿಯಲ್ಲಿ  ಕಲ್ಬುರ್ಗಿ ಜಿಲ್ಲಾ  ಆಸ್ಪತ್ರೆಯಿಂದ...
Please Scan to make Your Contribution

Topics

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಜಿಎಸ್‌ಡಿಪಿ 23,34,000 ಕೋಟಿ, ಉನ್ನತ ಶಿಕ್ಷಣಕ್ಕಾಗಿ ಕೇವಲ 5,646 ಕೋಟಿ ರು ಖರ್ಚು; ಇತರೆ ರಾಜ್ಯಗಳಿಗಿಂತ ಕೆಳಗಿಳಿದ ಕರ್ನಾಟಕ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದ ಮೊದಲನೇ ಆರ್ಥಿಕ...

Related Articles

Popular Categories

error: Content is protected !!