Tuesday | July 7, 2026 |

ಹಾವೇರಿಯಲ್ಲಿ 101 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ಸಿಎಂ ತವರು ಜಿಲ್ಲೆಯ ಮಕ್ಕಳಿಗಿಲ್ಲವೇ ಸುರಕ್ಷೆ?

ಬೆಂಗಳೂರು; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆ ಹಾವೇರಿಯೊಂದರಲ್ಲೇ 101 ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವುದು ಇದೀಗ ಬಹಿರಂಗವಾಗಿದೆ.

 

ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುತ್ತಿರುವ ಕುರಿತು ಸಚಿವ ಹಾಲಪ್ಪ ಆಚಾರ್‌ ಅವರು ವಿಧಾನಸಭೆಯಲ್ಲಿ ನೀಡಿರುವ ಉತ್ತರದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಕ್ಕಳ ಸಂಖ್ಯೆಯನ್ನು ಒದಗಿಸಿದ್ದಾರೆ. ಈ ಪಟ್ಟಿಯಲ್ಲಿ ಹಾವೇರಿ ಜಿಲ್ಲೆಯಲ್ಲಿ ಕಳೆದ 2019-20ರಿಂದ 2021-22ರ ಅಂತ್ಯಕ್ಕೆ 101 ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎಂಬ ಮಾಹಿತಿಯನ್ನು ಒದಗಿಸಿದ್ದಾರೆ.

 

ರಾಜ್ಯದಲ್ಲಿ ಇತ್ತೀಚೆಗೆ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಒಪ್ಪಿಕೊಂಡಿರುವ ಸಚಿವ ಹಾಲಪ್ಪ ಆಚಾರ್‌ ಅವರು ಹಾವೇರಿ, ಗದಗ್‌, ಹುಬ್ಬಳ್ಳಿ ಧಾರವಾಡ ಜಿಲ್ಲೆಯಲ್ಲಿ ಕಳೆದ ಮೂರು ವರ್ಷದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಕುರಿತಾದ ಅಂಕಿ ಅಂಶಗಳನ್ನು ಬಹಿರಂಗಪಡಿಸಿದ್ದಾರೆ.

 

 

ಹಾವೇರಿ ಜಿಲ್ಲೆಯೊಂದರಲ್ಲೇ ಕಳೆದ 2019-20ರಿಂದ 2021-22ರಲ್ಲಿ ಒಟ್ಟು 101 ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ. ಗದಗ್‌ ಜಿಲ್ಲೆಯಲ್ಲಿ 50, ಧಾರವಾಡ ಜಿಲ್ಲೆಯಲ್ಲಿ 47 ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎಂದು ಉತ್ತರ ಒದಗಿಸಿದ್ದಾರೆ.

 

2020-21ರಲ್ಲಿ ರಾಜ್ಯದಲ್ಲಿ 233 ಪ್ರಕರಣಗಳು ಸ್ವೀಕೃತಿಯಾಗಿದ್ದರೆ, ಈ ಪೈಕಿ 60 ಪ್ರಕರಣಗಳು ಮುಕ್ತಾಯವಾಗಿವೆ. ಇನ್ನು 223 ಪ್ರಕರಣಗಳು ಚಾಲ್ತಿಯಲ್ಲಿವೆ. 2021-22ರಲ್ಲಿ 480 ಪ್ರಕರಣಗಳು ಸ್ವೀಕೃತಿಯಾಗಿದ್ದರೆ ಈ ಪೈಕಿ 124 ಪ್ರಕರಣಗಳು ಮುಕ್ತಾಯವಾಗಿವೆ. ಇನ್ನು 356 ಪ್ರಕರಣಗಳು ಚಾಲ್ತಿಯಲ್ಲಿವೆ. ಒಟ್ಟಾರೆಯಾಗಿ ಈ ಎರಡೂ ವರ್ಷದಲ್ಲಿ 763 ಪ್ರಕರಣಗಳು ಸ್ವೀಕೃತಿಯಾಗಿದ್ದರೆ ಈ ಪೈಕಿ 184 ಪ್ರಕರಣಗಳು ಮುಕ್ತಾಯವಾಗಿದ್ದರೆ ಇನ್ನು 579 ಪ್ರಕರಣಗಳು ಚಾಲ್ತಿಯಲ್ಲಿವೆ ಎಂದು ಅಂಕಿ ಅಂಶಗಳನ್ನು ಒದಗಿಸಿದ್ದಾರೆ.

 

ಮಕ್ಕಳ ರಕ್ಷಣಾ ನಿರ್ದೇಶನಾಲಯದಡಿ ಬಾಲ್ಯ ವಿವಾಹ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವಲ್ಲದ ಬಾಲಕಾರ್ಮಿಕ, ಭಿಕ್ಷಾಟನೆ, ಪರಿತ್ಯಕ್ತ ಮುಂತಾದ ಪ್ರಕರಣಗಳಲ್ಲಿ ರಕ್ಷಿಸಲ್ಪಟ್ಟ ಮಕ್ಕಳು, ಬಾಲನ್ಯಾಯ ಕಾಯ್ದೆ 2015ರ ತಿದ್ದುಪಡಿ ಕಾಯ್ದೆ 2021ರಡಿ ಪಾಲನೆ ಮತ್ತು ರಕ್ಷಣೆಗೆ ಗುರುತಿಸಲ್ಪಟ್ಟಲ್ಲಿ ಅಂತಹ ಮಕ್ಕಳಿಗೆ ಪಾಲನೆ,ರಕ್ಷಣೆ, ಶಿಕ್ಷಣ ಮತ್ತು ಪುನರ್ವಸತಿಯನ್ನುಮಕ್ಕಳ ಕಲ್ಯಾಣ ಸಮಿತಿ ಆದೇಶದಲ್ಲಿ ಕಲ್ಪಿಸಲಾಗಿದೆ.

 

ಜಿಲ್ಲಾ ಮಟ್ಟದಲ್ಲಿ ಆರ್‌ಟಿಇ, ಪೋಕ್ಸೋ, ಜೆಜೆ ಕಾಯ್ದೆ ಇವುರಗಳ ಪ್ರಗತಿ ಪರಿಶೀಲನೆಯನ್ನು ಕಾಲಕಾಲಕ್ಕೆ ನಡೆಸಲಾಗುತ್ತಿದೆ. ಬಾಲ್ಯವಿವಾಹ ನಿಷೇಧ ಕಾನೂನು, ಬಾಲಕಾರ್ಮಿಕ ನಿಷೇಧ ಕಾನೂನು ಅರಿವು ಕಾರ್ಯಕ್ರಮಗಳನ್ನುನಡೆಸಲಾಗುತ್ತಿದೆ. ಆಯೋಗವು ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ನಿಗದಿತವಾಗಿ ಎಲ್ಲಾ ಸಂಬಂಧಿಸಿದ ಇಲಾಖೆಗಳನ್ನು ಒಗ್ಗೂಡಿಸಿ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗುತ್ತದೆ.

 

ಮಕ್ಕಳು ಎದುರಿಸುತ್ತಿರುವ ಬಾಲ್ಯವಿವಾಹ, ಬಾಲಕಾರ್ಮಿಕತೆ, ಮಕ್ಕಳ ಶಿಕ್ಷಣಕ್ಕೆ ಧಕ್ಕೆ ತರುವಂತಹ ವಿಚಾರಗಳು ಮುಂತಾದ ಪ್ರಗತಿ ಪರಿಶೀಲಿಸಿ ಇಲಾಖೆಗಳಿಗೆ ಸೂಕ್ತ ಸಲಹೆ ಹಾಗೂ ನಿರ್ದೇಶನಗಳನ್ನು ನೀಡಿ ಸಂಬಂಧಪಟ್ಟ ಇಲಾಖೆಗಳು ಅವುಗಳಣ್ನು ಕಾರ್ಯರೂಪಕ್ಕೆ ತರುವಂತೆ ಮುಂಜಾಗ್ರತೆ ವಹಿಸುತ್ತದೆ ಎಂದು ವಿವರಣೆ ನೀಡಿದ್ದಾರೆ.

Hot this week

3 ವರ್ಷವಾದರೂ ಆರಂಭವಾಗದ ಕಟ್ಟಡ ಭಗ್ನಾವಶೇಷ ಘಟಕ; ನಗರಾಭಿವೃದ್ಧಿ ಸಚಿವರ ತವರಲ್ಲೇ ನಾಗರಿಕರಿಗೆ ದಂಡ, ರದ್ದಾಗದ ಬೈಲಾ

ಮೈಸೂರು;  ನಗರಾಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿನ ...

ಖಾಸಗಿ ಮಠದ ಒಡೆತನದ ಆಸ್ತಿಯಲ್ಲಿ ಸರ್ಕಾರಿ ಕಾಮಗಾರಿ, 8.4 ಕೋಟಿ ವೆಚ್ಚ; ತನಿಖೆ ಹಾದಿ ತಪ್ಪಿಸಿದರೇ ನಿವೃತ್ತ ಐಎಎಸ್ ಅಧಿಕಾರಿ ಐಎಸ್‌ಎನ್ ಪ್ರಸಾದ್‌?

ಬೆಂಗಳೂರು;  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಾಮಚಂದ್ರಾಪುರ ಗ್ರಾಮದ ಚಂದ್ರಮೌಳೇಶ್ವರ ದೇವಸ್ಥಾನ...

ಸಿಎಂ, ಡಿಸಿಎಂ ಸೇರಿ ಐವರು ಸಚಿವರ ವಸತಿಗೃಹ ನವೀಕರಣ, ದುರಸ್ತಿ, ಪೀಠೋಪಕರಣ, ಗೃಹಪಯೋಗಿ ವಸ್ತುಗಳ ಖರೀದಿ; 3 ವರ್ಷದಲ್ಲಿ 19.01 ಕೋಟಿ ರು ವೆಚ್ಚ

ಬೆಂಗಳೂರು; ಸರ್ಕಾರಿ ಶಾಲೆ, ಸರ್ಕಾರಿ ವಿದ್ಯಾರ್ಥಿ ನಿಲಯಗಳ ನಿರ್ಮಾಣ, ಇರುವ ಕೊಠಡಿಗಳ...
Please Scan to make Your Contribution

Topics

3 ವರ್ಷವಾದರೂ ಆರಂಭವಾಗದ ಕಟ್ಟಡ ಭಗ್ನಾವಶೇಷ ಘಟಕ; ನಗರಾಭಿವೃದ್ಧಿ ಸಚಿವರ ತವರಲ್ಲೇ ನಾಗರಿಕರಿಗೆ ದಂಡ, ರದ್ದಾಗದ ಬೈಲಾ

ಮೈಸೂರು;  ನಗರಾಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿನ ...

ಖಾಸಗಿ ಮಠದ ಒಡೆತನದ ಆಸ್ತಿಯಲ್ಲಿ ಸರ್ಕಾರಿ ಕಾಮಗಾರಿ, 8.4 ಕೋಟಿ ವೆಚ್ಚ; ತನಿಖೆ ಹಾದಿ ತಪ್ಪಿಸಿದರೇ ನಿವೃತ್ತ ಐಎಎಸ್ ಅಧಿಕಾರಿ ಐಎಸ್‌ಎನ್ ಪ್ರಸಾದ್‌?

ಬೆಂಗಳೂರು;  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಾಮಚಂದ್ರಾಪುರ ಗ್ರಾಮದ ಚಂದ್ರಮೌಳೇಶ್ವರ ದೇವಸ್ಥಾನ...

ಶಾಲಾ ಶಿಕ್ಷಣಕ್ಕಾಗಿ ಹಣಕಾಸು ಪೂರೈಕೆ; ವೆಚ್ಚ ಸಾಲದು, ಹೆಚ್ಚಿದ ಸಂಪನ್ಮೂಲ ಅಂತರ, ಬಜೆಟ್‌ನಲ್ಲಿ ಕುಸಿತ, ಖಾಸಗೀಕರಣಕ್ಕೆ ದಾರಿಯಾಗಲಿದೆಯೇ?

ಬೆಂಗಳೂರು; ರಾಜ್ಯದ ಶಾಲೆಗಳಲ್ಲಿ ದಾಖಲಾತಿ ಪ್ರಮಾಣವು ವೇಗವಾಗಿ ಹೆಚ್ಚುತ್ತಿದ್ದರೂ ಸಹ ಶಿಕ್ಷಣದ ಮೇಲಿನ...

Related Articles

Popular Categories

error: Content is protected !!