Thursday | March 12, 2026 |

ಎನ್‌ಸಿಸಿ ಕಂಪನಿ ನಿರ್ಮಾಣದ ಬಿಮ್ಸ್‌ ಆಸ್ಪತ್ರೆ ಬೀಮ್‌ನಲ್ಲೂ ನೀರು ಸೋರಿಕೆ; ಆತಂಕದಲ್ಲಿ ರೋಗಿಗಳು

Support THE-FILE

spot_img

ಬೆಂಗಳೂರು; ಇಲ್ಲಿನ ಹೆಣ್ಣೂರು ಕ್ರಾಸ್ ಬಳಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ತಾಯಿ ಮಗುವನ್ನು ಬಲಿ ಪಡೆದುಕೊಂಡಿರುವ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಾಗಿರುವ ನಾಗಾರ್ಜುನ ಕನ್ಸ್‌ಟ್ರಕ್ಷನ್ಸ್‌ ಕಂಪನಿಯು ಬೀದರ್‌ನಲ್ಲಿನ ಬಿಮ್ಸ್‌ ಆಸ್ಪತ್ರೆಯಲ್ಲಿಯೂ ಕಳಪೆ ಕಾಮಗಾರಿ ಮಾಡಿರುವ ಪರಿಣಾಮ ಆಸ್ಪತ್ರೆಯ ಬೀಮ್‌ಗಳಲ್ಲಿ ನೀರು ಸೋರಿಕೆಯಾಗುತ್ತಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.

 

‘ಆಸ್ಪತ್ರೆ ವಿಸ್ತರಣೆಗಾಗಿ ಅಳವಡಿಸಿರುವ ಬೀಮ್‌ಗಳಲ್ಲಿ ನೀರು ಸೋರಿಕೆಯಾಗುತ್ತಿದೆ. ಜಾಯಿಂಟ್‌ ಕೆಲಸಗಳು ಸರಿಯಾಗಿ ಆಗದೇ ಇರುವುದರಿಂದ ನೀರು ಸೋರಿಕೆಯಾಗುತ್ತಿದೆ. ಕಾಮಗಾರಿಯನ್ನು ಸಮರ್ಪಕವಾಗಿ ಮಾಡದೇ ಇರುವುದೇ ಇದಕ್ಕೆ ಕಾರಣ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ಸಲ್ಲಿಸಿರುವ ವರದಿಯು ಇದೀಗ ಮುನ್ನೆಲೆಗೆ ಬಂದಿದೆ.

 

ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರ ಮೇಲುಸ್ತುವಾರಿಯಲ್ಲಿ ಎನ್‌ಸಿಸಿ ಸಂಸ್ಥೆಯು ಕಾಮಗಾರಿ ಕೈಗೆತ್ತಿಕೊಂಡಿತ್ತು. ಈ ಕಂಪನಿಯು ಕೈಗೆತ್ತಿಕೊಂಡಿರುವ ಆಸ್ಪತ್ರೆಯ ಕಾಮಗಾರಿಯು ಕಳಪೆಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಕಾಮಗಾರಿ ಗುಣಮಟ್ಟದ ಕುರಿತು ವರದಿಯನ್ನು ಸಲ್ಲಿಸದ ಪಿಡಬ್ಲ್ಯೂಡಿ ಇಲಾಖೆಯ ಕಾರ್ಯಪಾಲಕ ಅಭಿಯಂತರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವರದಿಯಲ್ಲಿ ಶಿಫಾರಸ್ಸು ಮಾಡಿರುವುದು ವರದಿಯಿಂದ ಗೊತ್ತಾಗಿದೆ. ಆದರೆ ಇದುವರೆಗೂ ಸಚಿವ ಡಾ ಕೆ ಸುಧಾಕರ್‌ ಅವರು ಈ ಕುರಿತು ಯಾವುದೇ ಕ್ರಮಕೈಗೊಂಡಿಲ್ಲ ಎಂದು ತಿಳಿದು ಬಂದಿದೆ.

 

ವೈದ್ಯಕೀಯ ಶಿಕ್ಷಣ ಇಲಾಖೆ ಸಲ್ಲಿಸಿರುವ ವರದಿ ಪ್ರತಿ

 

‘ನಾಗಾರ್ಜುನ ಕನ್ಸ್‌ಟ್ರಕ್ಷನ್ಸ್‌ ಕಂಪನಿಯವರು ಎಲ್ಲಾ ಕಾಮಗಾರಿಗಳನ್ನು ಮುಗಿಸಿ 2020ನೇ ವರ್ಷದಲ್ಲಿ ಕಟ್ಟಡವನ್ನು ಆಸ್ಪತ್ರೆಗೆ ಹಸ್ತಾಂತರ ಮಾಡಿರುತ್ತಾರೆ. ಕಾಮಗಾರಿಗೆ ನಿಗದಿಪಡಿಸಿದ್ದ ಅನುದಾನದಲ್ಲಿ 105 ಕೋಟಿ ರುಗಳನ್ನು ಸಂಸ್ಥೆಗೆ ಪಾವತಿಸಲಾಗಿದೆ. ಬಾಕಿ ಪಾವತಿಸಬೇಕಾಗಿರುವ ಅನುದಾನವನ್ನು ಬಿಡುಗಡೆ ಮಾಡಿಲ್ಲ,’ ಎಂಬುದು ವರದಿಯಿಂದ ಗೊತ್ತಾಗಿದೆ.

 

ಬಿಮ್ಸ್‌ ಆಸ್ಪತ್ರೆ ಕಟ್ಟಡ ಕಾಮಗಾರಿಯೂ ಸೇರಿದಂತೆ ಇಲ್ಲಿನ ಅವ್ಯವಸ್ಥೆಗಳ ಕುರಿತು ಶಾಸಕ ಹಾಗೂ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಸದಸ್ಯರೂ ಆಗಿರುವ ಈಶ್ವರ್ ಬಿ ಖಂಡ್ರೆ ಅವರು ಹಲವು ದೂರುಗಳನ್ನು ಸಮಿತಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇವರ ನೇತೃತ್ವದಲ್ಲಿ 2022ರ ನವೆಂಬರ್‌ 9ರಂದು ಆಸ್ಪತ್ರೆಯ ಕಾಮಗಾರಿ ಮತ್ತು ವ್ಯವಸ್ಥೆಗಳನ್ನು ಪರಿವೀಕ್ಷಣೆ ನಡೆಸಲಾಗಿತ್ತು. ಪರಿವೀಕ್ಷಣೆ ವೇಳೆಯಲ್ಲಿ ಆಸ್ಪತ್ರೆ ಕಾಮಗಾರಿಯಲ್ಲಿನ ಹಲವು ಲೋಪಗಳು ಬೆಳಕಿಗೆ ಬಂದಿದ್ದವು. ಇದನ್ನಾಧರಿಸಿ ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು ಎಂಬುದು ಗೊತ್ತಾಗಿದೆ.

 

ಸಿಬ್ಬಂದಿಗಳ ವಾಹನ ನಿಲುಗಡೆಗಾಗಿ ಮೀಸಲಿಟ್ಟಿರುವ ಆಸ್ಪತ್ರೆಯ ನೆಲಮಹಡಿಯಲ್ಲಿ ನೀರು ಸೋರಿಕೆಯಾಗುತ್ತಿರುವುದು, ಅಗ್ನಿಶಾಮಕ ಇಲಾಖೆಯವರು ವಿಧಿಸಿರುವ ದಂಡದ ಮೊತ್ತನ್ನು ಪಾವತಿಸಲು ವಿಫಲವಾಗಿರುವುದು, ಇಂಟರ್‌ನೆಟ್‌ ಸೇವೆ ಅಸಮರ್ಪಕವಾಗಿರುವುದು, ಆಸ್ಪತ್ರೆಯಲ್ಲಿ ಕ್ಯಾಥ್ ಲ್ಯಾಬ್‌ ಪ್ರಾರಂಭಿಸದೇ ಇರುವುದು, ಆಸ್ಪತ್ರೆಯ ಸಿವಿಲ್‌ ಕಾಮಗಾರಿಗಳಲ್ಲಿ ಆಗಿರುವ ಲೋಪಗಳ ಕುರಿತು ಕ್ರಮಕೈಗೊಳ್ಳದಿರುವುದು, ಆಸ್ಪತ್ರೆಗೆ ಲೆಕ್ಕಾಧಿಕಾರಿ, ಆರ್ಥಿಕ ಸಲಹೆಗಾರರನ್ನು ನೇಮಿಸದಿರುವುದು ಸೇರಿದಂತೆ ಹಲವು ಲೋಪಗಳನ್ನು ಪರಿವೀಕ್ಷಣೆ ವೇಳೆಯಲ್ಲಿ ಪತ್ತೆ ಹಚ್ಚಿದೆ.

 

ಮೆಟ್ರೋ ಪಿಲ್ಲರ್‌ ಕುಸಿದು ಬಿದ್ದು ತಾಯಿ ಮತ್ತು ಮಗು ಬಲಿ ಪಡೆದುಕೊಂಡಿರುವ ಪ್ರಕರಣದಲ್ಲಿ ನಾಗಾರ್ಜುನ ಕಂಪನಿ ಮತ್ತು ಅದರ ನಿರ್ದೇಶಕ ಚೈತನ್ಯ, ಜೂನಿಯರ್ ಎಂಜಿನಿಯರ್ ಪ್ರಭಾಕರ್, ಮೇಲ್ವಿಚಾರಣಾ ಪ್ರಾಜೆಕ್ಟ್ ಮ್ಯಾನೇಜರ್ ಮಥಾಯ್, ಯೋಜನಾ ವ್ಯವಸ್ಥಾಪಕ ವಿಕಾಸ್ ಸಿಂಗ್, ಮೇಲ್ವಿಚಾರಕ ಲಕ್ಷ್ಮೀಪತಿ ಹಾಗೂ ಬಿಎಂಆರ್‌ಸಿಎಲ್ ಉಪ ಮುಖ್ಯ ಎಂಜಿನಿಯರ್ ವೆಂಕಟೇಶ್ ಶೆಟ್ಟಿ, ಕಾರ್ಯನಿರ್ವಾಹಕ ಎಂಜಿನಿಯರ್ ಮಹೇಶ್ ಬೆಂಡೆಕರಿ ಮತ್ತು ಜೂನಿಯರ್ ಎಂಜಿನಿಯರ್ ಜಾಫರ್ ಸಾದಿಕ್ ಹೆಸರನ್ನು ಎಫ್ಐಆರ್ ನಲ್ಲಿ ದಾಖಲಿಸಿರುವುದನ್ನು ಸ್ಮರಿಸಬಹುದು.

Hot this week

ಸರ್ಕಾರಿ ಜಮೀನು ಭೂಗಳ್ಳರ ಪಾಲು; ಪಿ ನಂಬರ್ ದುರಸ್ತಿ ಹೆಸರಿನಲ್ಲಿ ಅಕ್ರಮ, ತಹಶೀಲ್ದಾರ್‍‌ಗಳೇ ಭಾಗಿ, ಕ್ರಮವೇ ಇಲ್ಲ

ಬೆಂಗಳೂರು;  ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಲಕ್ಕೂರು ಹೋಬಳಿ ಸಂಪಂಗೆರೆ ಗ್ರಾಮದಲ್ಲಿನ...

7ನೇ ವೇತನ ಆಯೋಗ ಶಿಫಾರಸ್ಸು; ಬದ್ಧ ವೆಚ್ಚದಲ್ಲಿ ಹೆಚ್ಚಳ, 15,000 ಕೋಟಿಯಿಂದ 20,000 ಕೋಟಿಗೆ ಏರಿಕೆ

ಬೆಂಗಳೂರು;  7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿದಲ್ಲಿ  ಮುಂಬರುವ ವರ್ಷಗಳಲ್ಲಿ ಬದ್ಧ...

ವಿಚಾರಣೆಗಳಿಗೆ ಹಾಜರಾಗದಿದ್ದರೂ ಸಂಭಾವನೆ ಕೋರಿದ ಪಬ್ಲಿಕ್ ಪ್ರಾಸಿಕ್ಯೂಟರ್ಸ್‌: 590 ಪ್ರಕರಣ ಪತ್ತೆ

ಬೆಂಗಳೂರು; ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ...

ಹುದ್ದೆಗಳ ಸಂಖ್ಯೆಯಲ್ಲಿ ಗಣನೀಯ ಕಡಿತ, ಸಾಮಾಜಿಕ ನ್ಯಾಯಕ್ಕೆ ಪೆಟ್ಟು; ವಿವಿಗಳ ಅಭಿಪ್ರಾಯ ಬಹಿರಂಗ

ಬೆಂಗಳೂರು; ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ಸಂದರ್ಭದಲ್ಲಿ  ವಿಶ್ವವಿದ್ಯಾಲಯವನ್ನು ಘಟಕವನ್ನಾಗಿ ಪರಿಗಣಿಸಿದ್ದಲ್ಲಿ ...

ದೇಶದ್ರೋಹಿ ಘೋಷಣೆ, ದೇಶ ವಿರೋಧಿ ಚಟುವಟಿಕೆ; 24 ಪ್ರಕರಣಗಳಲ್ಲಿ 3 ಬಿ ರಿಪೋರ್ಟ್

ಬೆಂಗಳೂರು; ದೇಶದ್ರೋಹಿ ಘೋಷಣೆ ಕೂಗಿದ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ  ಕಳೆದ ಮೂರು...

Topics

ಸರ್ಕಾರಿ ಜಮೀನು ಭೂಗಳ್ಳರ ಪಾಲು; ಪಿ ನಂಬರ್ ದುರಸ್ತಿ ಹೆಸರಿನಲ್ಲಿ ಅಕ್ರಮ, ತಹಶೀಲ್ದಾರ್‍‌ಗಳೇ ಭಾಗಿ, ಕ್ರಮವೇ ಇಲ್ಲ

ಬೆಂಗಳೂರು;  ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಲಕ್ಕೂರು ಹೋಬಳಿ ಸಂಪಂಗೆರೆ ಗ್ರಾಮದಲ್ಲಿನ...

7ನೇ ವೇತನ ಆಯೋಗ ಶಿಫಾರಸ್ಸು; ಬದ್ಧ ವೆಚ್ಚದಲ್ಲಿ ಹೆಚ್ಚಳ, 15,000 ಕೋಟಿಯಿಂದ 20,000 ಕೋಟಿಗೆ ಏರಿಕೆ

ಬೆಂಗಳೂರು;  7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿದಲ್ಲಿ  ಮುಂಬರುವ ವರ್ಷಗಳಲ್ಲಿ ಬದ್ಧ...

ವಿಚಾರಣೆಗಳಿಗೆ ಹಾಜರಾಗದಿದ್ದರೂ ಸಂಭಾವನೆ ಕೋರಿದ ಪಬ್ಲಿಕ್ ಪ್ರಾಸಿಕ್ಯೂಟರ್ಸ್‌: 590 ಪ್ರಕರಣ ಪತ್ತೆ

ಬೆಂಗಳೂರು; ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ...

ಹುದ್ದೆಗಳ ಸಂಖ್ಯೆಯಲ್ಲಿ ಗಣನೀಯ ಕಡಿತ, ಸಾಮಾಜಿಕ ನ್ಯಾಯಕ್ಕೆ ಪೆಟ್ಟು; ವಿವಿಗಳ ಅಭಿಪ್ರಾಯ ಬಹಿರಂಗ

ಬೆಂಗಳೂರು; ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ಸಂದರ್ಭದಲ್ಲಿ  ವಿಶ್ವವಿದ್ಯಾಲಯವನ್ನು ಘಟಕವನ್ನಾಗಿ ಪರಿಗಣಿಸಿದ್ದಲ್ಲಿ ...

ದೇಶದ್ರೋಹಿ ಘೋಷಣೆ, ದೇಶ ವಿರೋಧಿ ಚಟುವಟಿಕೆ; 24 ಪ್ರಕರಣಗಳಲ್ಲಿ 3 ಬಿ ರಿಪೋರ್ಟ್

ಬೆಂಗಳೂರು; ದೇಶದ್ರೋಹಿ ಘೋಷಣೆ ಕೂಗಿದ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ  ಕಳೆದ ಮೂರು...

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

Related Articles

Popular Categories

error: Content is protected !!