Thursday | July 16, 2026 |

103 ಕೋಟಿ ರು. ಮಾರ್ಗಪಲ್ಲಟ; ಆರ್‌ಟಿಇ ಅರ್ಹ 64,000ಕ್ಕೂ ಹೆಚ್ಚು ಮಕ್ಕಳು ಖಾಸಗಿ ಶಾಲೆ ಶಿಕ್ಷಣದಿಂದ ವಂಚಿತ!

ಬೆಂಗಳೂರು; ಆರ್‌ಟಿಇ ಅಡಿಯಲ್ಲಿ ಖಾಸಗಿ ಶಾಲೆಗಳಿಗೆ ಶುಲ್ಕ ಮರುಪಾವತಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲಿನ ಶಾಸನ ಬದ್ಧ ಅನುದಾನದ ಪೈಕಿ ಒಟ್ಟು 103 ಕೋಟಿ ರು.ಗಳನ್ನು ಮಾರ್ಗಪಲ್ಲಟಗೊಳಿಸಿ ಸುಮಾರು 64 ಸಾವಿರಕ್ಕೂ ಹೆಚ್ಚು ಮಕ್ಕಳು ಉತ್ತಮ ಗುಣಮಟ್ಟದ ಖಾಸಗಿ ಶಾಲೆಗಳಲ್ಲಿನ ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂಬ ಗುರುತರವಾದ ಆರೋಪ ಕೇಳಿ ಬಂದಿದೆ.

 

ಆರ್‌ಟಿಇ ಅನುದಾನದಲ್ಲಿ ಉಳಿಕೆಯಾಗಿದೆ ಎಂಬ ನೆಪ ಮುಂದಿರಿಸಿದ್ದ ರಾಜ್ಯ ಸರ್ಕಾರವು 2021 ಮತ್ತು 2022ರಲ್ಲಿನ ಒಟ್ಟು ಅನುದಾನದ ಪೈಕಿ 103 ಕೋಟಿ ರು.ಗಳನ್ನು ಖಾಸಗಿ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳಿಗೆ ಕೋವಿಡ್‌ ಪರಿಹಾರ ಹೆಸರಿನಲ್ಲಿ ಮಾರ್ಗಪಲ್ಲಟಗೊಳಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

 

ಉಚಿತ ಶಿಕ್ಷಣ ನೀಡುವ ಖಾಸಗಿ ಶಾಲೆಗೆ ಆರ್‌ಟಿಇ ಅಡಿಯಲ್ಲಿ ಒಂದು ಮಗುವಿಗೆ ಅಂದಾಜು 16,000 ರು.ನಂತೆ ನೀಡಲಾಗುತ್ತದೆ. ಈ ಅನುದಾನವನ್ನು ಆರ್‌ಟಿಇ ಅಡಿಯಲ್ಲಿ ಅರ್ಹರಿರುವ ಮಕ್ಕಳಿಗೆ ಒದಗಿಸಬೇಕು ಮತ್ತು ಆಯಾ ಶೈಕ್ಷಣಿಕ ವರ್ಷದಲ್ಲಿ ಪೂರ್ಣವಾಗಿ ಬಳಸಬೇಕು. ಆದರೆ ರಾಜ್ಯ ಸರ್ಕಾರವು 2021 ಮತ್ತು 2022ರಲ್ಲಿ ಕೋವಿಡ್‌ ಅವಧಿಯಲ್ಲಿ ಖಾಸಗಿ ಶಾಲೆಗಳ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಈ ಅನುದಾನವನ್ನು ನೀಡುವ ಮೂಲಕ ದುರ್ಬಳಕೆ ಮಾಡಿಕೊಂಡಿದೆ ಎಂಬ ಆಪಾದನೆಯೂ ಕೇಳಿ ಬಂದಿದೆ.

 

‘ಆರ್‌ಟಿಇ ಅನುದಾನವನ್ನು ಉಳಿಕೆ ಮಾಡುವಂತಿಲ್ಲ. ಈ ಅನುದಾನಕ್ಕೆ ಅರ್ಜಿ ಸಲ್ಲಿಕೆಯಾಗಿಲ್ಲ ಎಂಬುದನ್ನು ಮುಂದಿರಿಸಿಕೊಂಡು ಅನ್ಯ ಉದ್ಧೇಶಕ್ಕೆ ಹಂಚಿಕೆ ಮಾಡುವಂತಿಲ್ಲ. ಇದೊಂದು ಶಾಸನಬದ್ಧ ಅನುದಾನ. ಅರ್ಜಿ ಸಲ್ಲಿಕೆಯಾಗಿಲ್ಲ ಎಂದರೆ ರಾಜ್ಯದಲ್ಲಿ ಬಡ ಮಕ್ಕಳು ಇಲ್ಲವೆಂದೇ ಅರ್ಥ. ಎಲ್ಲಾ ಮಕ್ಕಳೂ ಶ್ರೀಮಂತ ಮಕ್ಕಳೆಂದೇ ಭಾವಿಸಬೇಕಾಗುತ್ತದೆ. ನೆರೆಹೊರೆ ರಾಜ್ಯಗಳು ಆರ್‌ಟಿಇ ಅಡಿಯಲ್ಲಿ ಹೆಚ್ಚುವರಿ ಅನುದಾನಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತಿವೆ. ಆದರೆ ಕರ್ನಾಟಕ ಸರ್ಕಾರ ಮಾತ್ರ ಅನುದಾನ ಉಳಿಕೆಯಾಗಿದೆ ಎಂದು ಖಾಸಗಿ ಶಾಲೆಗಳ ಶಿಕ್ಷಕರಿಗೆ ನೀಡಿರುವುದು ದುರ್ಬಳಕೆ ಅಲ್ಲದೇ ಮತ್ತೇನು. ಸರ್ಕಾರವು ಮಾರ್ಗಪಲ್ಲಟಗೊಳಿಸಿರುವ ಕಾರಣ ಸುಮಾರು 64 ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿನ ಶಿಕ್ಷಣದಿಂದ ವಂಚನೆಯಾಗಿದೆ ಎಂದೇ ಭಾವಿಸಬೇಕಾಗುತ್ತದೆ, ‘ ಎನ್ನುತ್ತಾರೆ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ‘ದಿ ಫೈಲ್‌’ಗೆ ಪ್ರತಿಕ್ರಿಯಿಸಿದ್ದಾರೆ.

 

2021-22ನೇ ಸಾಲಿನ ಆಯವ್ಯಯದಲ್ಲಿ ಸರ್ಕಾರೇತರ ಪ್ರಾಥಮಿಕ ಶಾಲೆಗಳಿಗೆ ಸಹಾಯ-ಆರ್‌ಟಿಇ ಅಡಿಯ ಖಾಸಗಿ ಶಾಲೆಗಳ ಶುಲ್ಕ ಮರುಪಾವತಿ ಕಾರ್ಯಕ್ರಮದ ಅನುಷ್ಠಾನಕ್ಕಾಗಿ (ಲೆಕ್ಕ ಶೀರ್ಷಿಕೆ; 2202-01-102-0-05) ಅಡಿ 700 ಕೋಟಿ ರು. ನಿಗದಿಪಡಿಸಿತ್ತು. ಈ ಪೈಕಿ 103.47 ಕೋಟಿ ರು. ಅನುದಾನವನ್ನು ಕೋವಿಡ್‌ ಪರಿಹಾರ ನಿಧಿ ಹೆಸರಿನಲ್ಲಿ ಮಾರ್ಗಪಲ್ಲಟಗೊಳಿಸಲಾಗಿತ್ತು. ಸಚಿವ ಬಿ ಸಿ ನಾಗೇಶ್‌ ಅವರ ಅನುಮೋದನೆಯೊಂದಿಗೆ ಅನುದಾನವನ್ನು ಮಾರ್ಗಪಲ್ಲಟಗೊಳಿಸಲಾಗಿತ್ತು ಎಂದು ತಿಳಿದು ಬಂದಿದೆ.

 

‘2021-22ನೇ ಸಾಲಿಗೆ ರಾಜ್ಯದ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,72,945 ಮತ್ತು 34,000 ಬೋಧಕೇತರ ಸಿಬ್ಬಂದಿ ಒಳಗೊಂಡಂತೆ 2,06,945 ಸಿಬ್ಬಂದಿಗಳಿಗೆ ತಲಾ 5,000 ರು.ನಂತೆ ಒಟ್ಟಾರೆಯಾಗಿ 103.47 ಕೋಟಿ ರು ಅನುದಾನವನ್ನು ಕೋವಿಡ್‌ 19 ವಿಶೇಷ ಪ್ಯಾಕೇಜ್‌ ಪರಿಹಾರ ಧನವಾಗಿ ಬಿಡುಗಡೆಗೊಳಿಸಿ,’ ಎಂದು 2021ರ ಜುಲೈ 2ರಂದು ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿತ್ತು. ಇದಕ್ಕೆ ಆರ್ಥಿಕ ಇಲಾಖೆಯು (ಟಿಪ್ಪಣಿ ಸಂಖ್ಯೆ; ಆಇ 278 ವೆಚ್ಚ-8/2021, 15.06.2021)ರಂದು ಸಹಮತಿ ನೀಡಿತ್ತು.

 

ಹಾಗೆಯೇ ಒಟ್ಟು 103.47 ಕೋಟಿ ರು ಪೈಕಿ ಉಳಿಕೆಯಾಗಿದ್ದ 31.14 ಕೋಟಿ ರು.ಗಳನ್ನು ರಾಜ್ಯ ಸರ್ಕಾರವು ಮಾರ್ಗಪಲ್ಲಟಗೊಳಿಸುವ ಮೂಲಕ ಖಾಸಗಿ ಶಾಲೆಗಳಿಗೆ ಮರುಪಾವತಿಸಲು 2022ರ ಜುಲೈ 13ರಂದು ಆದೇಶ ಹೊರಡಿಸಿತ್ತು.

 

2020-21ನೇ ಸಾಲಿಗೆ ರಾಜ್ಯದ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ತಲಾ 5,000 ರು.ನಂತೆ ಪರಿಹಾರ ಧನ ಒದಗಿಸಲಾಗಿತ್ತು.

Hot this week

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಎಬಿ-ಎಆರ್‍‌ಕೆ ಯೋಜನೆಯಲ್ಲಿ ಅಕ್ರಮ; ಜಿಮ್ಸ್‌ ಸಿಬ್ಬಂದಿ, ಖಾಸಗಿ ಆಸ್ಪತ್ರೆ ಶಾಮೀಲು, ರಾಜೀನಾಮೆ ನೀಡಿದ್ದ ವೈದ್ಯರ ಹೆಸರಿನಲ್ಲೂ ನಕಲಿ ಓಆರ್‍‌ಎಸ್‌ ಸೃಜನೆ; ತನಿಖಾ ವರದಿ

ಬೆಂಗಳೂರು; ಆಯುಷ್ಮಾನ್‌ ಭಾರತ್ ಮತ್ತು  ಎಆರ್‍‌ಕೆ ಯೋಜನೆಯಡಿಯಲ್ಲಿ  ಕಲ್ಬುರ್ಗಿ ಜಿಲ್ಲಾ  ಆಸ್ಪತ್ರೆಯಿಂದ...
Please Scan to make Your Contribution

Topics

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಜಿಎಸ್‌ಡಿಪಿ 23,34,000 ಕೋಟಿ, ಉನ್ನತ ಶಿಕ್ಷಣಕ್ಕಾಗಿ ಕೇವಲ 5,646 ಕೋಟಿ ರು ಖರ್ಚು; ಇತರೆ ರಾಜ್ಯಗಳಿಗಿಂತ ಕೆಳಗಿಳಿದ ಕರ್ನಾಟಕ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದ ಮೊದಲನೇ ಆರ್ಥಿಕ...

Related Articles

Popular Categories

error: Content is protected !!