Thursday | July 16, 2026 |

ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 1 ಕೆ ಜಿ ಅಕ್ಕಿ ; 1,960 ಕೋಟಿ ರು. ಹೊಂದಿಸಲು ತಿಣುಕಾಟ

ಬೆಂಗಳೂರು; ಅನ್ನಭಾಗ್ಯ’ ಯೋಜನೆಯ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ವಿತರಿಸಲಾಗುತ್ತಿರುವ 5 ಕೆ.ಜಿ ಆಹಾರ ಧಾನ್ಯದೊಂದಿಗೆ ಹೆಚ್ಚುವರಿಯಾಗಿ 1 ಕೆ.ಜಿ.ವಿತರಿಸುವ ಸಂಬಂಧ ಹೊರಡಿಸಿರುವ ಆದೇಶವನ್ನು ಅನುಷ್ಠಾನಗೊಳಿಸಿದಲ್ಲಿ ವಾರ್ಷಿಕ 1,960 ಕೋಟಿ ರು. ವೆಚ್ಚವಾಗಲಿದೆ.

 

ವಿಧಾನಸಭೆ ಚುನಾವಣೆಗೆ ಮೂರ್ನಾಲ್ಕು ತಿಂಗಳು ಇರುವಾಗಲೇ ಪಡಿತರದಾರರಿಗೆ 1 ಕೆ ಜಿ ಹೆಚ್ಚುವರಿ ಅಕ್ಕಿ ನೀಡುವುದಾಗಿ ಘೋಷಿಸಿ ಭರ್ಜರಿ ಪಡೆದುಕೊಂಡಿರುವ ರಾಜ್ಯ ಬಿಜೆಪಿ ಸರ್ಕಾರವು ಈ ಯೋಜನೆಗೆ ಹಣಕಾಸು ಹಂಚಿಕೆ ಮರು ಹೊಂದಿಸುವ ಲೆಕ್ಕಾಚಾರದಲ್ಲಿ ಮುಳುಗಿದೆ.

 

2023-24ನೇ ಸಾಲಿನ ಆಯವ್ಯಯಕ್ಕೆ ಸಂಬಂಧಿಸಿದಂತೆ ಲೆಕ್ಕಾಚಾರ ಮಾಡಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಕಿರು ಟಿಪ್ಪಣಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿದೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಅನ್ನಭಾಗ್ಯ ಯೋಜನೆಯ ಪ್ರಧಾನ ಲೆಕ್ಕಶೀರ್ಷಿಕೆಯಡಿಯಲ್ಲಿ ರಾಜ್ಯ ಪಡಿತರದಾರರಿಗೆ 1 ಕೆ ಜಿ ಹೆಚ್ಚುವರಿ ಅಕ್ಕಿಯೂ ಸೇರಿದಂತೆ ಆಹಾರ ಧಾನ್ಯಗಳ ವಿತರಣೆಗೆ 2,467 ಕೋಟಿ (ಕಳೆದ ವರ್ಷ 1,416 ಕೋಟಿ) ಆಗಲಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷಕ್ಕೆ 1,051 ಕೋಟಿ ಹೆಚ್ಚುವರಿಯಾಗಲಿದೆ. ಒಟ್ಟಾರೆ 2023-24ನೇ ಸಾಲಿನಲ್ಲಿ ಒಟ್ಟಾರೆ 3,862 ಕೋಟಿ ರು. ಅಂದಾಜು ವೆಚ್ಚವನ್ನು ಇಲಾಖೆಯು ಸಲ್ಲಿಸಿರುವುದು ಕಿರು ಟಿಪ್ಪಣಿಯಿಂದ ತಿಳಿದು ಬಂದಿದೆ. ಇದು ಕಳೆದ ವರ್ಷಕ್ಕಿಂತ (2,810 ಕೋಟಿ) ಒಟ್ಟಾರೆ 1,052 ಕೋಟಿ ರು. ಹೆಚ್ಚಳವಾದಂತಾಗಿದೆ.

 

ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ್‌ ಯೋಜನೆಯನ್ನು ಈಗಾಗಲೇ ಭಾರತ ಸರ್ಕಾರವು ರದ್ದುಗೊಳಿಸಿ ಎನ್‌ಎಫ್‌ಎಸ್‌ಎ ಹೆಸರಿನಲ್ಲಿ ಮತ್ತೊಂದು ಯೋಜನೆ ಜಾರಿಗೊಳಿಸಿರುವುದರಿಂದ ಕರ್ನಾಟಕ ಸರ್ಕಾರಕ್ಕೆ ಇದೇ ಆರ್ಥಿಕ ಸಾಲಿನಿಂದ 720 ಕೋಟಿ ರು. ಉಳಿಕೆಯಾಗಲಿದೆ. ಆದರೂ 1 ಕೆ ಜಿ ಹೆಚ್ಚುವರಿ ಅಕ್ಕಿ ವಿತರಣೆಯಿಂದಾಗಿ 1,960 ಕೋಟಿ ರು.ಗಳನ್ನು ಹೇಗೆ ಮರು ಹೊಂದಿಸುವುದು ಎಂದು ಚಿಂತಿತವಾಗಿದೆ.

 

ಆಹಾರ ನಾಗರಿಕ ಸರಬರಾಜು ಇಲಾಖೆ ಸಲ್ಲಿಸಿರುವ ಕಿರು ಟಿಪ್ಪಣಿ ಪ್ರತಿ

 

1 ಕೆ ಜಿ ಹೆಚ್ಚುವರಿ ಅಕ್ಕಿಯನ್ನು (ಪ್ರತಿ ಕೆ ಜಿ ಗೆ 23 ರು.) 2022ರ ಏಪ್ರಿಲ್‌ನಿಂದ ಡಿಸೆಂಬರ್‌ 2022ರವರೆಗೆ ನೀಡಲಾಗಿತ್ತು. ಇದನ್ನೀಗ ಜನವರಿ 2023ರಿಂದ ಮಾರ್ಚ್‌ 2023ರವರೆಗೆ ವಿಸ್ತರಿಸಲಾಗಿದೆ. ಇದಕ್ಕೆ 924 ಕೋಟಿ ರು. ವೆಚ್ಚವಾಗಲಿದೆ ಎಂದು ಇಲಾಖೆಯು ಲೆಕ್ಕ ಹಾಕಿರುವುದು ಲಭ್ಯವಿರುವ ಕಿರು ಟಿಪ್ಪಣಿಯಿಂದ ತಿಳಿದು ಬಂದಿದೆ.

 

ಅದೇ ರೀತಿ ಅಕ್ಕಿ ಸಾಗಾಣಿಕೆ ವೆಚ್ಚ, ಸಗಟು ಮತ್ತು ರೀಟೈಲ್‌ ಕಮಿಷನ್‌ ಹಣವನ್ನು ರಾಜ್ಯ ಸರ್ಕಾರವೇ ಭರಿಸಬೇಕಿದೆ. ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ್‌ ಯೋಜನೆ ಜಾರಿಯಲ್ಲಿದ್ದ ಅವಧಿಯಲ್ಲಿ ರಾಜ್ಯ ಸರ್ಕಾರವು 4 ತಿಂಗಳು 1 ಕೆ ಜಿ ಹೆಚ್ಚುವರಿಯಂತೆ 1.84 ಲಕ್ಷ ಮೆಟ್ರಿಕ್‌ ಟನ್‌ ಅಕ್ಕಿಯನ್ನು 2022-23ನೇ ಸಾಲಿನಲ್ಲಿ ನೀಡಿದ್ದರಿಂದ 466 ಕೋಟಿ ರು. ವೆಚ್ಚವಾಗಿತ್ತು.

 

ಇದೀಗ 1 ಕೆ ಜಿ ಹೆಚ್ಚುವರಿ ಅಕ್ಕಿಯನ್ನು 2023-24ನೇ ಸಾಲಿನಲ್ಲಿ 33 ರುಪಾಯಿ ದರದಲ್ಲಿ ನೀಡಲು 5.52 ಲಕ್ಷ ಮೆಟ್ರಿಕ್‌ ಟನ್‌ ಅಕ್ಕಿ ಬೇಕಾಗಲಿದೆ. ಇದಕ್ಕೆ 1,960 ಕೋಟಿ ರು. (1822+ 138) ವೆಚ್ಚವಾಗಲಿದೆ. ಪ್ರತಿ ಕೆ ಜಿ ಗೆ 23 ರು ದರದಲ್ಲಿ ನೀಡಿದರೆ 1,408 (1270+13*) ಕೋಟಿ ರು. ಆಗಲಿದೆ ಎಂದು ಲೆಕ್ಕ ಹಾಕಿದೆ.

 

ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಖರೀದಿ, ಸಾಗಾಣಿಕೆ, ರೀಟೈಲ್‌ ಮತ್ತು ಸಗಟು ಕಮಿಷನ್‌ , ಕಾರ್ಮಿಕ ವೆಚ್ಚವನ್ನು 2013-14ರಿಂದ ಪರಿಷ್ಕರಣೆ ಆಗಿಲ್ಲ. ಸಗಟು ಕಮಿಷನ್‌ ದರವನ್ನು 2013-14ರಿಂದ ಪರಿಷ್ಕರಿಸದ ಕಾರಣ 2023-24ರಿಂದ ಪ್ರತಿ ಕ್ವಿಂಟಾಲ್‌ಗೆ 35 ರು.ನಿಂದ 50 ರು. ಗೆ ಹೆಚ್ಚಳ ಮಾಡಬೇಕು ಎಂದು ಇಲಾಖೆಯು ಪ್ರಸ್ತಾಪಿಸಿದೆ. ಅದೇ ರೀತಿ 2018ರಿಂದ ಕಾರ್ಮಿಕ ವೆಚ್ಚವನ್ನು ಪರಿಷ್ಕರಿಸಿಲ್ಲ. ಹೀಗಾಗಿ ಇದೇ ಆರ್ಥಿಕ ಸಾಲಿನಿಂದ 16 ರು.ನಿಂದ 19 ರು.ಗೆ, ರೀಟೈಲ್‌ ಮತ್ತು ಸಗಟು ಕಮಿಷನ್‌ ದರವನ್ನು 7 ರು ನಿಂದ 10 ರು.ವರೆಗೆ ಹೆಚ್ಚಿಸಬೇಕಿದೆ ಎಂದೂ ಕಿರು ಟಿಪ್ಪಣಿಯಲ್ಲಿ ವಿವರಿಸಿದೆ.

 

2022–23ನೇ ಸಾಲಿನ ಬಜೆಟ್‌ನಲ್ಲಿ ಹೆಚ್ಚುವರಿಯಾಗಿ 1 ಕೆ.ಜಿ ಆಹಾರ ಧಾನ್ಯ ವಿತರಿಸುವುದಾಗಿ ಘೋಷಿಸಲಾಗಿತ್ತು. ಆ ಪ್ರಕಾರ 2022ರ ಏಪ್ರಿಲ್‌ನಿಂದ 5 ಕೆ.ಜಿ ಆಹಾರ ಧಾನ್ಯದ ಜತೆಗೆ ಹೆಚ್ಚುವರಿ 1 ಕೆ.ಜಿ ವಿತರಿಸಲು ಆರಂಭಿಸಲಾಗಿತ್ತು. ಇದಾದ ಕೆಲವೇ ದಿನಗಳಲ್ಲಿ ಅಂದರೆ 2022 ಮೇನಿಂದ ಸೆಪ್ಟೆಂಬರ್‌ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಆದೇಶ ಹೊರಡಿಸಲಾಗಿತ್ತು.

 

ಪಿಎಂಜಿಕೆಎವೈ ಯೋಜನೆ ಅಡಿ ಆದ್ಯತಾ ವಲಯ (ಬಿಪಿಎಲ್‌) ಮತ್ತು ಅಂತ್ಯೋದಯ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ತಲಾ 5 ಕೆ.ಜಿ ಅಕ್ಕಿಯನ್ನು 2022 ರ ಅಕ್ಟೋಬರ್‌ನಿಂದ 2022 ಡಿಸೆಂಬರ್‌ ವರೆಗೆ ಮುಂದುವರಿಸಲಾಗಿತ್ತು. ಹೀಗಾಗಿ, ಆದ್ಯತಾ ವಲಯದ ಪಡಿತರ ಫಲಾನುಭವಿಗಳಿಗೆ 1 ಕೆ.ಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ವಿತರಿಸುವುದನ್ನು ನಿಲ್ಲಿಸಲಾಗಿತ್ತು. ಪಿಎಂಜಿಕೆಎವೈ ಯೋಜನೆ ಡಿಸೆಂಬರ್‌ನಲ್ಲಿ ಕೊನೆಗೊಂಡಿದ್ದರಿಂದ 1 ಕೆ.ಜಿ ಆಹಾರ ಹೆಚ್ಚುವರಿಯಾಗಿ ವಿತರಿಸಲು ಸರ್ಕಾರ ಮುಂದಾಗಿತ್ತು.

 

ಕೇಂದ್ರ ಸರ್ಕಾರವು ಹೊಸ ವರ್ಷದಲ್ಲಿ 81 ಕೋಟಿ ಬಡವರ ಪಡಿತರದಲ್ಲಿ ಶೇ 50ರಷ್ಟು ಕಡಿತಗೊಳಿಸಿದೆ. ತಿಂಗಳಿಗೆ 10 ಕೆ.ಜಿ ಆಹಾರ ಧಾನ್ಯಕ್ಕೆ ಅರ್ಹರಾಗಿದ್ದ 81 ಕೋಟಿ ಭಾರತೀಯರು ಈಗ ಕೇವಲ ಐದು ಕೆ.ಜಿಯಷ್ಟನ್ನು ಮಾತ್ರ ಪಡೆಯಲಿದ್ದಾರೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಟೀಕಿಸಿದ್ದನ್ನು ಸ್ಮರಿಸಬಹುದು.

Hot this week

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಎಬಿ-ಎಆರ್‍‌ಕೆ ಯೋಜನೆಯಲ್ಲಿ ಅಕ್ರಮ; ಜಿಮ್ಸ್‌ ಸಿಬ್ಬಂದಿ, ಖಾಸಗಿ ಆಸ್ಪತ್ರೆ ಶಾಮೀಲು, ರಾಜೀನಾಮೆ ನೀಡಿದ್ದ ವೈದ್ಯರ ಹೆಸರಿನಲ್ಲೂ ನಕಲಿ ಓಆರ್‍‌ಎಸ್‌ ಸೃಜನೆ; ತನಿಖಾ ವರದಿ

ಬೆಂಗಳೂರು; ಆಯುಷ್ಮಾನ್‌ ಭಾರತ್ ಮತ್ತು  ಎಆರ್‍‌ಕೆ ಯೋಜನೆಯಡಿಯಲ್ಲಿ  ಕಲ್ಬುರ್ಗಿ ಜಿಲ್ಲಾ  ಆಸ್ಪತ್ರೆಯಿಂದ...
Please Scan to make Your Contribution

Topics

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಜಿಎಸ್‌ಡಿಪಿ 23,34,000 ಕೋಟಿ, ಉನ್ನತ ಶಿಕ್ಷಣಕ್ಕಾಗಿ ಕೇವಲ 5,646 ಕೋಟಿ ರು ಖರ್ಚು; ಇತರೆ ರಾಜ್ಯಗಳಿಗಿಂತ ಕೆಳಗಿಳಿದ ಕರ್ನಾಟಕ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದ ಮೊದಲನೇ ಆರ್ಥಿಕ...

Related Articles

Popular Categories

error: Content is protected !!