Sunday | September 20, 2026 |

465 ಕೋಟಿ ಕಾಮಗಾರಿ ಗುತ್ತಿಗೆ; ನಿಯಮ ಉಲ್ಲಂಘಿಸಿರುವ ಅಧಿಕಾರಿಗಳ ಪಟ್ಟಿ ಒದಗಿಸದ ನಿಗಮ

ಬೆಂಗಳೂರು; ನಾರಾಯಣಪುರ ಎಡದಂಡೆ ಕಾಲುವೆಯ ಆಧುನೀಕರಣ, ವಿಸ್ತರಣೆ, ನವೀಕರಣ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅಂದಾಜಿಸಿದ್ದ ಯೋಜನಾ ಮೊತ್ತಕ್ಕೆ ಸರ್ಕಾರದ ಅನುಮೋದನೆ ಪಡೆಯದೇ ಮತ್ತು ನಿಯಮ ಉಲ್ಲಂಘಿಸಿ 465 ಕೋಟಿ ರು. ಮೊತ್ತದ ಕಾಮಗಾರಿಗಳಿಗೆ ಗುತ್ತಿಗೆ ನೀಡಿರುವ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ಪಟ್ಟಿಯನ್ನು ಕೃಷ್ಣಭಾಗ್ಯ ಜಲನಿಗಮ ಒದಗಿಸಿಲ್ಲ. ಪಟ್ಟಿ ಒದಗಿಸಬೇಕು ಎಂದು ಆರ್ಥಿಕ ಇಲಾಖೆಯ ನಿರ್ದೇಶನವನ್ನೂ ನಿಗಮವು ಉಲ್ಲಂಘಿಸಿದೆ.

 

ಹಾಗೆಯೇ ನಿಗಮದ ಅಧಿಕಾರಿಗಳು ನೀಡಿದ್ದ ಸಮಜಾಯಿಷಿಯನ್ನು ಆರ್ಥಿಕ ಇಲಾಖೆಯು ಒಪ್ಪಿಲ್ಲ. ಅಲ್ಲದೇ ಸಚಿವ ಸಂಪುಟದ ಅನುಮೋದನೆಯನ್ನೇ ಪಡೆಯದೇ ಟೆಂಡರ್‌ ಆಹ್ವಾನಿಸಿದ್ದಲ್ಲದೇ ಕಾಮಗಾರಿಯನ್ನೂ ಕೈಗೆತ್ತಿಕೊಂಡಿರುವುದನ್ನು ‘ದಿ ಫೈಲ್‌’ ಇದೀಗ ದಾಖಲೆ ಸಹಿತ ಬಹಿರಂಗಗೊಳಿಸುತ್ತಿದೆ. ಈ ಕುರಿತು ‘ದಿ ಫೈಲ್‌’ 500 ಕ್ಕೂ ಹೆಚ್ಚು ಪುಟಗಳನ್ನೊಳಗೊಂಡಿರುವ ಸಮಗ್ರ ಕಡತವನ್ನು ಆರ್‌ಟಿಐ ಅಡಿಯಲ್ಲಿ ಪಡೆದುಕೊಂಡಿದೆ.

 

465 ಕೋಟಿ ರು ಮೊತ್ತದ ಕಾಮಗಾರಿಗಳಿಗೆ ಸಂಬಂಧಿಸಿದಂತೆ ನಿಯಮಗಳ ಉಲ್ಲಂಘನೆ ಕುರಿತು ಕೃಷ್ಣಭಾಗ್ಯ ಜಲನಿಗಮದ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದರು. ‘ ಕಾಮಗಾರಿಗೆ ಸಂಬಂಧಿಸಿದಂತೆ ಕೃಷ್ಣಭಾಗ್ಯ ಜಲನಿಗಮ ನಿಯಮಿತದ ನಿರ್ದೇಶಕರ ಮಂಡಳಿ ಸಭೆಯು ಅನುಮೋದನೆಗಳಿಗೆ ಸಕ್ಷಮ ಪ್ರಾಧಿಕಾರವಾಗಿದ್ದು ಸದರಿ ಮಂಡಳಿ ಅನುಮೋದನೆಯಂತೆ ಅಧಿಕಾರಿಗಳು ಕಾರ್ಯನಿರ್ವಹಿಸಿರುತ್ತಾರೆ. ಹಾಗೂ ಇದರಲ್ಲಿ ಯಾವುದೇ ಲೋಪದೋಷವಾಗಿರುವುದಿಲ್ಲ. ಇದಕ್ಕೆ ಯಾವುದೇ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡುವ ಪ್ರಮೇಯ ಉದ್ಭವಿಸುವುದಿಲ್ಲ,’ ಎಂದು ಆರ್ಥಿಕ ಇಲಾಖೆಗೆ ಸಮಜಾಯಿಷಿ ನೀಡಿತ್ತು.

 

ಸಮಜಾಯಿಷಿ ಒಪ್ಪದ ಆರ್ಥಿಕ ಇಲಾಖೆ

 

‘ಕರ್ನಾಟಕ ಸರ್ಕಾರ (ಕಾರ್ಯಕಲಾಪಗಳ ನಿರ್ವಹಣೆ) ನಿಯಮಗಳು 1977ರ ಮೊದಲನೆ ಅನುಸೂಚಿಯ 15(iii) ಪ್ರಕಾರ ಮೂಲ ಅಂದಾಜು 10.00 ಕೋಟಿ ಮೀರಿದಲ್ಲಿ ಮತ್ತು ಪರಿಷ್ಕೃತ ಅಂದಾಜುಗಳು ಮೂಲ ಅಂದಾಜುಗಳಿಗಿಂತ ಶೇ.25ರಷ್ಟು ಅಥವಾ 10.00 ಕೋಟಿಗಳಷ್ಟು ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟನ್ನು ಮೀರಿದರೇ ಅದನ್ನು ಮತ್ತೆ ಸಚಿವ ಸಂಪುಟದ ಮುಂದೆ ಮಂಡಿಸಿ ಆಡಳಿತಾತ್ಮಕ ಅನುಮೋದನೆ ಪಡೆಯಬೇಕಾಗಿರುತ್ತದೆ. ಆದ್ದರಿಂದ ಇಲಾಖೆಯು ನೀಡಿರುವ ಸ್ಪಷ್ಟೀಕರಣವನ್ನು ಒಪ್ಪಲು ಸಾಧ್ಯವಿರುವುದಿಲ್ಲ,’ ಎಂದು ಆರ್ಥಿಕ ಇಲಾಖೆಯ ವಿಶೇಷ ಅಧಿಕಾರಿ ವೈ ಬಿ ಹೊನ್ನಲಿಂಗಪ್ಪ ಅವರು ಟಿಪ್ಪಣಿಯಲ್ಲಿ ದಾಖಲಿಸಿದ್ದಾರೆ.

 

ಅಡಳಿತ ಇಲಾಖೆಯು ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದೇ, ಅರ್ಥಿಕ ಇಲಾಖೆಯ ಗಮನಕ್ಕೂ ತರದೇ ರೂ 465.00 ಕೋಟಿ ರು.ಗಳ ಕಾಮಗಾರಿಗಳಿಗೆ ಗುತ್ತಿಗೆ ನೀಡಿ ಕೈಗೆತ್ತಿಕೊಂಡಿರುವುದು ನಿಯಮಗಳ ಉಲ್ಲಂಘನೆಯಾಗಿದೆ ಎಂದು ಆರ್ಥಿಕ ಇಲಾಖೆಯು ಬಲವಾದ ಆಕ್ಷೇಪ ಎತ್ತಿತ್ತು.

 

ಈ ಸಂಬಂಧ ಸದರಿ ಪ್ರಕ್ರಿಯೆಯಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಹಾಗೂ ಸದರಿ ಪ್ರಸ್ತಾವನೆಗೆ ವೆಚ್ಚ ಭರಿಸಲು ಇಲಾಖೆಯಡಿ ಯಾವ non-grounded ಕಾಮಗಾರಿಗಳನ್ನು ಕಡಿತಗೊಳಿಸಲಾಗುವುದು ಎಂಬ ಬಗ್ಗೆ ಮಾಹಿತಿ ನೀಡಬೇಕು ಎಂದು ಅರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ ಗಾಯಿತ್ರಿ ಅವರು 2022ರ ಸೆಪ್ಟಂಬರ್‌ 13ರಂದು ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದನ್ನು ಸ್ಮರಿಸಬಹುದು.

Hot this week

ಖರ್ಗೆ ಕುಟುಂಬ ಸದಸ್ಯರ ಸಿದ್ದಾರ್ಥ ವಿಹಾರ ಟ್ರಸ್ಟ್‌; ಪ್ರಕರಣ ಮುಂದುವರಿಕೆ, ಲೋಕಾಯುಕ್ತ ಎಸ್‌ಪಿ ಗೆ ನೋಟೀಸ್‌ ನೀಡಿದ ನ್ಯಾಯಾಲಯ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ,...

ಪಿಎಸ್‌ಐ ನೇಮಕಾತಿ ಹಗರಣ; ಅಮೃತ್‌ ಪೌಲ್‌ ವಿರುದ್ಧ ಇಲಾಖೆ ವಿಚಾರಣೆ, ವಿಚಾರಣಾಧಿಕಾರಿಗೆ 15 ಲಕ್ಷ ರು ಸಂಭಾವನೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಪಿಎಸ್‌ಐಗಳ ನೇಮಕಾತಿಯಲ್ಲಿನ...

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆ; ದೇಸೀಯ ಹೆಸರು ಮರು ನಾಮಕರಣಕ್ಕೆ ಎನ್‌ಒಸಿ ಪಡೆಯಲು ಪ್ರಸ್ತಾವ, ಇಂದು ನಿರ್ಧಾರ!

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್‌...
Please Scan to make Your Contribution

Topics

ಪಿಎಸ್‌ಐ ನೇಮಕಾತಿ ಹಗರಣ; ಅಮೃತ್‌ ಪೌಲ್‌ ವಿರುದ್ಧ ಇಲಾಖೆ ವಿಚಾರಣೆ, ವಿಚಾರಣಾಧಿಕಾರಿಗೆ 15 ಲಕ್ಷ ರು ಸಂಭಾವನೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಪಿಎಸ್‌ಐಗಳ ನೇಮಕಾತಿಯಲ್ಲಿನ...

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆ; ದೇಸೀಯ ಹೆಸರು ಮರು ನಾಮಕರಣಕ್ಕೆ ಎನ್‌ಒಸಿ ಪಡೆಯಲು ಪ್ರಸ್ತಾವ, ಇಂದು ನಿರ್ಧಾರ!

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್‌...

ಅನಂತ್‌ ನಾಗ್‌ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವ; 8 ವರ್ಷದ ಹಿಂದಿನ ವಿಸ್ತೃತ ಸಂದರ್ಶನ

ಬೆಂಗಳೂರು;  ಕನ್ನಡ ಚಿತ್ರರಂಗದ  ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ...

ಭೂಗತ ಸುರಂಗ ಮಾರ್ಗ; ರಿಯಾಯಿತಿ ಅವಧಿಯಲ್ಲೇ ಗರಿಷ್ಠ ಟೋಲ್‌ ಸಂಗ್ರಹಣೆ, ದರ ಪರಿಷ್ಕರಣೆಯ ಹಿಂದಿನ ರಹಸ್ಯ ಬಯಲು

ಬೆಂಗಳೂರು; ಭೂಗತ ಸುರಂಗ ಮಾರ್ಗದಲ್ಲಿ ರಿಯಾಯಿತಿ ಅವಧಿಯಲ್ಲಿ ಗರಿಷ್ಠ ಟೋಲ್‌ ಸಂಗ್ರಹಣೆ...

Related Articles

Popular Categories

error: Content is protected !!